AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಕಿಚ್ಚ ಸುದೀಪ್ ಮನೆಯಲ್ಲಿ ಚಾಹಲ್, ಪೃಥ್ವಿ ಶಾ

ನಟ ಸುದೀಪ್ ಮನೆಗೆ ಕ್ರಿಕೆಟಿಗರಾದ ಯಜುವೇಂದ್ರ ಚಾಹಲ್ ಹಾಗೂ ಪೃಥ್ವಿ ಶಾ ಭೇಟಿ ನೀಡಿದ್ದಾರೆ. ಈ ಹಿಂದೆ ಹಲವು ಕ್ರಿಕೆಟಿಗರು ಸುದೀಪ್ ಮನೆಗೆ ಭೇಟಿ ನೀಡಿ ಆಥಿತ್ಯ ಸ್ವೀಕರಿಸಿದ್ದರು.

Kichcha Sudeep: ಕಿಚ್ಚ ಸುದೀಪ್ ಮನೆಯಲ್ಲಿ ಚಾಹಲ್, ಪೃಥ್ವಿ ಶಾ
ಸುದೀಪ್-ಚಾಹಲ್-ಶಾ-ಸಂದೀಪ್
ಮಂಜುನಾಥ ಸಿ.
|

Updated on: Mar 08, 2023 | 10:59 PM

Share

ನಟ ಕಿಚ್ಚ ಸುದೀಪ್​ರ (Sudeep) ಕ್ರಿಕೆಟ್ ಪ್ರೀತಿಯ ಬಗ್ಗೆ ಪೀಠಿಕೆಯ ಅಗತ್ಯವಿಲ್ಲ. ಕ್ರಿಕೆಟ್ ಹಾಗೂ ಸಿನಿಮಾ ಪ್ರಿಯರಿಬ್ಬರಿಗೂ ಸುದೀಪ್​ರ ಕ್ರಿಕೆಟ್ ಪ್ರೇಮದ ಬಗ್ಗೆ ತಿಳಿದೇ ಇದೆ. ಕ್ರಿಕೆಟ್ ಅನ್ನು ಅತಿಯಾಗಿ ಪ್ರೀತಿಸುವ, ಜೀವಿಸುವ ಸುದೀಪ್​ಗೆ ಸಾಕಷ್ಟು ರಾಷ್ಟ್ರೀಯ, ಅಂತರಾಷ್ಟ್ರೀಯ ಕ್ರಿಕೆಟರ ಸ್ನೇಹ ದೊರೆತಿದೆ. ಸುದೀಪ್​ರ ಆತ್ಮೀಯ ಗೆಳೆಯರ ಪಟ್ಟಿಯಲ್ಲಿ ಕ್ರಿಕೆಟಿಗರೂ ಇದ್ದಾರೆ. ಹಲವು ಕ್ರಿಕೆಟಿಗರು ಸುದೀಪ್ ಮನೆಗೆ ಆಗಮಿಸಿ ಆಥಿತ್ಯ ಪಡೆದಿದ್ದಾರೆ. ಇದೀಗ ಕ್ರಿಕೆಟಿಗ ಯಜುವೇಂಧರ್ ಚಾಹಲ್ (Yuzvendra Chahal), ಪೃಥ್ವಿ ಶಾ (Prithvi Shaw) ಹಾಗೂ ಸಂದೀಪ್ ಶರ್ಮಾ, ಸುದೀಪ್ ಮನೆಗೆ ಆಗಮಿಸಿ ಆಥಿತ್ಯ ಸ್ವೀಕರಿಸಿದ್ದಾರೆ.

ಚಾಹಲ್, ಪೃಥ್ವಿ ಶಾ, ಸಂದೀಪ್ ಶರ್ಮಾ ಹಾಗೂ ಇನ್ನೂ ಕೆಲವರು ಸುದೀಪ್ ಮನೆಗೆ ಆಗಮಿಸಿದ್ದು, ಪಾರ್ಟಿಯಲ್ಲಿ ಭಾಗವಹಿಸಿದ್ದಾರೆ. ಚಾಹಲ್ ಹಾಗೂ ಶಾ ಅವರು ಒಳಗೊಂಡಂತೆ ಇನ್ನಷ್ಟು ಅತಿಥಿಗಳಿರುವ ಚಿತ್ರವನ್ನು ನಟ ಸುದೀಪ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಇಂದು (ಮಾರ್ಚ್ 08) ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಅತಿಥಿಗಳೊಟ್ಟಿಗೆ ಸುದೀಪ್​ರ ಪುತ್ರಿಯೂ ಇದ್ದಾರೆ.

ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ನಡೆದಿದ್ದ ಸಿಸಿಎಲ್​ನ ಕರ್ನಾಟಕ ಬುಲ್ಡೋಜರ್ ಹಾಗೂ ಚೆನ್ನೈ ರೈನೋಸ್ ನಡುವಿನ ಪಂದ್ಯ ವೀಕ್ಷಿಸಲು ನಟ ಚಾಹೆಲ್ ಆಗಮಿಸಿದ್ದರು. ಆಗಲೂ ಅವರು ನಟ ಸುದೀಪ್​ರ ಪತ್ನಿ ಸೇರಿದಂತೆ ಹಲವರನ್ನು ಮಾತನಾಡಿಸಿದ್ದರು. ಈಗ ಸುದೀಪ್ ಮನೆಗೆ ಬಂದು ಆತಿಥ್ಯ ಸ್ವೀಕರಿಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೆ ಸುದೀಪ್ ಮನೆಗೆ ಕ್ರಿಕೆಟಿಗ ಶಿಖರ್ ಧವನ್ ಆಗಮಿಸಿದ್ದರು. ಅದಕ್ಕೂ ಮುನ್ನ ಯುವ ಐಪಿಎಲ್ ಆಟಗಾರ ಮಹೇಶ್ ಸಹ ಸುದೀಪ್ ಅವರನ್ನು ಭೇಟಿಯಾಗಿದ್ದರು. ಕ್ರಿಸ್ ಗೇಲ್, ರವಿ ಶಾಸ್ತ್ರಿ, ಸುರೇಶ್ ರೈನಾ, ಕಪಿಲ್ ದೇವ್, ತಿಲಕರತ್ನೆ ದಿಲ್​ಶಾನ್ ಭಾರತದ ಹಲವಾರು ಕ್ರಿಕೆಟಿಗರು ಸುದೀಪ್​ರ ಗೆಳೆಯರಾಗಿರುವ ಜೊತೆಗೆ ಅವರ ಮನೆಯಲ್ಲಿ ಆತಿಥ್ಯವನ್ನೂ ಸ್ವೀಕರಿಸಿದ್ದಾರೆ. ಈಗ ಪೃಥ್ವಿ ಶಾ ಹಾಗೂ ಚಾಹೆಲ್ ಸರದಿ.

ವಿಶ್ವದ ಹಲವು ಅತ್ಯುತ್ತಮ ಕ್ರಿಕೆಟಿಗರ ಬ್ಯಾಟುಗಳ ಕಲೆಕ್ಷನ್ ಸಹ ನಟ ಸುದೀಪ್ ಅವರ ಬಳಿ ಇದೆ. ವಿರಾಟ್ ಕೊಹ್ಲಿ, ಧೋನಿ, ಜಾಸ್ ಬಟ್ಲರ್, ಕಪಿಲ್ ದೇವ್ ಇನ್ನೂ ಹಲವು ಖ್ಯಾತನಾಮರು ತಮ್ಮ ಬ್ಯಾಟ್​ಗಳನ್ನು ನಟ ಸುದೀಪ್​ಗೆ ಉಡುಗೊರೆಯಾಗಿ ನೀಡಿದ್ದಾರೆ. ಕ್ರಿಕೆಟ್ ಕಲೆಕ್ಷನ್​ಗಳಿಗಾಗಿಯೇ ಸುದೀಪ್ ವಿಶೇಷ ಸ್ಥಳವನ್ನು ತಮ್ಮ ಮನೆಯಲ್ಲಿ ಮಾಡಿಸಿದ್ದಾರೆ.

ಸುದೀಪ್ ಪ್ರಸ್ತುತ ಸಿಸಿಎಲ್ ಆಡುತ್ತಿದ್ದು ಈ ವರೆಗೆ ಕರ್ನಾಟಕ ಬುಲ್ಡೋಜರ್ಸ್ ಆಡಿರುವ ಮೂರೂ ಪಂದ್ಯಗಳಲ್ಲಿ ಗೆಲುವು ಸಾಧಿಸಿ ಫೈನಲ್ ಹಾದಿಯನ್ನು ಸುಗಮ ಮಾಡಿಕೊಂಡಿದೆ. ಈ ವಾರಾಂತ್ಯಕ್ಕೆ ಮತ್ತಷ್ಟು ಪಂದ್ಯಗಳನ್ನು ಆಡಲಿದೆ.

ಸಿನಿಮಾಗಳ ವಿಷಯಕ್ಕೆ ಮರಳುವುದಾದರೆ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿದೆ. ಅದರ ಬೆನ್ನಲ್ಲೆ ತಮಿಳಿನ ಸ್ಟಾರ್ ನಿರ್ದೇಶಕರೊಬ್ಬರ ಸಿನಿಮಾವನ್ನು ಸುದೀಪ್ ಒಪ್ಪಿಕೊಂಡಿದ್ದಾರೆ. ಅನುಪ್ ಭಂಡಾರಿ ನಿರ್ದೇಶನದ ಹೊಸ ಸಿನಿಮಾದಲ್ಲಿಯೂ ಸುದೀಪ್ ನಟಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ