ಅದ್ದೂರಿಯಾಗಿ ನಡೆಯುತ್ತಿದೆ ಡಾಲಿ ಧನಂಜಯ್​ ಬರ್ತ್​ಡೇ ಸೆಲೆಬ್ರೇಷನ್​; ಅಭಿಮಾನಿಗಳಿಗೆ ಭರ್ಜರಿ ಊಟ

ರಾಯಚೂರಿನ ಅಭಿಮಾನಿಗಳು ಉತ್ತರ ಕರ್ನಾಟಕದ ಊಟ ವ್ಯವಸ್ಥೆ ಮಾಡಿದ್ದಾರೆ. ಸಿಂಧನೂರಿನಿಂದ ಖಡಕ್ ರೊಟ್ಟಿ ತರಲಾಗಿದೆ. ಎಣ್ಣೆ ಬದನೆಕಾಯಿ, ಪುಂಡೆ ಪಲ್ಯೆ, ಬೂಂದಿ, ಶೇಂಗ ಹಿಂಡಿ, ಮಿರ್ಚಿ ಸೇರಿದಂತೆ ಅನೇಕ ಬಗೆಯ ಖಾದ್ಯಗಳನ್ನು ಬಡಿಸಲಾಗುತ್ತಿದೆ. ಸುಮಾರು ಎರಡು ಸಾವಿರ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.

ಅದ್ದೂರಿಯಾಗಿ ನಡೆಯುತ್ತಿದೆ ಡಾಲಿ ಧನಂಜಯ್​ ಬರ್ತ್​ಡೇ ಸೆಲೆಬ್ರೇಷನ್​; ಅಭಿಮಾನಿಗಳಿಗೆ ಭರ್ಜರಿ ಊಟ
ಡಾಲಿ ಧನಂಜಯ್​ ಬರ್ತ್​ಡೇ ಸೆಲೆಬ್ರೇಷನ್​
Follow us
|

Updated on: Aug 23, 2023 | 11:52 AM

ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್​ (Daali Dhananjay) ಅವರಿಗೆ ಇಂದು (ಆಗಸ್ಟ್​ 23) ಜನ್ಮದಿನದ ಸಂಭ್ರಮ. ಅವರ ಅಭಿಮಾನಿಗಳು ಬಹಳ ಅದ್ದೂರಿಯಾಗಿ ಬರ್ತ್​​ಡೇ ಸೆಲೆಬ್ರೇಟ್​ ಮಾಡುತ್ತಿದ್ದಾರೆ. ಈ ವರ್ಷ ಧನಂಜಯ್​ ಅವರಿಗೆ ಹುಟ್ಟುಹಬ್ಬ ವಿಶೇಷವಾಗಿದೆ. ಏಕೆಂದರೆ, ಕಳೆದ ಕೆಲವು ವರ್ಷಗಳಿಂದ ಅವರಿಗೆ ಜನ್ಮದಿನವನ್ನು ಗ್ರ್ಯಾಂಡ್​ ಆಗಿ ಸೆಲೆಬ್ರೇಟ್​ ಮಾಡಲು ಸಾಧ್ಯವಾಗಿರಲಿಲ್ಲ. ಕೊರೊನಾ ಹಾವಳಿ, ಪುನೀತ್​ ರಾಜ್​ಕುಮಾರ್​ ನಿಧನ ಮುಂತಾದ ಕಾರಣಗಳಿಂದ ಧನಂಜಯ್​ ಅವರು ಬರ್ತ್​ಡೇ (Daali Dhananjay Birthday) ಆಚರಿಸಿಕೊಂಡಿರಲಿಲ್ಲ. ಆದರೆ ಈ ವರ್ಷ ಅಭಿಮಾನಿಗಳ ಜೊತೆ ಸೇರಿ ಅವರು ಸಂಭ್ರಮದಿಂದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂಭ್ರಮದಲ್ಲಿ ಭಾಗಿಯಾದ ಎಲ್ಲ ಅಭಿಮಾನಿಗಳಿಗೆ ವಿಶೇಷವಾಗಿ ಊಟದ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರಿನ ನಂದಿ ಲಿಂಕ್ಸ್​ ಗ್ರೌಂಡ್​ನಲ್ಲಿ ಡಾಲಿ ಧನಂಜಯ್​ ಅವರ ಬರ್ತ್​ಡೇ ಆಚರಿಸಲಾಗುತ್ತಿದೆ. ಆಗಸ್ಟ್​ 22ರ ಮಧ್ಯರಾತ್ರಿಯಿಂದಲೇ ಸಂಭ್ರಮ ಶುರುವಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಸಂಖ್ಯೆಯ ಅಭಿಮಾನಿಗಳು ಈ ಸಡಗರದಲ್ಲಿ ಭಾಗಿ ಆಗುತ್ತಿದ್ದಾರೆ. ಅನೇಕ ಸಮಾಜಮುಖಿ ಕಾರ್ಯಗಳನ್ನು ಕೂಡ ಮಾಡಲಾಗುತ್ತಿದೆ. ಧನಂಜಯ್​ ಅವರಿಗೆ ಶುಭಕೋರಲು ಬಂದ ಅಭಿಮಾನಿಗಳು ಉತ್ತರ ಕರ್ನಾಟಕ ಮತ್ತು ದಕ್ಷಿಣ ಭಾರತದ ಶೈಲಿಯಲ್ಲಿ ಭೋಜನದ ವ್ಯವಸ್ಥೆ ಮಾಡಲಾಗಿದೆ.

ಡಾಲಿ ಧನಂಜಯ್​​ ಕುರಿತ ಕೆಲವು ಇಂಟರೆಸ್ಟಿಂಗ್​​ ಸಂಗತಿಗಳು ಇಲ್ಲಿವೆ

ರಾಯಚೂರಿನ ಅಭಿಮಾನಿಗಳು ಉತ್ತರ ಕರ್ನಾಟಕದ ಊಟ ವ್ಯವಸ್ಥೆ ಮಾಡಿದ್ದಾರೆ. ಸಿಂಧನೂರಿನಿಂದ ಖಡಕ್ ರೊಟ್ಟಿ ತರಲಾಗಿದೆ. ಎಣ್ಣೆ ಬದನೆಕಾಯಿ, ಪುಂಡೆ ಪಲ್ಯೆ, ಬೂಂದಿ, ಶೇಂಗ ಹಿಂಡಿ, ಮಿರ್ಚಿ ಸೇರಿದಂತೆ ಅನೇಕ ಬಗೆಯ ಖಾದ್ಯಗಳನ್ನು ಬಡಿಸಲಾಗುತ್ತಿದೆ. ಸುಮಾರು ಎರಡು ಸಾವಿರ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಶಿವರಾಜ್ ಪಾಟೀಲ್ ಗುಂಜಳ್ಳಿ ಅವರಿಂದ ಅಭಿಮಾನಿಗಳಿಗೆ ಉತ್ತರ ಕರ್ನಾಟಕದ ಶೈಲಿಯ ಊಟವನ್ನು ನೀಡಲಾಗುತ್ತಿದೆ. ಈ ಎಲ್ಲ ಕಾರಣಗಳಿಂದ ಈ ಬಾರಿ ಡಾಲಿ ಬರ್ತ್​ಡೇ ಗ್ರ್ಯಾಂಡ್​ ಆಗಿದೆ.

Totapuri 2: ‘ತೋತಾಪುರಿ 2’ ಬಿಡುಗಡೆಗೆ ಸಜ್ಜಾದ ನಿರ್ಮಾಪಕರು; ಜಗ್ಗೇಶ್​, ಡಾಲಿ ಧನಂಜಯ್​ ಫಸ್ಟ್​ ಲುಕ್​ ಬಿಡುಗಡೆ

ಡಾಲಿ ಧನಂಜಯ್​ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಹಲವು ಬಗೆಯ ಪಾತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ಹೀರೋ ಮಾತ್ರವಲ್ಲದೇ ವಿಲನ್​ ಆಗಲೂ ಸೈ ಎಂಬುದನ್ನು ಅವರು ಸಾಬೀತು ಮಾಡಿದ್ದಾರೆ. ಕನ್ನಡಕ್ಕಷ್ಟೇ ಡಾಲಿ ಧನಂಜಯ್​ ಸೀಮಿತವಾಗಿಲ್ಲ. ಟಾಲಿವುಡ್​ನಲ್ಲೂ ಅವರು ಹೆಸರು ಮಾಡಿದ್ದಾರೆ. ‘ಪುಷ್ಪ’ ಸಿನಿಮಾದಲ್ಲಿ ಅವರು ಮಾಡಿದ ನೆಗೆಟಿವ್​ ಶೇಡ್​ನ ಪಾತ್ರ ಗಮನ ಸೆಳೆದಿದೆ. ‘ಪುಷ್ಪ 2’ ಸಿನಿಮಾದಲ್ಲೂ ಅವರ ಪಾತ್ರ ಮುಂದುವರಿಯಲಿದೆ. ಕನ್ನಡದಲ್ಲಿ ಅವರು ನಟಿಸುತ್ತಿರುವ ‘ಉತ್ತರಕಾಂಡ’ ಚಿತ್ರದ ಟೀಸರ್​ ಬಿಡುಗಡೆಯಾಗಿ ಅಭಿಮಾನಿಗಳ ಮೆಚ್ಚುಗೆ ಗಳಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ