AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟ್ಟೇರಿತು ಡಾಲಿ ನಿರ್ಮಾಣದ ಹೊಸ ಸಿನಿಮಾ ‘ಜೆಸಿ’; ಈ ಚಿತ್ರಕ್ಕೆ ಪ್ರಖ್ಯಾತ್​ ಹೀರೋ

‘ನಡುವೆ ಅಂತರವಿರಲಿ’ ಸಿನಿಮಾದ ಮೂಲಕ ಹೀರೋ ಆಗಿ ಚಂದನವನಕ್ಕೆ ಎಂಟ್ರಿ ನೀಡಿದ್ದ ಪ್ರಖ್ಯಾತ್ ಅವರು ಈಗ ಎರಡನೇ ಸಿನಿಮಾ ಒಪ್ಪಿಕೊಂಡಿದ್ದಾರೆ. 5 ವರ್ಷಗಳ ಬಳಿಕ ಅವರು ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಅವರ ಹೊಸ ಸಿನಿಮಾಗೆ ‘ಜೆಸಿ’ ಎಂದು ಶೀರ್ಷಿಕೆ ಇಡಲಾಗಿದ್ದು, ಡಾಲಿ ಧನಂಜಯ ಅವರು ‘ಡಾಲಿ ಪಿಕ್ಚರ್ಸ್​’ ಮೂಲಕ ಬಂಡವಾಳ ಹೂಡುತ್ತಿದ್ದಾರೆ.

ಸೆಟ್ಟೇರಿತು ಡಾಲಿ ನಿರ್ಮಾಣದ ಹೊಸ ಸಿನಿಮಾ ‘ಜೆಸಿ’; ಈ ಚಿತ್ರಕ್ಕೆ ಪ್ರಖ್ಯಾತ್​ ಹೀರೋ
‘ಜೆಸಿ’ ಸಿನಿಮಾದ ಮುಹೂರ್ತ ಸಮಾರಂಭ
ಮದನ್​ ಕುಮಾರ್​
|

Updated on: Feb 14, 2024 | 4:24 PM

Share

ಖ್ಯಾತ ನಟ ಡಾಲಿ ಧನಂಜಯ್​ (Daali Dhananjay) ಅವರು ನಿರ್ಮಾಪಕನಾಗಿ ಬ್ಯಾಕ್ ಟು ಬ್ಯಾಕ್​ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಹಲವು ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಅವರು ಅವಕಾಶ ನೀಡುತ್ತಿದ್ದಾರೆ. ಧನಂಜಯ ಅವರ ಒಡೆತನದ ‘ಡಾಲಿ ಪಿಕ್ಚರ್ಸ್’ ಮೂಲಕ ಈಗಾಗಲೇ 4 ಸಿನಿಮಾಗಳು ಮೂಡಿಬಂದಿವೆ. ಈಗ ಇದೇ ಬ್ಯಾನರ್​ನಿಂದ ಐದನೇ ಸಿನಿಮಾ ಕೂಡ ಸೆಟ್ಟೇರಿದೆ. ‘ಟಗರು ಪಲ್ಯ’ ಸಿನಿಮಾದಿಂದ ಯಶಸ್ಸು ಕಂಡಿರುವ ‘ಡಾಲಿ ಪಿಕ್ಚರ್ಸ್’ ಸಂಸ್ಥೆ ಈಗ ಮತ್ತೊಂದು ವಿಭಿನ್ನ ಸಿನಿಮಾವನ್ನು ಕೈಗೆತ್ತಿಕೊಂಡಿದೆ. ಈ ಪ್ರಾಜೆಕ್ಟ್​ಗೆ ಚಾಲನೆ ಸಿಕ್ಕಿದೆ. ಈ ಸಿನಿಮಾಗೆ ‘ಜೆಸಿ’ (JC) ಎಂದು ಶೀರ್ಷಿಕೆ ಇಡಲಾಗಿದೆ. ಇದರ ಪೋಸ್ಟರ್​ ಗಮನ ಸೆಳೆಯುತ್ತಿದೆ. ‘ಜೆಸಿ’ ಸಿನಿಮಾದಲ್ಲಿ ಪ್ರಖ್ಯಾತ್​ (Prakhyath) ಅವರು ಹೀರೋ ಆಗಿ ನಟಿಸುತ್ತಿದ್ದಾರೆ.

2018ರಲ್ಲಿ ಬಿಡುಗಡೆಯಾದ ‘ನಡುವೆ ಅಂತರವಿರಲಿ’ ಸಿನಿಮಾದಲ್ಲಿ ನಟ ಪ್ರಖ್ಯಾತ್ ಅವರು ಹೀರೋ ಆಗಿ ಅಭಿನಯಿಸಿದ್ದರು. ಆ ಸಿನಿಮಾದ ಹಾಡುಗಳು ಸೂಪರ್​ ಹಿಟ್​ ಆಗಿದ್ದವು. ಈಗ ಅವರು ದೊಡ್ಡ ಗ್ಯಾಪ್​ನ ನಂತರ ಮತ್ತೆ ಹೀರೋ ಆಗಿ ಬಣ್ಣ ಹಚ್ಚುತ್ತಿದ್ದಾರೆ. ‘ಜೆಸಿ’ ಸಿನಿಮಾದ ಟೈಟಲ್​ ಗಮನ ಸೆಳೆಯುತ್ತಿದೆ. ಅಷ್ಟಕ್ಕೂ ‘ಜೆಸಿ’ ಎಂದರೆ ಏನು ಎಂಬ ಕುತೂಹಲ ಎಲ್ಲರಲ್ಲೂ ಇದೆ. ಅದಕ್ಕೆ ಚಿತ್ರತಂಡದ ಕಡೆಯಿಂದ ಉತ್ತರವೂ ಸಿಕ್ಕಿದೆ. ‘ಜೆಸಿ’ ಎಂದರೆ ಜುಡಿಷಿಯಲ್ ಕಸ್ಟಡಿ! ಜೈಲಿಂದ ಹೊರಗೆ ಬಂದಿರುವ ಯುವಕನ ಕಹಾನಿ ಈ ಸಿನಿಮಾದಲ್ಲಿ ಇರಲಿದೆ.

ಇದನ್ನೂ ಓದಿ: ‘ಕರಾವಳಿ’ ಸಿನಿಮಾಗೆ ಸಂಪದಾ ನಾಯಕಿ; ಪ್ರಜ್ವಲ್​ ನಟನೆಯ ಚಿತ್ರದಲ್ಲಿ ಕನ್ನಡತಿಗೆ ಅವಕಾಶ

ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಇಂದು (ಫೆಬ್ರವರಿ 14) ‘ಜೆಸಿ’ ಚಿತ್ರದ ಮುಹೂರ್ತ ನೆರವೇರಿದೆ. ಪೂಜೆ ಸಲ್ಲಿಸುವ ಮೂಲಕ ಈ ಸಿನಿಮಾದ ಕೆಲಸಗಳಿಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಮುಹೂರ್ತದ ಸಮಯದಲ್ಲಿ ಇಡೀ ಚಿತ್ರತಂಡ ಹಾಜರಿ ಹಾಕಿತ್ತು. ಡಾಲಿ ಧನಂಜಯ ಕೂಡ ಭಾಗಿಯಾಗಿ ತಮ್ಮ ತಂಡದವರಿಗೆ ಶುಭ ಕೋರಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾದ ಶೂಟಿಂಗ್​ ಆರಂಭ ಆಗಲಿದೆ.

ಇದನ್ನೂ ಓದಿ: ‘ಯುಐ’ ಚಿತ್ರದಲ್ಲಿ ಚೀಪ್​ ಸಾಂಗ್​; ಉಪ್ಪಿ ಸಾಹಿತ್ಯ ಕೇಳಿ ತಲೆ ಕೆಡಿಸಿಕೊಂಡ ಫ್ಯಾನ್ಸ್​

ಈ ಸಿನಿಮಾಗೆ ಚೇತನ್ ಅವರು ಆಕ್ಷನ್-ಕಟ್ ಹೇಳಲಿದ್ದಾರೆ. ಅವರಿಗೆ ಇದು ಮೊದಲ ಸಿನಿಮಾ. ‘ಕಾಟೇರ’ ಸಿನಿಮಾಗೆ ಡೈಲಾಗ್​ ಬರೆದು ಜನಮೆಚ್ಚುಗೆ ಗಳಿಸಿರುವ ಮಾಸ್ತಿ ಅವರು ‘ಜೆಸಿ’ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ. ಇದು ಪಕ್ಕಾ ಮಾಸ್ ಕಥಾಹಂದರ ಇರುವ ಸಿನಿಮಾ ಆಗಿರಲಿದೆ. ಕಾರ್ತಿಕ್ ಛಾಯಾಗ್ರಾಹಣ, ರೋಹಿತ್ ಸೋವರ್ ಸಂಗೀತ ನಿರ್ದೇಶನದಲ್ಲಿ ‘ಜೆಸಿ’ ಸಿನಿಮಾ ಮೂಡಿಬರಲಿದೆ. ಫಸ್ಟ್ ಪೋಸ್ಟರ್​ನಲ್ಲಿ ಬೆಂಗಳೂರು ಕಾರಾಗೃಹ ಮತ್ತು ಜೈಲಿನ ಕಂಬಿಗಳನ್ನು ಕಾಣಬಹುದು. ಈ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ. ಮುಂದಿನ ದಿನಗಳಲ್ಲಿ ಹಂತಹಂತವಾಗಿ ಚಿತ್ರದ ಬಗ್ಗೆ ಅಪ್​ಡೇಟ್​ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?