AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ‘ದವನ ಫೆಸ್ಟ್’ ವೇದಿಕೆಯಲ್ಲಿ ‘ಕೋಟಿ’ ಬಗ್ಗೆ ಮಾತಾಡಿದ ಡಾಲಿ ಧನಂಜಯ

ಖ್ಯಾತ ನಟ ಡಾಲಿ ಧನಂಜಯ್ ನಟಿಸಿದ ಬಹುನಿರೀಕ್ಷಿತ ‘ಕೋಟಿ’ ಸಿನಿಮಾ ಜೂನ್ 14ರಂದು ಬಿಡುಗಡೆ ಆಗಲು ಸಿದ್ಧವಾಗಿದೆ.‌ ಈಗಾಗಲೇ ಈ ಸಿನಿಮಾದ ಹಾಡುಗಳು ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿವೆ. ಬುಧವಾರ (ಜೂನ್​ 5) ‘ಕೋಟಿ’ ಟ್ರೇಲರ್ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರದ ಸಲುವಾಗಿ ಡಾಲಿ ಧನಂಜಯ ಅವರು ಇತ್ತೀಚೆಗೆ ದಾವಣಗೆರೆಗೆ ತೆರಳಿದ್ದರು.

ದಾವಣಗೆರೆ ‘ದವನ ಫೆಸ್ಟ್’ ವೇದಿಕೆಯಲ್ಲಿ ‘ಕೋಟಿ’ ಬಗ್ಗೆ ಮಾತಾಡಿದ ಡಾಲಿ ಧನಂಜಯ
ಡಾಲಿ ಧನಂಜಯ
ಮದನ್​ ಕುಮಾರ್​
|

Updated on: Jun 02, 2024 | 6:04 PM

Share

ದಾವಣಗೆರೆಯ (Davanagere) ಬಾಪೂಜಿ ಇಂಜಿನಿಯರಿಂಗ್ ಕಾಲೇಜಿನ ‘ದವನ ಫೆಸ್ಟ್’ ಅತಿದೊಡ್ಡ ಕಾಲೇಜ್ ಫೆಸ್ಟಿವಲ್‌ಗಳಲ್ಲೊಂದು. ಇಲ್ಲಿಗೆ ಡಾಲಿ ಧನಂಜಯ (Daali Dhananjay) ಅವರು ಮುಖ್ಯ ಅತಿಥಿಯಾಗಿ ಬಂದಿದ್ದು ವಿದ್ಯಾರ್ಥಿಗಳಿಗೆ, ಅಭಿಮಾನಿಗಳಿಗೆ ಖುಷಿ ನೀಡಿತು. ಸುಮಾರು 5 ಸಾವಿರಕ್ಕೂ ಹೆಚ್ಚು ವಿಧ್ಯಾರ್ಥಿಗಳು ಸೇರಿದ್ದ ಈ ಸಮಾರಂಭದಲ್ಲಿ ಡಾಲಿ ಧನಂಜಯ್​ ಅವರ ಜೊತೆ ‘ಕೋಟಿ’ (Kotee Movie) ಸಿನಿಮಾದ ನಾಯಕಿ ಮೋಕ್ಷಾ ಕುಶಾಲ್ ಹಾಗೂ ಸಹ ಕಲಾವಿದರಾದ ಪೃಥ್ವಿ ಶಾಮನೂರು, ಅಭಿಷೇಕ್ ಶ್ರೀಕಾಂತ್, ತನುಜಾ ವೆಂಕಟೇಶ್ ಕೂಡ ಭಾಗವಹಿಸಿದ್ದರು.

‘ದವನ’ ವೇದಿಕೆ ಮೇಲೆ ಡಾಲಿ ಧನಂಜಯ ಬರುತ್ತಿದ್ದಂತೆಯೇ ಅಭಿಮಾನಿಗಳ ಕೇಕೆ, ಕೂಗಾಟ ಮುಗಿಲು ಮುಟ್ಟಿತ್ತು. ಈ ವೇದಿಕೆಯಲ್ಲಿ ‘ಕೋಟಿ’ ಬಗ್ಗೆ ಡಾಲಿ ಮಾತನಾಡಿದರು. ‘ಕೋಟಿ ಒಬ್ಬ ಸಾಮಾನ್ಯ ಡ್ರೈವರ್‌. ಯಾರಿಗೂ ಮೋಸ ಮಾಡದೇ, ನೋವು ಕೊಡದೇ 1 ಕೋಟಿ ರೂಪಾಯಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ ಆತನದ್ದು. ಇಲ್ಲಿ ಯಾರಿಗೆಲ್ಲ ಕೋಟಿ ದುಡಿಯುವ ಆಸೆ ಇದೆ’ ಎಂದು ನೆರೆದಿದ್ದ ವಿದ್ಯಾರ್ಥಿಗಳಿಗೆ ಧನಂಜಯ ಕೇಳಿದರು. ಎಲ್ಲರ ಉತ್ತರ ಕೇಳಿದ ಬಳಿಕ, ‘ಕೋಟಿ ನಿಮ್ಮೆಲ್ಲರಿಗೂ ಕನೆಕ್ಟ್ ಆಗುವ ಸಿನಿಮಾ’ ಎಂದು ಅವರು ಹೇಳಿದರು.

ಈ ಕಾರ್ಯಕ್ರಮದಲ್ಲಿ ಪ್ರದರ್ಶಿಸಿದ ‘ಕೋಟಿ’ ಟೀಸರ್ ಮತ್ತು ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತು. ಧನಂಜಯ ಅವರು ಕಾರ್ಯಕ್ರಮದಿಂದ ವಾಪಸ್​ ಹೋಗುವ ತನಕ ಇಡೀ ಕಾಲೇಜಿನ‌ ಮೂಲೆಮೂಲೆಯಲ್ಲಿ ‘ಡಾಲಿ ಡಾಲಿ..’ ಎಂಬ ಅಭಿಮಾನಿಗಳ‌ ಪ್ರೀತಿಯ ಜೈಕಾರ ಮೊಳಗುತ್ತಿತ್ತು. ಈ ಸಿನಿಮಾವನ್ನು ‘ಜಿಯೋ ಸ್ಟುಡಿಯೋಸ್’ ನಿರ್ಮಾಣ ಮಾಡಿದೆ. ಪರಮ್‌ ಅವರು ನಿರ್ದೇಶನ ಮಾಡಿದ್ದಾರೆ. ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ‘ಕೋಟಿ’ ತೆರೆಕಾಣಲಿದೆ.

ಇದನ್ನೂ ಓದಿ: ಡಾಲಿ ಧನಂಜಯ ನಟನೆಯ ‘ಕೋಟಿ’ ಸಿನಿಮಾ ಬಿಡುಗಡೆ ಮಾಡಲಿರುವ ‘ಕೆಆರ್​ಜಿ’

‘ಕೋಟಿ’ ಸಿನಿಮಾದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ನಟಿಸಿದ್ದಾರೆ. ಖಳನಾಯಕನಾಗಿ ರಮೇಶ್ ಇಂದಿರಾ ಅಭಿನಯಿಸಿದ್ದಾರೆ. ರಂಗಾಯಣ ರಘು, ಸರ್ದಾರ್‌ ಸತ್ಯ, ತಾರಾ, ಪೃಥ್ವಿ ಶಾಮನೂರು, ಅಭಿಷೇಕ್ ಶ್ರೀಕಾಂತ್, ತನುಜಾ ವೆಂಕಟೇಶ್, ವಿಜಯ್ ಶೋಭರಾಜ್ ಪವೂರ್ ಮುಂತಾದ ಕಲಾವಿದರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಈ ಸಿನಿಮಾದ 5 ಹಾಡುಗಳಿಗೆ ವಾಸುಕಿ ವೈಭವ್‌ ಸಂಗೀತ ನೀಡಿದ್ದಾರೆ. ಯೋಗರಾಜ್‌ ಭಟ್‌, ವಾಸುಕಿ ವೈಭವ್‌ ಸಾಹಿತ್ಯ ಬರೆದಿದ್ದಾರೆ. ‘777 ಚಾರ್ಲಿ’ ಖ್ಯಾತಿಯ ನೊಬಿನ್‌ ಪೌಲ್‌ ಅವರು ಹಿನ್ನೆಲೆ ಸಂಗೀತ ನೀಡಿದ್ದಾರೆ. ಪ್ರತೀಕ್‌ ಶೆಟ್ಟಿ ಅವರ ಸಂಕಲನ, ಅರುಣ್ ಅವರ ಛಾಯಾಗ್ರಹಣ ಈ ಸಿನಿಮಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ