AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

D Boss Darshan: ಜಮೀರ್​ ಅಹ್ಮದ್​ ಖಾನ್​ ಭವ್ಯ ಬಂಗಲೆಗೆ ಭೇಟಿ ನೀಡಿದ ಡಿ ಬಾಸ್​​ ದರ್ಶನ್​

B Z Zameer Ahmed Khan: ತಮ್ಮ ಹೊಸ ಸಿನಿಮಾ ರಾಬರ್ಟ್​ ಬಿಡುಗಡೆ ಸಿದ್ಧತೆಯಲ್ಲಿ ವ್ಯಸ್ತರಾಗಿರುವ ದರ್ಶನ್​ ಬಿಡುವು ಮಾಡಿಕೊಂಡು ಬೆಂಗಳೂರಿನಲ್ಲಿರುವ ಜಮೀರ್ ಅವರ ನೂತನ ಬಂಗಲೆಗೆ ಭೇಟಿ ನೀಡಿರುವುದು ಅವರ ಕುಟುಂಬಸ್ಥರಿಗೆ ಸಂತಸ ತಂದಿದೆ.

D Boss Darshan: ಜಮೀರ್​ ಅಹ್ಮದ್​ ಖಾನ್​ ಭವ್ಯ ಬಂಗಲೆಗೆ ಭೇಟಿ ನೀಡಿದ ಡಿ ಬಾಸ್​​ ದರ್ಶನ್​
ದರ್ಶನ್​ ಜೊತೆಗೆ ಜಮೀರ್​ ಅಹ್ಮದ್​ ಕುಟುಂಬಸ್ಥರು
Skanda
| Edited By: |

Updated on: Feb 25, 2021 | 4:08 PM

Share

ಬೆಂಗಳೂರು: ಕಾಂಗ್ರೆಸ್​ ಶಾಸಕ ಜಮೀರ್​ ಅಹ್ಮದ್​ ಖಾನ್ (B Z Zameer Ahmed Khan)​ ಅವರ ಭವ್ಯ ಬಂಗಲೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan)​ ಭೇಟಿ ಕೊಟ್ಟಿದ್ದಾರೆ. ಈ ಬಗ್ಗೆ ಇಂದು ತಮ್ಮ ಅಧಿಕೃತ ಫೇಸ್​ಬುಕ್​ ಖಾತೆಯಲ್ಲಿ ದರ್ಶನ್ ಅವರ ಜೊತೆಗೆ ಇರುವ ಫೋಟೋ ಹಂಚಿಕೊಂಡಿರುವ ಜಮೀರ್ ಅಹ್ಮದ್​ ಖಾನ್​ ಸಂತಸ ವ್ಯಕ್ತಪಡಿಸಿದ್ದಾರೆ. ನಟ ಮತ್ತು ನಿರ್ಮಾಪಕ ದರ್ಶನ್​ ನಮ್ಮ ಮನೆಗೆ ಆಗಮಿಸಿರುವುದು ಅತ್ಯಂತ ಸಂತೋಷ ನೀಡಿದೆ ಎಂದು ಹೇಳಿಕೊಂಡಿರುವ ಜಮೀರ್​ ಹತ್ತಕ್ಕೂ ಹೆಚ್ಚು ಫೋಟೋ ಹಂಚಿಕೊಂಡಿದ್ದಾರೆ.

ತಮ್ಮ ಹೊಸ ಸಿನಿಮಾ ರಾಬರ್ಟ್​ ಬಿಡುಗಡೆ ಸಿದ್ಧತೆಯಲ್ಲಿ ವ್ಯಸ್ತರಾಗಿರುವ ದರ್ಶನ್​ ಬಿಡುವು ಮಾಡಿಕೊಂಡು ಬೆಂಗಳೂರಿನಲ್ಲಿರುವ ಜಮೀರ್ ಅವರ ನೂತನ ಬಂಗಲೆಗೆ ಭೇಟಿ ನೀಡಿರುವುದು ಅವರ ಕುಟುಂಬಸ್ಥರಿಗೆ ಸಂತಸ ತಂದಿದೆ. ದರ್ಶನ್​ ಭೇಟಿಯ ವೇಳೆ ಜಮೀರ್​ ಅಹ್ಮದ್ ಪುತ್ರ ಝೈದ್ ಖಾನ್, ಜಮೀರ್​ ಅವರ ಪುತ್ರಿ ಹಾಗೂ ಅಳಿಯ​ ಕೂಡ ಉಪಸ್ಥಿತರಿದ್ದರು. ಇದೀಗ ಹೊಸದಾಗಿ ಚಂದನವನಕ್ಕೆ ಕಾಲಿಡುತ್ತಿರುವ ಝೈದ್​ ಖಾನ್​, ಬನಾರಸ್​ ಎಂಬ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಒಲವೇ ಮಂದಾರ, ಬ್ಯೂಟಿಫುಲ್ ಮನಸುಗಳು, ಬೆಲ್​ ಬಾಟಂ ಸಿನಿಮಾಗಳ ನಿರ್ದೇಶಕ ಜಯತೀರ್ಥ ಅವರ ನೇತೃತ್ವದಲ್ಲಿ ಬನಾರಸ್​ ಸಿನಿಮಾ ಮೂಡಿಬರುತ್ತಿದ್ದು, ಈ ಸಿನಿಮಾದ ಮೂಲಕ ಜಮೀರ್ ಪುತ್ರ ಸ್ಯಾಂಡಲ್​ವುಡ್​ಗೆ ಹೀರೋ ಆಗಿ ಪ್ರವೇಶ ನೀಡುತ್ತಿದ್ದಾರೆ.

ತಮ್ಮ ಮಗ ಸಿನಿರಂಗಕ್ಕೆ ಪ್ರವೇಶ ಮಾಡುತ್ತಿರುವ ಕಾರಣ ಜಮೀರ್ ಅಹ್ಮದ್ ಖಾನ್​ ಚಿತ್ರರಂಗದವರೊಂದಿಗೆ ಉತ್ತಮ ಬಾಂಧವ್ಯ ಕಾಯ್ದುಕೊಂಡಿದ್ದಾರೆ. ಇಷ್ಟೇ ಅಲ್ಲದೇ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕುಟುಂಬದೊಂದಿಗೂ ಜಮೀರ್ ಒಳ್ಳೆಯ ಸಂಬಂಧ ಹೊಂದಿದ್ದಾರೆ. ಸದ್ಯಕ್ಕೆ ದರ್ಶನ್​ ಅವರ ಭೇಟಿಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ಜಮೀರ್​ ಅಹ್ಮದ್​ ಹಂಚಿಕೊಂಡ ಫೋಟೋಗಳು ಕೊಂಚ ಅಚ್ಚರಿಯನ್ನೂ ಮೂಡಿಸಿವೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ಈ ಫೋಟೋಗಳಿಗೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ:

ಉತ್ತರ ಪ್ರದೇಶದಲ್ಲಿ ರಾಬರ್ಟ್​ ಶೂಟಿಂಗ್​ಗೆ ಹೋದಾಗ ನನ್ನನ್ನು ಸ್ವಾಗತಿಸೋಕೆ ಗನ್​ಮೆನ್​ಗಳು ಬಂದಿದ್ರು; ದರ್ಶನ್​

ಇನ್ನೆಂದೂ ಇಂಥ ದಿನ ಬರದಿರಲಿ: ಟಿವಿ9 ಸಂದರ್ಶನದಲ್ಲಿ ದರ್ಶನ್​ ಕ್ಷಮೆಯಾಚನೆಗೆ ಜಗ್ಗೇಶ್ ಪ್ರತಿಕ್ರಿಯೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ