AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕವಾಗಿ ಸುದೀಪ್​ ಬಗ್ಗೆ ಹೇಳಿಕೆ ನೀಡದಂತೆ ಎಂ.ಎನ್​. ಕುಮಾರ್​ಗೆ ನ್ಯಾಯಾಲಯ ಆದೇಶ

ನ್ಯಾಯಾಲಯದಿಂದ ಎಂ.ಎನ್​. ಕುಮಾರ್​ ಅವರಿಗೆ ಇಂಜೆಂಕ್ಷನ್​ ಆರ್ಡರ್​ ನೀಡಲಾಗಿದೆ. ಸುದೀಪ್​ ಅವರ ವಿರುದ್ಧ ಅವಹೇಳನಕಾರಿಯಾಗಿ ಯಾವುದೇ ಹೇಳಿಕೆಗಳನ್ನು ಸಾರ್ವಜನಿಕವಾಗಿ ನೀಡಬಾರದು ಎಂದು ಆದೇಶಿಸಲಾಗಿದೆ. ಕೋರ್ಟ್​ನಲ್ಲಿ ಕೇಸ್​ ಅಂತ್ಯವಾಗುವ ತನಕವೂ ಈ ಆದೇಶ ಅನ್ವಯ ಆಗಲಿದೆ.

ಸಾರ್ವಜನಿಕವಾಗಿ ಸುದೀಪ್​ ಬಗ್ಗೆ ಹೇಳಿಕೆ ನೀಡದಂತೆ ಎಂ.ಎನ್​. ಕುಮಾರ್​ಗೆ ನ್ಯಾಯಾಲಯ ಆದೇಶ
ಕಿಚ್ಚ ಸುದೀಪ್​, ಎಂ.ಎನ್​. ಕುಮಾರ್​
Mangala RR
| Edited By: |

Updated on:Aug 21, 2023 | 6:47 PM

Share

ಸ್ಯಾಂಡಲ್​ವುಡ್​ನ ಖ್ಯಾತ ನಟ ಕಿಚ್ಚ ಸುದೀಪ್​ (Kichcha Sudeep) ಮತ್ತು ನಿರ್ಮಾಪಕ ಎಂ.ಎನ್​. ಕುಮಾರ್​ ಅವರ ನಡುವಿನ ವಿವಾದ ಈಗ ಕೋರ್ಟ್​ ಅಂಗಳದಲ್ಲಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೂಡ ಆರಂಭ ಆಗಿದೆ. ಇತ್ತೀಚೆಗೆ ಸುದೀಪ್​ ಮತ್ತು ಎಂ.ಎನ್​. ಕುಮಾರ್​ (MN Kumar) ಅವರು ತಮ್ಮ ಹೇಳಿಕೆಗಳನ್ನು ದಾಖಲಿಸಿದ್ದರು. ಈಗ ನ್ಯಾಯಾಲಯದಿಂದ ಎಂ.ಎನ್​. ಕುಮಾರ್​ ಅವರಿಗೆ ಇಂಜಂಕ್ಷನ್​ ಆರ್ಡರ್ (Injunction Order)​ ನೀಡಲಾಗಿದೆ. ಸುದೀಪ್​ ಅವರ ವಿರುದ್ಧ ಅವಹೇಳನಕಾರಿಯಾಗಿ ಯಾವುದೇ ಹೇಳಿಕೆಗಳನ್ನು ಸಾರ್ವಜನಿಕವಾಗಿ ನೀಡಬಾರದು ಎಂದು ಆದೇಶಿಸಲಾಗಿದೆ. ಕೋರ್ಟ್​ನಲ್ಲಿ ಕೇಸ್​ ಅಂತ್ಯವಾಗುವ ತನಕವೂ ಈ ಆದೇಶ ಅನ್ವಯ ಆಗಲಿದೆ. ಚಿತ್ರರಂಗದ ಹಿರಿಯರು ಈ ವಿವಾದವನ್ನು ಬಗೆಹರಿಸಲು ಪ್ರಯತ್ನಿದರು. ಆದರೆ ಕಾನೂನಿನ ಮೂಲಕವೇ ನ್ಯಾಯ ಪಡೆಯುವುದಾಗಿ ಸುದೀಪ್​ ಅವರು ನಿರ್ಧರಿಸಿದ್ದಾರೆ.

ಕಿಚ್ಚ ಸುದೀಪ್​ ಅವರು ಮುಂಗಡ ಹಣ ಪಡೆದು ಕಾಲ್​ಶೀಟ್​ ನೀಡಿಲ್ಲ ಎಂಬುದು ಎಂ.ಎನ್​. ಕುಮಾರ್ ಮಾಡಿದ ಆರೋಪ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಅವರು ಅನೇಕ ಸಂದರ್ಭಗಳಲ್ಲಿ ಮಾತನಾಡಿದ್ದಾರೆ. ಇದರಿಂದ ತಮಗೆ ಮಾನಹಾನಿ ಆಗಿದೆ ಎಂದು ಸುದೀಪ್​ ಅವರು ಕೋರ್ಟ್​ ಮೆಟ್ಟಿಲೇರಿದರು. ಎಂ.ಎನ್​. ಕುಮಾರ್​ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ಎನ್​.ಎಂ. ಸುರೇಶ್​ ಕೂಡ ಭಾಗಿ ಆಗಿದ್ದರು. ಅವರ ವಿರುದ್ಧವೂ ಸುದೀಪ್​ ದೂರು ನೀಡಿದ್ದರು. ಹಾಗಾಗಿ ಎನ್​.ಎಂ. ಸುರೇಶ್​ ಸಹ ಕಾನೂನಿನ ಸಂಕಷ್ಟ ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ಕೋರ್ಟ್​ ಕಟಕಟೆಯಲ್ಲಿ ಎಂ.ಎನ್​. ಕುಮಾರ್​ ವಿರುದ್ಧ ಹೇಳಿಕೆ ನೀಡಿದ ಸುದೀಪ್​; ಫಲ ನೀಡಲಿಲ್ಲ ಸಂಧಾನ

ಆಗಸ್ಟ್​ 10ರಂದು ಸುದೀಪ್​ ಅವರು ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿನ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಬಂದು ತಮ್ಮ ಹೇಳಿಕೆ ದಾಖಲಿಸಿದ್ದರು. ಆ ವೇಳೆ ಏನೆಲ್ಲ ನಡೆಯಿತು ಎಂಬುದನ್ನು ಮಾಧ್ಯಮಗಳ ಎದುರು ಸುದೀಪ್​ ಪರ ಲಾಯರ್​ ವಿವರಿಸಿದ್ದಾರೆ. ‘ಕಾನೂನಿನ ಪ್ರಕಾರವಾಗಿ ಸುದೀಪ್​ ಅವರು ನ್ಯಾಯಾಲಯಕ್ಕೆ ಬಂದು ಹೇಳಿಕೆ ನೀಡಿದ್ದಾರೆ. ಮಾನಹಾನಿ ಆಗಿದ್ದಕ್ಕೆ ಸಾಕ್ಷಿಗಳನ್ನು ಸಲ್ಲಿಸಿದ್ದಾರೆ. ಈ ಹಂತದಲ್ಲಿ ರಾಜಿಗೆ ಯಾವುದೇ ಅವಕಾಶ ಇಲ್ಲ’ ಎಂದು ಸುದೀಪ್​ ಪರ ವಕೀಲರು ಹೇಳಿದ್ದರು.

ಇದನ್ನೂ ಓದಿ: ಕ್ಷಮೆ ಕೇಳಲ್ಲ, ಕಾನೂನು ಹೋರಾಟ ಮಾಡ್ತೀನಿ: ಸುದೀಪ್ ಸಮನ್ಸ್​ಗೆ ಸುರೇಶ್ ಪ್ರತಿಕ್ರಿಯೆ

ಎಂ.ಎನ್​. ಕುಮಾರ್​ ನಡುವಿನ ಜಟಾಪಟಿಯಲ್ಲಿ ರಾಜಿ ಮಾಡಿಕೊಳ್ಳಲು ಸುದೀಪ್​ ಸಿದ್ಧರಿಲ್ಲ. ಸಂಧಾನ ನಡೆಸುವ ಉದ್ದೇಶದಿಂದ ರವಿಚಂದ್ರನ್​ ಮತ್ತು ಶಿವರಾಜ್​ಕುಮಾರ್​ ಅವರ ಮಧ್ಯಸ್ಥಿಕೆಯಲ್ಲಿ ಮಾತುಕಥೆ ನಡೆದಿತ್ತು. ಅದರಲ್ಲಿ ಸುದೀಪ್​ ಕೂಡ ಭಾಗಿ ಆಗಿದ್ದರು. ಆದರೆ ಕೋರ್ಟ್​ನ ಹೊರಗೆ ಸಂಧಾನ ಮಾಡಿಕೊಳ್ಳಲು ಸುದೀಪ್​ ಒಪ್ಪಿಕೊಂಡಿಲ್ಲ. ಹಾಗಾಗಿ ಅವರು ಕಾನೂನಿ ಹಾದಿ ಹಿಡಿದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:31 pm, Mon, 21 August 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?