AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hoysala Trailer: ಹೊಯ್ಸಳ ಟ್ರೈಲರ್ ಬಿಡುಗಡೆ, ವಿಲನ್ ಆವೇಷದ ಹೀರೋ ಕತೆ

ಡಾಲಿ ಧನಂಜಯ್ ನಟನೆಯ 25ನೇ ಸಿನಿಮಾ ಹೊಯ್ಸಳ ಟ್ರೈಲರ್ ಬಿಡುಗಡೆ ಆಗಿದೆ. ಸಿನಿಮಾದಲ್ಲಿ ಖಡಕ್ ಪೊಲೀಸ್ ಪಾತ್ರದಲ್ಲಿ ಡಾಲಿ ಕಾಣಿಸಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Mar 20, 2023 | 9:30 PM

Share

ಡಾಲಿ ಧನಂಜಯ್ ನಟನೆಯ 25ನೇ ಸಿನಿಮಾ ಹೊಯ್ಸಳ ಟ್ರೈಲರ್ ಇಂದು ಬಿಡುಗಡೆ ಆಗಿದೆ. ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟ ಸುದೀಪ್ ಹಾಗೂ ಇತರೆ ಗಣ್ಯರು ಟ್ರೈಲರ್ ಬಿಡುಗಡೆ ಮಾಡಿದ್ದು, ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್​ನಲ್ಲಿ ಟ್ರೈಲರ್ ವೀಕ್ಷಣೆಗೆ ಲಭ್ಯವಿದೆ. ಈ ಮೊದಲೇ ಬಿಡುಗಡೆ ಆಗಿದ್ದ ಪೋಸ್ಟರ್, ಟೀಸರ್​ಗಳಿಂದ ಇದೊಂದು ಪೊಲೀಸ್ ಅಧಿಕಾರಿಯ ಕತೆ ಎಂಬುದು ಪ್ರೇಕ್ಷಕರಿಗೆ ತಿಳಿದಿತ್ತು, ಆದರೆ ವಿಲನ್ ರೀತಿಯ ಆವೇಷವುಳ್ಳ ಹೀರೋ ಕತೆ ಎಂಬುದು ಟ್ರೈಲರ್​ನಿಂದ ಗೊತ್ತಾಗುತ್ತಿದೆ.

2:22 ನಿಮಿಷದ ಟ್ರೈಲರ್ ಇದಾಗಿದ್ದು, ಟ್ರೈಲರ್​ನಲ್ಲಿ ಡಾಲಿ ಧನಂಜಯ್ ಅಬ್ಬರಿಸಿದ್ದಾರೆ. ಅವರಿಗಿಂತಲೂ ಅವರ ಬಂದೂಕು ಹೆಚ್ಚು ಮಾತನಾಡಿದೆ. ಟ್ರೈಲರ್​ನಲ್ಲಿ ಡಾಲಿ ಹೇಳುವ ಖಡಕ್ ಸಂಭಾಷಣೆಗಳು ಅವರ ಅವರ ಪಾತ್ರ ಎಷ್ಟು ರಗಡ್ ಆಗಿರಬಹುದೆಂಬ ಅಂದಾಜು ನೀಡುತ್ತಿದೆ. ಡಾಲಿಗೆ ಎದುರಾಗಿ ಅಷ್ಟೆ ಒರಾಟದ ಆದರೆ ಮೃಗೀಯ ವಿಲನ್ ಸಹ ಇದ್ದಾನೆ. ಇವರಿಬ್ಬರ ಸೆಣೆಸಾಟ ಹೇಗಿರಬಹುದೆಂಬ ಕುತೂಹಲ ಹುಟ್ಟಿಸುವಂತಿದೆ ಟ್ರೈಲರ್.

ಇದೊಂದು ಸಾಮಾನ್ಯ ಪೊಲೀಸ್-ವಿಲನ್ ಕತೆ ಮಾತ್ರವೇ ಅಲ್ಲದೆ, ಭಾಷೆ-ನೆಲದ ವಿಷಯವನ್ನೂ ಸಿನಿಮಾ ಒಳಗೊಂಡಿರುವ ಬಗ್ಗೆಯೂ ಟ್ರೈಲರ್​ ಸುಳಿವು ಬಿಟ್ಟುಕೊಡುತ್ತದೆ. ಟೀಸರ್​ನಲ್ಲಿದ್ದ ಕನ್ನಡ ಧ್ವಜ, ಸಂಗೊಳ್ಳಿ ರಾಯಣ್ಣ ಪ್ರತಿಮೆಗಳು ಟ್ರೈಲರ್​ನಲ್ಲಿಯೂ ಇವೆ. ಟ್ರೈಲರ್​ನಲ್ಲಿ ನಾಯಕ ಹಾಗೂ ವಿಲನ್​ಗಳ ಹೊರತಾಗಿ ಬೇರೆ ಪಾತ್ರಗಳಿಗೆ ಪ್ರಾಮುಖ್ಯತೆ ಕಡಿಮೆ. ಅದರಲ್ಲಿಯೂ ನಾಯಕಿ ಅಮೃತಾ ಅಯ್ಯಂಗಾರ್ ಕಂಡ ಕೂಡಲೇ ಮರೆಯಾಗಿಬಿಡುತ್ತಾರೆ.

ಮುಖ್ಯ ವಿಲನ್​ನ ಮೃಗೀಯತೆ ಪ್ರದರ್ಶಿಸುವ ಒಂದೆರಡು ಸೀನ್ ಇದೆ ಅದರಲ್ಲಿಯೂ ವಿಲನ್​ ಮುಖ ಕಾಣುವುದಿಲ್ಲ, ಆದರೆ ಖಡಕ್​ ಆದ ಒರಟು ವ್ಯಕ್ತಿತ್ವದ ನಾಯಕನಿಗೆ ಪಕ್ಕಾ ಠಕ್ಕರ್ ಕೊಡುವ ವಿಲನ್ ಪಾತ್ರವನ್ನೇ ಸೃಷ್ಟಿಸಿದ್ದಾರೆ ನಿರ್ದೇಶಕ ವಿಜಯ್ ಎನ್. ಅಂದಹಾಗೆ ಸಿನಿಮಾದಲ್ಲಿ ವಿಲನ್ ಪಾತ್ರವನ್ನು ನಟ ನವೀನ್ ಶಂಕರ್ ನಿರ್ವಹಿಸಿದ್ದಾರೆ. ಇದೇ ಮೊದಲ ಬಾರಿಗೆ ಅವರು ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಪಾತ್ರಕ್ಕಾಗಿ ಸಖತ್ ಆಗಿಯೇ ದೇಹವನ್ನು ದಂಡಿಸಿದ್ದಾರೆ.

ಹೊಯ್ಸಳ ಸಿನಿಮಾವು ಡಾಲಿ ಧನಂಜಯ್ ಅವರ 25ನೇ ಸಿನಿಮಾ ಆಗಿದ್ದು, ಸಿನಿಮಾವನ್ನು ಅವರ ಗೆಳೆಯ ವಿಜಯ್ ನಿರ್ದೇಶನ ಮಾಡಿದ್ದಾರೆ. ಸಿನಿಮಾ ನಿರ್ಮಾಣ ಮಾಡಿರುವುದು ಕಾರ್ತಿಕ್ ಗೌಡ ಹಾಗೂ ಯೋಗಿ. ಕೆಆರ್​ಜಿ ಸ್ಟುಡಿಯೋಸ್ ಮೂಲಕ ಸಿನಿಮಾ ನಿರ್ಮಾಣಗೊಂಡಿದ್ದು, ಇದು ಹೊಂಬಾಳೆಯ ಸಹೋದರ ಸಂಸ್ಥೆಯೇ ಆಗಿದೆ. ಸಿನಿಮಾಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಸಂಭಾಷಣೆ ಬರೆದಿರುವುದು ಮಾಸ್ತಿ. ಸಿನಿಮಾವು ಇದೇ ತಿಂಗಳು ಮುವತ್ತರಂದು ತೆರೆಗೆ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More