AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು ಸಮಾಧಿ ಬಳಿ ಮದುವೆ ಆಗೋರಿಗೆ ರಾಜ್​ ಕುಟುಂಬದಿಂದ ಒಂದು ಕಂಡೀಷನ್​; ಇದನ್ನು ಪಾಲಿಸಲೇಬೇಕು

Puneeth Rajkumar Samadhi: ‘ಇಂದು (ನ.6) ಒಂದು ಜೋಡಿ ಬಂದು ಮದುವೆಗೆ ಅನುಮತಿ ಕೇಳಿದರು. ಆದರೆ ನಾವು ಒಪ್ಪಿಗೆ ಕೊಡಲಿಲ್ಲ. ಅವರು ಒಂದೊಂದು ಸಲ ಒಂದೊಂದು ರೀತಿ ಹೇಳುತ್ತಿದ್ದಾರೆ’ ಎಂದು ರಾಘವೇಂದ್ರ ರಾಜ್​ಕುಮಾರ್​ ತಿಳಿಸಿದ್ದಾರೆ.

ಅಪ್ಪು ಸಮಾಧಿ ಬಳಿ ಮದುವೆ ಆಗೋರಿಗೆ ರಾಜ್​ ಕುಟುಂಬದಿಂದ ಒಂದು ಕಂಡೀಷನ್​; ಇದನ್ನು ಪಾಲಿಸಲೇಬೇಕು
ರಾಘವೇಂದ್ರ ರಾಜ್​ಕುಮಾರ್
TV9 Web
| Edited By: |

Updated on: Nov 06, 2021 | 6:25 PM

Share

ಪ್ರತಿ ದಿನ 20 ಸಾವಿರಕ್ಕೂ ಅಧಿಕ ಅಭಿಮಾನಿಗಳು ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಭೇಟಿ ನೀಡುತ್ತಿದ್ದಾರೆ. ದೂರದ ಊರುಗಳಿಂದ ಬರುವ ಜನರು ಸರದಿ ಸಾಲಿನಲ್ಲಿ ನಿಂತು ಅಪ್ಪುಗೆ ನಮನ ಸಲ್ಲಿಸುತ್ತಿದ್ದಾರೆ. ಸಮಾಧಿ ಎದುರಿನಲ್ಲಿ ನಿಂತು ಕಣ್ಣೀರು ಸುರಿಸುತ್ತಿದ್ದಾರೆ. ಅನೇಕರಿಗೆ ಅಪ್ಪು ಎಂದರೆ ದೇವರ ಸಮಾನ. ಹಾಗಾಗಿ ಅವರ ಸಮಾಧಿ ಎದುರು ಮದುವೆ ಆಗಲು ಕೆಲವರು ನಿರ್ಧರಿಸಿದ್ದಾರೆ. ಆದರೆ ಅಂಥ ಜೋಡಿಗಳಿಗೆ ರಾಜ್​ಕುಮಾರ್​ ಕುಟುಂಬದವರು ಒಂದು ಕಂಡೀಷನ್​ ಹಾಕಿದ್ದಾರೆ. ಈ ಬಗ್ಗೆ ರಾಘವೇಂದ್ರ ರಾಜ್​ಕುಮಾರ್​ ಪ್ರತಿಕ್ರಿಯೆ ನೀಡಿದ್ದಾರೆ.

‘ಪೊಲೀಸರದ್ದು ಕೆಲವೊಂದು ನಿಯಮಗಳು ಇರುತ್ತವೆ. ಕೆಲವರು ಅಪ್ರಾಪ್ತರಾಗಿರುತ್ತಾರೆ. ನಂತರ ಅವರ ಕಡೆಯವರು ಬಂದು ಗಲಾಟೆ ಮಾಡುತ್ತಾರೆ. ಟಿವಿಯಲ್ಲಿ ಒಂದು ಮದುವೆ ನೋಡಿದ ಬಳಿಕ ಅನೇಕರು ಬರಲು ಆರಂಭಿಸುತ್ತಾರೆ. ಮದುವೆ ಆಗಲು ಬಯಸುವ ಜೋಡಿಗಳ ಜೊತೆಗೆ ಅವರ ತಂದೆ-ತಾಯಿ ಮತ್ತು ಕುಟುಂಬದವರು ಬಂದರೆ ಅನುಮತಿ ಕೊಡಬಹುದು’ ಎಂದು ರಾಘವೇಂದ್ರ ರಾಜ್​ಕುಮಾರ್​ ಹೇಳಿದ್ದಾರೆ.

‘ಇಂದು (ನ.6) ಒಂದು ಜೋಡಿ ಬಂದು ಅನುಮತಿ ಕೇಳಿದರು. ಆದರೆ ನಾವು ಒಪ್ಪಿಗೆ ಕೊಡಲಿಲ್ಲ. ಅವರು ಒಂದೊಂದು ಸಲ ಒಂದೊಂದು ರೀತಿ ಹೇಳುತ್ತಿದ್ದಾರೆ. ತಂದೆ-ತಾಯಿ ಕರೆದುಕೊಂಡು ಬನ್ನಿ ಅಂತ ಹೇಳಿದ್ದೇವೆ’ ಎಂದು ರಾಘವೇಂದ್ರ ರಾಜ್​ಕುಮಾರ್​ ತಿಳಿಸಿದ್ದಾರೆ.

ಬಳ್ಳಾರಿಯಿಂದ ಬಂದಿರುವ ಗಂಗಾ ಮತ್ತು ಗುರು ಪ್ರಸಾದ್ ಎಂಬ ಪ್ರೇಮಿಗಳು ಪುನೀತ್​ ರಾಜ್​ಕುಮಾರ್​ ಸಮಾಧಿ ಎದುರು ಮದುವೆ ಆಗಲು ನಿರ್ಧರಿಸಿದ್ದಾರೆ. ಕಳೆದ 2 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿರುವ ಇಬ್ಬರಿಗೂ ಪುನೀತ್​ ರಾಜ್​ಕುಮಾರ್​ ಎಂದರೆ ಅಪಾರ ಅಭಿಮಾನ. ಅದೇ ಕಾರಣಕ್ಕೆ ಅಪ್ಪು ಸಮಾಧಿ ಎದುರು ಮದುವೆ ಆಗಲು ತೀರ್ಮಾನಿಸಿದ್ದಾರೆ. ಅದಕ್ಕಾಗಿ ರಾಜ್​ ಕುಟುಂಬದವರ ಅನುಮತಿ ಪಡೆಯಲು ಕಾದಿದ್ದಾರೆ.

‘ಜಾತಕ ತೋರಿಸಿ, ದೇವಸ್ಥಾನದಲ್ಲಿ ಮದುವೆ ಆಗುವುದು ಸಹಜ. ಹಾಗಂತ ದೇವಸ್ಥಾನದಲ್ಲಿ ಮದುವೆ ಆದವರು ಜೀವನ ಪರ್ಯಂತ ಚೆನ್ನಾಗಿ ಇರುತ್ತಾರೆ ಎಂದು ಹೇಳೋಕಾಗಲ್ಲ. ಪುನೀತ್​ ಮಾಡಿದ ಸಮಾಜ ಸೇವೆ ನೋಡಿದರೆ ಅವರಿಗಿಂತ ದೊಡ್ಡ ದೇವರು ಯಾರೂ ಇಲ್ಲ ಎನಿಸುತ್ತದೆ’ ಎಂದು ಗಂಗಾ ಹೇಳಿದ್ದಾರೆ.

ಇದನ್ನೂ ಓದಿ:

ಪುನೀತ್​ ಸಾವಿನ ಬಗ್ಗೆ ಮೂಡಿದೆ ಅನುಮಾನ; ವೈದ್ಯರ ವಿರುದ್ಧ ದೂರು ದಾಖಲು

Puneeth Rajkumar: ‘ಪುನೀತ್​ ಅತಿಯಾಗಿ ಜಿಮ್​ ಮಾಡಿದ್ರು’: ಕರಾಳ ಶುಕ್ರವಾರದ ಘಟನೆ ವಿವರಿಸಿದ ಸೆಕ್ಯೂರಿಟಿ ಸಿಬ್ಬಂದಿ

ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್