AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

D Boss Darshan: ಜಮೀರ್​ ಅಹ್ಮದ್​ ಖಾನ್​ ಭವ್ಯ ಬಂಗಲೆಗೆ ಭೇಟಿ ನೀಡಿದ ಡಿ ಬಾಸ್​​ ದರ್ಶನ್​

B Z Zameer Ahmed Khan: ತಮ್ಮ ಹೊಸ ಸಿನಿಮಾ ರಾಬರ್ಟ್​ ಬಿಡುಗಡೆ ಸಿದ್ಧತೆಯಲ್ಲಿ ವ್ಯಸ್ತರಾಗಿರುವ ದರ್ಶನ್​ ಬಿಡುವು ಮಾಡಿಕೊಂಡು ಬೆಂಗಳೂರಿನಲ್ಲಿರುವ ಜಮೀರ್ ಅವರ ನೂತನ ಬಂಗಲೆಗೆ ಭೇಟಿ ನೀಡಿರುವುದು ಅವರ ಕುಟುಂಬಸ್ಥರಿಗೆ ಸಂತಸ ತಂದಿದೆ.

D Boss Darshan: ಜಮೀರ್​ ಅಹ್ಮದ್​ ಖಾನ್​ ಭವ್ಯ ಬಂಗಲೆಗೆ ಭೇಟಿ ನೀಡಿದ ಡಿ ಬಾಸ್​​ ದರ್ಶನ್​
ದರ್ಶನ್​ ಜೊತೆಗೆ ಜಮೀರ್​ ಅಹ್ಮದ್​ ಕುಟುಂಬಸ್ಥರು
Skanda
| Updated By: Lakshmi Hegde|

Updated on: Feb 25, 2021 | 4:08 PM

Share

ಬೆಂಗಳೂರು: ಕಾಂಗ್ರೆಸ್​ ಶಾಸಕ ಜಮೀರ್​ ಅಹ್ಮದ್​ ಖಾನ್ (B Z Zameer Ahmed Khan)​ ಅವರ ಭವ್ಯ ಬಂಗಲೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan)​ ಭೇಟಿ ಕೊಟ್ಟಿದ್ದಾರೆ. ಈ ಬಗ್ಗೆ ಇಂದು ತಮ್ಮ ಅಧಿಕೃತ ಫೇಸ್​ಬುಕ್​ ಖಾತೆಯಲ್ಲಿ ದರ್ಶನ್ ಅವರ ಜೊತೆಗೆ ಇರುವ ಫೋಟೋ ಹಂಚಿಕೊಂಡಿರುವ ಜಮೀರ್ ಅಹ್ಮದ್​ ಖಾನ್​ ಸಂತಸ ವ್ಯಕ್ತಪಡಿಸಿದ್ದಾರೆ. ನಟ ಮತ್ತು ನಿರ್ಮಾಪಕ ದರ್ಶನ್​ ನಮ್ಮ ಮನೆಗೆ ಆಗಮಿಸಿರುವುದು ಅತ್ಯಂತ ಸಂತೋಷ ನೀಡಿದೆ ಎಂದು ಹೇಳಿಕೊಂಡಿರುವ ಜಮೀರ್​ ಹತ್ತಕ್ಕೂ ಹೆಚ್ಚು ಫೋಟೋ ಹಂಚಿಕೊಂಡಿದ್ದಾರೆ.

ತಮ್ಮ ಹೊಸ ಸಿನಿಮಾ ರಾಬರ್ಟ್​ ಬಿಡುಗಡೆ ಸಿದ್ಧತೆಯಲ್ಲಿ ವ್ಯಸ್ತರಾಗಿರುವ ದರ್ಶನ್​ ಬಿಡುವು ಮಾಡಿಕೊಂಡು ಬೆಂಗಳೂರಿನಲ್ಲಿರುವ ಜಮೀರ್ ಅವರ ನೂತನ ಬಂಗಲೆಗೆ ಭೇಟಿ ನೀಡಿರುವುದು ಅವರ ಕುಟುಂಬಸ್ಥರಿಗೆ ಸಂತಸ ತಂದಿದೆ. ದರ್ಶನ್​ ಭೇಟಿಯ ವೇಳೆ ಜಮೀರ್​ ಅಹ್ಮದ್ ಪುತ್ರ ಝೈದ್ ಖಾನ್, ಜಮೀರ್​ ಅವರ ಪುತ್ರಿ ಹಾಗೂ ಅಳಿಯ​ ಕೂಡ ಉಪಸ್ಥಿತರಿದ್ದರು. ಇದೀಗ ಹೊಸದಾಗಿ ಚಂದನವನಕ್ಕೆ ಕಾಲಿಡುತ್ತಿರುವ ಝೈದ್​ ಖಾನ್​, ಬನಾರಸ್​ ಎಂಬ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಒಲವೇ ಮಂದಾರ, ಬ್ಯೂಟಿಫುಲ್ ಮನಸುಗಳು, ಬೆಲ್​ ಬಾಟಂ ಸಿನಿಮಾಗಳ ನಿರ್ದೇಶಕ ಜಯತೀರ್ಥ ಅವರ ನೇತೃತ್ವದಲ್ಲಿ ಬನಾರಸ್​ ಸಿನಿಮಾ ಮೂಡಿಬರುತ್ತಿದ್ದು, ಈ ಸಿನಿಮಾದ ಮೂಲಕ ಜಮೀರ್ ಪುತ್ರ ಸ್ಯಾಂಡಲ್​ವುಡ್​ಗೆ ಹೀರೋ ಆಗಿ ಪ್ರವೇಶ ನೀಡುತ್ತಿದ್ದಾರೆ.

ತಮ್ಮ ಮಗ ಸಿನಿರಂಗಕ್ಕೆ ಪ್ರವೇಶ ಮಾಡುತ್ತಿರುವ ಕಾರಣ ಜಮೀರ್ ಅಹ್ಮದ್ ಖಾನ್​ ಚಿತ್ರರಂಗದವರೊಂದಿಗೆ ಉತ್ತಮ ಬಾಂಧವ್ಯ ಕಾಯ್ದುಕೊಂಡಿದ್ದಾರೆ. ಇಷ್ಟೇ ಅಲ್ಲದೇ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕುಟುಂಬದೊಂದಿಗೂ ಜಮೀರ್ ಒಳ್ಳೆಯ ಸಂಬಂಧ ಹೊಂದಿದ್ದಾರೆ. ಸದ್ಯಕ್ಕೆ ದರ್ಶನ್​ ಅವರ ಭೇಟಿಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ಜಮೀರ್​ ಅಹ್ಮದ್​ ಹಂಚಿಕೊಂಡ ಫೋಟೋಗಳು ಕೊಂಚ ಅಚ್ಚರಿಯನ್ನೂ ಮೂಡಿಸಿವೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ಈ ಫೋಟೋಗಳಿಗೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ:

ಉತ್ತರ ಪ್ರದೇಶದಲ್ಲಿ ರಾಬರ್ಟ್​ ಶೂಟಿಂಗ್​ಗೆ ಹೋದಾಗ ನನ್ನನ್ನು ಸ್ವಾಗತಿಸೋಕೆ ಗನ್​ಮೆನ್​ಗಳು ಬಂದಿದ್ರು; ದರ್ಶನ್​

ಇನ್ನೆಂದೂ ಇಂಥ ದಿನ ಬರದಿರಲಿ: ಟಿವಿ9 ಸಂದರ್ಶನದಲ್ಲಿ ದರ್ಶನ್​ ಕ್ಷಮೆಯಾಚನೆಗೆ ಜಗ್ಗೇಶ್ ಪ್ರತಿಕ್ರಿಯೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ