AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manoranjan Ravichandran: ರವಿಚಂದ್ರನ್​ ಪುತ್ರ ಮನೋರಂಜನ್​ಗೆ ಕಂಕಣ ಭಾಗ್ಯ; ಕೈ ಹಿಡಿಯಲಿರುವ ಹುಡುಗಿ ಹಿನ್ನೆಲೆ ಏನು?

Manoranjan Ravichandran Marriage: ರವಿಚಂದ್ರನ್​ ಕುಟುಂಬದಲ್ಲಿ ಶುಭಕಾರ್ಯಕ್ಕೆ ಸಿದ್ಧತೆ ನಡೆಯುತ್ತಿದೆ. ‘ಕ್ರೇಜಿ ಸ್ಟಾರ್​’ ಪುತ್ರ ಮನೋರಂಜನ್​ ರವಿಚಂದ್ರನ್​ ಅವರು ಸಪ್ತಪದಿ ತುಳಿಯಲು ಸಜ್ಜಾಗುತ್ತಿದ್ದಾರೆ.

Manoranjan Ravichandran: ರವಿಚಂದ್ರನ್​ ಪುತ್ರ ಮನೋರಂಜನ್​ಗೆ ಕಂಕಣ ಭಾಗ್ಯ; ಕೈ ಹಿಡಿಯಲಿರುವ ಹುಡುಗಿ ಹಿನ್ನೆಲೆ ಏನು?
ರವಿಚಂದ್ರನ್, ಮನೋರಂಜನ್
TV9 Web
| Edited By: |

Updated on:Jul 13, 2022 | 10:14 AM

Share

ನಟ ‘ಕ್ರೇಜಿ ಸ್ಟಾರ್​’ ರವಿಚಂದ್ರನ್​ (Crazy Star Ravichandran) ಅವರ ಮನೆಯಲ್ಲಿ ಶೀಘ್ರವೇ ಶುಭಕಾರ್ಯ ನಡೆಯಲಿದೆ. ಈ ಬಗ್ಗೆ ಮಾಹಿತಿ ಕೇಳಿಬಂದಿದೆ. ರವಿಚಂದ್ರನ್​ ಹಾಗೂ ಸುಮತಿ ದಂಪತಿಯ ಹಿರಿಯ ಪುತ್ರ ಮನೋರಂಜನ್ (Manoranjan Ravichandran)​ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಸದ್ಯದಲ್ಲೇ ಅವರು ಹಸೆಮಣೆ ಏರಲಿದ್ದಾರೆ. ಮೂಲಗಳ ಮಾಹಿತಿ ಪ್ರಕಾರ ಆಗಸ್ಟ್ 21 ಹಾಗೂ 22ರಂದು ಅವರು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಹುಡುಗಿ ಜೊತೆ ಮನೋರಂಜನ್​ ಮದುವೆ (Manoranjan Ravichandran Marriage) ಆಗಲಿದ್ದಾರೆ ಎನ್ನಲಾಗಿದೆ. ವಧುವಿನ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಗೊತ್ತಾಗಬೇಕಿದೆ. ‘ಕ್ರೇಜಿ ಸ್ಟಾರ್​’ ಪುತ್ರನ ಮದುವೆ ಸುದ್ದಿ ತಿಳಿದು ಅಭಿಮಾನಿಗಳು ಖುಷಿ ಆಗಿದ್ದಾರೆ.

ರವಿಚಂದ್ರನ್​ ಅವರ ಇಡೀ ಕುಟುಂಬವೇ ಸಿನಿಮಾ ರಂಗದಲ್ಲಿ ಸಕ್ರಿಯವಾಗಿದೆ. ಅವರ ಇಬ್ಬರು ಗಂಡು ಮಕ್ಕಳು ಹೀರೋ ಆಗಿ ಬ್ಯುಸಿಯಾಗಿದ್ದಾರೆ. ಮನೋರಂಜನ್​ ರವಿಚಂದ್ರನ್​ ಅವರು 2017ರಲ್ಲಿ ‘ಸಾಹೇಬ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಆ ಬಳಿಕ ‘ಬೃಹಸ್ಪತಿ’ ಚಿತ್ರದಲ್ಲಿ ನಟಿಸಿ ಅಭಿಮಾನಿಗಳನ್ನು ರಂಜಿಸಿದರು. 2021ರಲ್ಲಿ ಅವರ ‘ಮುಗಿಲು ಪೇಟೆ’ ಸಿನಿಮಾ ತೆರೆಕಂಡಿತು. ಈ ವರ್ಷ ‘ಪ್ರಾರಂಭ’ ಚಿತ್ರ ಬಿಡುಗಡೆ ಆಯಿತು. ಸಿನಿಮಾ ಕೆಲಸಗಳ ನಡುವೆಯೇ ಅವರು ಜೀವನದ ಬಹುಮುಖ್ಯ ಘಟವನ್ನು ತಲುಪಲು ಸಜ್ಜಾಗಿದ್ದಾರೆ.

ರವಿಚಂದ್ರನ್​ ಅವರಿಗೆ ಮೂವರು ಮಕ್ಕಳು. 2019ರಲ್ಲಿ ಅವರ ಮಗಳ ಮದುವೆ ಅದ್ದೂರಿಯಾಗಿ ನೆರವೇರಿತು. ಈಗ ಪುತ್ರ ಮನೋರಂಜನ್​ ವಿವಾಹದ ಬಗ್ಗೆ ಸುದ್ದಿ ಕೇಳಿಬಂದಿದೆ. ಈ ಕುರಿತು ಕುಟುಂಬದಿಂದ ಅಧಿಕೃತ ಮಾಹಿತಿ ಹೊರಬೀಳಲಿ ಎಂದು ನಿರೀಕ್ಷಿಸಲಾಗುತ್ತಿದೆ. ಕಿರಿಯ ಪುತ್ರ ವಿಕ್ರಮ್​ ರವಿಚಂದ್ರನ್​ ಅವರು ಚಿತ್ರರಂಗಕ್ಕೆ ಈಗತಾನೇ ಕಾಲಿಟ್ಟಿದ್ದಾರೆ. ಅವರು ನಟಿಸಿದ ಮೊದಲ ಸಿನಿಮಾ ‘ತ್ರಿವಿಕ್ರಮ’ ಇತ್ತೀಚೆಗೆ ತೆರೆಕಂಡಿತು.

ಇದನ್ನೂ ಓದಿ
Image
ಕ್ರೇಜಿಸ್ಟಾರ್ ರವಿಚಂದ್ರನ್​ಗೆ ಡಾಕ್ಟರೇಟ್ ಘೋಷಣೆ ಮಾಡಿದ ಬೆಂಗಳೂರು ನಗರ ವಿವಿ
Image
ರವಿಚಂದ್ರನ್​ ಪುತ್ರ ಕನ್ನಡ ಸರಿಯಾಗಿ ಕಲಿತಿದ್ದು ಹೇಗೆ? ಮನುರಂಜನ್​ ನೀಡಿದ ವಿವರಣೆ ಇಲ್ಲಿದೆ..
Image
‘ಮೆಗಾ ಸ್ಟಾರ್’​ ಚಿರಂಜೀವಿ ಮತ್ತು ರವಿಚಂದ್ರನ್​ ನಡುವಿನ ಸ್ನೇಹ ವಿವರಿಸಲು ಈ ಒಂದು ಘಟನೆ ಸಾಕು
Image
ರವಿಚಂದ್ರನ್​ ಸದಾ ಕಪ್ಪು ಬಟ್ಟೆ ಹಾಕೋದು ಯಾಕೆ? ಎಲ್ಲರ ಎದುರು ಗುಟ್ಟು ರಟ್ಟು ಮಾಡಿದ ಸುದೀಪ್​!

ಬ್ಯಾಕ್​ ಟು ಬ್ಯಾಕ್​ ಸಿನಿಮಾ ಕೆಲಸಗಳಲ್ಲಿ ರವಿಚಂದ್ರನ್​ ಬ್ಯುಸಿ ಆಗಿದ್ದಾರೆ. ಕಿರುತೆರೆ ಕಾರ್ಯಕ್ರಮಗಳ ಜಡ್ಜ್​ ಆಗಿಯೂ ಅವರು ಸಕ್ರಿಯರಾಗಿದ್ದಾರೆ. ಅನೇಕ ಸಿನಿಮಾ ಕಾರ್ಯಕ್ರಮಗಳಿಗೆ ಅತಿಥಿಯಾಗಿ ಬಂದು ಹೊಸಬರ ಚಿತ್ರಗಳಿಗೆ ಅವರು ಬೆನ್ನು ತಟ್ಟುತ್ತಿದ್ದಾರೆ. ಇದೆಲ್ಲದರ ನಡುವೆ ಅವರ ಮಗನ ಮದುವೆಗೆ ತಯಾರಿ ಜೋರಾಗಿದೆ ಎನ್ನಲಾಗಿದೆ.

Published On - 10:14 am, Wed, 13 July 22

Follow Us
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್