AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಗ’ ಸೀಕ್ವೆಲ್​ ಬಗ್ಗೆ ಬಾಯಿ ಬಿಟ್ಟ ಡಾಲಿ ಧನಂಜಯ; ಗೆದ್ದ ಖುಷಿಯಲ್ಲಿ ದುನಿಯಾ ವಿಜಯ್​

Salaga Movie: ‘ಸಲಗ’ ಚಿತ್ರದಲ್ಲಿ ಸಾಮ್ರಾಟ್​ ಎಂಬ ಪೊಲೀಸ್​ ಅಧಿಕಾರಿಯ ಪಾತ್ರದಲ್ಲಿ ಡಾಲಿ ಧನಂಜಯ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಹಲವು ದೃಶ್ಯಗಳನ್ನು ಅವರು ಆವರಿಸಿಕೊಂಡಿದ್ದಾರೆ. ಈ ಪಾತ್ರಕ್ಕೆ ಭರ್ಜರಿ ಜನಮೆಚ್ಚುಗೆ ಸಿಕ್ಕಿದೆ.

‘ಸಲಗ’ ಸೀಕ್ವೆಲ್​ ಬಗ್ಗೆ ಬಾಯಿ ಬಿಟ್ಟ ಡಾಲಿ ಧನಂಜಯ; ಗೆದ್ದ ಖುಷಿಯಲ್ಲಿ ದುನಿಯಾ ವಿಜಯ್​
ಧನಂಜಯ, ದುನಿಯಾ ವಿಜಯ್​
TV9 Web
| Edited By: |

Updated on: Oct 19, 2021 | 3:10 PM

Share

‘ಸಲಗ’ ಚಿತ್ರವನ್ನು ಪ್ರೇಕ್ಷಕರು ಗೆಲ್ಲಿಸಿದ್ದಾರೆ. ದುನಿಯಾ ವಿಜಯ್​ ಅವರ ಚೊಚ್ಚಲ ನಿರ್ದೇಶನದ ಪ್ರಯತ್ನಕ್ಕೆ ಫಲ ಸಿಕ್ಕಿದೆ. ನಿರ್ಮಾಪಕ ಕೆ.ಪಿ. ಶ್ರೀಕಾಂತ್​ಗೆ ಭರ್ಜರಿ ಲಾಭ ಆಗಿದೆ. ಹಾಗಾಗಿ ಬೆಂಗಳೂರಿನ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ಇಡೀ ಚಿತ್ರತಂಡ ಪೂಜೆ ಸಲ್ಲಿಸಿದೆ. ಈ ವೇಳೆ ಗೆಲುವಿನ ಸಂಭ್ರಮವನ್ನು ಮಾಧ್ಯಮಗಳ ಜೊತೆ ಹಂಚಿಕೊಳ್ಳಲಾಯಿತು. ಆಗ ಸಲಗ ಸೀಕ್ವೆಲ್​ ಮಾಡುವ ಕುರಿತು ಡಾಲಿ ಧನಂಜಯ ಮಾತನಾಡಿದರು. ‘ಸಲಗ 2, ಸಲಗ 3, ಸಲಗ 4 ಎಲ್ಲವೂ ಮಾಡುತ್ತೇವೆ’ ಎಂದು ಅವರು ಹೇಳಿದ್ದಾರೆ.

‘ಸಲಗ’ ಚಿತ್ರದಲ್ಲಿ ಸಾಮ್ರಾಟ್​ ಎಂಬ ಪೊಲೀಸ್​ ಅಧಿಕಾರಿಯ ಪಾತ್ರದಲ್ಲಿ ಡಾಲಿ ಧನಂಜಯ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಹಲವು ದೃಶ್ಯಗಳಲ್ಲಿ ಅವರು ಆವರಿಸಿಕೊಂಡಿದ್ದಾರೆ. ‘ಟಗರು’ ಬಳಿಕ ಅವರಿಗೆ ಮತ್ತೊಮ್ಮೆ ಭರ್ಜರಿ ಜನಮೆಚ್ಚುಗೆ ಸಿಕ್ಕಿದೆ. ದುನಿಯಾ ವಿಜಯ್​ ಮತ್ತು ಡಾಲಿ ಧನಂಜಯ ಅವರ ಮುಖಾಮುಖಿ ದೃಶ್ಯಗಳು ‘ಸಲಗ’ ಸಿನಿಮಾದಲ್ಲಿ ರಾರಾಜಿಸಿವೆ. ಚಿತ್ರ ಗೆಲುವು ಕಂಡಿರುವುದರಿಂದ ಇದೇ ತಂಡದ ಜೊತೆ ಸೀಕ್ವೆಲ್​ ಮಾಡುವ ಇಂಗಿತವನ್ನು ಧನಂಜಯ ವ್ಯಕ್ತಪಡಿಸಿದರು.

‘ಒಳ್ಳೆಯ ಸಿನಿಮಾ ಮಾಡಿದರೆ ನಿರ್ಮಾಪಕ ಕೆಪಿ ಶ್ರೀಕಾಂತ್​ ಅವರು ಅದನ್ನು ಬೇರೊಂದು ಮಟ್ಟಕ್ಕೆ ತಲುಪಿಸುತ್ತಾರೆ. ಸಲಗ ರೀತಿಯ ಚಿತ್ರದಲ್ಲಿ ನಾನೂ ಒಂದು ಭಾಗ ಆಗಿರುವುದಕ್ಕೆ ಖುಷಿ ಇದೆ. ಸಲಗ 2, ಸಲಗ 3, ಸಲಗ 4 ಎಲ್ಲವೂ ಮಾಡುತ್ತೇವೆ’ ಎಂದು ಧನಂಜಯ ಹೇಳಿದರು.

ಓಟಿಟಿಯಲ್ಲಿ ಸದ್ಯಕ್ಕಿಲ್ಲ ‘ಸಲಗ’

ಕೊರೊನಾ ಆತಂಕವನ್ನು ಮರೆತು ಜನರು ಚಿತ್ರಮಂದಿರಕ್ಕೆ ಬಂದು ‘ಸಲಗ’ ಚಿತ್ರವನ್ನು ನೋಡುತ್ತಿದ್ದಾರೆ. ಆದರೆ ಕೆಲವರು ಈ ಚಿತ್ರ ಓಟಿಟಿಗೆ ಬಂದ ಮೇಲೆ ನೋಡೋಣ ಎಂದುಕೊಳ್ಳುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಕೆಲವರು ಗಾಸಿಪ್​ ಹಬ್ಬಿಸುತ್ತಿದ್ದಾರೆ. ಅದು ಚಿತ್ರತಂಡದ ಗಮನಕ್ಕೆ ಬಂದಿದೆ. ‘ಸದ್ಯಕ್ಕಂತೂ ನಮ್ಮ ಸಿನಿಮಾ ಓಟಿಟಿಗೆ ಬರುವುದಿಲ್ಲ’ ಎಂದು ದುನಿಯಾ ವಿಜಯ್​ ನೇರವಾಗಿ ಹೇಳಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಒಂದು ವಿಡಿಯೋ ಹಂಚಿಕೊಳ್ಳುವ ಮೂಲಕ ಈ ವಿಚಾರವನ್ನು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:

Salaga Movie Review: ‘ಸಲಗ’ ತುಂಬಾ ರಗಡ್​ ಆಗಿದೆ ಎಚ್ಚರಿಕೆ! ದುನಿಯಾ ವಿಜಯ್​ಗೆ ಮಾಸ್​ ಪ್ರೇಕ್ಷಕರೇ ಟಾರ್ಗೆಟ್​

‘ಚರಂಡಿ ಕ್ಲೀನ್​ ಮಾಡುವವನ ಪಾತ್ರ ಮಾಡ್ತೀನಿ’: ದುನಿಯಾ ವಿಜಯ್​ ನಿರ್ದೇಶನದಲ್ಲಿ ಶಿವಣ್ಣನಿಗೆ ನಟಿಸುವ ಆಸೆ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್