AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ‘ದವನ ಫೆಸ್ಟ್’ ವೇದಿಕೆಯಲ್ಲಿ ‘ಕೋಟಿ’ ಬಗ್ಗೆ ಮಾತಾಡಿದ ಡಾಲಿ ಧನಂಜಯ

ಖ್ಯಾತ ನಟ ಡಾಲಿ ಧನಂಜಯ್ ನಟಿಸಿದ ಬಹುನಿರೀಕ್ಷಿತ ‘ಕೋಟಿ’ ಸಿನಿಮಾ ಜೂನ್ 14ರಂದು ಬಿಡುಗಡೆ ಆಗಲು ಸಿದ್ಧವಾಗಿದೆ.‌ ಈಗಾಗಲೇ ಈ ಸಿನಿಮಾದ ಹಾಡುಗಳು ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿವೆ. ಬುಧವಾರ (ಜೂನ್​ 5) ‘ಕೋಟಿ’ ಟ್ರೇಲರ್ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರದ ಸಲುವಾಗಿ ಡಾಲಿ ಧನಂಜಯ ಅವರು ಇತ್ತೀಚೆಗೆ ದಾವಣಗೆರೆಗೆ ತೆರಳಿದ್ದರು.

ದಾವಣಗೆರೆ ‘ದವನ ಫೆಸ್ಟ್’ ವೇದಿಕೆಯಲ್ಲಿ ‘ಕೋಟಿ’ ಬಗ್ಗೆ ಮಾತಾಡಿದ ಡಾಲಿ ಧನಂಜಯ
ಡಾಲಿ ಧನಂಜಯ
Follow us
ಮದನ್​ ಕುಮಾರ್​
|

Updated on: Jun 02, 2024 | 6:04 PM

ದಾವಣಗೆರೆಯ (Davanagere) ಬಾಪೂಜಿ ಇಂಜಿನಿಯರಿಂಗ್ ಕಾಲೇಜಿನ ‘ದವನ ಫೆಸ್ಟ್’ ಅತಿದೊಡ್ಡ ಕಾಲೇಜ್ ಫೆಸ್ಟಿವಲ್‌ಗಳಲ್ಲೊಂದು. ಇಲ್ಲಿಗೆ ಡಾಲಿ ಧನಂಜಯ (Daali Dhananjay) ಅವರು ಮುಖ್ಯ ಅತಿಥಿಯಾಗಿ ಬಂದಿದ್ದು ವಿದ್ಯಾರ್ಥಿಗಳಿಗೆ, ಅಭಿಮಾನಿಗಳಿಗೆ ಖುಷಿ ನೀಡಿತು. ಸುಮಾರು 5 ಸಾವಿರಕ್ಕೂ ಹೆಚ್ಚು ವಿಧ್ಯಾರ್ಥಿಗಳು ಸೇರಿದ್ದ ಈ ಸಮಾರಂಭದಲ್ಲಿ ಡಾಲಿ ಧನಂಜಯ್​ ಅವರ ಜೊತೆ ‘ಕೋಟಿ’ (Kotee Movie) ಸಿನಿಮಾದ ನಾಯಕಿ ಮೋಕ್ಷಾ ಕುಶಾಲ್ ಹಾಗೂ ಸಹ ಕಲಾವಿದರಾದ ಪೃಥ್ವಿ ಶಾಮನೂರು, ಅಭಿಷೇಕ್ ಶ್ರೀಕಾಂತ್, ತನುಜಾ ವೆಂಕಟೇಶ್ ಕೂಡ ಭಾಗವಹಿಸಿದ್ದರು.

‘ದವನ’ ವೇದಿಕೆ ಮೇಲೆ ಡಾಲಿ ಧನಂಜಯ ಬರುತ್ತಿದ್ದಂತೆಯೇ ಅಭಿಮಾನಿಗಳ ಕೇಕೆ, ಕೂಗಾಟ ಮುಗಿಲು ಮುಟ್ಟಿತ್ತು. ಈ ವೇದಿಕೆಯಲ್ಲಿ ‘ಕೋಟಿ’ ಬಗ್ಗೆ ಡಾಲಿ ಮಾತನಾಡಿದರು. ‘ಕೋಟಿ ಒಬ್ಬ ಸಾಮಾನ್ಯ ಡ್ರೈವರ್‌. ಯಾರಿಗೂ ಮೋಸ ಮಾಡದೇ, ನೋವು ಕೊಡದೇ 1 ಕೋಟಿ ರೂಪಾಯಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ ಆತನದ್ದು. ಇಲ್ಲಿ ಯಾರಿಗೆಲ್ಲ ಕೋಟಿ ದುಡಿಯುವ ಆಸೆ ಇದೆ’ ಎಂದು ನೆರೆದಿದ್ದ ವಿದ್ಯಾರ್ಥಿಗಳಿಗೆ ಧನಂಜಯ ಕೇಳಿದರು. ಎಲ್ಲರ ಉತ್ತರ ಕೇಳಿದ ಬಳಿಕ, ‘ಕೋಟಿ ನಿಮ್ಮೆಲ್ಲರಿಗೂ ಕನೆಕ್ಟ್ ಆಗುವ ಸಿನಿಮಾ’ ಎಂದು ಅವರು ಹೇಳಿದರು.

ಈ ಕಾರ್ಯಕ್ರಮದಲ್ಲಿ ಪ್ರದರ್ಶಿಸಿದ ‘ಕೋಟಿ’ ಟೀಸರ್ ಮತ್ತು ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತು. ಧನಂಜಯ ಅವರು ಕಾರ್ಯಕ್ರಮದಿಂದ ವಾಪಸ್​ ಹೋಗುವ ತನಕ ಇಡೀ ಕಾಲೇಜಿನ‌ ಮೂಲೆಮೂಲೆಯಲ್ಲಿ ‘ಡಾಲಿ ಡಾಲಿ..’ ಎಂಬ ಅಭಿಮಾನಿಗಳ‌ ಪ್ರೀತಿಯ ಜೈಕಾರ ಮೊಳಗುತ್ತಿತ್ತು. ಈ ಸಿನಿಮಾವನ್ನು ‘ಜಿಯೋ ಸ್ಟುಡಿಯೋಸ್’ ನಿರ್ಮಾಣ ಮಾಡಿದೆ. ಪರಮ್‌ ಅವರು ನಿರ್ದೇಶನ ಮಾಡಿದ್ದಾರೆ. ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ‘ಕೋಟಿ’ ತೆರೆಕಾಣಲಿದೆ.

ಇದನ್ನೂ ಓದಿ: ಡಾಲಿ ಧನಂಜಯ ನಟನೆಯ ‘ಕೋಟಿ’ ಸಿನಿಮಾ ಬಿಡುಗಡೆ ಮಾಡಲಿರುವ ‘ಕೆಆರ್​ಜಿ’

‘ಕೋಟಿ’ ಸಿನಿಮಾದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ನಟಿಸಿದ್ದಾರೆ. ಖಳನಾಯಕನಾಗಿ ರಮೇಶ್ ಇಂದಿರಾ ಅಭಿನಯಿಸಿದ್ದಾರೆ. ರಂಗಾಯಣ ರಘು, ಸರ್ದಾರ್‌ ಸತ್ಯ, ತಾರಾ, ಪೃಥ್ವಿ ಶಾಮನೂರು, ಅಭಿಷೇಕ್ ಶ್ರೀಕಾಂತ್, ತನುಜಾ ವೆಂಕಟೇಶ್, ವಿಜಯ್ ಶೋಭರಾಜ್ ಪವೂರ್ ಮುಂತಾದ ಕಲಾವಿದರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಈ ಸಿನಿಮಾದ 5 ಹಾಡುಗಳಿಗೆ ವಾಸುಕಿ ವೈಭವ್‌ ಸಂಗೀತ ನೀಡಿದ್ದಾರೆ. ಯೋಗರಾಜ್‌ ಭಟ್‌, ವಾಸುಕಿ ವೈಭವ್‌ ಸಾಹಿತ್ಯ ಬರೆದಿದ್ದಾರೆ. ‘777 ಚಾರ್ಲಿ’ ಖ್ಯಾತಿಯ ನೊಬಿನ್‌ ಪೌಲ್‌ ಅವರು ಹಿನ್ನೆಲೆ ಸಂಗೀತ ನೀಡಿದ್ದಾರೆ. ಪ್ರತೀಕ್‌ ಶೆಟ್ಟಿ ಅವರ ಸಂಕಲನ, ಅರುಣ್ ಅವರ ಛಾಯಾಗ್ರಹಣ ಈ ಸಿನಿಮಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ