AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

D Boss Darshan: ಜಮೀರ್​ ಅಹ್ಮದ್​ ಖಾನ್​ ಭವ್ಯ ಬಂಗಲೆಗೆ ಭೇಟಿ ನೀಡಿದ ಡಿ ಬಾಸ್​​ ದರ್ಶನ್​

B Z Zameer Ahmed Khan: ತಮ್ಮ ಹೊಸ ಸಿನಿಮಾ ರಾಬರ್ಟ್​ ಬಿಡುಗಡೆ ಸಿದ್ಧತೆಯಲ್ಲಿ ವ್ಯಸ್ತರಾಗಿರುವ ದರ್ಶನ್​ ಬಿಡುವು ಮಾಡಿಕೊಂಡು ಬೆಂಗಳೂರಿನಲ್ಲಿರುವ ಜಮೀರ್ ಅವರ ನೂತನ ಬಂಗಲೆಗೆ ಭೇಟಿ ನೀಡಿರುವುದು ಅವರ ಕುಟುಂಬಸ್ಥರಿಗೆ ಸಂತಸ ತಂದಿದೆ.

D Boss Darshan: ಜಮೀರ್​ ಅಹ್ಮದ್​ ಖಾನ್​ ಭವ್ಯ ಬಂಗಲೆಗೆ ಭೇಟಿ ನೀಡಿದ ಡಿ ಬಾಸ್​​ ದರ್ಶನ್​
ದರ್ಶನ್​ ಜೊತೆಗೆ ಜಮೀರ್​ ಅಹ್ಮದ್​ ಕುಟುಂಬಸ್ಥರು
Skanda
| Edited By: |

Updated on: Feb 25, 2021 | 4:08 PM

Share

ಬೆಂಗಳೂರು: ಕಾಂಗ್ರೆಸ್​ ಶಾಸಕ ಜಮೀರ್​ ಅಹ್ಮದ್​ ಖಾನ್ (B Z Zameer Ahmed Khan)​ ಅವರ ಭವ್ಯ ಬಂಗಲೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan)​ ಭೇಟಿ ಕೊಟ್ಟಿದ್ದಾರೆ. ಈ ಬಗ್ಗೆ ಇಂದು ತಮ್ಮ ಅಧಿಕೃತ ಫೇಸ್​ಬುಕ್​ ಖಾತೆಯಲ್ಲಿ ದರ್ಶನ್ ಅವರ ಜೊತೆಗೆ ಇರುವ ಫೋಟೋ ಹಂಚಿಕೊಂಡಿರುವ ಜಮೀರ್ ಅಹ್ಮದ್​ ಖಾನ್​ ಸಂತಸ ವ್ಯಕ್ತಪಡಿಸಿದ್ದಾರೆ. ನಟ ಮತ್ತು ನಿರ್ಮಾಪಕ ದರ್ಶನ್​ ನಮ್ಮ ಮನೆಗೆ ಆಗಮಿಸಿರುವುದು ಅತ್ಯಂತ ಸಂತೋಷ ನೀಡಿದೆ ಎಂದು ಹೇಳಿಕೊಂಡಿರುವ ಜಮೀರ್​ ಹತ್ತಕ್ಕೂ ಹೆಚ್ಚು ಫೋಟೋ ಹಂಚಿಕೊಂಡಿದ್ದಾರೆ.

ತಮ್ಮ ಹೊಸ ಸಿನಿಮಾ ರಾಬರ್ಟ್​ ಬಿಡುಗಡೆ ಸಿದ್ಧತೆಯಲ್ಲಿ ವ್ಯಸ್ತರಾಗಿರುವ ದರ್ಶನ್​ ಬಿಡುವು ಮಾಡಿಕೊಂಡು ಬೆಂಗಳೂರಿನಲ್ಲಿರುವ ಜಮೀರ್ ಅವರ ನೂತನ ಬಂಗಲೆಗೆ ಭೇಟಿ ನೀಡಿರುವುದು ಅವರ ಕುಟುಂಬಸ್ಥರಿಗೆ ಸಂತಸ ತಂದಿದೆ. ದರ್ಶನ್​ ಭೇಟಿಯ ವೇಳೆ ಜಮೀರ್​ ಅಹ್ಮದ್ ಪುತ್ರ ಝೈದ್ ಖಾನ್, ಜಮೀರ್​ ಅವರ ಪುತ್ರಿ ಹಾಗೂ ಅಳಿಯ​ ಕೂಡ ಉಪಸ್ಥಿತರಿದ್ದರು. ಇದೀಗ ಹೊಸದಾಗಿ ಚಂದನವನಕ್ಕೆ ಕಾಲಿಡುತ್ತಿರುವ ಝೈದ್​ ಖಾನ್​, ಬನಾರಸ್​ ಎಂಬ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಒಲವೇ ಮಂದಾರ, ಬ್ಯೂಟಿಫುಲ್ ಮನಸುಗಳು, ಬೆಲ್​ ಬಾಟಂ ಸಿನಿಮಾಗಳ ನಿರ್ದೇಶಕ ಜಯತೀರ್ಥ ಅವರ ನೇತೃತ್ವದಲ್ಲಿ ಬನಾರಸ್​ ಸಿನಿಮಾ ಮೂಡಿಬರುತ್ತಿದ್ದು, ಈ ಸಿನಿಮಾದ ಮೂಲಕ ಜಮೀರ್ ಪುತ್ರ ಸ್ಯಾಂಡಲ್​ವುಡ್​ಗೆ ಹೀರೋ ಆಗಿ ಪ್ರವೇಶ ನೀಡುತ್ತಿದ್ದಾರೆ.

ತಮ್ಮ ಮಗ ಸಿನಿರಂಗಕ್ಕೆ ಪ್ರವೇಶ ಮಾಡುತ್ತಿರುವ ಕಾರಣ ಜಮೀರ್ ಅಹ್ಮದ್ ಖಾನ್​ ಚಿತ್ರರಂಗದವರೊಂದಿಗೆ ಉತ್ತಮ ಬಾಂಧವ್ಯ ಕಾಯ್ದುಕೊಂಡಿದ್ದಾರೆ. ಇಷ್ಟೇ ಅಲ್ಲದೇ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕುಟುಂಬದೊಂದಿಗೂ ಜಮೀರ್ ಒಳ್ಳೆಯ ಸಂಬಂಧ ಹೊಂದಿದ್ದಾರೆ. ಸದ್ಯಕ್ಕೆ ದರ್ಶನ್​ ಅವರ ಭೇಟಿಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ಜಮೀರ್​ ಅಹ್ಮದ್​ ಹಂಚಿಕೊಂಡ ಫೋಟೋಗಳು ಕೊಂಚ ಅಚ್ಚರಿಯನ್ನೂ ಮೂಡಿಸಿವೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ಈ ಫೋಟೋಗಳಿಗೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ:

ಉತ್ತರ ಪ್ರದೇಶದಲ್ಲಿ ರಾಬರ್ಟ್​ ಶೂಟಿಂಗ್​ಗೆ ಹೋದಾಗ ನನ್ನನ್ನು ಸ್ವಾಗತಿಸೋಕೆ ಗನ್​ಮೆನ್​ಗಳು ಬಂದಿದ್ರು; ದರ್ಶನ್​

ಇನ್ನೆಂದೂ ಇಂಥ ದಿನ ಬರದಿರಲಿ: ಟಿವಿ9 ಸಂದರ್ಶನದಲ್ಲಿ ದರ್ಶನ್​ ಕ್ಷಮೆಯಾಚನೆಗೆ ಜಗ್ಗೇಶ್ ಪ್ರತಿಕ್ರಿಯೆ

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್