AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಗ’ ಸೀಕ್ವೆಲ್​ ಬಗ್ಗೆ ಬಾಯಿ ಬಿಟ್ಟ ಡಾಲಿ ಧನಂಜಯ; ಗೆದ್ದ ಖುಷಿಯಲ್ಲಿ ದುನಿಯಾ ವಿಜಯ್​

Salaga Movie: ‘ಸಲಗ’ ಚಿತ್ರದಲ್ಲಿ ಸಾಮ್ರಾಟ್​ ಎಂಬ ಪೊಲೀಸ್​ ಅಧಿಕಾರಿಯ ಪಾತ್ರದಲ್ಲಿ ಡಾಲಿ ಧನಂಜಯ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಹಲವು ದೃಶ್ಯಗಳನ್ನು ಅವರು ಆವರಿಸಿಕೊಂಡಿದ್ದಾರೆ. ಈ ಪಾತ್ರಕ್ಕೆ ಭರ್ಜರಿ ಜನಮೆಚ್ಚುಗೆ ಸಿಕ್ಕಿದೆ.

‘ಸಲಗ’ ಸೀಕ್ವೆಲ್​ ಬಗ್ಗೆ ಬಾಯಿ ಬಿಟ್ಟ ಡಾಲಿ ಧನಂಜಯ; ಗೆದ್ದ ಖುಷಿಯಲ್ಲಿ ದುನಿಯಾ ವಿಜಯ್​
ಧನಂಜಯ, ದುನಿಯಾ ವಿಜಯ್​
TV9 Web
| Edited By: |

Updated on: Oct 19, 2021 | 3:10 PM

Share

‘ಸಲಗ’ ಚಿತ್ರವನ್ನು ಪ್ರೇಕ್ಷಕರು ಗೆಲ್ಲಿಸಿದ್ದಾರೆ. ದುನಿಯಾ ವಿಜಯ್​ ಅವರ ಚೊಚ್ಚಲ ನಿರ್ದೇಶನದ ಪ್ರಯತ್ನಕ್ಕೆ ಫಲ ಸಿಕ್ಕಿದೆ. ನಿರ್ಮಾಪಕ ಕೆ.ಪಿ. ಶ್ರೀಕಾಂತ್​ಗೆ ಭರ್ಜರಿ ಲಾಭ ಆಗಿದೆ. ಹಾಗಾಗಿ ಬೆಂಗಳೂರಿನ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ಇಡೀ ಚಿತ್ರತಂಡ ಪೂಜೆ ಸಲ್ಲಿಸಿದೆ. ಈ ವೇಳೆ ಗೆಲುವಿನ ಸಂಭ್ರಮವನ್ನು ಮಾಧ್ಯಮಗಳ ಜೊತೆ ಹಂಚಿಕೊಳ್ಳಲಾಯಿತು. ಆಗ ಸಲಗ ಸೀಕ್ವೆಲ್​ ಮಾಡುವ ಕುರಿತು ಡಾಲಿ ಧನಂಜಯ ಮಾತನಾಡಿದರು. ‘ಸಲಗ 2, ಸಲಗ 3, ಸಲಗ 4 ಎಲ್ಲವೂ ಮಾಡುತ್ತೇವೆ’ ಎಂದು ಅವರು ಹೇಳಿದ್ದಾರೆ.

‘ಸಲಗ’ ಚಿತ್ರದಲ್ಲಿ ಸಾಮ್ರಾಟ್​ ಎಂಬ ಪೊಲೀಸ್​ ಅಧಿಕಾರಿಯ ಪಾತ್ರದಲ್ಲಿ ಡಾಲಿ ಧನಂಜಯ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಹಲವು ದೃಶ್ಯಗಳಲ್ಲಿ ಅವರು ಆವರಿಸಿಕೊಂಡಿದ್ದಾರೆ. ‘ಟಗರು’ ಬಳಿಕ ಅವರಿಗೆ ಮತ್ತೊಮ್ಮೆ ಭರ್ಜರಿ ಜನಮೆಚ್ಚುಗೆ ಸಿಕ್ಕಿದೆ. ದುನಿಯಾ ವಿಜಯ್​ ಮತ್ತು ಡಾಲಿ ಧನಂಜಯ ಅವರ ಮುಖಾಮುಖಿ ದೃಶ್ಯಗಳು ‘ಸಲಗ’ ಸಿನಿಮಾದಲ್ಲಿ ರಾರಾಜಿಸಿವೆ. ಚಿತ್ರ ಗೆಲುವು ಕಂಡಿರುವುದರಿಂದ ಇದೇ ತಂಡದ ಜೊತೆ ಸೀಕ್ವೆಲ್​ ಮಾಡುವ ಇಂಗಿತವನ್ನು ಧನಂಜಯ ವ್ಯಕ್ತಪಡಿಸಿದರು.

‘ಒಳ್ಳೆಯ ಸಿನಿಮಾ ಮಾಡಿದರೆ ನಿರ್ಮಾಪಕ ಕೆಪಿ ಶ್ರೀಕಾಂತ್​ ಅವರು ಅದನ್ನು ಬೇರೊಂದು ಮಟ್ಟಕ್ಕೆ ತಲುಪಿಸುತ್ತಾರೆ. ಸಲಗ ರೀತಿಯ ಚಿತ್ರದಲ್ಲಿ ನಾನೂ ಒಂದು ಭಾಗ ಆಗಿರುವುದಕ್ಕೆ ಖುಷಿ ಇದೆ. ಸಲಗ 2, ಸಲಗ 3, ಸಲಗ 4 ಎಲ್ಲವೂ ಮಾಡುತ್ತೇವೆ’ ಎಂದು ಧನಂಜಯ ಹೇಳಿದರು.

ಓಟಿಟಿಯಲ್ಲಿ ಸದ್ಯಕ್ಕಿಲ್ಲ ‘ಸಲಗ’

ಕೊರೊನಾ ಆತಂಕವನ್ನು ಮರೆತು ಜನರು ಚಿತ್ರಮಂದಿರಕ್ಕೆ ಬಂದು ‘ಸಲಗ’ ಚಿತ್ರವನ್ನು ನೋಡುತ್ತಿದ್ದಾರೆ. ಆದರೆ ಕೆಲವರು ಈ ಚಿತ್ರ ಓಟಿಟಿಗೆ ಬಂದ ಮೇಲೆ ನೋಡೋಣ ಎಂದುಕೊಳ್ಳುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಕೆಲವರು ಗಾಸಿಪ್​ ಹಬ್ಬಿಸುತ್ತಿದ್ದಾರೆ. ಅದು ಚಿತ್ರತಂಡದ ಗಮನಕ್ಕೆ ಬಂದಿದೆ. ‘ಸದ್ಯಕ್ಕಂತೂ ನಮ್ಮ ಸಿನಿಮಾ ಓಟಿಟಿಗೆ ಬರುವುದಿಲ್ಲ’ ಎಂದು ದುನಿಯಾ ವಿಜಯ್​ ನೇರವಾಗಿ ಹೇಳಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಒಂದು ವಿಡಿಯೋ ಹಂಚಿಕೊಳ್ಳುವ ಮೂಲಕ ಈ ವಿಚಾರವನ್ನು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:

Salaga Movie Review: ‘ಸಲಗ’ ತುಂಬಾ ರಗಡ್​ ಆಗಿದೆ ಎಚ್ಚರಿಕೆ! ದುನಿಯಾ ವಿಜಯ್​ಗೆ ಮಾಸ್​ ಪ್ರೇಕ್ಷಕರೇ ಟಾರ್ಗೆಟ್​

‘ಚರಂಡಿ ಕ್ಲೀನ್​ ಮಾಡುವವನ ಪಾತ್ರ ಮಾಡ್ತೀನಿ’: ದುನಿಯಾ ವಿಜಯ್​ ನಿರ್ದೇಶನದಲ್ಲಿ ಶಿವಣ್ಣನಿಗೆ ನಟಿಸುವ ಆಸೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ