Kichcha Sudeep: ಕಿಚ್ಚ ಸುದೀಪ್ ಮನೆಯಲ್ಲಿ ಚಾಹಲ್, ಪೃಥ್ವಿ ಶಾ

ನಟ ಸುದೀಪ್ ಮನೆಗೆ ಕ್ರಿಕೆಟಿಗರಾದ ಯಜುವೇಂದ್ರ ಚಾಹಲ್ ಹಾಗೂ ಪೃಥ್ವಿ ಶಾ ಭೇಟಿ ನೀಡಿದ್ದಾರೆ. ಈ ಹಿಂದೆ ಹಲವು ಕ್ರಿಕೆಟಿಗರು ಸುದೀಪ್ ಮನೆಗೆ ಭೇಟಿ ನೀಡಿ ಆಥಿತ್ಯ ಸ್ವೀಕರಿಸಿದ್ದರು.

Kichcha Sudeep: ಕಿಚ್ಚ ಸುದೀಪ್ ಮನೆಯಲ್ಲಿ ಚಾಹಲ್, ಪೃಥ್ವಿ ಶಾ
ಸುದೀಪ್-ಚಾಹಲ್-ಶಾ-ಸಂದೀಪ್
Follow us
|

Updated on: Mar 08, 2023 | 10:59 PM

ನಟ ಕಿಚ್ಚ ಸುದೀಪ್​ರ (Sudeep) ಕ್ರಿಕೆಟ್ ಪ್ರೀತಿಯ ಬಗ್ಗೆ ಪೀಠಿಕೆಯ ಅಗತ್ಯವಿಲ್ಲ. ಕ್ರಿಕೆಟ್ ಹಾಗೂ ಸಿನಿಮಾ ಪ್ರಿಯರಿಬ್ಬರಿಗೂ ಸುದೀಪ್​ರ ಕ್ರಿಕೆಟ್ ಪ್ರೇಮದ ಬಗ್ಗೆ ತಿಳಿದೇ ಇದೆ. ಕ್ರಿಕೆಟ್ ಅನ್ನು ಅತಿಯಾಗಿ ಪ್ರೀತಿಸುವ, ಜೀವಿಸುವ ಸುದೀಪ್​ಗೆ ಸಾಕಷ್ಟು ರಾಷ್ಟ್ರೀಯ, ಅಂತರಾಷ್ಟ್ರೀಯ ಕ್ರಿಕೆಟರ ಸ್ನೇಹ ದೊರೆತಿದೆ. ಸುದೀಪ್​ರ ಆತ್ಮೀಯ ಗೆಳೆಯರ ಪಟ್ಟಿಯಲ್ಲಿ ಕ್ರಿಕೆಟಿಗರೂ ಇದ್ದಾರೆ. ಹಲವು ಕ್ರಿಕೆಟಿಗರು ಸುದೀಪ್ ಮನೆಗೆ ಆಗಮಿಸಿ ಆಥಿತ್ಯ ಪಡೆದಿದ್ದಾರೆ. ಇದೀಗ ಕ್ರಿಕೆಟಿಗ ಯಜುವೇಂಧರ್ ಚಾಹಲ್ (Yuzvendra Chahal), ಪೃಥ್ವಿ ಶಾ (Prithvi Shaw) ಹಾಗೂ ಸಂದೀಪ್ ಶರ್ಮಾ, ಸುದೀಪ್ ಮನೆಗೆ ಆಗಮಿಸಿ ಆಥಿತ್ಯ ಸ್ವೀಕರಿಸಿದ್ದಾರೆ.

ಚಾಹಲ್, ಪೃಥ್ವಿ ಶಾ, ಸಂದೀಪ್ ಶರ್ಮಾ ಹಾಗೂ ಇನ್ನೂ ಕೆಲವರು ಸುದೀಪ್ ಮನೆಗೆ ಆಗಮಿಸಿದ್ದು, ಪಾರ್ಟಿಯಲ್ಲಿ ಭಾಗವಹಿಸಿದ್ದಾರೆ. ಚಾಹಲ್ ಹಾಗೂ ಶಾ ಅವರು ಒಳಗೊಂಡಂತೆ ಇನ್ನಷ್ಟು ಅತಿಥಿಗಳಿರುವ ಚಿತ್ರವನ್ನು ನಟ ಸುದೀಪ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಇಂದು (ಮಾರ್ಚ್ 08) ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಅತಿಥಿಗಳೊಟ್ಟಿಗೆ ಸುದೀಪ್​ರ ಪುತ್ರಿಯೂ ಇದ್ದಾರೆ.

ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ನಡೆದಿದ್ದ ಸಿಸಿಎಲ್​ನ ಕರ್ನಾಟಕ ಬುಲ್ಡೋಜರ್ ಹಾಗೂ ಚೆನ್ನೈ ರೈನೋಸ್ ನಡುವಿನ ಪಂದ್ಯ ವೀಕ್ಷಿಸಲು ನಟ ಚಾಹೆಲ್ ಆಗಮಿಸಿದ್ದರು. ಆಗಲೂ ಅವರು ನಟ ಸುದೀಪ್​ರ ಪತ್ನಿ ಸೇರಿದಂತೆ ಹಲವರನ್ನು ಮಾತನಾಡಿಸಿದ್ದರು. ಈಗ ಸುದೀಪ್ ಮನೆಗೆ ಬಂದು ಆತಿಥ್ಯ ಸ್ವೀಕರಿಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೆ ಸುದೀಪ್ ಮನೆಗೆ ಕ್ರಿಕೆಟಿಗ ಶಿಖರ್ ಧವನ್ ಆಗಮಿಸಿದ್ದರು. ಅದಕ್ಕೂ ಮುನ್ನ ಯುವ ಐಪಿಎಲ್ ಆಟಗಾರ ಮಹೇಶ್ ಸಹ ಸುದೀಪ್ ಅವರನ್ನು ಭೇಟಿಯಾಗಿದ್ದರು. ಕ್ರಿಸ್ ಗೇಲ್, ರವಿ ಶಾಸ್ತ್ರಿ, ಸುರೇಶ್ ರೈನಾ, ಕಪಿಲ್ ದೇವ್, ತಿಲಕರತ್ನೆ ದಿಲ್​ಶಾನ್ ಭಾರತದ ಹಲವಾರು ಕ್ರಿಕೆಟಿಗರು ಸುದೀಪ್​ರ ಗೆಳೆಯರಾಗಿರುವ ಜೊತೆಗೆ ಅವರ ಮನೆಯಲ್ಲಿ ಆತಿಥ್ಯವನ್ನೂ ಸ್ವೀಕರಿಸಿದ್ದಾರೆ. ಈಗ ಪೃಥ್ವಿ ಶಾ ಹಾಗೂ ಚಾಹೆಲ್ ಸರದಿ.

ವಿಶ್ವದ ಹಲವು ಅತ್ಯುತ್ತಮ ಕ್ರಿಕೆಟಿಗರ ಬ್ಯಾಟುಗಳ ಕಲೆಕ್ಷನ್ ಸಹ ನಟ ಸುದೀಪ್ ಅವರ ಬಳಿ ಇದೆ. ವಿರಾಟ್ ಕೊಹ್ಲಿ, ಧೋನಿ, ಜಾಸ್ ಬಟ್ಲರ್, ಕಪಿಲ್ ದೇವ್ ಇನ್ನೂ ಹಲವು ಖ್ಯಾತನಾಮರು ತಮ್ಮ ಬ್ಯಾಟ್​ಗಳನ್ನು ನಟ ಸುದೀಪ್​ಗೆ ಉಡುಗೊರೆಯಾಗಿ ನೀಡಿದ್ದಾರೆ. ಕ್ರಿಕೆಟ್ ಕಲೆಕ್ಷನ್​ಗಳಿಗಾಗಿಯೇ ಸುದೀಪ್ ವಿಶೇಷ ಸ್ಥಳವನ್ನು ತಮ್ಮ ಮನೆಯಲ್ಲಿ ಮಾಡಿಸಿದ್ದಾರೆ.

ಸುದೀಪ್ ಪ್ರಸ್ತುತ ಸಿಸಿಎಲ್ ಆಡುತ್ತಿದ್ದು ಈ ವರೆಗೆ ಕರ್ನಾಟಕ ಬುಲ್ಡೋಜರ್ಸ್ ಆಡಿರುವ ಮೂರೂ ಪಂದ್ಯಗಳಲ್ಲಿ ಗೆಲುವು ಸಾಧಿಸಿ ಫೈನಲ್ ಹಾದಿಯನ್ನು ಸುಗಮ ಮಾಡಿಕೊಂಡಿದೆ. ಈ ವಾರಾಂತ್ಯಕ್ಕೆ ಮತ್ತಷ್ಟು ಪಂದ್ಯಗಳನ್ನು ಆಡಲಿದೆ.

ಸಿನಿಮಾಗಳ ವಿಷಯಕ್ಕೆ ಮರಳುವುದಾದರೆ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿದೆ. ಅದರ ಬೆನ್ನಲ್ಲೆ ತಮಿಳಿನ ಸ್ಟಾರ್ ನಿರ್ದೇಶಕರೊಬ್ಬರ ಸಿನಿಮಾವನ್ನು ಸುದೀಪ್ ಒಪ್ಪಿಕೊಂಡಿದ್ದಾರೆ. ಅನುಪ್ ಭಂಡಾರಿ ನಿರ್ದೇಶನದ ಹೊಸ ಸಿನಿಮಾದಲ್ಲಿಯೂ ಸುದೀಪ್ ನಟಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ