‘ಶೂಟಿಂಗ್ ಮುಗಿದಿದೆ, ಸದ್ಯದಲ್ಲೇ ನಿಮ್ಮ ಮುಂದೆ ಬರ್ತೀವಿ’; ‘ಟಗರು ಪಲ್ಯ’ ಚಿತ್ರದ ಬಗ್ಗೆ ಅಪ್​ಡೇಟ್ ನೀಡಿದ ಧನಂಜಯ್

ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಆಗುತ್ತಿರುವ ‘ಟಗರು ಪಲ್ಯ’ ಚಿತ್ರಕ್ಕೆ ಉಮೇಶ್ ಕೆ ಕೃಪ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೂಲಕ ನಟಿಯಾಗಿ ನೆನಪಿರಲಿ ಪ್ರೇಮ್ ಮಗಳು ಅಮೃತಾ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

‘ಶೂಟಿಂಗ್ ಮುಗಿದಿದೆ, ಸದ್ಯದಲ್ಲೇ ನಿಮ್ಮ ಮುಂದೆ ಬರ್ತೀವಿ’; ‘ಟಗರು ಪಲ್ಯ’ ಚಿತ್ರದ ಬಗ್ಗೆ ಅಪ್​ಡೇಟ್ ನೀಡಿದ ಧನಂಜಯ್
ಟಗರು ಪಲ್ಯ ಸಿನಿಮಾ ಪೋಸ್ಟರ್
Follow us
|

Updated on: Jun 01, 2023 | 7:28 AM

ನಟ ಧನಂಜಯ್ (Dhananjay) ಅವರು ನಟನೆಯಲ್ಲಿ ಮಾತ್ರವಲ್ಲ, ನಿರ್ಮಾಣದಲ್ಲೂ ಪ್ರಯೋಗಾತ್ಮಕ ಸಿನಿಮಾಗಳನ್ನು ಮಾಡ ಬಯಸುತ್ತಾರೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕು ಎನ್ನುವ ಉದ್ದೇಶದೊಂದಿಗೆ ಅವರು ‘ಡಾಲಿ ಪಿಕ್ಚರ್ಸ್​’ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಇದರ ಮೂಲಕ ಮೂಡಿ ಬರುತ್ತಿರುವ ‘ಟಗರು ಪಲ್ಯ’ (Tagaru Palya Movie) ಚಿತ್ರದ ಶೂಟಿಂಗ್ ಮುಗಿದಿದೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಧನಂಜಯ್ ಅವರಿಗೆ ಎಲ್ಲರೂ ಆಲ್​ ದಿ ಬೆಸ್ಟ್ ಹೇಳಿದ್ದಾರೆ.

ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಆಗುತ್ತಿರುವ ‘ಟಗರು ಪಲ್ಯ’ ಚಿತ್ರಕ್ಕೆ ಉಮೇಶ್ ಕೆ ಕೃಪ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೂಲಕ ಅನೇಕ ಹೊಸಬರಿಗೆ ಅವಕಾಶ ಸಿಕ್ಕಿದೆ. ಈ ಸಿನಿಮಾ ಮೂಲಕ ನಟಿಯಾಗಿ ನೆನಪಿರಲಿ ಪ್ರೇಮ್ ಮಗಳು ಅಮೃತಾ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅವರ ಪೋಸ್ಟರ್​ಗಳು ಈಗಾಗಲೇ ರಿಲೀಸ್ ಆಗಿ ಗಮನ ಸೆಳೆದಿವೆ. ಈಗ ಸಿನಿಮಾದ ಶೂಟಿಂಗ್ ಮುಗಿಸಿದ ಖುಷಿಯನ್ನು ಚಿತ್ರತಂಡ ತಿಳಿಸಿದೆ. ಸಿನಿಮಾ ಶೂಟಿಂಗ್ ಹೇಗಿತ್ತು ಎಂಬುದನ್ನು ವಿಡಿಯೋ ಮೂಲಕ ತಿಳಿಸಲಾಗಿದೆ.

‘ಟಗರು ಪಲ್ಯ’ ಚಿತ್ರೀಕರಣ ಮುಕ್ತಾಯ. ನಮ್ಮ ಮಣ್ಣಿನ ಕಥೆಯೊಂದನ್ನು ನಿರ್ಮಿಸಿದ ಹೆಮ್ಮೆ. ಕನ್ನಡಕ್ಕೊಬ್ಬ ಹೊಸ ಪ್ರತಿಭಾನ್ವಿತ ನಿರ್ದೇಶಕ, ನಾಯಕನಾಗಿ ನಾಗಭೂಷಣ, ನಾಯಕಿಯಾಗಿ ಅಮೃತಾ ಪ್ರೇಮ್ ಮತ್ತು ಹೊಸ ಪ್ರತಿಭಾನ್ವಿತರ ದಂಡು, ಜೊತೆಗೆ ರಂಗಾಯಣ ರಘು, ತಾರಮ್ಮ, ಬಿರಾದರ್ ಅವರಂತಹ ಮೇರು ಕಲಾವಿದರ ಹೆಗಲು. ಸದ್ಯದಲ್ಲೆ ನಿಮ್ಮ ಮುಂದೆ’ ಎಂದು ಧನಂಜಯ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಬಡವರಿಗೆ ಅಕ್ಕಿ ಕೊಟ್ಟರೆ ತಪ್ಪಲ್ಲ, ಅವರು ಸೋಮಾರಿ ಆಗಲ್ಲ’; ಕಾಂಗ್ರೆಸ್ ಯೋಜನೆ ಬಗ್ಗೆ ಧನಂಜಯ್ ಮಾತು

ಧನಂಜಯ್ ಕೆಲಸವನ್ನು ಅನೇಕರು ಶ್ಲಾಘಿಸಿದ್ದಾರೆ. ‘ಒಳ್ಳೆಯದಾಗಲಿ. ಇನ್ನು ಹೆಚ್ಚು ಕಲಾವಿದರು ಮತ್ತು ಸಿನಿಮಾ ನಿಮ್ಮ ಗರಡಿ ಇಂದ ಬರಲಿ’ ಎಂದು ಕೆಲವರು ಕೋರಿದ್ದಾರೆ. ‘ಟಗರು ಪಲ್ಯ’ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡಿದ್ದು, ಎಸ್. ಕೆ. ರಾವ್ ಛಾಯಾಗ್ರಹಣ ಚಿತ್ರಕ್ಕಿದೆ. ನಾಗಭೂಷಣ್-ಅಮೃತಾ ಜತೆಗೆ, ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಕೆಸರಿನ ಗುಂಡಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​ ಕಾರು
ಕೆಸರಿನ ಗುಂಡಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​ ಕಾರು
Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ
Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸದ 4ನೇ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
‘ಬಿಗ್ ಬಾಸ್ 11’ ಸಂಭಾವನೆ ವಿಚಾರ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಉತ್ತರ ಏನು?
‘ಬಿಗ್ ಬಾಸ್ 11’ ಸಂಭಾವನೆ ವಿಚಾರ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಉತ್ತರ ಏನು?
ಆಂಧ್ರಪ್ರದೇಶದ ಗದ್ದೆಯಲ್ಲೆದ್ದ ಸುಂಟರಗಾಳಿಯ ವಿಡಿಯೋ ವೈರಲ್
ಆಂಧ್ರಪ್ರದೇಶದ ಗದ್ದೆಯಲ್ಲೆದ್ದ ಸುಂಟರಗಾಳಿಯ ವಿಡಿಯೋ ವೈರಲ್
ಮರೆಯಲಾಗದ ಕ್ಷಣ; ಮೋದಿ ನ್ಯೂಯಾರ್ಕ್​ ಭೇಟಿಯ ಹೈಲೈಟ್ಸ್ ಇಲ್ಲಿದೆ
ಮರೆಯಲಾಗದ ಕ್ಷಣ; ಮೋದಿ ನ್ಯೂಯಾರ್ಕ್​ ಭೇಟಿಯ ಹೈಲೈಟ್ಸ್ ಇಲ್ಲಿದೆ
‘ಬಿಗ್ ಬಾಸ್ ಕನ್ನಡ 11’ ಶೋ ಆರಂಭಕ್ಕೂ ಮೊದಲೇ ತಿಳಿಯುತ್ತೆ ಸ್ಪರ್ಧಿಗಳ ಹೆಸರು
‘ಬಿಗ್ ಬಾಸ್ ಕನ್ನಡ 11’ ಶೋ ಆರಂಭಕ್ಕೂ ಮೊದಲೇ ತಿಳಿಯುತ್ತೆ ಸ್ಪರ್ಧಿಗಳ ಹೆಸರು
ಕಾಡಿಂದ ಹೊರಬಂದು ಎಂಜಾಯ್ ಮಾಡಿದ ಕರಡಿಗಳ ವಿಡಿಯೋ ವೈರಲ್
ಕಾಡಿಂದ ಹೊರಬಂದು ಎಂಜಾಯ್ ಮಾಡಿದ ಕರಡಿಗಳ ವಿಡಿಯೋ ವೈರಲ್
ಮಹಿಷ ದಸರಾ ಆಚರಿಸಲು ಮುಂದಾಗಿರೋರಿಗೆ ಪ್ರತಾಪ್ ಸಿಂಹ ಓಪನ್ ಚಾಲೆಂಜ್!
ಮಹಿಷ ದಸರಾ ಆಚರಿಸಲು ಮುಂದಾಗಿರೋರಿಗೆ ಪ್ರತಾಪ್ ಸಿಂಹ ಓಪನ್ ಚಾಲೆಂಜ್!
‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕುರಿತು ಕಿಚ್ಚ ಸುದೀಪ್​ ಸುದ್ದಿಗೋಷ್ಠಿ
‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕುರಿತು ಕಿಚ್ಚ ಸುದೀಪ್​ ಸುದ್ದಿಗೋಷ್ಠಿ