AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhananjay Birthday: ನ್ಯೂಯಾರ್ಕ್​ನ ಟೈಮ್ಸ್​ ಸ್ಕ್ವೇರ್​ನಲ್ಲಿ ಮಿಂಚಿದ ಡಾಲಿ; ಬರ್ತ್​ಡೇಗೆ ಹೊಸ ಸಿನಿಮಾ ಘೋಷಣೆ

ಅಮೆರಿಕದ ಪ್ರಮುಖ ನಗರ ನ್ಯೂಯಾರ್ಕ್​​ನ ಟೈಮ್ಸ್​ ಸ್ಕ್ವೇರ್ ಬೀದಿ ಸಖತ್ ಫೇಮಸ್. ರಂಗು ರಂಗಾಗಿರುವ ಈ ಬೀದಿಯಲ್ಲಿ ಡಾಲಿಯ ವಿಡಿಯೋ ಪ್ರದರ್ಶನಗೊಂಡಿದೆ. ಇದನ್ನು ಸೆರೆಹಿಡಿದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಲಾಗಿದೆ. ಎಲ್ಲರೂ ಡಾಲಿಗೆ ವಿಶ್ ತಿಳಿಸುತ್ತಿದ್ದಾರೆ.

Dhananjay Birthday: ನ್ಯೂಯಾರ್ಕ್​ನ ಟೈಮ್ಸ್​ ಸ್ಕ್ವೇರ್​ನಲ್ಲಿ ಮಿಂಚಿದ ಡಾಲಿ; ಬರ್ತ್​ಡೇಗೆ ಹೊಸ ಸಿನಿಮಾ ಘೋಷಣೆ
ಧನಂಜಯ್
ರಾಜೇಶ್ ದುಗ್ಗುಮನೆ
|

Updated on:Aug 23, 2023 | 9:26 AM

Share

ನಟ ಡಾಲಿ ಧನಂಜಯ್​ಗೆ (Daali Dhananjay) ಇಂದು (ಆಗಸ್ಟ್ 23) ಬರ್ತ್​ಡೇ ಸಂಭ್ರಮ. ಮಧ್ಯರಾತ್ರಿಯಿಂದಲೇ ಅವರ ಬರ್ತ್​ಡೇ ಆಚರಣೆ ಆರಂಭ ಆಗಿದೆ. ಅಭಿಮಾನಿಗಳು ಅದ್ದೂರಿಯಾಗಿ ಡಾಲಿಯ ಜನ್ಮದಿನ ಆಚರಿಸುತ್ತಿದ್ದಾರೆ. ಸೆಲೆಬ್ರಿಟಿಗಳು, ಅಭಿಮಾನಿಗಳು, ಆಪ್ತರು ಹಾಗೂ ಕುಟುಂಬದವರು ಡಾಲಿಗೆ ಬರ್ತ್​ಡೇ ವಿಶ್ ತಿಳಿಸುತ್ತಿದ್ದಾರೆ. ಬರ್ತ್​ಡೇಗೆ ಹಲವು ಸರ್​ಪ್ರೈಸ್ ಗಿಫ್ಟ್​ ಸಿಕ್ಕಿದೆ. ಡಾಲಿ ವಿಡಿಯೋ ಟೈಮ್ಸ್​​ ಸ್ಕ್ವೇರ್​ನಲ್ಲಿ ಪ್ರದರ್ಶನಗೊಂಡಿದೆ. ಜೊತೆಗೆ ಅವರ ಹೊಸ ಸಿನಿಮಾಗಳು ಘೋಷಣೆ ಆಗುತ್ತಿವೆ. ‘ಉತ್ತರಕಾಂಡ’ (Uttarakaanda ) ಚಿತ್ರದಲ್ಲಿನ ಲುಕ್ ರಿವೀಲ್ ಮಾಡಲಾಗಿದೆ.

ಟೈಮ್ಸ್​ ಸ್ಕ್ವೇರ್​ನಲ್ಲಿ ಡಾಲಿ

ಅಮೆರಿಕದ ಪ್ರಮುಖ ನಗರ ನ್ಯೂಯಾರ್ಕ್​​ನ ಟೈಮ್ಸ್​ ಸ್ಕ್ವೇರ್ ಬೀದಿ ಸಖತ್ ಫೇಮಸ್. ರಂಗು ರಂಗಾಗಿರುವ ಈ ಬೀದಿಯಲ್ಲಿ ಡಾಲಿಯ ವಿಡಿಯೋ ಪ್ರದರ್ಶನಗೊಂಡಿದೆ. ಇದನ್ನು ಸೆರೆಹಿಡಿದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಲಾಗಿದೆ. ಎಲ್ಲರೂ ಡಾಲಿಗೆ ವಿಶ್ ತಿಳಿಸುತ್ತಿದ್ದಾರೆ.

ಹೊಸ ಸಿನಿಮಾ ಘೋಷಣೆ..

ಡಾಲಿ ಜನ್ಮದಿನಕ್ಕೆ ಹೊಸ ಹೊಸ ಸಿನಿಮಾ ಘೋಷಣೆ ಆಗುತ್ತಿದೆ. ‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾ ಘೋಷಣೆ ಆಗಿದೆ. ಈ ಚಿತ್ರವನ್ನು ಸತ್ಯ ರಾಯಲ ಅವರು ನಿರ್ಮಾಣ ಮಾಡುತ್ತಿದ್ದಾರೆ. ‘ಬಡವ ರಾಸ್ಕಲ್’ ಟೀಂ ಈ ಚಿತ್ರಕ್ಕಾಗಿ ಒಂದಾಗಿದೆ ಅನ್ನೋದು ವಿಶೇಷ. ‘ಉತ್ತರಕಾಂಡ’ ಚಿತ್ರದಲ್ಲಿ ಡಾಲಿ ಲುಕ್ ಬಿಡುಗಡೆ ಮಾಡಲಾಗಿದೆ. ಗಬ್ರು ಸತ್ಯನಾಗಿ ಅವರು ಆಗಮಿಸಿದ್ದಾರೆ. ಕೆಆರ್​ಜಿ ಸ್ಟುಡಿಯೋ ಬ್ಯಾನರ್ ಮೂಲಕ ಕಾರ್ತಿಕ್ ಗೌಡ, ಯೋಗಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರೋಹಿತ್ ಪದಕಿ ಚಿತ್ರವನ್ನು ನಿರ್ದೇಶಿಸುತ್ತಿದದ್ದಾರೆ.

ಅಭಿಮಾನಿಗಳ ಸೆಲೆಬ್ರೇಷನ್

ಡಾಲಿ ಜನ್ಮದಿನವನ್ನು ಅಭಿಮಾನಿಗಳು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ನಂದಿ ಲಿಂಕ್ ಗ್ರೌಂಡ್​ನಲ್ಲಿ ಅಭಿಮಾನಿಗಳೊಟ್ಟಿಗೆ ಧನಂಜಯ್ ಸೆಲೆಬ್ರೇಷನ್​ನಲ್ಲಿ ಭಾಗಿ ಆಗುತ್ತಿದ್ದಾರೆ. ಇದಕ್ಕಾಗಿ ಅದ್ದೂರಿ ವ್ಯವಸ್ಥೆ ಮಾಡಲಾಗಿದೆ ಅನ್ನೋದು ವಿಶೇಷ.

ಇದನ್ನೂ ಓದಿ: ಡಾಲಿ ಧನಂಜಯ್​ಗೆ ಬರ್ತ್​ಡೇ ಸಂಭ್ರಮ; ಮಧ್ಯರಾತ್ರಿಯಿಂದಲೇ ಶುರುವಾಗಿದೆ ಸಂಭ್ರಮಾಚರಣೆ

‘ಪುಷ್ಪ 2’ ಚಿತ್ರದ ಪೋಸ್ಟರ್

ಡಾಲಿ ‘ಪುಷ್ಪ 2’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅವರು ಜಾಲಿ ರೆಡ್ಡಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚೆಗೆ ಫಹಾದ್ ಫಾಸಿಲ್ ಬರ್ತ್​ಡೇಗೆ ಪೋಸ್ಟರ್ ರಿಲೀಸ್ ಮಾಡಲಾಗಿತ್ತು. ಅದೇ ರೀತಿ ಧನಂಜಯ್ ಬರ್ತ್​ಡೇಗೂ ಪೋಸ್ಟರ್ ರಿಲೀಸ್ ಮಾಡಲಿ ಎಂಬ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:16 am, Wed, 23 August 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!