AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramya: ರಮ್ಯಾ ಕಂಬ್ಯಾಕ್​ ಸಿನಿಮಾ ‘ಉತ್ತರಕಾಂಡ’; ಡಾಲಿ ಜೊತೆ ಸ್ಯಾಂಡಲ್​ವುಡ್​ ಕ್ವೀನ್​ ನಟನೆ

Ramya | Uttarakaanda: ಸಂಪೂರ್ಣ ಉತ್ತರ ಕರ್ನಾಟಕದ ಸೊಗಡಿನಲ್ಲಿ ‘ಉತ್ತರಕಾಂಡ’ ಚಿತ್ರ ಮೂಡಿಬರಲಿದೆ. ಆ ಭಾಗದಲ್ಲಿಯೇ ಪೂರ್ತಿ ಚಿತ್ರೀಕರಣ ನಡೆಯಲಿದೆ. 2023ರ ಜನವರಿಯಲ್ಲಿ ಈ ಸಿನಿಮಾದ ಶೂಟಿಂಗ್​ ಆರಂಭ ಆಗಲಿದೆ.

Ramya: ರಮ್ಯಾ ಕಂಬ್ಯಾಕ್​ ಸಿನಿಮಾ ‘ಉತ್ತರಕಾಂಡ’; ಡಾಲಿ ಜೊತೆ ಸ್ಯಾಂಡಲ್​ವುಡ್​ ಕ್ವೀನ್​ ನಟನೆ
‘ಉತ್ತರಕಾಂಡ’ ಚಿತ್ರತಂಡ
Follow us
TV9 Web
| Updated By: ಮದನ್​ ಕುಮಾರ್​

Updated on:Nov 06, 2022 | 9:15 PM

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಮೂಲಕ ನಟಿ ರಮ್ಯಾ (Ramya Divya Spandana) ಅವರು ಕಂಬ್ಯಾಕ್​ ಮಾಡಬೇಕಿತ್ತು. ಆದರೆ ಕಾರಣಾಂತರಗಳಿಂದ ಅವರು ಆ ಚಿತ್ರದ ನಟನೆಯಿಂದ ಹಿಂದೆ ಸರಿದರು. ಹಾಗಾದರೆ ರಮ್ಯಾ ಯಾವ ಸಿನಿಮಾ ಮೂಲಕ ದೊಡ್ಡ ಪರದೆಗೆ ಮರಳುತ್ತಾರೆ ಎಂಬ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಕೊರೆಯುತ್ತಿತ್ತು. ಅದಕ್ಕೆ ಅಂತೂ ಇಂತೂ ಉತ್ತರ ಸಿಕ್ಕಿದೆ. ಡಾಲಿ ಧನಂಜಯ್​ (Daali Dhananjay) ನಟನೆಯ ‘ಉತ್ತರಕಾಂಡ’ ಸಿನಿಮಾವೇ ರಮ್ಯಾ ಅವರ ಕಂಬ್ಯಾಕ್​ ಸಿನಿಮಾ ಆಗಲಿದೆ. ಹಲವು ವರ್ಷಗಳಿಂದ ಅವರು ನಟನೆಯಿಂದ ದೂರ ಉಳಿದುಕೊಂಡಿದ್ದರು. ಈಗ ‘ಉತ್ತರಕಾಂಡ’ (Uttarakaanda) ಚಿತ್ರಕ್ಕಾಗಿ ಬಣ್ಣ ಹಚ್ಚಲು ಸಿದ್ಧರಾಗಿದ್ದಾರೆ. ಸದ್ಯ ಈ ಚಿತ್ರಕ್ಕೆ ಪೂಜೆ ನೆರವೇರಿಸಲಾಗಿದೆ.

‘ಉತ್ತರಕಾಂಡ’ ಸಿನಿಮಾವನ್ನು ವಿಜಯ್ ಕಿರಗಂದೂರು ಅರ್ಪಿಸುತ್ತಿದ್ದಾರೆ. ಕೆ.ಆರ್.ಜಿ. ಸಂಸ್ಥೆ ನಿರ್ಮಾಣ ಮಾಡುತ್ತಿದ್ದು, ರೋಹಿತ್ ಪದಕಿ ನಿರ್ದೇಶಿಸುತ್ತಿದ್ದಾರೆ. ಇಂದು (ನ.6) ಮಧ್ಯಾಹ್ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಈ ಚಿತ್ರಕ್ಕೆ ಮುಹೂರ್ತ ನೆರವೇರಿದೆ. ‘ರತ್ನನ್ ಪ್ರಪಂಚ’ ಯಶಸ್ಸಿನ ನಂತರ ನಿರ್ದೇಶಕ ರೋಹಿತ್ ಪದಕಿ, ನಿರ್ಮಾಪಕರಾದ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ. ರಾಜ್ ಮತ್ತೊಮ್ಮೆ ಒಂದಾಗಿದ್ದಾರೆ.

ಈ ಚಿತ್ರಕ್ಕಾಗಿ ರಮ್ಯಾ ಅವರು ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ರತ್ನನ್​ ಪ್ರಪಂಚ’ ಚಿತ್ರದಲ್ಲಿ ರಮ್ಯಾ ನಟಿಸಬೇಕಿತ್ತು. ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ. ಈಗ ಡಾಲಿ ಧನಂಜಯ್​ ಜೊತೆ ಅಭಿನಯಿಸಲು ಕಾಲ ಕೂಡಿಬಂದಿದೆ. ಈ ಬಗ್ಗೆ ರಮ್ಯಾ ಮಾತನಾಡಿದ್ದಾರೆ. ‘ಇಂತಹ ಒಳ್ಳೆಯ ತಂಡದ ಜೊತೆ ಕೈ ಜೋಡಿಸಿ ಬೆಳ್ಳಿಪರದೆಗೆ ಹಿಂದಿರುಗುತ್ತಿರುವುದು ಸಂತೋಷ ತಂದಿದೆ. ಇತ್ತೀಚಿನ ದಿನಗಳಲ್ಲಿ ಈ ತಂಡದ ಜೊತೆಗಿನ ಒಡನಾಟ ಚೆನ್ನಾಗಿದೆ. ತಂಡದವರೆಲ್ಲರೂ ನನ್ನ ಮೇಲೆ ತೋರುತ್ತಿರುವ ಅಭಿಮಾನ ಹಾಗು ಬಾಂಧವ್ಯ ನೋಡಿದರೆ ಒಂದು ಒಳ್ಳೆಯ ಜಾಗದಲ್ಲಿದ್ದೀನಿ ಅನ್ನೋ ಭಾವನೆ ಕೊಟ್ಟಿದೆ’ ಎಂದು ರಮ್ಯಾ ಹೇಳಿದ್ದಾರೆ.

ಇದನ್ನೂ ಓದಿ
Image
‘ಪುಷ್ಪ 2’ ಬಗ್ಗೆ ನನಗೆ ಏನು ಅಂದ್ರೆ ಏನೂ ಗೊತ್ತಿಲ್ಲ ಎಂದ ಡಾಲಿ ಧನಂಜಯ
Image
ಡಾಲಿ ಧನಂಜಯ್​-ಅಮೃತಾ ಅಯ್ಯಂಗಾರ್​ ನಡುವೆ ಏನು ನಡೆಯುತ್ತಿದೆ? ನೇರ ಉತ್ತರ ನೀಡಿದ ನಟಿ
Image
‘ಕ್ಷೇತ್ರಪತಿ’ ಆದ ನವೀನ್​ ಶಂಕರ್​ಗೆ ಶುಭ ಕೋರಿದ ಡಾಲಿ ಧನಂಜಯ; ಮೋಷನ್​ ಪೋಸ್ಟರ್​ ರಿಲೀಸ್​
Image
‘ನೀನೇ ಬೇಕು ನೀನೇ ಬೇಕು ಎನ್ನುವಂತಾಗಲಿ’: ವಸಿಷ್ಠ ಸಿಂಹ, ಡಾಲಿ ಧನಂಜಯಗೆ ಹಂಸಲೇಖ ಹಾರೈಕೆ

ರಮ್ಯಾ ಜೊತೆ ನಟಿಸುವ ಅವಕಾಶ ಸಿಕ್ಕಿದ್ದಕ್ಕೆ ಡಾಲಿ ಧನಂಜಯ್​ ಖುಷಿ ಆಗಿದ್ದಾರೆ. ಈ ಚಿತ್ರ ಸಂಪೂರ್ಣ ಉತ್ತರ ಕರ್ನಾಟಕದ ಸೊಗಡಿನಲ್ಲಿ, ಭಾಷೆಯಲ್ಲಿ ಮೂಡಿಬರಲಿದೆ. ಅಲ್ಲಿಯೇ ಪೂರ್ತಿ ಚಿತ್ರೀಕರಣ ಆಗಲಿದೆ. 2023ರ ಜನವರಿಯಲ್ಲಿ ಈ ಸಿನಿಮಾದ ಚಿತ್ರೀಕರಣ ಆರಂಭ ಆಗಲಿದೆ. ಅರವಿಂದ ಕಶ್ಯಪ್ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ಸಂಯೋಜನೆ, ದೀಪು ಎಸ್. ಕುಮಾರ್ ಸಂಕಲನ ಮಾಡಲಿದ್ದಾರೆ. ‘ಉತ್ತರ ಕಾಂಡ’ ಚಿತ್ರದಲ್ಲಿ ಇನ್ನೂ ಅನೇಕ ಕಲಾವಿದರು ನಟಿಸಲಿದ್ದು, ಅವರ ಬಗ್ಗೆ ನಂತರದ ದಿನಗಳಲ್ಲಿ ಮಾಹಿತಿ ನೀಡಲಿದೆ ಚಿತ್ರತಂಡ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:15 pm, Sun, 6 November 22

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ