AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಹಾಡಿಗೆ ಹೆಜ್ಜೆ ಹಾಕಿದ ಕ್ರಿಕೆಟರ್​ ಡೇವಿಡ್​ ವಾರ್ನರ್​​​; ಅವರು ಆರ್​ಸಿಬಿಗೆ ಬರೋದು ಪಕ್ಕಾ ಎಂದ ಅಭಿಮಾನಿಗಳು  

‘ಪುಷ್ಪ’ ಸಿನಿಮಾದಲ್ಲಿ ಬರುವ ‘ಶ್ರೀವಲ್ಲಿ..’ ಹಾಡು ತುಂಬಾನೇ ಫೇಮಸ್​ ಆಗಿದೆ. ಈ ಹಾಡು ಯೂಟ್ಯೂಬ್​ನಲ್ಲಿ ಕೋಟ್ಯಾಂತರ ಬಾರಿ ವೀಕ್ಷಣೆ ಕಂಡಿದೆ. ಈ ಹಾಡು ಈಗ ರೀಲ್ಸ್​ನಲ್ಲಿ ಫೇಮಸ್​ ಆಗಿದೆ.

ಕನ್ನಡ ಹಾಡಿಗೆ ಹೆಜ್ಜೆ ಹಾಕಿದ ಕ್ರಿಕೆಟರ್​ ಡೇವಿಡ್​ ವಾರ್ನರ್​​​; ಅವರು ಆರ್​ಸಿಬಿಗೆ ಬರೋದು ಪಕ್ಕಾ ಎಂದ ಅಭಿಮಾನಿಗಳು  
ಡೇವಿಡ್​ ವಾರ್ನರ್​
TV9 Web
| Edited By: |

Updated on:Jan 21, 2022 | 5:58 PM

Share

ಆಸ್ಟ್ರೇಲಿಯಾದ ಕ್ರಿಕೆಟ್​ ಆಟಗಾರ ಡೇವಿಡ್​ ವಾರ್ನರ್​ಗೂ (David Warner) ಭಾರತಕ್ಕೂ ಎಲ್ಲಿಲ್ಲದ ನಂಟು. ಐಪಿಎಲ್​ನಲ್ಲಿ ಹೈದರಾಬಾದ್ ತಂಡದಲ್ಲಿ (Sunrisers Hyderabad) ಆಡುತ್ತಿದ್ದ ಅವರು, ಇಲ್ಲಿನ ಜನರಿಗೆ ಹತ್ತಿರವಾದರು. ಈ ಮೊದಲು ಕನ್ನಡ, ತೆಲುಗು, ಹಿಂದಿ ಹಾಡುಗಳಿಗೆ ಅವರು ರೀಲ್ಸ್​ ಮಾಡಿದ್ದಾರೆ. ಮೈದಾನದಲ್ಲಿ ತೆಲುಗು ಹಾಡಿಗೆ ಅವರು ಹೆಜ್ಜೆ ಹಾಕಿದ್ದಾರೆ. ಡೇವಿಡ್​ ವಾರ್ನರ್​ ಏನೇ ಮಾಡಿದರೂ ಅದನ್ನು ಇಷ್ಟಪಡುವ ಅನೇಕರಿದ್ದಾರೆ. ಈಗ ಅವರು ಮಾಡಿರುವ ಹೊಸ ರೀಲ್ಸ್​ ವೈರಲ್​ ಆಗುತ್ತಿದೆ. ‘ಪುಷ್ಪ’ ಸಿನಿಮಾದ ‘ಶ್ರೀವಲ್ಲಿ..’ ಹಾಡಿನ ಕನ್ನಡ ವರ್ಷನ್​​ಗೆ ಅವರು ಹೆಜ್ಜೆ ಹಾಕಿದ್ದಾರೆ.

‘ಪುಷ್ಪ’ ಸಿನಿಮಾದಲ್ಲಿ ಬರುವ ‘ಶ್ರೀವಲ್ಲಿ..’ ಹಾಡು ತುಂಬಾನೇ ಫೇಮಸ್​ ಆಗಿದೆ. ಈ ಹಾಡು ಯೂಟ್ಯೂಬ್​ನಲ್ಲಿ ಕೋಟ್ಯಾಂತರ ಬಾರಿ ವೀಕ್ಷಣೆ ಕಂಡಿದೆ. ಈ ಹಾಡು ಈಗ ರೀಲ್ಸ್​ನಲ್ಲಿ ಫೇಮಸ್​ ಆಗಿದೆ. ಅಲ್ಲು ಅರ್ಜುನ್​ ಮಾಡಿದ ಸ್ಟೆಪ್​ಅನ್ನು ಎಲ್ಲರೂ ಅನುಕರಿಸುತ್ತಿದ್ದಾರೆ. ಹೀಗಾಗಿ, ಈ ಹಾಡು ಸಾಕಷ್ಟು ವೈರಲ್​ ಆಗುತ್ತಿದೆ. ಕ್ರಿಕೆಟರ್​​ ಸೂರ್ಯಕುಮಾರ್​ ಯಾದವ್​ ಸೇರಿ ಅನೇಕರು ಈ ಹಾಡಿಗೆ ರೀಲ್ಸ್​ ಮಾಡಿದ್ದಾರೆ. ಈ ಬಾರಿ ಡೇವಿಡ್ ವಾರ್ನರ್​ ಅವರ ಸರದಿ.

‘ಶ್ರೀವಲ್ಲಿ..’ ಹಾಡಿನ ಕನ್ನಡ ಅವತರಣಿಕೆಗೆ ಡೇವಿಡ್​ ವಾರ್ನರ್​ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ​ಅನ್ನು ಅವರು ಇನ್​ಸ್ಟ್ರಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಪೋಸ್ಟ್​ ಮಾಡಿದ ಎರಡು ಗಂಟೆಗಳಲ್ಲಿ ಈ ವಿಡಿಯೋ 25 ಲಕ್ಷ ಬಾರಿ ವೀಕ್ಷಣೆ ಕಂಡಿದೆ. 7.14 ಲಕ್ಷ ಲೈಕ್ಸ್​ ಪಡೆದುಕೊಂಡಿದೆ. ಇದು ಡೇವಿಡ್​ ಬಗ್ಗೆ ಭಾರತೀಯರಿಗೆ ಇರುವ ಕ್ರೇಜ್​ಅನ್ನು ತೋರಿಸುತ್ತದೆ.

‘ಶ್ರೀವಲ್ಲಿ..’ ತೆಲುಗು ಹಾಗೂ ಹಿಂದಿ ಹಾಡಿಗೆ ಈ ಮೊದಲು ಅನೇಕರು ಹೆಜ್ಜೆ ಹಾಕಿದ್ದರು. ಆದರೆ, ಕನ್ನಡ ಹಾಡಿಗೆ ಯಾರೂ ಅಷ್ಟಾಗಿ ಡ್ಯಾನ್ಸ್​ ಮಾಡಿರಲಿಲ್ಲ. ಈಗ ಡೇವಿಡ್​ ವಾರ್ನರ್​ ಅವರು ಕನ್ನಡ ಹಾಡಿಗೆ ಡ್ಯಾನ್ಸ್​ ಮಾಡಿರೋದು ಸಾಕಷ್ಟು ಜನರಿಗೆ ಖುಷಿ ನೀಡಿದೆ. ಐಪಿಎಲ್​ ವಿಚಾರವೂ ಇಲ್ಲಿ ಪ್ರಸ್ತಾಪವಾಗಿದೆ. ಕಳೆದ ಸೀಸನ್​ಲ್ಲಿ ಅವರು ಸನ್​ ರೈಸರ್ಸ್​ ಹೈದರಾಬಾದ್​ ತಂಡದಲ್ಲಿ ಆಡಿದ್ದರು. ಆದರೆ, ಹೈದರಾಬಾದ್​ ತಂಡ ಈ ಬಾರಿ ಡೇವಿಡ್​ ಅವರನ್ನು ಉಳಿಸಿಕೊಂಡಿಲ್ಲ. ಹೀಗಾಗಿ, ವಾರ್ನರ್​​ ಈ ಬಾರಿ ಆರ್​ಸಿಬಿ ಪರ ಆಡುತ್ತಾರೆ ಎಂದು ಎಲ್ಲರೂ ಹೇಳುತ್ತಿದ್ದಾರೆ.

ಇದನ್ನೂ ಓದಿ: ಮಗಳ ವಿಡಿಯೋಗೆ ಕನ್ನಡ ಹಾಡು ಹಾಕಿದ ಡೇವಿಡ್​ ವಾರ್ನರ್​; ಕನ್ನಡಿಗರು ಫುಲ್​ ಫಿದಾ

ಅಮೇಜಾನ್​ ಪ್ರೈಮ್​ನಿಂದ ಬಂಪರ್​ ಆಫರ್​; ಈ ಸಿನಿಮಾಗಳು ಉಚಿತ ವೀಕ್ಷಣೆಗೆ ಲಭ್ಯ

Published On - 5:50 pm, Fri, 21 January 22

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ