AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉತ್ತರಕಾಂಡ’ದಲ್ಲಿ ‘ಗಬ್ರು ಸತ್ಯ’ನಾಗಿ ಡಾಲಿ ಧನಂಜಯ್: ಹುಟ್ಟುಹಬ್ಬಕ್ಕೆ ಖಡಕ್ ಎಂಟ್ರಿ

Uttarakaanda: ಡಾಲಿ ಧನಂಜಯ್ ನಟನೆಯ 'ಉತ್ತರಕಾಂಡ' ಸಿನಿಮಾದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಆಗಿದೆ. ಗಬ್ರು ಸತ್ಯನ ಅವತಾರದಲ್ಲಿ ಸಖತ್ ಆಗಿ ಕಾಣಿಸಿಕೊಂಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ನಡೆವ ಕತೆಯನ್ನು ಹೊಂದಿರುವ ಈ ಸಿನಿಮಾ ಶೀಘ್ರದಲ್ಲಿಯೇ ತೆರೆಗೆ ಬರಲಿದೆ.

'ಉತ್ತರಕಾಂಡ'ದಲ್ಲಿ 'ಗಬ್ರು ಸತ್ಯ'ನಾಗಿ ಡಾಲಿ ಧನಂಜಯ್: ಹುಟ್ಟುಹಬ್ಬಕ್ಕೆ ಖಡಕ್ ಎಂಟ್ರಿ
ಮಂಜುನಾಥ ಸಿ.
|

Updated on: Aug 22, 2023 | 8:14 PM

Share

ಡಾಲಿ ಧನಂಜಯ್ ನಾಳೆ (ಆಗಸ್ಟ್ 23) ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಅವರ ಹುಟ್ಟುಹಬ್ಬದ ವಿಶೇಷವಾಗಿ ಇಂದು (ಆಗಸ್ಟ್ 22) ಅವರ ನಟನೆಯ ಹೊಸ ಸಿನಿಮಾ ‘ಉತ್ತರಕಾಂಡ’ದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಲಾಗಿದೆ. ಸಿನಿಮಾದಲ್ಲಿ ‘ಗಬ್ರು ಸತ್ಯ’ನ ಪಾತ್ರದಲ್ಲಿ ಸಖತ್ ಆಗಿ ಮಿಂಚಿದ್ದಾರೆ ನಟ ಡಾಲಿ ಧನಂಜಯ್. ಇದೀಗ ಬಿಡುಗಡೆ ಆಗಿರುವ ಟೀಸರ್​ನಲ್ಲಿ ಉಡಾಳ ಗ್ಯಾಂಗ್​ಸ್ಟರ್ ಪಾತ್ರದಲ್ಲಿ ಡಾಲಿ ಧನಂಜಯ್ ಕಾಣಿಸಿಕೊಂಡಿದ್ದಾರೆ.

ಟೀಸರ್​ನಲ್ಲಿ ಗಬ್ರು ಸತ್ಯನ ಲುಕ್​ನ ಪರಿಚಯದ ಜೊತೆಗೆ ವ್ಯಕ್ತಿತ್ವದ ಝಲಕ್ ಅನ್ನು ನಿರ್ದೇಶಕ ರೋಹಿತ್ ಪದಕಿ ನೀಡಿದ್ದಾರೆ. ಟೀಸರ್ ಆರಂಭದಲ್ಲಿಯೇ ಡಾಲಿ ಧನಂಜಯ್ ಅಲಿಯಾಸ್ ಗಬ್ರು ಸತ್ಯ ವಿವಸ್ತ್ರನಾಗಿ ಕೇವಲ ಒಂದು ಬಣ್ಣದ ಚಡ್ಡಿ ಹಾಕಿಕೊಂಡು ಪೊಲೀಸ್ ಠಾಣೆಯಲ್ಲಿ ಕೂತಿರುತ್ತಾನೆ, ಪೊಲೀಸ್ ಅಧಿಕಾರಿಯೊಬ್ಬರು ಗಬ್ರುಗೆ ಕೆಟ್ಟದಾಗಿ ಬೈಯ್ಯುತ್ತಾ, ವ್ಯಂಗ್ಯ ಮಾಡುತ್ತಾ ಇನ್ನೊಮ್ಮೆ ಹೆಸರು ಕಿವಿಗೆ ಬಿದ್ದರೆ ಶೂಟ್ ಮಾಡಿ ಕೊಲ್ಲುವುದಾಗಿ ಬೆದರಿಕೆ ಹಾಕುತ್ತಾರೆ. ಆದರೆ ಗಬ್ರು ಸತ್ಯ ಮಾತ್ರ ತೀರ ನಾಟಕೀಯವಾಗಿ ಅಮಾಯಕನಂತೆ ನಟಿಸುತ್ತಾ ಹೊರಗೆ ಬರುತ್ತಾನೆ.

ಆದರೆ ಹೊರಗೆ ಬೇರೆಯದ್ದೇ ಚಿತ್ರಣ ಇರುತ್ತದೆ. ಗಬ್ರು ಹುಟ್ಟುಹಬ್ಬಕ್ಕಾಗಿ ಗಾನಾ-ಬಜಾನ ಆಯೋಜಿತವಾಗಿರುತ್ತದೆ. ಗಬ್ರುನನ್ನು ಸ್ವಾಗತಿಸಲು ಯುವಕರ ಗುಂಪು ಸೇರಿರುತ್ತದೆ. ಠಾಣೆಯಿಂದ ಹೊರಗೆ ಬಂದ ಗಬ್ರು, ಸಿಹಿ ತಿಂಡಿಯ ಪ್ಯಾಕೇಟ್ ಹಿಡಿದು ಮತ್ತೆ ಠಾಣೆಯ ಒಳಗೆ ಹೋಗಿ ತನಗೆ ಬೆದರಿಕೆ ಹಾಕಿದ ಪೊಲೀಸ್​ಗೆ ಸಿಹಿ ತಿಂಡಿ ಕೊಟ್ಟು ಹೊರಬಂದು ಸ್ಟೈಲ್ ಆಗಿ ಬೈಕ್ ಏರಿ, ಪೊಲೀಸಪ್ಪನಿಂದಲೇ ಕದ್ದ ಸಿಗರೇಟು ಹೊತ್ತಿಸುತ್ತಾನಷ್ಟೆ, ಗಬ್ರು ಇಟ್ಟು ಬಂದ ಸ್ಪೋಟಕ ತುಂಬಿದ ಸಿಹಿ ತಿನಿಸಿನ ಡಬ್ಬಿ ಸಿಡಿಯುತ್ತದೆ. ‘ಕರ್ನಾಟಕದ ಮನಿ ಮಗ ಯಾರ್ರಲೇ’ ಎಂದು ಖಡಕ್ ಡೈಲಾಗ್​ ಹೊಡೆಯುತ್ತಾನೆ ಗಬ್ರು.

ಟೀಸರ್​ನಲ್ಲಿ ಪಕ್ಕಾ ಉಡಾಳ ಬುದ್ಧಿಯ ಗ್ಯಾಂಗ್​ಸ್ಟರ್ ಆಗಿ ಡಾಲಿ ಧನಂಜಯ್ ಕಾಣಿಸಿಕೊಂಡಿದ್ದಾರೆ. ಉತ್ತರ ಕರ್ನಾಟಕದಲ್ಲೇ ನಡೆಯುವ ಕತೆಯನ್ನು ಆಧರಿಸಿದ ಸಿನಿಮಾ ಆದ್ದರಿಂದ ಅಲ್ಲಿನ ಭಾಷೆಯನ್ನೇ ಬಳಸಲಾಗಿದೆ. ಸಖತ್ ಮಾಸ್ ಅವತಾರದಲ್ಲಿ ಡಾಲಿ ಕಾಣಿಸಿಕೊಂಡಿದ್ದು, ಡಾಲಿಯ ಪಾತ್ರಕ್ಕೆ ಚಿತ್ರಮಂದಿರದಲ್ಲಿ ಪಕ್ಕಾ ಶಿಳ್ಳೆ-ಚಪ್ಪಾಳೆ ಬೀಳುವುದು ಖಾಯಂ ಎನಿಸುತ್ತಿದೆ.

ಈ ಹಿಂದೆ ಡಾಲಿ ನಾಯಕನಾಗಿದ್ದ ‘ರತ್ನನ್ ಪ್ರಪಂಚ’ ಸಿನಿಮಾ ನಿರ್ದೇಶಿಸಿದ್ದ ರೋಹಿತ್ ಪದಕಿ ‘ಉತ್ತರ ಕಾಂಡ’ ಸಿನಿಮಾವನ್ನೂ ನಿರ್ದೇಶನ ಮಾಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ನಡೆವ ಗ್ಯಾಂಗ್​ವಾರ್ ಕತೆಯನ್ನು ಸಿನಿಮಾ ಒಳಗೊಂಡಿದೆ ಎನ್ನಲಾಗುತ್ತಿದೆ. ಸಿನಿಮಾದಲ್ಲಿ ಡಾಲಿ ಧನಂಜಯ್ ಜೊತೆಗೆ ನಟಿ ರಮ್ಯಾ ಸಹ ಇದ್ದಾರೆ. ಶಿವರಾಜ್ ಕುಮಾರ್ ಸಹ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾವನ್ನು ಕೆಆರ್​ಜಿ ಸ್ಟುಡಿಯೋಸ್​ನ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ನಿರ್ಮಾಣ ಮಾಡಿದ್ದಾರೆ. ಸಂಗೀತ ನೀಡಿರುವುದು ಚರಣ್ ರಾಜ್. ಸಿನಿಮಾ ಶೀಘ್ರವೇ ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ