ಅಂತೂ ದೊಡ್ಡ ನಿರ್ಧಾರ ತೆಗೆದುಕೊಂಡ ರವಿಚಂದ್ರನ್​!​ ಇನ್ಮುಂದೆ ನಕಲಿಗಳ ಆಟ ನಡೆಯೋದಿಲ್ಲ

ರವಿಚಂದ್ರನ್​ ಇನ್ನೂ ಸೋಶಿಯಲ್​ ಮೀಡಿಯಾಗೆ ಕಾಲಿಟ್ಟಿಲ್ಲವಲ್ಲ ಎಂದು ಅವರ ಫ್ಯಾನ್ಸ್​ ಸ್ವಲ್ಪ ಬೇಸರ ಮಾಡಿಕೊಂಡಿದ್ದರು. ಶೀಘ್ರದಲ್ಲೇ ಆ ಬೇಸರವನ್ನು ಕ್ರೇಜಿ ಸ್ಟಾರ್​ ದೂರ ಮಾಡಲಿದ್ದಾರೆ.

ಅಂತೂ ದೊಡ್ಡ ನಿರ್ಧಾರ ತೆಗೆದುಕೊಂಡ ರವಿಚಂದ್ರನ್​!​ ಇನ್ಮುಂದೆ ನಕಲಿಗಳ ಆಟ ನಡೆಯೋದಿಲ್ಲ
ರವಿಚಂದ್ರನ್​
Follow us
|

Updated on: Apr 06, 2021 | 10:54 AM

ಕನ್ನಡ ಚಿತ್ರರಂಗದ ಹಿರಿಯ ನಟರಲ್ಲಿ ಒಬ್ಬರಾದ ರವಿಚಂದ್ರನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಸ್ಯಾಂಡಲ್​ವುಡ್​ನಲ್ಲಿ ಅನೇಕ ಹೊಸ ಟ್ರೆಂಡ್​ಗಳನ್ನು ಸೆಟ್​ ಮಾಡಿದ ರಣಧೀರ ಅವರು. ಆದರೆ ಒಂದು ವಿಚಾರದಲ್ಲಿ ಮಾತ್ರ ಕ್ರೇಜಿ ಸ್ಟಾರ್​ ಇಷ್ಟು ದಿನ ಹಿಂದುಳಿದುಕೊಂಡಿದ್ದರು. ಹೌದು, ಸೋಶಿಯಲ್​ ಮೀಡಿಯಾ ಕಡೆಗೆ ರವಿಚಂದ್ರನ್​ ತಲೆ ಹಾಕಿರಲಿಲ್ಲ. ಆದರೆ ಈಗ ಒಂದು ಮಹತ್ವದ ನಿರ್ಧಾರ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಅವರು ಸಾಮಾಜಿಕ ಜಾಲತಾಣಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಅದಕ್ಕಾಗಿ ದಿನಾಂಕ ಕೂಡ ಫಿಕ್ಸ್​ ಆಗಿದೆ. ಚಿಕ್ಕ ಟೀಸರ್​ ಮೂಲಕ ರವಿಚಂದ್ರನ್​ ನಿರೀಕ್ಷೆ ಮೂಡಿಸಿದ್ದಾರೆ.

ಸಾಮಾನ್ಯವಾಗಿ ಎಲ್ಲ ಸೆಲೆಬ್ರಿಟಿಗಳು ತಮ್ಮ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಸೋಶಿಯಲ್​ ಮೀಡಿಯಾ ಖಾತೆಗಳನ್ನು ಬಳಸುತ್ತಾರೆ. ಆದರೆ ರವಿಚಂದ್ರನ್​ ಇದರಿಂದ ದೂರ ಉಳಿದುಕೊಂಡಿದ್ದರು. ಫೇಸ್​ಬುಕ್​, ಇನ್​ಸ್ಟಾಗ್ರಾಮ್​, ಟ್ವಿಟರ್​, ಯೂಟ್ಯೂಬ್​ ಮುಂತಾದ ಕಡೆಗಳಲ್ಲಿ ರವಿಚಂದ್ರನ್​ ಖಾತೆ ಹೊಂದಿರಲಿಲ್ಲ. ಆದರೆ ಈಗ ಅವರು ಸಾಮಾಜಿಕ ಜಾಲತಾಣಕ್ಕೆ ಎಂಟ್ರಿ ನೀಡಲು ಸಜ್ಜಾಗಿದ್ದಾರೆ. ಫೇಸ್​ಬುಕ್​, ಇನ್​ಸ್ಟಾಗ್ರಾಮ್​, ಟ್ವಿಟರ್​ ಮತ್ತು ಯೂಟ್ಯೂಬ್​ ಅವರು ಏಕಕಾಲಕ್ಕೆ ಅಧಿಕೃತ ಖಾತೆಗಳನ್ನು ಹೊಂದಲಿದ್ದಾರೆ.

ಕನ್ನಡ ಚಿತ್ರರಂಗದ ಬಹುತೇಕ ಎಲ್ಲ ಹಿರಿಯ ಸ್ಟಾರ್ ಕಲಾವಿದರು ಸೋಶಿಯಲ್​ ಮೀಡಿಯಾ ಬಳಸುತ್ತಿದ್ದಾರೆ. ಶಿವರಾಜ್​ಕುಮಾರ್​, ರಮೇಶ್​ ಅರವಿಂದ್​, ಜಗ್ಗೇಶ್​, ಸುಧಾರಾಣಿ ಮುಂತಾದವರು ಈ ವಿಚಾರದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿದ್ದಾರೆ. ಹಾಗಿದ್ದರೂ ರವಿಚಂದ್ರನ್​ ಅವರು ಇನ್ನೂ ಸೋಶಿಯಲ್​ ಮೀಡಿಯಾಗೆ ಕಾಲಿಟ್ಟಿಲ್ಲವಲ್ಲ ಎಂದು ಅವರ ಫ್ಯಾನ್ಸ್​ ಸ್ವಲ್ಪ ಬೇಸರ ಮಾಡಿಕೊಂಡಿದ್ದರು. ಶೀಘ್ರದಲ್ಲೇ ಆ ಬೇಸರವನ್ನು ಕ್ರೇಜಿ ಸ್ಟಾರ್​ ದೂರ ಮಾಡಲಿದ್ದಾರೆ. ಏ.13ರಂದು ಯುಗಾದಿ ಹಬ್ಬದ ಪ್ರಯುಕ್ತ ಅವರು ಸೋಶಿಯಲ್​ ಮೀಡಿಯಾ ಖಾತೆಗಳನ್ನು ತೆರೆಯಲಿದ್ದಾರೆ.

ರವಿಚಂದ್ರನ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಇಲ್ಲದಿದ್ದರೂ ಕೂಡ ಅವರ ಹೆಸರಿನಲ್ಲಿ ಅನೇಕ ನಕಲಿ ಖಾತೆಗಳು ಹುಟ್ಟಿಕೊಂಡಿದ್ದವು. ಅವುಗಳನ್ನು ಸಾವಿರಾರು ಜನರು ಫಾಲೋ ಮಾಡುತ್ತಿದ್ದರು. ಹಾಗಾಗಿ ಕೆಲವೊಮ್ಮೆ ನೆಟ್ಟಿಗರಿಗೆ ಈ ವಿಚಾರದಲ್ಲಿ ಗೊಂದಲ ಆಗುತ್ತಿತ್ತು. ಸ್ವಲ್ಪ ಯಾಮಾರಿದರೆ ರವಿಚಂದ್ರನ್​ ಅಭಿಮಾನಿಗಳು ಕೂಡ ಈ ನಕಲಿ ಖಾತೆಗಳನ್ನು ನಂಬುವ ಪರಿಸ್ಥಿತಿ ಬರುತ್ತಿತ್ತು. ಆದರೆ ಈಗ ಸ್ವತಃ ರವಿಚಂದ್ರನ್​ ಅವರು ಅಧಿಕೃತ ಖಾತೆಗಳನ್ನು ಶುರು ಮಾಡುತ್ತಿರುವುದರಿಂದ ಇನ್ಮುಂದೆ ನಕಲಿ ಖಾತೆಗಳ ಆಟ ನಡೆಯುವುದಿಲ್ಲ.

ಇದನ್ನೂ ಓದಿ: ರವಿಚಂದ್ರನ್​ ಸದಾ ಕಪ್ಪು ಬಟ್ಟೆ ಹಾಕೋದು ಯಾಕೆ? ಎಲ್ಲರ ಎದುರು ಗುಟ್ಟು ರಟ್ಟು ಮಾಡಿದ ಸುದೀಪ್​!

ಗ್ರಾಮ ಪಂಚಾಯತಿ​ ಚುನಾವಣೆಗೂ ಕಾಲಿಟ್ಟ ‘ಸೋಶಿಯಲ್​ ಮೀಡಿಯಾ’ ಪ್ರಚಾರ

(Crazy Star V Ravichandran all set to have Facebook Twitter Instagram and other social media official accounts)

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ