AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ ಬಾಸ್​ ದರ್ಶನ್​ ಅಭಿನಯದ Roberrt ಕಡೆಯಿಂದ ಗುರುವಾರ ಸಿಗುತ್ತಿದೆ ಎರಡು ಬಿಗ್​ ಅಪ್​ಡೇಟ್ಸ್​​

Roberrt Movie: ಈ ಬಗ್ಗೆ ಟ್ವೀಟ್​ ಮಾಡಿರುವ ಚಿತ್ರದ ನಿರ್ದೇಶಕ ತರುಣ್​ ಸುಧೀರ್​, ಗುರುವಾರ ಎರಡು ಬಿಗ್​ ಅಪ್​ಡೇಟ್ಸ್​​ ನೀಡುತ್ತಿದ್ದೆವೆ ಎಂದಿದ್ದಾರೆ. ಈ ಟ್ವೀಟ್​ ಬೆನ್ನಲ್ಲೇ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿದೆ.

ಡಿ ಬಾಸ್​ ದರ್ಶನ್​ ಅಭಿನಯದ Roberrt ಕಡೆಯಿಂದ ಗುರುವಾರ ಸಿಗುತ್ತಿದೆ ಎರಡು ಬಿಗ್​ ಅಪ್​ಡೇಟ್ಸ್​​
ದರ್ಶನ್
ರಾಜೇಶ್ ದುಗ್ಗುಮನೆ
| Edited By: |

Updated on: Feb 10, 2021 | 9:42 PM

Share

ನಟ ದರ್ಶನ್​ ಅಭಿನಯದ ರಾಬರ್ಟ್​ ಸಿನಿಮಾ ಶಿವರಾತ್ರಿ ಪ್ರಯುಕ್ತ ಮಾರ್ಚ್​ 11ರಂದು ತೆರೆಗೆ ಬರುತ್ತಿದೆ. ಸರಿಯಾಗಿ ಒಂದು ತಿಂಗಳು ಇರುವಾಗಲೇ ಚಿತ್ರತಂಡ ದೊಡ್ಡ ಅಪ್​ಡೇಟ್​ ಒಂದನ್ನು ನೀಡುವುದಾಗಿ ಘೋಷಣೆ ಮಾಡಿದೆ. ಈ ಬಗ್ಗೆ ಟ್ವೀಟ್​ ಮಾಡಿರುವ ಚಿತ್ರದ ನಿರ್ದೇಶಕ ತರುಣ್​ ಸುಧೀರ್​, ಗುರುವಾರ ಎರಡು ಬಿಗ್​ ಅಪ್​ಡೇಟ್ಸ್​​ ನೀಡುತ್ತಿದ್ದೆವೆ. ಯಾರಾದರೂ ಊಹೆ ಮಾಡಬಹುದೇ ಎಂದು ಕೇಳಿದ್ದಾರೆ. ಈ ಟ್ವೀಟ್​ ಬೆನ್ನಲ್ಲೇ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿದೆ.

ತೆಲುಗು ಖಳ ಜಗಪತಿ ಬಾಬು ರಾಬರ್ಟ್​ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಟಾಲಿವುಡ್​ನಲ್ಲೂ ಸಿನಿಮಾ ರಿಲೀಸ್​ ಆಗುತ್ತಿರುವುದರಿಂದ ಚಿತ್ರದ ಮೈಲೇಜ್​ ಅನ್ನು ಜಗಪತಿ ಬಾಬು ಮತ್ತಷ್ಟು ಹೆಚ್ಚಿಸುವ ನಿರೀಕ್ಷೆ ಇದೆ. ಫೆಬ್ರವರಿ 12ರಂದು ಜಗಪತಿ ಬಾಬು ಜನ್ಮದಿನ. ಈ ಕಾರಣಕ್ಕೆ ಅವರ ಫಸ್ಟ್​ಲುಕ್​ಅನ್ನು ಚಿತ್ರತಂಡ ರಿಲೀಸ್​ ಮಾಡುವ ಸಾಧ್ಯತೆ ಇದೆ.

ಫೆಬ್ರವರಿ 16 ಡಿ ಬಾಸ್​ ದರ್ಶನ್​ ಜನ್ಮದಿನ. ಅಂದು ಸಿನಿಮಾ ಟ್ರೈಲರ್​ ರಿಲೀಸ್​ ಆಗೋದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಈ ಎರಡು ಅಪ್​ಡೇಟ್​ಗಳು ನಾಳೆ ಸಿಗುವ ನಿರೀಕ್ಷೆ ಇದೆ. ಇದಲ್ಲದೆ, ತೆಲುಗು ಹಾಗೂ ಕನ್ನಡದಲ್ಲಿ ಎಷ್ಟು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್​ ಆಗಲಿದೆ ಎನ್ನುವ ಬಗ್ಗೆಯೂ ಮಾಹಿತಿ ನೀಡಬಹುದು ಎಂಬುದು ಅಭಿಮಾನಿಗಳ ಲೆಕ್ಕಾಚಾರ.

ದರ್ಶನ್​ ನಟನೆಯ ರಾಬರ್ಟ್​ ಚಿತ್ರ ಕೊರೊನಾ ಹಿನ್ನೆಲೆಯಲ್ಲಿ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ದರ್ಶನ್​ ಹೀರೋ ಆಗಿ ಕಾಣಿಸಿಕೊಂಡರೆ, ಜಗಪತಿ ಬಾಬು ವಿಲನ್​. ಆಶಾ ಭಟ್​ ಚಿತ್ರದ ನಾಯಕಿ. ತರುಣ್​ ಸುಧೀರ್​ ನಿರ್ದೇಶನದಲ್ಲಿ 2017ರಲ್ಲಿ ತೆರೆಕಂಡ ಚೌಕ ಸಿನಿಮಾದಲ್ಲಿ ದರ್ಶನ್​ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾದಲ್ಲಿ ಅವರ ಪಾತ್ರದ ಹೆಸರು ರಾಬರ್ಟ್. ಇದೇ ಪಾತ್ರದ ಹೆಸರನ್ನು ಇಟ್ಟುಕೊಂಡು ಸಿನಿಮಾ ಸಿದ್ಧವಾಗಿದೆ.

Actor Darshan ಚಾಲೆಂಜಿಂಗ್​ ಸ್ಟಾರ್​ ದರ್ಶನ್​ರಿಗೆ ಇಂದು ವಿಶೇಷ ದಿನ; 19 ವರ್ಷದ ಹಿಂದೆ ಈ ದಿನ ಮೊದಲ ಸಿನಿಮಾ ಬಿಡುಗಡೆಯ ಸಂಭ್ರಮದಲ್ಲಿದ್ದರು!​

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ