AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ ಬಾಸ್​ ದರ್ಶನ್​ ಅಭಿನಯದ Roberrt ಕಡೆಯಿಂದ ಗುರುವಾರ ಸಿಗುತ್ತಿದೆ ಎರಡು ಬಿಗ್​ ಅಪ್​ಡೇಟ್ಸ್​​

Roberrt Movie: ಈ ಬಗ್ಗೆ ಟ್ವೀಟ್​ ಮಾಡಿರುವ ಚಿತ್ರದ ನಿರ್ದೇಶಕ ತರುಣ್​ ಸುಧೀರ್​, ಗುರುವಾರ ಎರಡು ಬಿಗ್​ ಅಪ್​ಡೇಟ್ಸ್​​ ನೀಡುತ್ತಿದ್ದೆವೆ ಎಂದಿದ್ದಾರೆ. ಈ ಟ್ವೀಟ್​ ಬೆನ್ನಲ್ಲೇ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿದೆ.

ಡಿ ಬಾಸ್​ ದರ್ಶನ್​ ಅಭಿನಯದ Roberrt ಕಡೆಯಿಂದ ಗುರುವಾರ ಸಿಗುತ್ತಿದೆ ಎರಡು ಬಿಗ್​ ಅಪ್​ಡೇಟ್ಸ್​​
ದರ್ಶನ್
ರಾಜೇಶ್ ದುಗ್ಗುಮನೆ
| Edited By: |

Updated on: Feb 10, 2021 | 9:42 PM

Share

ನಟ ದರ್ಶನ್​ ಅಭಿನಯದ ರಾಬರ್ಟ್​ ಸಿನಿಮಾ ಶಿವರಾತ್ರಿ ಪ್ರಯುಕ್ತ ಮಾರ್ಚ್​ 11ರಂದು ತೆರೆಗೆ ಬರುತ್ತಿದೆ. ಸರಿಯಾಗಿ ಒಂದು ತಿಂಗಳು ಇರುವಾಗಲೇ ಚಿತ್ರತಂಡ ದೊಡ್ಡ ಅಪ್​ಡೇಟ್​ ಒಂದನ್ನು ನೀಡುವುದಾಗಿ ಘೋಷಣೆ ಮಾಡಿದೆ. ಈ ಬಗ್ಗೆ ಟ್ವೀಟ್​ ಮಾಡಿರುವ ಚಿತ್ರದ ನಿರ್ದೇಶಕ ತರುಣ್​ ಸುಧೀರ್​, ಗುರುವಾರ ಎರಡು ಬಿಗ್​ ಅಪ್​ಡೇಟ್ಸ್​​ ನೀಡುತ್ತಿದ್ದೆವೆ. ಯಾರಾದರೂ ಊಹೆ ಮಾಡಬಹುದೇ ಎಂದು ಕೇಳಿದ್ದಾರೆ. ಈ ಟ್ವೀಟ್​ ಬೆನ್ನಲ್ಲೇ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿದೆ.

ತೆಲುಗು ಖಳ ಜಗಪತಿ ಬಾಬು ರಾಬರ್ಟ್​ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಟಾಲಿವುಡ್​ನಲ್ಲೂ ಸಿನಿಮಾ ರಿಲೀಸ್​ ಆಗುತ್ತಿರುವುದರಿಂದ ಚಿತ್ರದ ಮೈಲೇಜ್​ ಅನ್ನು ಜಗಪತಿ ಬಾಬು ಮತ್ತಷ್ಟು ಹೆಚ್ಚಿಸುವ ನಿರೀಕ್ಷೆ ಇದೆ. ಫೆಬ್ರವರಿ 12ರಂದು ಜಗಪತಿ ಬಾಬು ಜನ್ಮದಿನ. ಈ ಕಾರಣಕ್ಕೆ ಅವರ ಫಸ್ಟ್​ಲುಕ್​ಅನ್ನು ಚಿತ್ರತಂಡ ರಿಲೀಸ್​ ಮಾಡುವ ಸಾಧ್ಯತೆ ಇದೆ.

ಫೆಬ್ರವರಿ 16 ಡಿ ಬಾಸ್​ ದರ್ಶನ್​ ಜನ್ಮದಿನ. ಅಂದು ಸಿನಿಮಾ ಟ್ರೈಲರ್​ ರಿಲೀಸ್​ ಆಗೋದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಈ ಎರಡು ಅಪ್​ಡೇಟ್​ಗಳು ನಾಳೆ ಸಿಗುವ ನಿರೀಕ್ಷೆ ಇದೆ. ಇದಲ್ಲದೆ, ತೆಲುಗು ಹಾಗೂ ಕನ್ನಡದಲ್ಲಿ ಎಷ್ಟು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್​ ಆಗಲಿದೆ ಎನ್ನುವ ಬಗ್ಗೆಯೂ ಮಾಹಿತಿ ನೀಡಬಹುದು ಎಂಬುದು ಅಭಿಮಾನಿಗಳ ಲೆಕ್ಕಾಚಾರ.

ದರ್ಶನ್​ ನಟನೆಯ ರಾಬರ್ಟ್​ ಚಿತ್ರ ಕೊರೊನಾ ಹಿನ್ನೆಲೆಯಲ್ಲಿ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ದರ್ಶನ್​ ಹೀರೋ ಆಗಿ ಕಾಣಿಸಿಕೊಂಡರೆ, ಜಗಪತಿ ಬಾಬು ವಿಲನ್​. ಆಶಾ ಭಟ್​ ಚಿತ್ರದ ನಾಯಕಿ. ತರುಣ್​ ಸುಧೀರ್​ ನಿರ್ದೇಶನದಲ್ಲಿ 2017ರಲ್ಲಿ ತೆರೆಕಂಡ ಚೌಕ ಸಿನಿಮಾದಲ್ಲಿ ದರ್ಶನ್​ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾದಲ್ಲಿ ಅವರ ಪಾತ್ರದ ಹೆಸರು ರಾಬರ್ಟ್. ಇದೇ ಪಾತ್ರದ ಹೆಸರನ್ನು ಇಟ್ಟುಕೊಂಡು ಸಿನಿಮಾ ಸಿದ್ಧವಾಗಿದೆ.

Actor Darshan ಚಾಲೆಂಜಿಂಗ್​ ಸ್ಟಾರ್​ ದರ್ಶನ್​ರಿಗೆ ಇಂದು ವಿಶೇಷ ದಿನ; 19 ವರ್ಷದ ಹಿಂದೆ ಈ ದಿನ ಮೊದಲ ಸಿನಿಮಾ ಬಿಡುಗಡೆಯ ಸಂಭ್ರಮದಲ್ಲಿದ್ದರು!​

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ