AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

D Boss Darshan: ಜಮೀರ್​ ಅಹ್ಮದ್​ ಖಾನ್​ ಭವ್ಯ ಬಂಗಲೆಗೆ ಭೇಟಿ ನೀಡಿದ ಡಿ ಬಾಸ್​​ ದರ್ಶನ್​

B Z Zameer Ahmed Khan: ತಮ್ಮ ಹೊಸ ಸಿನಿಮಾ ರಾಬರ್ಟ್​ ಬಿಡುಗಡೆ ಸಿದ್ಧತೆಯಲ್ಲಿ ವ್ಯಸ್ತರಾಗಿರುವ ದರ್ಶನ್​ ಬಿಡುವು ಮಾಡಿಕೊಂಡು ಬೆಂಗಳೂರಿನಲ್ಲಿರುವ ಜಮೀರ್ ಅವರ ನೂತನ ಬಂಗಲೆಗೆ ಭೇಟಿ ನೀಡಿರುವುದು ಅವರ ಕುಟುಂಬಸ್ಥರಿಗೆ ಸಂತಸ ತಂದಿದೆ.

D Boss Darshan: ಜಮೀರ್​ ಅಹ್ಮದ್​ ಖಾನ್​ ಭವ್ಯ ಬಂಗಲೆಗೆ ಭೇಟಿ ನೀಡಿದ ಡಿ ಬಾಸ್​​ ದರ್ಶನ್​
ದರ್ಶನ್​ ಜೊತೆಗೆ ಜಮೀರ್​ ಅಹ್ಮದ್​ ಕುಟುಂಬಸ್ಥರು
Skanda
| Edited By: |

Updated on: Feb 25, 2021 | 4:08 PM

Share

ಬೆಂಗಳೂರು: ಕಾಂಗ್ರೆಸ್​ ಶಾಸಕ ಜಮೀರ್​ ಅಹ್ಮದ್​ ಖಾನ್ (B Z Zameer Ahmed Khan)​ ಅವರ ಭವ್ಯ ಬಂಗಲೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan)​ ಭೇಟಿ ಕೊಟ್ಟಿದ್ದಾರೆ. ಈ ಬಗ್ಗೆ ಇಂದು ತಮ್ಮ ಅಧಿಕೃತ ಫೇಸ್​ಬುಕ್​ ಖಾತೆಯಲ್ಲಿ ದರ್ಶನ್ ಅವರ ಜೊತೆಗೆ ಇರುವ ಫೋಟೋ ಹಂಚಿಕೊಂಡಿರುವ ಜಮೀರ್ ಅಹ್ಮದ್​ ಖಾನ್​ ಸಂತಸ ವ್ಯಕ್ತಪಡಿಸಿದ್ದಾರೆ. ನಟ ಮತ್ತು ನಿರ್ಮಾಪಕ ದರ್ಶನ್​ ನಮ್ಮ ಮನೆಗೆ ಆಗಮಿಸಿರುವುದು ಅತ್ಯಂತ ಸಂತೋಷ ನೀಡಿದೆ ಎಂದು ಹೇಳಿಕೊಂಡಿರುವ ಜಮೀರ್​ ಹತ್ತಕ್ಕೂ ಹೆಚ್ಚು ಫೋಟೋ ಹಂಚಿಕೊಂಡಿದ್ದಾರೆ.

ತಮ್ಮ ಹೊಸ ಸಿನಿಮಾ ರಾಬರ್ಟ್​ ಬಿಡುಗಡೆ ಸಿದ್ಧತೆಯಲ್ಲಿ ವ್ಯಸ್ತರಾಗಿರುವ ದರ್ಶನ್​ ಬಿಡುವು ಮಾಡಿಕೊಂಡು ಬೆಂಗಳೂರಿನಲ್ಲಿರುವ ಜಮೀರ್ ಅವರ ನೂತನ ಬಂಗಲೆಗೆ ಭೇಟಿ ನೀಡಿರುವುದು ಅವರ ಕುಟುಂಬಸ್ಥರಿಗೆ ಸಂತಸ ತಂದಿದೆ. ದರ್ಶನ್​ ಭೇಟಿಯ ವೇಳೆ ಜಮೀರ್​ ಅಹ್ಮದ್ ಪುತ್ರ ಝೈದ್ ಖಾನ್, ಜಮೀರ್​ ಅವರ ಪುತ್ರಿ ಹಾಗೂ ಅಳಿಯ​ ಕೂಡ ಉಪಸ್ಥಿತರಿದ್ದರು. ಇದೀಗ ಹೊಸದಾಗಿ ಚಂದನವನಕ್ಕೆ ಕಾಲಿಡುತ್ತಿರುವ ಝೈದ್​ ಖಾನ್​, ಬನಾರಸ್​ ಎಂಬ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಒಲವೇ ಮಂದಾರ, ಬ್ಯೂಟಿಫುಲ್ ಮನಸುಗಳು, ಬೆಲ್​ ಬಾಟಂ ಸಿನಿಮಾಗಳ ನಿರ್ದೇಶಕ ಜಯತೀರ್ಥ ಅವರ ನೇತೃತ್ವದಲ್ಲಿ ಬನಾರಸ್​ ಸಿನಿಮಾ ಮೂಡಿಬರುತ್ತಿದ್ದು, ಈ ಸಿನಿಮಾದ ಮೂಲಕ ಜಮೀರ್ ಪುತ್ರ ಸ್ಯಾಂಡಲ್​ವುಡ್​ಗೆ ಹೀರೋ ಆಗಿ ಪ್ರವೇಶ ನೀಡುತ್ತಿದ್ದಾರೆ.

ತಮ್ಮ ಮಗ ಸಿನಿರಂಗಕ್ಕೆ ಪ್ರವೇಶ ಮಾಡುತ್ತಿರುವ ಕಾರಣ ಜಮೀರ್ ಅಹ್ಮದ್ ಖಾನ್​ ಚಿತ್ರರಂಗದವರೊಂದಿಗೆ ಉತ್ತಮ ಬಾಂಧವ್ಯ ಕಾಯ್ದುಕೊಂಡಿದ್ದಾರೆ. ಇಷ್ಟೇ ಅಲ್ಲದೇ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕುಟುಂಬದೊಂದಿಗೂ ಜಮೀರ್ ಒಳ್ಳೆಯ ಸಂಬಂಧ ಹೊಂದಿದ್ದಾರೆ. ಸದ್ಯಕ್ಕೆ ದರ್ಶನ್​ ಅವರ ಭೇಟಿಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ಜಮೀರ್​ ಅಹ್ಮದ್​ ಹಂಚಿಕೊಂಡ ಫೋಟೋಗಳು ಕೊಂಚ ಅಚ್ಚರಿಯನ್ನೂ ಮೂಡಿಸಿವೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ಈ ಫೋಟೋಗಳಿಗೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ:

ಉತ್ತರ ಪ್ರದೇಶದಲ್ಲಿ ರಾಬರ್ಟ್​ ಶೂಟಿಂಗ್​ಗೆ ಹೋದಾಗ ನನ್ನನ್ನು ಸ್ವಾಗತಿಸೋಕೆ ಗನ್​ಮೆನ್​ಗಳು ಬಂದಿದ್ರು; ದರ್ಶನ್​

ಇನ್ನೆಂದೂ ಇಂಥ ದಿನ ಬರದಿರಲಿ: ಟಿವಿ9 ಸಂದರ್ಶನದಲ್ಲಿ ದರ್ಶನ್​ ಕ್ಷಮೆಯಾಚನೆಗೆ ಜಗ್ಗೇಶ್ ಪ್ರತಿಕ್ರಿಯೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?