AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕವಾಗಿ ಸುದೀಪ್​ ಬಗ್ಗೆ ಹೇಳಿಕೆ ನೀಡದಂತೆ ಎಂ.ಎನ್​. ಕುಮಾರ್​ಗೆ ನ್ಯಾಯಾಲಯ ಆದೇಶ

ನ್ಯಾಯಾಲಯದಿಂದ ಎಂ.ಎನ್​. ಕುಮಾರ್​ ಅವರಿಗೆ ಇಂಜೆಂಕ್ಷನ್​ ಆರ್ಡರ್​ ನೀಡಲಾಗಿದೆ. ಸುದೀಪ್​ ಅವರ ವಿರುದ್ಧ ಅವಹೇಳನಕಾರಿಯಾಗಿ ಯಾವುದೇ ಹೇಳಿಕೆಗಳನ್ನು ಸಾರ್ವಜನಿಕವಾಗಿ ನೀಡಬಾರದು ಎಂದು ಆದೇಶಿಸಲಾಗಿದೆ. ಕೋರ್ಟ್​ನಲ್ಲಿ ಕೇಸ್​ ಅಂತ್ಯವಾಗುವ ತನಕವೂ ಈ ಆದೇಶ ಅನ್ವಯ ಆಗಲಿದೆ.

ಸಾರ್ವಜನಿಕವಾಗಿ ಸುದೀಪ್​ ಬಗ್ಗೆ ಹೇಳಿಕೆ ನೀಡದಂತೆ ಎಂ.ಎನ್​. ಕುಮಾರ್​ಗೆ ನ್ಯಾಯಾಲಯ ಆದೇಶ
ಕಿಚ್ಚ ಸುದೀಪ್​, ಎಂ.ಎನ್​. ಕುಮಾರ್​
ಮಂಗಳ ರಾಜಗೋಪಾಲ್​
| Edited By: |

Updated on:Aug 21, 2023 | 6:47 PM

Share

ಸ್ಯಾಂಡಲ್​ವುಡ್​ನ ಖ್ಯಾತ ನಟ ಕಿಚ್ಚ ಸುದೀಪ್​ (Kichcha Sudeep) ಮತ್ತು ನಿರ್ಮಾಪಕ ಎಂ.ಎನ್​. ಕುಮಾರ್​ ಅವರ ನಡುವಿನ ವಿವಾದ ಈಗ ಕೋರ್ಟ್​ ಅಂಗಳದಲ್ಲಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೂಡ ಆರಂಭ ಆಗಿದೆ. ಇತ್ತೀಚೆಗೆ ಸುದೀಪ್​ ಮತ್ತು ಎಂ.ಎನ್​. ಕುಮಾರ್​ (MN Kumar) ಅವರು ತಮ್ಮ ಹೇಳಿಕೆಗಳನ್ನು ದಾಖಲಿಸಿದ್ದರು. ಈಗ ನ್ಯಾಯಾಲಯದಿಂದ ಎಂ.ಎನ್​. ಕುಮಾರ್​ ಅವರಿಗೆ ಇಂಜಂಕ್ಷನ್​ ಆರ್ಡರ್ (Injunction Order)​ ನೀಡಲಾಗಿದೆ. ಸುದೀಪ್​ ಅವರ ವಿರುದ್ಧ ಅವಹೇಳನಕಾರಿಯಾಗಿ ಯಾವುದೇ ಹೇಳಿಕೆಗಳನ್ನು ಸಾರ್ವಜನಿಕವಾಗಿ ನೀಡಬಾರದು ಎಂದು ಆದೇಶಿಸಲಾಗಿದೆ. ಕೋರ್ಟ್​ನಲ್ಲಿ ಕೇಸ್​ ಅಂತ್ಯವಾಗುವ ತನಕವೂ ಈ ಆದೇಶ ಅನ್ವಯ ಆಗಲಿದೆ. ಚಿತ್ರರಂಗದ ಹಿರಿಯರು ಈ ವಿವಾದವನ್ನು ಬಗೆಹರಿಸಲು ಪ್ರಯತ್ನಿದರು. ಆದರೆ ಕಾನೂನಿನ ಮೂಲಕವೇ ನ್ಯಾಯ ಪಡೆಯುವುದಾಗಿ ಸುದೀಪ್​ ಅವರು ನಿರ್ಧರಿಸಿದ್ದಾರೆ.

ಕಿಚ್ಚ ಸುದೀಪ್​ ಅವರು ಮುಂಗಡ ಹಣ ಪಡೆದು ಕಾಲ್​ಶೀಟ್​ ನೀಡಿಲ್ಲ ಎಂಬುದು ಎಂ.ಎನ್​. ಕುಮಾರ್ ಮಾಡಿದ ಆರೋಪ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಅವರು ಅನೇಕ ಸಂದರ್ಭಗಳಲ್ಲಿ ಮಾತನಾಡಿದ್ದಾರೆ. ಇದರಿಂದ ತಮಗೆ ಮಾನಹಾನಿ ಆಗಿದೆ ಎಂದು ಸುದೀಪ್​ ಅವರು ಕೋರ್ಟ್​ ಮೆಟ್ಟಿಲೇರಿದರು. ಎಂ.ಎನ್​. ಕುಮಾರ್​ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ಎನ್​.ಎಂ. ಸುರೇಶ್​ ಕೂಡ ಭಾಗಿ ಆಗಿದ್ದರು. ಅವರ ವಿರುದ್ಧವೂ ಸುದೀಪ್​ ದೂರು ನೀಡಿದ್ದರು. ಹಾಗಾಗಿ ಎನ್​.ಎಂ. ಸುರೇಶ್​ ಸಹ ಕಾನೂನಿನ ಸಂಕಷ್ಟ ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ಕೋರ್ಟ್​ ಕಟಕಟೆಯಲ್ಲಿ ಎಂ.ಎನ್​. ಕುಮಾರ್​ ವಿರುದ್ಧ ಹೇಳಿಕೆ ನೀಡಿದ ಸುದೀಪ್​; ಫಲ ನೀಡಲಿಲ್ಲ ಸಂಧಾನ

ಆಗಸ್ಟ್​ 10ರಂದು ಸುದೀಪ್​ ಅವರು ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿನ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಬಂದು ತಮ್ಮ ಹೇಳಿಕೆ ದಾಖಲಿಸಿದ್ದರು. ಆ ವೇಳೆ ಏನೆಲ್ಲ ನಡೆಯಿತು ಎಂಬುದನ್ನು ಮಾಧ್ಯಮಗಳ ಎದುರು ಸುದೀಪ್​ ಪರ ಲಾಯರ್​ ವಿವರಿಸಿದ್ದಾರೆ. ‘ಕಾನೂನಿನ ಪ್ರಕಾರವಾಗಿ ಸುದೀಪ್​ ಅವರು ನ್ಯಾಯಾಲಯಕ್ಕೆ ಬಂದು ಹೇಳಿಕೆ ನೀಡಿದ್ದಾರೆ. ಮಾನಹಾನಿ ಆಗಿದ್ದಕ್ಕೆ ಸಾಕ್ಷಿಗಳನ್ನು ಸಲ್ಲಿಸಿದ್ದಾರೆ. ಈ ಹಂತದಲ್ಲಿ ರಾಜಿಗೆ ಯಾವುದೇ ಅವಕಾಶ ಇಲ್ಲ’ ಎಂದು ಸುದೀಪ್​ ಪರ ವಕೀಲರು ಹೇಳಿದ್ದರು.

ಇದನ್ನೂ ಓದಿ: ಕ್ಷಮೆ ಕೇಳಲ್ಲ, ಕಾನೂನು ಹೋರಾಟ ಮಾಡ್ತೀನಿ: ಸುದೀಪ್ ಸಮನ್ಸ್​ಗೆ ಸುರೇಶ್ ಪ್ರತಿಕ್ರಿಯೆ

ಎಂ.ಎನ್​. ಕುಮಾರ್​ ನಡುವಿನ ಜಟಾಪಟಿಯಲ್ಲಿ ರಾಜಿ ಮಾಡಿಕೊಳ್ಳಲು ಸುದೀಪ್​ ಸಿದ್ಧರಿಲ್ಲ. ಸಂಧಾನ ನಡೆಸುವ ಉದ್ದೇಶದಿಂದ ರವಿಚಂದ್ರನ್​ ಮತ್ತು ಶಿವರಾಜ್​ಕುಮಾರ್​ ಅವರ ಮಧ್ಯಸ್ಥಿಕೆಯಲ್ಲಿ ಮಾತುಕಥೆ ನಡೆದಿತ್ತು. ಅದರಲ್ಲಿ ಸುದೀಪ್​ ಕೂಡ ಭಾಗಿ ಆಗಿದ್ದರು. ಆದರೆ ಕೋರ್ಟ್​ನ ಹೊರಗೆ ಸಂಧಾನ ಮಾಡಿಕೊಳ್ಳಲು ಸುದೀಪ್​ ಒಪ್ಪಿಕೊಂಡಿಲ್ಲ. ಹಾಗಾಗಿ ಅವರು ಕಾನೂನಿ ಹಾದಿ ಹಿಡಿದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:31 pm, Mon, 21 August 23

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್