AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು ಸಮಾಧಿ ಬಳಿ ಮದುವೆ ಆಗೋರಿಗೆ ರಾಜ್​ ಕುಟುಂಬದಿಂದ ಒಂದು ಕಂಡೀಷನ್​; ಇದನ್ನು ಪಾಲಿಸಲೇಬೇಕು

Puneeth Rajkumar Samadhi: ‘ಇಂದು (ನ.6) ಒಂದು ಜೋಡಿ ಬಂದು ಮದುವೆಗೆ ಅನುಮತಿ ಕೇಳಿದರು. ಆದರೆ ನಾವು ಒಪ್ಪಿಗೆ ಕೊಡಲಿಲ್ಲ. ಅವರು ಒಂದೊಂದು ಸಲ ಒಂದೊಂದು ರೀತಿ ಹೇಳುತ್ತಿದ್ದಾರೆ’ ಎಂದು ರಾಘವೇಂದ್ರ ರಾಜ್​ಕುಮಾರ್​ ತಿಳಿಸಿದ್ದಾರೆ.

ಅಪ್ಪು ಸಮಾಧಿ ಬಳಿ ಮದುವೆ ಆಗೋರಿಗೆ ರಾಜ್​ ಕುಟುಂಬದಿಂದ ಒಂದು ಕಂಡೀಷನ್​; ಇದನ್ನು ಪಾಲಿಸಲೇಬೇಕು
ರಾಘವೇಂದ್ರ ರಾಜ್​ಕುಮಾರ್
TV9 Web
| Updated By: ಮದನ್​ ಕುಮಾರ್​|

Updated on: Nov 06, 2021 | 6:25 PM

Share

ಪ್ರತಿ ದಿನ 20 ಸಾವಿರಕ್ಕೂ ಅಧಿಕ ಅಭಿಮಾನಿಗಳು ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಭೇಟಿ ನೀಡುತ್ತಿದ್ದಾರೆ. ದೂರದ ಊರುಗಳಿಂದ ಬರುವ ಜನರು ಸರದಿ ಸಾಲಿನಲ್ಲಿ ನಿಂತು ಅಪ್ಪುಗೆ ನಮನ ಸಲ್ಲಿಸುತ್ತಿದ್ದಾರೆ. ಸಮಾಧಿ ಎದುರಿನಲ್ಲಿ ನಿಂತು ಕಣ್ಣೀರು ಸುರಿಸುತ್ತಿದ್ದಾರೆ. ಅನೇಕರಿಗೆ ಅಪ್ಪು ಎಂದರೆ ದೇವರ ಸಮಾನ. ಹಾಗಾಗಿ ಅವರ ಸಮಾಧಿ ಎದುರು ಮದುವೆ ಆಗಲು ಕೆಲವರು ನಿರ್ಧರಿಸಿದ್ದಾರೆ. ಆದರೆ ಅಂಥ ಜೋಡಿಗಳಿಗೆ ರಾಜ್​ಕುಮಾರ್​ ಕುಟುಂಬದವರು ಒಂದು ಕಂಡೀಷನ್​ ಹಾಕಿದ್ದಾರೆ. ಈ ಬಗ್ಗೆ ರಾಘವೇಂದ್ರ ರಾಜ್​ಕುಮಾರ್​ ಪ್ರತಿಕ್ರಿಯೆ ನೀಡಿದ್ದಾರೆ.

‘ಪೊಲೀಸರದ್ದು ಕೆಲವೊಂದು ನಿಯಮಗಳು ಇರುತ್ತವೆ. ಕೆಲವರು ಅಪ್ರಾಪ್ತರಾಗಿರುತ್ತಾರೆ. ನಂತರ ಅವರ ಕಡೆಯವರು ಬಂದು ಗಲಾಟೆ ಮಾಡುತ್ತಾರೆ. ಟಿವಿಯಲ್ಲಿ ಒಂದು ಮದುವೆ ನೋಡಿದ ಬಳಿಕ ಅನೇಕರು ಬರಲು ಆರಂಭಿಸುತ್ತಾರೆ. ಮದುವೆ ಆಗಲು ಬಯಸುವ ಜೋಡಿಗಳ ಜೊತೆಗೆ ಅವರ ತಂದೆ-ತಾಯಿ ಮತ್ತು ಕುಟುಂಬದವರು ಬಂದರೆ ಅನುಮತಿ ಕೊಡಬಹುದು’ ಎಂದು ರಾಘವೇಂದ್ರ ರಾಜ್​ಕುಮಾರ್​ ಹೇಳಿದ್ದಾರೆ.

‘ಇಂದು (ನ.6) ಒಂದು ಜೋಡಿ ಬಂದು ಅನುಮತಿ ಕೇಳಿದರು. ಆದರೆ ನಾವು ಒಪ್ಪಿಗೆ ಕೊಡಲಿಲ್ಲ. ಅವರು ಒಂದೊಂದು ಸಲ ಒಂದೊಂದು ರೀತಿ ಹೇಳುತ್ತಿದ್ದಾರೆ. ತಂದೆ-ತಾಯಿ ಕರೆದುಕೊಂಡು ಬನ್ನಿ ಅಂತ ಹೇಳಿದ್ದೇವೆ’ ಎಂದು ರಾಘವೇಂದ್ರ ರಾಜ್​ಕುಮಾರ್​ ತಿಳಿಸಿದ್ದಾರೆ.

ಬಳ್ಳಾರಿಯಿಂದ ಬಂದಿರುವ ಗಂಗಾ ಮತ್ತು ಗುರು ಪ್ರಸಾದ್ ಎಂಬ ಪ್ರೇಮಿಗಳು ಪುನೀತ್​ ರಾಜ್​ಕುಮಾರ್​ ಸಮಾಧಿ ಎದುರು ಮದುವೆ ಆಗಲು ನಿರ್ಧರಿಸಿದ್ದಾರೆ. ಕಳೆದ 2 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿರುವ ಇಬ್ಬರಿಗೂ ಪುನೀತ್​ ರಾಜ್​ಕುಮಾರ್​ ಎಂದರೆ ಅಪಾರ ಅಭಿಮಾನ. ಅದೇ ಕಾರಣಕ್ಕೆ ಅಪ್ಪು ಸಮಾಧಿ ಎದುರು ಮದುವೆ ಆಗಲು ತೀರ್ಮಾನಿಸಿದ್ದಾರೆ. ಅದಕ್ಕಾಗಿ ರಾಜ್​ ಕುಟುಂಬದವರ ಅನುಮತಿ ಪಡೆಯಲು ಕಾದಿದ್ದಾರೆ.

‘ಜಾತಕ ತೋರಿಸಿ, ದೇವಸ್ಥಾನದಲ್ಲಿ ಮದುವೆ ಆಗುವುದು ಸಹಜ. ಹಾಗಂತ ದೇವಸ್ಥಾನದಲ್ಲಿ ಮದುವೆ ಆದವರು ಜೀವನ ಪರ್ಯಂತ ಚೆನ್ನಾಗಿ ಇರುತ್ತಾರೆ ಎಂದು ಹೇಳೋಕಾಗಲ್ಲ. ಪುನೀತ್​ ಮಾಡಿದ ಸಮಾಜ ಸೇವೆ ನೋಡಿದರೆ ಅವರಿಗಿಂತ ದೊಡ್ಡ ದೇವರು ಯಾರೂ ಇಲ್ಲ ಎನಿಸುತ್ತದೆ’ ಎಂದು ಗಂಗಾ ಹೇಳಿದ್ದಾರೆ.

ಇದನ್ನೂ ಓದಿ:

ಪುನೀತ್​ ಸಾವಿನ ಬಗ್ಗೆ ಮೂಡಿದೆ ಅನುಮಾನ; ವೈದ್ಯರ ವಿರುದ್ಧ ದೂರು ದಾಖಲು

Puneeth Rajkumar: ‘ಪುನೀತ್​ ಅತಿಯಾಗಿ ಜಿಮ್​ ಮಾಡಿದ್ರು’: ಕರಾಳ ಶುಕ್ರವಾರದ ಘಟನೆ ವಿವರಿಸಿದ ಸೆಕ್ಯೂರಿಟಿ ಸಿಬ್ಬಂದಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​