AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು ಸಮಾಧಿ ಬಳಿ ಮದುವೆ ಆಗೋರಿಗೆ ರಾಜ್​ ಕುಟುಂಬದಿಂದ ಒಂದು ಕಂಡೀಷನ್​; ಇದನ್ನು ಪಾಲಿಸಲೇಬೇಕು

Puneeth Rajkumar Samadhi: ‘ಇಂದು (ನ.6) ಒಂದು ಜೋಡಿ ಬಂದು ಮದುವೆಗೆ ಅನುಮತಿ ಕೇಳಿದರು. ಆದರೆ ನಾವು ಒಪ್ಪಿಗೆ ಕೊಡಲಿಲ್ಲ. ಅವರು ಒಂದೊಂದು ಸಲ ಒಂದೊಂದು ರೀತಿ ಹೇಳುತ್ತಿದ್ದಾರೆ’ ಎಂದು ರಾಘವೇಂದ್ರ ರಾಜ್​ಕುಮಾರ್​ ತಿಳಿಸಿದ್ದಾರೆ.

ಅಪ್ಪು ಸಮಾಧಿ ಬಳಿ ಮದುವೆ ಆಗೋರಿಗೆ ರಾಜ್​ ಕುಟುಂಬದಿಂದ ಒಂದು ಕಂಡೀಷನ್​; ಇದನ್ನು ಪಾಲಿಸಲೇಬೇಕು
ರಾಘವೇಂದ್ರ ರಾಜ್​ಕುಮಾರ್
Follow us
TV9 Web
| Updated By: ಮದನ್​ ಕುಮಾರ್​

Updated on: Nov 06, 2021 | 6:25 PM

ಪ್ರತಿ ದಿನ 20 ಸಾವಿರಕ್ಕೂ ಅಧಿಕ ಅಭಿಮಾನಿಗಳು ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಭೇಟಿ ನೀಡುತ್ತಿದ್ದಾರೆ. ದೂರದ ಊರುಗಳಿಂದ ಬರುವ ಜನರು ಸರದಿ ಸಾಲಿನಲ್ಲಿ ನಿಂತು ಅಪ್ಪುಗೆ ನಮನ ಸಲ್ಲಿಸುತ್ತಿದ್ದಾರೆ. ಸಮಾಧಿ ಎದುರಿನಲ್ಲಿ ನಿಂತು ಕಣ್ಣೀರು ಸುರಿಸುತ್ತಿದ್ದಾರೆ. ಅನೇಕರಿಗೆ ಅಪ್ಪು ಎಂದರೆ ದೇವರ ಸಮಾನ. ಹಾಗಾಗಿ ಅವರ ಸಮಾಧಿ ಎದುರು ಮದುವೆ ಆಗಲು ಕೆಲವರು ನಿರ್ಧರಿಸಿದ್ದಾರೆ. ಆದರೆ ಅಂಥ ಜೋಡಿಗಳಿಗೆ ರಾಜ್​ಕುಮಾರ್​ ಕುಟುಂಬದವರು ಒಂದು ಕಂಡೀಷನ್​ ಹಾಕಿದ್ದಾರೆ. ಈ ಬಗ್ಗೆ ರಾಘವೇಂದ್ರ ರಾಜ್​ಕುಮಾರ್​ ಪ್ರತಿಕ್ರಿಯೆ ನೀಡಿದ್ದಾರೆ.

‘ಪೊಲೀಸರದ್ದು ಕೆಲವೊಂದು ನಿಯಮಗಳು ಇರುತ್ತವೆ. ಕೆಲವರು ಅಪ್ರಾಪ್ತರಾಗಿರುತ್ತಾರೆ. ನಂತರ ಅವರ ಕಡೆಯವರು ಬಂದು ಗಲಾಟೆ ಮಾಡುತ್ತಾರೆ. ಟಿವಿಯಲ್ಲಿ ಒಂದು ಮದುವೆ ನೋಡಿದ ಬಳಿಕ ಅನೇಕರು ಬರಲು ಆರಂಭಿಸುತ್ತಾರೆ. ಮದುವೆ ಆಗಲು ಬಯಸುವ ಜೋಡಿಗಳ ಜೊತೆಗೆ ಅವರ ತಂದೆ-ತಾಯಿ ಮತ್ತು ಕುಟುಂಬದವರು ಬಂದರೆ ಅನುಮತಿ ಕೊಡಬಹುದು’ ಎಂದು ರಾಘವೇಂದ್ರ ರಾಜ್​ಕುಮಾರ್​ ಹೇಳಿದ್ದಾರೆ.

‘ಇಂದು (ನ.6) ಒಂದು ಜೋಡಿ ಬಂದು ಅನುಮತಿ ಕೇಳಿದರು. ಆದರೆ ನಾವು ಒಪ್ಪಿಗೆ ಕೊಡಲಿಲ್ಲ. ಅವರು ಒಂದೊಂದು ಸಲ ಒಂದೊಂದು ರೀತಿ ಹೇಳುತ್ತಿದ್ದಾರೆ. ತಂದೆ-ತಾಯಿ ಕರೆದುಕೊಂಡು ಬನ್ನಿ ಅಂತ ಹೇಳಿದ್ದೇವೆ’ ಎಂದು ರಾಘವೇಂದ್ರ ರಾಜ್​ಕುಮಾರ್​ ತಿಳಿಸಿದ್ದಾರೆ.

ಬಳ್ಳಾರಿಯಿಂದ ಬಂದಿರುವ ಗಂಗಾ ಮತ್ತು ಗುರು ಪ್ರಸಾದ್ ಎಂಬ ಪ್ರೇಮಿಗಳು ಪುನೀತ್​ ರಾಜ್​ಕುಮಾರ್​ ಸಮಾಧಿ ಎದುರು ಮದುವೆ ಆಗಲು ನಿರ್ಧರಿಸಿದ್ದಾರೆ. ಕಳೆದ 2 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿರುವ ಇಬ್ಬರಿಗೂ ಪುನೀತ್​ ರಾಜ್​ಕುಮಾರ್​ ಎಂದರೆ ಅಪಾರ ಅಭಿಮಾನ. ಅದೇ ಕಾರಣಕ್ಕೆ ಅಪ್ಪು ಸಮಾಧಿ ಎದುರು ಮದುವೆ ಆಗಲು ತೀರ್ಮಾನಿಸಿದ್ದಾರೆ. ಅದಕ್ಕಾಗಿ ರಾಜ್​ ಕುಟುಂಬದವರ ಅನುಮತಿ ಪಡೆಯಲು ಕಾದಿದ್ದಾರೆ.

‘ಜಾತಕ ತೋರಿಸಿ, ದೇವಸ್ಥಾನದಲ್ಲಿ ಮದುವೆ ಆಗುವುದು ಸಹಜ. ಹಾಗಂತ ದೇವಸ್ಥಾನದಲ್ಲಿ ಮದುವೆ ಆದವರು ಜೀವನ ಪರ್ಯಂತ ಚೆನ್ನಾಗಿ ಇರುತ್ತಾರೆ ಎಂದು ಹೇಳೋಕಾಗಲ್ಲ. ಪುನೀತ್​ ಮಾಡಿದ ಸಮಾಜ ಸೇವೆ ನೋಡಿದರೆ ಅವರಿಗಿಂತ ದೊಡ್ಡ ದೇವರು ಯಾರೂ ಇಲ್ಲ ಎನಿಸುತ್ತದೆ’ ಎಂದು ಗಂಗಾ ಹೇಳಿದ್ದಾರೆ.

ಇದನ್ನೂ ಓದಿ:

ಪುನೀತ್​ ಸಾವಿನ ಬಗ್ಗೆ ಮೂಡಿದೆ ಅನುಮಾನ; ವೈದ್ಯರ ವಿರುದ್ಧ ದೂರು ದಾಖಲು

Puneeth Rajkumar: ‘ಪುನೀತ್​ ಅತಿಯಾಗಿ ಜಿಮ್​ ಮಾಡಿದ್ರು’: ಕರಾಳ ಶುಕ್ರವಾರದ ಘಟನೆ ವಿವರಿಸಿದ ಸೆಕ್ಯೂರಿಟಿ ಸಿಬ್ಬಂದಿ

30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಏಸ್ ಪ್ರೋ, ಭವಿಷ್ಯಕ್ಕೆ ಹಣಕಾಸು ಬಲ: ರಾಘವೇಂದ್ರ ಪ್ರಭು
ಏಸ್ ಪ್ರೋ, ಭವಿಷ್ಯಕ್ಕೆ ಹಣಕಾಸು ಬಲ: ರಾಘವೇಂದ್ರ ಪ್ರಭು