AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hoysala Trailer: ಮಾ.20ಕ್ಕೆ ರಿಲೀಸ್​ ಆಗಲಿದೆ ‘ಹೊಯ್ಸಳ’ ಟ್ರೇಲರ್​; ನಿರೀಕ್ಷೆ ಹೆಚ್ಚಿಸಿದ ಡಾಲಿ ಧನಂಜಯ್​ ಸಿನಿಮಾ

Daali Dhananjay | Hoysala Movie: ‘ಆನಂದ್ ಆಡಿಯೋ’ ಯೂಟ್ಯೂಬ್​ ಮೂಲಕ ‘ಹೊಯ್ಸಳ’ ಟ್ರೇಲರ್​ ರಿಲೀಸ್​ ಆಗಲಿದೆ. ಡಾಲಿ ನಿರ್ವಹಿಸಿರುವ ಗುರುದೇವ್​ ಹೊಯ್ಸಳ ಎಂಬ ಪಾತ್ರದ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

Hoysala Trailer: ಮಾ.20ಕ್ಕೆ ರಿಲೀಸ್​ ಆಗಲಿದೆ ‘ಹೊಯ್ಸಳ’ ಟ್ರೇಲರ್​; ನಿರೀಕ್ಷೆ ಹೆಚ್ಚಿಸಿದ ಡಾಲಿ ಧನಂಜಯ್​ ಸಿನಿಮಾ
ಡಾಲಿ ಧನಂಜಯ್
ಮದನ್​ ಕುಮಾರ್​
|

Updated on: Mar 15, 2023 | 3:05 PM

Share

ಯಾವ ಪಾತ್ರ ಕೊಟ್ಟರೂ ಸೈ ಎನ್ನುವಂತಹ ನಟ ಡಾಲಿ ಧನಂಜಯ್​ (Daali Dhananjay) ಅವರು ಪ್ರತಿ ಸಿನಿಮಾದಲ್ಲೂ ಹೊಸ ಹೊಸ ಗೆಟಪ್​ ಪ್ರಯತ್ನಿಸುತ್ತಾರೆ. ಈಗ ಅವರು ಅಭಿನಯಿಸಿರುವ 25ನೇ ಸಿನಿಮಾ ‘ಹೊಯ್ಸಳ’ (Hoysala Movie) ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿ ಆಗಿದೆ. ಧನಂಜಯ್​ ಅವರು ಚಂದನವನಕ್ಕೆ ಕಾಲಿಟ್ಟಿದ್ದು 2013ರಲ್ಲಿ. ನೋಡ ನೋಡುತ್ತಿದ್ದಂತೆಯೇ ಅವರು 25ನೇ ಸಿನಿಮಾದ ಮೈಲಿಗಲ್ಲು ತಲುಪಿದ್ದಾರೆ. ಅವರ ಪ್ರತಿ ಸಿನಿಮಾ ಮೇಲೆ ಪ್ರೇಕ್ಷಕರಿಗೆ ಸಖತ್​ ನಿರೀಕ್ಷೆ ಇರುತ್ತದೆ. ಅದರಲ್ಲೂ ‘ಹೊಯ್ಸಳ’ ಸಿನಿಮಾ ಹೆಚ್ಚು ಕೌತುಕ ಮೂಡಿಸಿದೆ. ಅದಕ್ಕೆ ಕಾರಣ ಪೊಲೀಸ್​ ಗೆಟಪ್​. ಈ ಸಿನಿಮಾದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಮಾರ್ಚ್​ 20ರ ಸಂಜೆ 7.29ಕ್ಕೆ ‘ಹೊಯ್ಸಳ’ ಟ್ರೇಲರ್​ ರಿಲೀಸ್ (Hoysala Movie Trailer)​ ಆಗಲಿದೆ.

ಈ ಸಿನಿಮಾದಲ್ಲಿ ಡಾಲಿ ಧನಂಜಯ್​ ಅವರು ಗುರುದೇವ್​ ಹೊಯ್ಸಳ ಎಂಬ ಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್ ಮತ್ತು ಹಾಡು ನೋಡಿ ಫ್ಯಾನ್ಸ್​ ಫಿದಾ ಆಗಿದ್ದಾರೆ. ಪೋಸ್ಟರ್​ಗಳಲ್ಲಿ ಡಾಲಿ ಧನಂಜಯ್​ ಅವರ ಗೆಟಪ್​ ಗಮನ ಸೆಳೆದಿದೆ. ಸಿನಿಮಾ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಸಮಯದಲ್ಲಿ ಟ್ರೇಲರ್​ ಮೂಲಕ ಕೌತುಕ ಹೆಚ್ಚಿಸಲು ‘ಹೊಯ್ಸಳ’ ತಂಡ ಸಜ್ಜಾಗಿದೆ.

ಇದನ್ನೂ ಓದಿ
Image
ಜನ್ಮದಿನದಂದು ‘ಡಾಲಿ’ ಧನಂಜಯ್ ಹೊಸ ಘೋಷಣೆ; ಹೊಸ ಪ್ರತಿಭೆಗಳಿಗೆ ಸಿಗಲಿದೆ ಅವಕಾಶ
Image
Rachita Ram: ಡಾಲಿ ಧನಂಜಯ್​ ಅಣ್ಣನ ಮಗಳಿಗೆ ರಚಿತಾ ಹೆಸರು; ಆ ಘಟನೆ ನೆನೆದ ‘ಡಿಂಪಲ್​ ಕ್ವೀನ್​’
Image
ಡಾಲಿ ಧನಂಜಯ್​-ಅಮೃತಾ ಅಯ್ಯಂಗಾರ್​ ನಡುವೆ ಏನು ನಡೆಯುತ್ತಿದೆ? ನೇರ ಉತ್ತರ ನೀಡಿದ ನಟಿ
Image
ಅಪರಿಚಿತರ ಪೋಸ್ಟ್​ ನಂಬಿ ಮೋಸ ಹೋಗ್ಬೇಡಿ ಎಂದ ನಟ

ಇದನ್ನೂ ಓದಿ: 19.20.21: ‘ನಾನು ಈ ವರ್ಷ ನೋಡಿದ ಬೆಸ್ಟ್​ ಸಿನಿಮಾ 19.20.21’: ಮನಸಾರೆ ಹೊಗಳಿದ ಡಾಲಿ ಧನಂಜಯ್​

‘ಹೊಯ್ಸಳ’ ಟ್ರೇಲರ್​ ಯಾವಾಗ ಬರಲಿದೆ ಎಂದು ಫ್ಯಾನ್ಸ್​ ಕಾಯುತ್ತಿದ್ದರು. ಆ ಕಾಯುವಿಕೆಗೆ ಮಾರ್ಚ್ 20ರ ಸಂಜೆ 7.29ಕ್ಕೆ ಫಲ ಸಿಗಲಿದೆ. ಆನಂದ್ ಆಡಿಯೋ ಯೂಟ್ಯೂಬ್​ ಮೂಲಕ ಟ್ರೇಲರ್​ ರಿಲೀಸ್​ ಆಗಲಿದೆ. ಡಾಲಿ ನಿರ್ವಹಿಸಿರುವ ಗುರುದೇವ್​ ಹೊಯ್ಸಳ ಎಂಬ ಪಾತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ಅನುಮಾನಗಳಿವೆ. ಈ ಚಿತ್ರದಲ್ಲಿ ಡಾಲಿ ಪಾತ್ರಕ್ಕೆ ನೆಗೆಟಿವ್​ ಶೇಡ್​ ಇದೆಯಾ? ಗುರುದೇವ್​ ಹೊಯ್ಸಳ ಒಳ್ಳೆಯ ಅಧಿಕಾರಿಯಾ ಅಥವಾ ಕೆಟ್ಟವನಾ? ಈ ಎಲ್ಲ ಪ್ರಶ್ನೆಗಳಿಗೆ ಸಿನಿಮಾದಲ್ಲಿ ಉತ್ತರ ಸಿಗಲಿದೆ.

ಇದನ್ನೂ ಓದಿ: Daali Dhananjay: ‘ಸಿದ್ದೇಶ್ವರ ಶ್ರೀಗಳ ಪ್ರವಚನಕ್ಕೆ ಸಾವಿರಾರು ಜನ ಯಾಕೆ ಸೇರುತ್ತಿದ್ದರು?’: ಕಾರಣ ತಿಳಿಸಿದ ನಟ ಧನಂಜಯ್

‘ಹೊಯ್ಸಳ’ ಸಿನಿಮಾದಲ್ಲಿ ಡಾಲಿ ಧನಂಜಯ್​ ಅವರಿಗೆ ಜೋಡಿಯಾಗಿ ಅಮೃತಾ ಅಯ್ಯಂಗಾರ್ ನಟಿಸಿದ್ದಾರೆ. ಇವರಿಬ್ಬರನ್ನು ತೆರೆಮೇಲೆ ಒಟ್ಟಿಗೆ ನೋಡಲು ಫ್ಯಾನ್ಸ್​ ಕಾದಿದ್ದಾರೆ. ಅಚ್ಯುತ್ ಕುಮಾರ್, ನವೀನ್ ಶಂಕರ್, ಅವಿನಾಶ್, ಪ್ರತಾಪ್ ನಾರಾಯಣ್, ರಾಜೇಶ್ ನಟರಂಗ, ನಾಗಭೂಷಣ್ ಸೇರಿದಂತೆ ಅನೇಕ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಮಾರ್ಚ್​ 30ರಂದು ‘ಹೊಯ್ಸಳ’ ಸಿನಿಮಾ ರಿಲೀಸ್​ ಆಗಲಿದೆ. ಕೆ.ಆರ್.ಜಿ. ಸ್ಟುಡಿಯೋಸ್ ಸಂಸ್ಥೆ ಮೂಲಕ ಯೋಗಿ ಜಿ. ರಾಜ್ ಹಾಗೂ ಕಾರ್ತಿಕ್ ಗೌಡ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಪಕ್ಕಾ ಕಮರ್ಷಿಯಲ್​ ಶೈಲಿಯಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ ಒಂದು ಸಾಮಾಜಿಕ ಸಂದೇಶ ಇರಲಿದೆ. ಅದೇನು ಎಂಬುದು ತಿಳಿದುಕೊಳ್ಳಲು ಮಾರ್ಚ್​ 30ರ ತನಕ ಕಾಯಬೇಕು. ಈ ಸಿನಿಮಾಗೆ ವಿಜಯ್​ ಎನ್​. ಅವರು ನಿರ್ದೇಶನ ಮಾಡಿದ್ದಾರೆ. ಅಜನೀಶ್ ಲೋಕನಾಥ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!