ಐತಿಹಾಸಿಕ ಸಿನಿಮಾನಲ್ಲಿ ನಟಿಸಲಿದ್ದಾರೆ ನಟ ಡಾಲಿ ಧನಂಜಯ್

ಡಾಲಿ ಧನಂಜಯ್ ತಮ್ಮ ಹತ್ತು ವರ್ಷದ ನಟನಾ ವೃತ್ತಿಯಲ್ಲಿ ಹಲವು ಭಿನ್ನ ರೀತಿಯ ಪಾತ್ರಗಳಲ್ಲಿ ನಟಿಸಿದ್ದಾರೆ. ಇದೀಗ ಐತಿಹಾಸಿಕ ಕತೆಯುಳ್ಳ ಸಿನಿಮಾನಲ್ಲಿ ನಟಿಸಲಿದ್ದಾರೆ. ಸಿನಿಮಾದ ಕತೆ ಕರ್ನಾಟಕದ ಸಮುದಾಯವೊಂದರ ವೀರಾವೇಷದ ಹೋರಾದ ಕತೆ ಒಳಗೊಂಡಿದೆ.

ಐತಿಹಾಸಿಕ ಸಿನಿಮಾನಲ್ಲಿ ನಟಿಸಲಿದ್ದಾರೆ ನಟ ಡಾಲಿ ಧನಂಜಯ್
ಡಾಲಿ ಧನಂಜಯ್
Follow us
|

Updated on: May 19, 2024 | 6:52 PM

ಡಾಲಿ ಧನಂಜಯ್ (Daali Dhananjay) ತಮ್ಮ 10 ವರ್ಷದ ನಟನಾ ವೃತ್ತಿಯಲ್ಲಿ ಹಲವು ರೀತಿಯ ಭಿನ್ನ ಪಾತ್ರಗಳಲ್ಲಿ ನಟಿಸಿದ್ದಾರೆ. ನಾಯಕ, ವಿಲನ್, ಪೊಲೀಸ್, ಧಾರ್ಮಿಕ ಕತೆಯುಳ್ಳ ಸಿನಿಮಾ, ಜನಪದ ಶೈಲಿಯ ಸಿನಿಮಾ, ಹಾಸ್ಯ ಎಲ್ಲವನ್ನೂ ಸಹ ಡಾಲಿ ಧನಂಜಯ್ ಪ್ರಯತ್ನ ಮಾಡಿದ್ದಾರೆ. ಇದೀಗ ಡಾಲಿ ಧನಂಜಯ್ ಐತಿಹಾಸಿಕ ಕತೆಯುಳ್ಳ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ‘ಅಲ್ಲಮ’ ಸಿನಿಮಾನಲ್ಲಿ ಅಲ್ಲಮನಾಗಿ ನಟಿಸಿದ್ದ ಡಾಲಿ ಧನಂಜಯ್ ಈಗ ಹಲಗಲಿ ಬೇಡರ ಗುಂಪಿನ ವ್ಯಕ್ತಿಯ ಪಾತ್ರದಲ್ಲಿ ಮಿಂಚಲಿದ್ದಾರೆ.

ಈ ಹಿಂದೆ ‘ಕೃಷ್ಣ-ತುಳಸಿ’ ಸಿನಿಮಾ ನಿರ್ದೇಶನ ಮಾಡಿದ್ದ ಸುಕೇಶ್ ನಿರ್ದೇಶನ ಮಾಡುತ್ತಿರುವ ಐತಿಹಾಸಿಕ ಸಿನಿಮಾನಲ್ಲಿ ಡಾಲಿ ಧನಂಜಯ್ ನಾಯಕ ನಟನಾಗಿ ನಟಿಸಲಿದ್ದಾರೆ. ಸಿನಿಮಾವು ಹಲಗಲಿ ಬೇಡರ ಕುರಿತಾದ ಕತೆ ಒಳಗೊಂಡಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಹಲಗಲಿ ಬೇಡರು ತಮ್ಮ ಅದ್ಭುತವಾದ ಭೇಟೆ ತಂತ್ರಗಳಿಂದ ಬ್ರಿಟೀಷರನ್ನು ಹೇಗೆ ಕಂಗಾಲುಗೊಳಿಸಿದ್ದರು. ಹೇಗೆ ಗೊರಿಲ್ಲ ವಾರ್ ಫೇರ್ ಮೂಲಕ ಬ್ರಿಟೀಷರ ಎದೆಯಲ್ಲಿ ಭೀತಿ ಹುಟ್ಟಿಸಿದ್ದರು ಎಂಬುದೇ ಈ ಸಿನಿಮಾದ ಕತೆ. ಬಾಗಲಕೋಟೆ ಜಿಲ್ಲೆ, ಮುಧೋಳದ ಹಲಗಲಿಯ ಬೇಡರು ಬ್ರಿಟೀಷರ ವಿರುದ್ಧ ಹೋರಾಟ ಮಾಡಿದ್ದರು. ಅದೇ ಕತೆಯನ್ನು ಈಗ ಸಿನಿಮಾ ಮಾಡಲಾಗುತ್ತಿದೆ.

ಈ ಸಿನಿಮಾವನ್ನು ಭಾರಿ ಬಜೆಟ್​ನಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಸುಮಾರು 80 ಕೋಟಿ ರೂಪಾಯಿ ಹಣವನ್ನು ಈ ಸಿನಿಮಾದ ಮೇಲೆ ಹೂಡಿಕೆ ಮಾಡಲಾಗುತ್ತಿದೆ. ಭಾರಿ ದೊಡ್ಡ ಸೆಟ್​ಗಳು, ಹೆಚ್ಚು ಸಂಖ್ಯೆಯ ನಟ-ನಟಿಯರು, ವಿದೇಶಿ ನಟ-ನಟಿಯರು, ಸಾಹಸ ಕಲಾವಿದರ ಜೊತೆಗೆ ದೊಡ್ಡ ಪ್ರಮಾಣದ ಸಿಜಿಐ, ಗ್ರಾಫಿಕ್ಸ್ ಬಳಕೆ ಸಹ ಈ ಸಿನಿಮಾದಲ್ಲಿ ಆಗಲಿದೆ. ಸಿನಿಮಾವನ್ನು ಬಹು ಅದ್ಧೂರಿಯಾಗಿ ನಿರ್ಮಾಣ ಮಾಡುವ ಯೋಜನೆ ಚಿತ್ರತಂಡದ್ದಾಗಿದ್ದು, ಅದಕ್ಕಾಗಿ ತಯಾರಿ ಆರಂಭವಾಗಿದೆ. ಸಿನಿಮಾದ ಕೆಲವು ಭಾಗಗಳ ಚಿತ್ರೀಕರಣ ಸಹ ಈಗಾಗಲೇ ಆಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಡಾಲಿ ಧನಂಜಯ್ ರಾಯಭಾರಿ

ಡಾಲಿ ಧನಂಜಯ್ ಪ್ರಸ್ತುತ ಪರಭಾಷೆ ಸಿನಿಮಾಗಳಾದ ‘ಪುಷ್ಪ 2’, ‘ಜೀಬ್ರಾ’ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕನ್ನಡದಲ್ಲಿ ‘ಕೋಟಿ’, ‘ಅಣ್ಣ ಫ್ರಂ ಮೆಕ್ಸಿಕೋ’, ‘ಉತ್ತರಕಾಂಡ’ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅದರ ಜೊತೆಗೆ ‘ಕೆಂಪೇಗೌಡ’ ಹೆಸರಿನ ಸಿನಿಮಾವನ್ನು ಸಹ ಧನಂಜಯ್ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾದಲ್ಲಿ ಡಾಲಿ, ಕೆಂಪೇಗೌಡರ ಪಾತ್ರದಲ್ಲಿ ನಟಿಸಲಿದ್ದಾರೆ. ಇದೆಲ್ಲದರ ಜೊತೆಗೆ ತಮ್ಮ ನಿರ್ಮಾಣ ಸಂಸ್ಥೆಯಿಂದ ಕೆಲವು ಹೊಸಬರ ಸಿನಿಮಾಗಳನ್ನು ನಿರ್ಮಾಣ ಮಾಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ