AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KD Movie: ‘ಕೆಡಿ’ ಸಿನಿಮಾದಲ್ಲಿ ರವಿಚಂದ್ರನ್​ಗೆ ಖಡಕ್​ ಪಾತ್ರ; ಹೊಸ ವರ್ಷಕ್ಕೆ ರಿವೀಲ್​ ಆಯ್ತು ಅಣ್ಣಯ್ಯಪ್ಪ ಲುಕ್​

Ravichandran | Dhruva Sarja: ‘ಕೆಡಿ’ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಲಿದೆ. ಈ ಚಿತ್ರದಲ್ಲಿ ರವಿಚಂದ್ರನ್​ ಅವರು ಅಣ್ಣಯ್ಯಪ್ಪ ಎಂಬ ಪಾತ್ರ ಮಾಡುತ್ತಿದ್ದಾರೆ.

KD Movie: ‘ಕೆಡಿ’ ಸಿನಿಮಾದಲ್ಲಿ ರವಿಚಂದ್ರನ್​ಗೆ ಖಡಕ್​ ಪಾತ್ರ; ಹೊಸ ವರ್ಷಕ್ಕೆ ರಿವೀಲ್​ ಆಯ್ತು ಅಣ್ಣಯ್ಯಪ್ಪ ಲುಕ್​
ರವಿಚಂದ್ರನ್
TV9 Web
| Edited By: |

Updated on:Jan 01, 2023 | 5:23 PM

Share

ನಟ ರವಿಚಂದ್ರನ್​ (Crazy Star Ravichandran) ಅವರು ಯಾವುದೇ ಪಾತ್ರಕ್ಕೂ ಜೀವ ತುಂಬಬಲ್ಲಂತಹ ಕಲಾವಿದ. ಅಂಥ ಪ್ರತಿಭಾವಂತ ನಟ ಈಗ ‘ಕೆಡಿ’ ಸಿನಿಮಾ (KD Movie) ತಂಡವನ್ನು ಸೇರಿಕೊಂಡಿದ್ದಾರೆ. ಈ ಸುದ್ದಿ ಕೇಳಿ ಅಭಿಮಾನಿಗಳಿಗೆ ಸಖತ್​ ಖುಷಿ ಆಗಿದೆ. ಹೊಸ ವರ್ಷದ ಪ್ರಯುಕ್ತ ಇಂದು (ಜ.1) ಈ ಚಿತ್ರದ ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ‘ಜೋಗಿ’ ಪ್ರೇಮ್​ (Jogi Prem) ನಿರ್ದೇಶನ ಮಾಡುತ್ತಿರುವ, ಧ್ರುವ ಸರ್ಜಾ ಮುಖ್ಯ ಭೂಮಿಕೆ ನಿಭಾಯಿಸುತ್ತಿರುವ ಈ ಸಿನಿಮಾದಲ್ಲಿ ರವಿಚಂದ್ರನ್​ ಅವರು ಅಣ್ಣಯ್ಯಪ್ಪ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ. ಆ ಪಾತ್ರ ಹೇಗಿರಲಿದೆ ಎಂಬುದರ ಝಲಕ್​ ತಿಳಿಸುವ ಸಲುವಾಗಿ ಪೋಸ್ಟರ್​ ಹಂಚಿಕೊಳ್ಳಲಾಗಿದ್ದು, ಇದನ್ನು ಕಂಡು ಫ್ಯಾನ್ಸ್​ ಥ್ರಿಲ್​ ಆಗಿದ್ದಾರೆ.

ಪ್ರೇಮ್​ ನಿರ್ದೇಶನದ ಸಿನಿಮಾ ಎಂದರೆ ಸಿನಿಪ್ರಿಯರಿಗೆ ನಿರೀಕ್ಷೆ ಇದ್ದೇ ಇರುತ್ತದೆ. ಅವರ ಜೊತೆ ರವಿಚಂದ್ರನ್​ ಕೈ ಜೋಡಿಸಿರುವುದು ಹೈಪ್​ ಹೆಚ್ಚಲು ಕಾರಣ ಆಗಿದೆ. ಕೆವಿಎನ್​ ಪ್ರೊಡಕ್ಷನ್ಸ್​ ಮೂಲಕ ‘ಕೆಡಿ’ ಸಿನಿಮಾ ಮೂಡಿಬರುತ್ತಿದೆ. ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣ ಆಗುತ್ತಿದೆ. ರವಿಚಂದ್ರನ್​ ಅವರ ಲುಕ್​ ಸಖತ್​ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ
Image
ಸ್ಯಾಂಡಲ್​ವುಡ್​ನಲ್ಲಿ ಶಿವಣ್ಣ-ರವಿಚಂದ್ರನ್​ ಬರ್ತ್​ಡೇ ಸಂಭ್ರಮ; ಸ್ಟಾರ್ ನಟರ ಹುಟ್ಟುಹಬ್ಬ ಒಟ್ಟಾಗಿ ಆಚರಿಸಲು ಪ್ಲ್ಯಾನ್
Image
Manoranjan Ravichandran: ರವಿಚಂದ್ರನ್​ ಪುತ್ರ ಮನೋರಂಜನ್​ಗೆ ಕಂಕಣ ಭಾಗ್ಯ; ಕೈ ಹಿಡಿಯಲಿರುವ ಹುಡುಗಿ ಹಿನ್ನೆಲೆ ಏನು?
Image
ನಾನು ಪ್ರಭಾಕರ್ ತೊಡೆಯಮೇಲೆ ಆಡಿ ಬೆಳೆದವನು ಎಂದ ರವಿಚಂದ್ರನ್
Image
‘ಹುಡುಗಿಯರನ್ನು ಮುಟ್ಟದೇ ನಿಂಗೆ ಸಿನಿಮಾ ಮಾಡೋಕೆ ಬರಲ್ವಾ?’: ರವಿಚಂದ್ರನ್​ಗೆ ನೇರ ಪ್ರಶ್ನೆ ಕೇಳಿದ್ದ ಪತ್ನಿ

ಇದನ್ನೂ ಓದಿ: KD ಚಿತ್ರದಲ್ಲಿ ಶಿಲ್ಪಾ ಶೆಟ್ಟಿ ನಟಿಸುವುದು ಬಹುತೇಕ ಖಚಿತ​: ಸುಳಿವು ನೀಡಿದ ಧ್ರುವ ಸರ್ಜಾ

ಕಪ್ಪು ಬಟ್ಟೆ, ಉದ್ದ ಕೂದಲು, ಕೂಲಿಂಗ್​ ಗ್ಲಾಸ್​, ಹಣೆಯಲ್ಲಿ ವಿಭೂತಿ.. ಹೀಗೆ ವಿಶೇಷ ಗೆಟಪ್​ನಲ್ಲಿ ರವಿಚಂದ್ರನ್​ ಅವರ ಪಾತ್ರ ಇರಲಿದೆ. ಸಿಕ್ಕಾಪಟ್ಟೆ ಗತ್ತಿನಲ್ಲಿ ಕಾರೊಳಗೆ ಕುಳಿತು ಅವರು ಪೋಸ್​ ನೀಡಿದ್ದಾರೆ. ಈ ಪೋಸ್ಟರ್​ನಿಂದಾಗಿ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ. ಈ ಖಡಕ್​ ಪೋಸ್ಟರ್​ ಹಂಚಿಕೊಳ್ಳುವ ಮೂಲಕ ಪ್ರೇಮ್​ ಅವರು ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ.

ಇದನ್ನೂ ಓದಿ: ಧ್ರುವ ಸರ್ಜಾ- ಪ್ರೇಮ್ ಸಿನಿಮಾಗೆ ‘ಕೆಡಿ​’ ಟೈಟಲ್​; ಅದ್ದೂರಿಯಾಗಿ ಲಾಂಚ್ ಆಯ್ತು ಶೀರ್ಷಿಕೆ

ಮಾಸ್​ ಸಿನಿಮಾಗಳಿಂದ ಫೇಮಸ್​ ಆದವರು ‘ಆ್ಯಕ್ಷನ್​ ಪ್ರಿನ್ಸ್​’ ಧ್ರುವ ಸರ್ಜಾ. ‘ಕೆಡಿ’ ಚಿತ್ರದಲ್ಲೂ ಅವರ ಮಾಸ್​ ಅವತಾರ ಮುಂದುವರಿಯಲಿದೆ ಎಂಬುದಕ್ಕೆ ಟೀಸರ್​ನಲ್ಲಿ ಸುಳಿವು ನೀಡಲಾಗಿತ್ತು. ರೆಟ್ರೋ ಕಾಲದ ಕಥೆ ಈ ಚಿತ್ರದಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ. ಅದಕ್ಕೆ ತಕ್ಕಂತೆಯೇ ರವಿಚಂದ್ರನ್​ ಅವರ ಲುಕ್​ ಮೂಡಿಬಂದಿದೆ. ಅಭಿಮಾನಿಗಳ ವಲಯದಲ್ಲಿ ಹೊಸ ಪೋಸ್ಟರ್​ ವೈರಲ್​ ಆಗುತ್ತಿದೆ.

View this post on Instagram

A post shared by Prem❣️s (@directorprems)

‘ಕೆಡಿ’ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಲಿದೆ. ಕನ್ನಡ, ತಮಿಳು, ಹಿಂದಿ, ಮಲಯಾಳಂ ಹಾಗೂ ತೆಲುಗು ಭಾಷೆಯಲ್ಲಿ ತೆರೆಕಾಣಲಿದೆ. ಆ ಕಾರಣದಿಂದಲೂ ಈ ಸಿನಿಮಾ ಮೇಲೆ ನಿರೀಕ್ಷೆ ಇದೆ. ಅರ್ಜುನ್​ ಜನ್ಯ ಅವರು ಸಂಗೀತ ನೀಡುತ್ತಿದ್ದಾರೆ. ತೆರೆ ಹಿಂದೆ ಘಟಾನುಘಟಿ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಧ್ರುವ ಸರ್ಜಾ ಅವರ ವೃತ್ತಿಜೀವನಕ್ಕೆ ಇದು ಮಹತ್ವದ ಸಿನಿಮಾ ಆಗುವ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:23 pm, Sun, 1 January 23

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ