AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manoranjan Ravichandran: ರವಿಚಂದ್ರನ್​ ಪುತ್ರ ಮನೋರಂಜನ್​ಗೆ ಕಂಕಣ ಭಾಗ್ಯ; ಕೈ ಹಿಡಿಯಲಿರುವ ಹುಡುಗಿ ಹಿನ್ನೆಲೆ ಏನು?

Manoranjan Ravichandran Marriage: ರವಿಚಂದ್ರನ್​ ಕುಟುಂಬದಲ್ಲಿ ಶುಭಕಾರ್ಯಕ್ಕೆ ಸಿದ್ಧತೆ ನಡೆಯುತ್ತಿದೆ. ‘ಕ್ರೇಜಿ ಸ್ಟಾರ್​’ ಪುತ್ರ ಮನೋರಂಜನ್​ ರವಿಚಂದ್ರನ್​ ಅವರು ಸಪ್ತಪದಿ ತುಳಿಯಲು ಸಜ್ಜಾಗುತ್ತಿದ್ದಾರೆ.

Manoranjan Ravichandran: ರವಿಚಂದ್ರನ್​ ಪುತ್ರ ಮನೋರಂಜನ್​ಗೆ ಕಂಕಣ ಭಾಗ್ಯ; ಕೈ ಹಿಡಿಯಲಿರುವ ಹುಡುಗಿ ಹಿನ್ನೆಲೆ ಏನು?
ರವಿಚಂದ್ರನ್, ಮನೋರಂಜನ್
Follow us
TV9 Web
| Updated By: ಮದನ್​ ಕುಮಾರ್​

Updated on:Jul 13, 2022 | 10:14 AM

ನಟ ‘ಕ್ರೇಜಿ ಸ್ಟಾರ್​’ ರವಿಚಂದ್ರನ್​ (Crazy Star Ravichandran) ಅವರ ಮನೆಯಲ್ಲಿ ಶೀಘ್ರವೇ ಶುಭಕಾರ್ಯ ನಡೆಯಲಿದೆ. ಈ ಬಗ್ಗೆ ಮಾಹಿತಿ ಕೇಳಿಬಂದಿದೆ. ರವಿಚಂದ್ರನ್​ ಹಾಗೂ ಸುಮತಿ ದಂಪತಿಯ ಹಿರಿಯ ಪುತ್ರ ಮನೋರಂಜನ್ (Manoranjan Ravichandran)​ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಸದ್ಯದಲ್ಲೇ ಅವರು ಹಸೆಮಣೆ ಏರಲಿದ್ದಾರೆ. ಮೂಲಗಳ ಮಾಹಿತಿ ಪ್ರಕಾರ ಆಗಸ್ಟ್ 21 ಹಾಗೂ 22ರಂದು ಅವರು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಹುಡುಗಿ ಜೊತೆ ಮನೋರಂಜನ್​ ಮದುವೆ (Manoranjan Ravichandran Marriage) ಆಗಲಿದ್ದಾರೆ ಎನ್ನಲಾಗಿದೆ. ವಧುವಿನ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಗೊತ್ತಾಗಬೇಕಿದೆ. ‘ಕ್ರೇಜಿ ಸ್ಟಾರ್​’ ಪುತ್ರನ ಮದುವೆ ಸುದ್ದಿ ತಿಳಿದು ಅಭಿಮಾನಿಗಳು ಖುಷಿ ಆಗಿದ್ದಾರೆ.

ರವಿಚಂದ್ರನ್​ ಅವರ ಇಡೀ ಕುಟುಂಬವೇ ಸಿನಿಮಾ ರಂಗದಲ್ಲಿ ಸಕ್ರಿಯವಾಗಿದೆ. ಅವರ ಇಬ್ಬರು ಗಂಡು ಮಕ್ಕಳು ಹೀರೋ ಆಗಿ ಬ್ಯುಸಿಯಾಗಿದ್ದಾರೆ. ಮನೋರಂಜನ್​ ರವಿಚಂದ್ರನ್​ ಅವರು 2017ರಲ್ಲಿ ‘ಸಾಹೇಬ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಆ ಬಳಿಕ ‘ಬೃಹಸ್ಪತಿ’ ಚಿತ್ರದಲ್ಲಿ ನಟಿಸಿ ಅಭಿಮಾನಿಗಳನ್ನು ರಂಜಿಸಿದರು. 2021ರಲ್ಲಿ ಅವರ ‘ಮುಗಿಲು ಪೇಟೆ’ ಸಿನಿಮಾ ತೆರೆಕಂಡಿತು. ಈ ವರ್ಷ ‘ಪ್ರಾರಂಭ’ ಚಿತ್ರ ಬಿಡುಗಡೆ ಆಯಿತು. ಸಿನಿಮಾ ಕೆಲಸಗಳ ನಡುವೆಯೇ ಅವರು ಜೀವನದ ಬಹುಮುಖ್ಯ ಘಟವನ್ನು ತಲುಪಲು ಸಜ್ಜಾಗಿದ್ದಾರೆ.

ರವಿಚಂದ್ರನ್​ ಅವರಿಗೆ ಮೂವರು ಮಕ್ಕಳು. 2019ರಲ್ಲಿ ಅವರ ಮಗಳ ಮದುವೆ ಅದ್ದೂರಿಯಾಗಿ ನೆರವೇರಿತು. ಈಗ ಪುತ್ರ ಮನೋರಂಜನ್​ ವಿವಾಹದ ಬಗ್ಗೆ ಸುದ್ದಿ ಕೇಳಿಬಂದಿದೆ. ಈ ಕುರಿತು ಕುಟುಂಬದಿಂದ ಅಧಿಕೃತ ಮಾಹಿತಿ ಹೊರಬೀಳಲಿ ಎಂದು ನಿರೀಕ್ಷಿಸಲಾಗುತ್ತಿದೆ. ಕಿರಿಯ ಪುತ್ರ ವಿಕ್ರಮ್​ ರವಿಚಂದ್ರನ್​ ಅವರು ಚಿತ್ರರಂಗಕ್ಕೆ ಈಗತಾನೇ ಕಾಲಿಟ್ಟಿದ್ದಾರೆ. ಅವರು ನಟಿಸಿದ ಮೊದಲ ಸಿನಿಮಾ ‘ತ್ರಿವಿಕ್ರಮ’ ಇತ್ತೀಚೆಗೆ ತೆರೆಕಂಡಿತು.

ಇದನ್ನೂ ಓದಿ
Image
ಕ್ರೇಜಿಸ್ಟಾರ್ ರವಿಚಂದ್ರನ್​ಗೆ ಡಾಕ್ಟರೇಟ್ ಘೋಷಣೆ ಮಾಡಿದ ಬೆಂಗಳೂರು ನಗರ ವಿವಿ
Image
ರವಿಚಂದ್ರನ್​ ಪುತ್ರ ಕನ್ನಡ ಸರಿಯಾಗಿ ಕಲಿತಿದ್ದು ಹೇಗೆ? ಮನುರಂಜನ್​ ನೀಡಿದ ವಿವರಣೆ ಇಲ್ಲಿದೆ..
Image
‘ಮೆಗಾ ಸ್ಟಾರ್’​ ಚಿರಂಜೀವಿ ಮತ್ತು ರವಿಚಂದ್ರನ್​ ನಡುವಿನ ಸ್ನೇಹ ವಿವರಿಸಲು ಈ ಒಂದು ಘಟನೆ ಸಾಕು
Image
ರವಿಚಂದ್ರನ್​ ಸದಾ ಕಪ್ಪು ಬಟ್ಟೆ ಹಾಕೋದು ಯಾಕೆ? ಎಲ್ಲರ ಎದುರು ಗುಟ್ಟು ರಟ್ಟು ಮಾಡಿದ ಸುದೀಪ್​!

ಬ್ಯಾಕ್​ ಟು ಬ್ಯಾಕ್​ ಸಿನಿಮಾ ಕೆಲಸಗಳಲ್ಲಿ ರವಿಚಂದ್ರನ್​ ಬ್ಯುಸಿ ಆಗಿದ್ದಾರೆ. ಕಿರುತೆರೆ ಕಾರ್ಯಕ್ರಮಗಳ ಜಡ್ಜ್​ ಆಗಿಯೂ ಅವರು ಸಕ್ರಿಯರಾಗಿದ್ದಾರೆ. ಅನೇಕ ಸಿನಿಮಾ ಕಾರ್ಯಕ್ರಮಗಳಿಗೆ ಅತಿಥಿಯಾಗಿ ಬಂದು ಹೊಸಬರ ಚಿತ್ರಗಳಿಗೆ ಅವರು ಬೆನ್ನು ತಟ್ಟುತ್ತಿದ್ದಾರೆ. ಇದೆಲ್ಲದರ ನಡುವೆ ಅವರ ಮಗನ ಮದುವೆಗೆ ತಯಾರಿ ಜೋರಾಗಿದೆ ಎನ್ನಲಾಗಿದೆ.

Published On - 10:14 am, Wed, 13 July 22

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್