AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hoysala Trailer: ಮಾ.20ಕ್ಕೆ ರಿಲೀಸ್​ ಆಗಲಿದೆ ‘ಹೊಯ್ಸಳ’ ಟ್ರೇಲರ್​; ನಿರೀಕ್ಷೆ ಹೆಚ್ಚಿಸಿದ ಡಾಲಿ ಧನಂಜಯ್​ ಸಿನಿಮಾ

Daali Dhananjay | Hoysala Movie: ‘ಆನಂದ್ ಆಡಿಯೋ’ ಯೂಟ್ಯೂಬ್​ ಮೂಲಕ ‘ಹೊಯ್ಸಳ’ ಟ್ರೇಲರ್​ ರಿಲೀಸ್​ ಆಗಲಿದೆ. ಡಾಲಿ ನಿರ್ವಹಿಸಿರುವ ಗುರುದೇವ್​ ಹೊಯ್ಸಳ ಎಂಬ ಪಾತ್ರದ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

Hoysala Trailer: ಮಾ.20ಕ್ಕೆ ರಿಲೀಸ್​ ಆಗಲಿದೆ ‘ಹೊಯ್ಸಳ’ ಟ್ರೇಲರ್​; ನಿರೀಕ್ಷೆ ಹೆಚ್ಚಿಸಿದ ಡಾಲಿ ಧನಂಜಯ್​ ಸಿನಿಮಾ
ಡಾಲಿ ಧನಂಜಯ್
ಮದನ್​ ಕುಮಾರ್​
|

Updated on: Mar 15, 2023 | 3:05 PM

Share

ಯಾವ ಪಾತ್ರ ಕೊಟ್ಟರೂ ಸೈ ಎನ್ನುವಂತಹ ನಟ ಡಾಲಿ ಧನಂಜಯ್​ (Daali Dhananjay) ಅವರು ಪ್ರತಿ ಸಿನಿಮಾದಲ್ಲೂ ಹೊಸ ಹೊಸ ಗೆಟಪ್​ ಪ್ರಯತ್ನಿಸುತ್ತಾರೆ. ಈಗ ಅವರು ಅಭಿನಯಿಸಿರುವ 25ನೇ ಸಿನಿಮಾ ‘ಹೊಯ್ಸಳ’ (Hoysala Movie) ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿ ಆಗಿದೆ. ಧನಂಜಯ್​ ಅವರು ಚಂದನವನಕ್ಕೆ ಕಾಲಿಟ್ಟಿದ್ದು 2013ರಲ್ಲಿ. ನೋಡ ನೋಡುತ್ತಿದ್ದಂತೆಯೇ ಅವರು 25ನೇ ಸಿನಿಮಾದ ಮೈಲಿಗಲ್ಲು ತಲುಪಿದ್ದಾರೆ. ಅವರ ಪ್ರತಿ ಸಿನಿಮಾ ಮೇಲೆ ಪ್ರೇಕ್ಷಕರಿಗೆ ಸಖತ್​ ನಿರೀಕ್ಷೆ ಇರುತ್ತದೆ. ಅದರಲ್ಲೂ ‘ಹೊಯ್ಸಳ’ ಸಿನಿಮಾ ಹೆಚ್ಚು ಕೌತುಕ ಮೂಡಿಸಿದೆ. ಅದಕ್ಕೆ ಕಾರಣ ಪೊಲೀಸ್​ ಗೆಟಪ್​. ಈ ಸಿನಿಮಾದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಮಾರ್ಚ್​ 20ರ ಸಂಜೆ 7.29ಕ್ಕೆ ‘ಹೊಯ್ಸಳ’ ಟ್ರೇಲರ್​ ರಿಲೀಸ್ (Hoysala Movie Trailer)​ ಆಗಲಿದೆ.

ಈ ಸಿನಿಮಾದಲ್ಲಿ ಡಾಲಿ ಧನಂಜಯ್​ ಅವರು ಗುರುದೇವ್​ ಹೊಯ್ಸಳ ಎಂಬ ಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್ ಮತ್ತು ಹಾಡು ನೋಡಿ ಫ್ಯಾನ್ಸ್​ ಫಿದಾ ಆಗಿದ್ದಾರೆ. ಪೋಸ್ಟರ್​ಗಳಲ್ಲಿ ಡಾಲಿ ಧನಂಜಯ್​ ಅವರ ಗೆಟಪ್​ ಗಮನ ಸೆಳೆದಿದೆ. ಸಿನಿಮಾ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಸಮಯದಲ್ಲಿ ಟ್ರೇಲರ್​ ಮೂಲಕ ಕೌತುಕ ಹೆಚ್ಚಿಸಲು ‘ಹೊಯ್ಸಳ’ ತಂಡ ಸಜ್ಜಾಗಿದೆ.

ಇದನ್ನೂ ಓದಿ
Image
ಜನ್ಮದಿನದಂದು ‘ಡಾಲಿ’ ಧನಂಜಯ್ ಹೊಸ ಘೋಷಣೆ; ಹೊಸ ಪ್ರತಿಭೆಗಳಿಗೆ ಸಿಗಲಿದೆ ಅವಕಾಶ
Image
Rachita Ram: ಡಾಲಿ ಧನಂಜಯ್​ ಅಣ್ಣನ ಮಗಳಿಗೆ ರಚಿತಾ ಹೆಸರು; ಆ ಘಟನೆ ನೆನೆದ ‘ಡಿಂಪಲ್​ ಕ್ವೀನ್​’
Image
ಡಾಲಿ ಧನಂಜಯ್​-ಅಮೃತಾ ಅಯ್ಯಂಗಾರ್​ ನಡುವೆ ಏನು ನಡೆಯುತ್ತಿದೆ? ನೇರ ಉತ್ತರ ನೀಡಿದ ನಟಿ
Image
ಡಾಲಿ ಧನಂಜಯ್​ ಹೆಸರಲ್ಲಿ ವಂಚನೆ; ಅಪರಿಚಿತರ ಪೋಸ್ಟ್​ ನಂಬಿ ಮೋಸ ಹೋಗ್ಬೇಡಿ ಎಂದ ನಟ

ಇದನ್ನೂ ಓದಿ: 19.20.21: ‘ನಾನು ಈ ವರ್ಷ ನೋಡಿದ ಬೆಸ್ಟ್​ ಸಿನಿಮಾ 19.20.21’: ಮನಸಾರೆ ಹೊಗಳಿದ ಡಾಲಿ ಧನಂಜಯ್​

‘ಹೊಯ್ಸಳ’ ಟ್ರೇಲರ್​ ಯಾವಾಗ ಬರಲಿದೆ ಎಂದು ಫ್ಯಾನ್ಸ್​ ಕಾಯುತ್ತಿದ್ದರು. ಆ ಕಾಯುವಿಕೆಗೆ ಮಾರ್ಚ್ 20ರ ಸಂಜೆ 7.29ಕ್ಕೆ ಫಲ ಸಿಗಲಿದೆ. ಆನಂದ್ ಆಡಿಯೋ ಯೂಟ್ಯೂಬ್​ ಮೂಲಕ ಟ್ರೇಲರ್​ ರಿಲೀಸ್​ ಆಗಲಿದೆ. ಡಾಲಿ ನಿರ್ವಹಿಸಿರುವ ಗುರುದೇವ್​ ಹೊಯ್ಸಳ ಎಂಬ ಪಾತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ಅನುಮಾನಗಳಿವೆ. ಈ ಚಿತ್ರದಲ್ಲಿ ಡಾಲಿ ಪಾತ್ರಕ್ಕೆ ನೆಗೆಟಿವ್​ ಶೇಡ್​ ಇದೆಯಾ? ಗುರುದೇವ್​ ಹೊಯ್ಸಳ ಒಳ್ಳೆಯ ಅಧಿಕಾರಿಯಾ ಅಥವಾ ಕೆಟ್ಟವನಾ? ಈ ಎಲ್ಲ ಪ್ರಶ್ನೆಗಳಿಗೆ ಸಿನಿಮಾದಲ್ಲಿ ಉತ್ತರ ಸಿಗಲಿದೆ.

ಇದನ್ನೂ ಓದಿ: Daali Dhananjay: ‘ಸಿದ್ದೇಶ್ವರ ಶ್ರೀಗಳ ಪ್ರವಚನಕ್ಕೆ ಸಾವಿರಾರು ಜನ ಯಾಕೆ ಸೇರುತ್ತಿದ್ದರು?’: ಕಾರಣ ತಿಳಿಸಿದ ನಟ ಧನಂಜಯ್

‘ಹೊಯ್ಸಳ’ ಸಿನಿಮಾದಲ್ಲಿ ಡಾಲಿ ಧನಂಜಯ್​ ಅವರಿಗೆ ಜೋಡಿಯಾಗಿ ಅಮೃತಾ ಅಯ್ಯಂಗಾರ್ ನಟಿಸಿದ್ದಾರೆ. ಇವರಿಬ್ಬರನ್ನು ತೆರೆಮೇಲೆ ಒಟ್ಟಿಗೆ ನೋಡಲು ಫ್ಯಾನ್ಸ್​ ಕಾದಿದ್ದಾರೆ. ಅಚ್ಯುತ್ ಕುಮಾರ್, ನವೀನ್ ಶಂಕರ್, ಅವಿನಾಶ್, ಪ್ರತಾಪ್ ನಾರಾಯಣ್, ರಾಜೇಶ್ ನಟರಂಗ, ನಾಗಭೂಷಣ್ ಸೇರಿದಂತೆ ಅನೇಕ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಮಾರ್ಚ್​ 30ರಂದು ‘ಹೊಯ್ಸಳ’ ಸಿನಿಮಾ ರಿಲೀಸ್​ ಆಗಲಿದೆ. ಕೆ.ಆರ್.ಜಿ. ಸ್ಟುಡಿಯೋಸ್ ಸಂಸ್ಥೆ ಮೂಲಕ ಯೋಗಿ ಜಿ. ರಾಜ್ ಹಾಗೂ ಕಾರ್ತಿಕ್ ಗೌಡ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಪಕ್ಕಾ ಕಮರ್ಷಿಯಲ್​ ಶೈಲಿಯಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ ಒಂದು ಸಾಮಾಜಿಕ ಸಂದೇಶ ಇರಲಿದೆ. ಅದೇನು ಎಂಬುದು ತಿಳಿದುಕೊಳ್ಳಲು ಮಾರ್ಚ್​ 30ರ ತನಕ ಕಾಯಬೇಕು. ಈ ಸಿನಿಮಾಗೆ ವಿಜಯ್​ ಎನ್​. ಅವರು ನಿರ್ದೇಶನ ಮಾಡಿದ್ದಾರೆ. ಅಜನೀಶ್ ಲೋಕನಾಥ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಕಾಫಿನಾಡಿನಲ್ಲಿ ವರುಣನ ಅಬ್ಬರ
ಕಾಫಿನಾಡಿನಲ್ಲಿ ವರುಣನ ಅಬ್ಬರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!