Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಣ್ಣ ಫ್ರಮ್ ಮೆಕ್ಸಿಕೋ’ಗಾಗಿ ಒಂದಾದ ‘ಬಡವ ರಾಸ್ಕಲ್’ ತಂಡ

Daali Dhananjay: ‘ಬಡವ ರಾಸ್ಕಲ್’ ಸಿನಿಮಾದ ತಂಡ ಮತ್ತೆ ಒಂದಾಗುತ್ತಿದೆ, ನಟ ಡಾಲಿ ಧನಂಜಯ್ ಹಾಗೂ ಶಂಕರ್ ಜೋಡಿ ಈಗ ‘ಅಣ್ಣ ಫ್ರಮ್ ಮೆಕ್ಸಿಕೋ’ ಹೆಸರಿನ ಸಿನಿಮಾ ಪ್ರಾರಂಭಿಸಿದ್ದಾರೆ.

‘ಅಣ್ಣ ಫ್ರಮ್ ಮೆಕ್ಸಿಕೋ’ಗಾಗಿ ಒಂದಾದ ‘ಬಡವ ರಾಸ್ಕಲ್’ ತಂಡ
ಡಾಲಿ ಧನಂಜಯ್
Follow us
ಮಂಜುನಾಥ ಸಿ.
|

Updated on: Dec 16, 2023 | 7:17 PM

ಧನಂಜಯ್ (Dhananjay) ನಟಿಸಿ, ನಿರ್ಮಾಣ ಮಾಡಿದ್ದ ‘ಬಡವ ರಾಸ್ಕಲ್’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇದೀಗ ಅದೇ ತಂಡ ಹೊಸ ಸಿನಿಮಾಕ್ಕಾಗಿ ಮತ್ತೆ ಒಂದಾಗಿದೆ. ‘ಬಡವ ರಾಸ್ಕಲ್’ ತಂಡ ‘ಅಣ್ಣ ಫ್ರಮ್ ಮೆಕ್ಸಿಕೋ’ ಹೆಸರಿನ ಹೊಸ ಸಿನಿಮಾ ನಿರ್ಮಾಣದಲ್ಲಿ ತೊಡಗಿದೆ. ಡಾಲಿ ಧನಂಜಯ್ ಜನ್ಮದಿನಕ್ಕೆ ಸಣ್ಣದೊಂದು ಝಲಕ್ ಬಿಟ್ಟು ಥ್ರಿಲ್ ಹೆಚ್ಚಿಸಿರುವ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರತಂಡ ಈಗ ಸದ್ದಿಲ್ಲದೇ ಮುಹೂರ್ತ ಮುಗಿಸಿ ಚಿತ್ರೀಕರಣಕ್ಕೆ ತಯಾರಾಗಿದೆ.

ಬೆಂಗಳೂರಿನ ಬಂಡೆ ಮಹಾಕಾಳಮ್ಮನ ದೇಗುಲದಲ್ಲಿ‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾದ ಮುಹೂರ್ತ ನೆರವೇರಿದೆ. ಈ ಸಿನಿಮಾ ಮೂಲಕ ಧನಂಜಯ್ ಹಾಗೂ ನಿರ್ದೇಶಕ ಶಂಕರ್ ಎರಡನೇ ಬಾರಿ ಒಟ್ಟಾಗಿ ಕೆಲಸ ಮಾಡಲಿದ್ದಾರೆ. ರಾಯಲ್ ಸ್ಟುಡಿಯೋಸ್​ನ ಪಾಲುದಾರರಾದ ಜಾನ್ವಿ ರಾಯಲ ಕ್ಲ್ಯಾಪ್ ಮಾಡಿದ್ದು, ನಿರ್ದೇಶಕ ಶಂಕರ್ ಗುರು ತಾಯಿ ಕ್ಯಾಮೆರಾಗೆ ಚಾಲನೆ ನೀಡಿದರು. ಸ್ನೇಹಿತ ಹಾಗು ಹಿತೈಷಿಗಳಾದ ಮೃಣಾಲ್ ಹೆಬ್ಬಾಳ್ಕರ್ ರವರು ಸಿನಿಮಾದ ಮುಹೂರ್ತಕ್ಕೆ ಆಗಮಿಸಿ ಶುಭ ಹಾರೈಸಿದ್ದಾರೆ.

2021ರಲ್ಲಿ ತೆರೆಗೆ ಬಂದ ಬಡವ ರಾಸ್ಕಲ್ ಸೂಪರ್ ಡೂಪರ್ ಹಿಟ್ ಆಗಿತ್ತು. ಈ ಚಿತ್ರದ ಮೂಲಕ ಧನಂಜಯ್ ನಿರ್ಮಾಪಕರಾಗಿ ಬಡ್ತಿ ಪಡೆದಿದ್ದರು. ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸಿ ನಟಿಸಿದ್ದ ಬಡವ ರಾಸ್ಕಲ್ ಚಿತ್ರವನ್ನು ಶಂಕರ್ ಗುರು ನಿರ್ದೇಶಿಸಿದ್ದರು. ಮೊದಲ ಹೆಜ್ಜೆಯಲ್ಲಿಯೇ ಗೆದ್ದಿದ್ದ ಶಂಕರ್ ಗುರು ಈಗ ಮತ್ತೊಂದು ಚೆಂದದ ಕಥೆ ಮಾಡಿ ಡಾಲಿ ಫ್ಯಾನ್ಸ್ ರಂಜಿಸಲು ಅಣಿಯಾಗಿದ್ದಾರೆ.

ಇದನ್ನೂ ಓದಿ:Shivarajkumar: ರಮ್ಯಾ, ಡಾಲಿ ಧನಂಜಯ್​ ಜೊತೆ ‘ಉತ್ತರಕಾಂಡ’ ಚಿತ್ರತಂಡಕ್ಕೆ ಸೇರ್ಪಡೆ ಆದ ಶಿವರಾಜ್​ಕುಮಾರ್​

‘ಅಣ್ಣ ಫ್ರಮ್ ಮೆಕ್ಸಿಕೋ’ ಶಂಕರ್ ಗುರು ನಿರ್ದೇಶನದ ಎರಡನೇ ಸಿನಿಮಾ. ಪಕ್ಕ ಆಕ್ಷನ್ ಫ್ಯಾಮಿಲಿ ಎಂಟರ್ ಟೈನರ್ ಚಿತ್ರವಾಗಿದ್ದು, ದಿ ರಾಯಲ್ ಸ್ಟುಡಿಯೋಸ್ ಅಡಿಯಲ್ಲಿ ಸತ್ಯ ರಾಯಲ ಈ ಸಿನಿಮಾ ನಿರ್ಮಿಸುತ್ತಿದ್ದಾರೆ. ಐರಾ ಫಿಲ್ಮ್ಸ್ ಕೂಡ ಸಿನಿಮಾ ನಿರ್ಮಾಣಕ್ಕೆ ಕೈ ಜೋಡಿಸಿದೆ. ಈ ಸಿನಿಮಾಗೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡುತ್ತಿದ್ದು. ಜನವರಿ ತಿಂಗಳಿನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ, ಮೆಕ್ಸಿಕೋ ಸೇರಿದಂತೆ ಹಲವೆಡೆ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಇನ್ನು, ಡಾಲಿ ಧನಂಜಯ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಉತ್ತರಕಾಂಡ, ಪುಷ್ಪ-2, ಝೀಬ್ರಾ ಹಾಗೂ ‘ಅಣ್ಣ ಫ್ರಮ್ ಮೆಕ್ಸಿಕೊ’ ಸಿನಿಮಾದಲ್ಲಿ ಧನಂಜಯ್ ನಟಿಸುತ್ತಿದ್ದಾರೆ. ಜೊತೆಗೆ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ಹೊಸ ಪ್ರತಿಭೆಗಳಿಗೆ ಸಿನಿಮಾ ನಿರ್ಮಾಣದಲ್ಲಿಯೂ ತೊಡಗಿಸಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ