AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಅಭಿಮಾನಿಗಳಿಗಾಗಿ ಮಾಡಿದ ಸಿನಿಮಾ: ‘ಉತ್ತರಕಾಂಡ’ದ ಬಗ್ಗೆ ಡಾಲಿ ಮಾತು

Daali Dhananjay: 'ಉತ್ತರಕಾಂಡ' ಸಿನಿಮಾದಲ್ಲಿ ನಟ ಡಾಲಿ ಧನಂಜಯ್ ಪಾತ್ರವಾದ 'ಗಬ್ರು ಸತ್ಯ'ನ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಆಗಿ ಸಖತ್ ವೈರಲ್ ಆಗುತ್ತಿದೆ. ಈ ಬಗ್ಗೆ ನಟ ಡಾಲಿ ಧನಂಜಯ್ ಮಾತನಾಡಿದ್ದಾರೆ. ಈಗ ಬಿಡುಗಡೆ ಆಗಿರುವುದು ಝಲಕ್ ಅಷ್ಟೆ ಎಂದಿದ್ದಾರೆ.

ಇದು ಅಭಿಮಾನಿಗಳಿಗಾಗಿ ಮಾಡಿದ ಸಿನಿಮಾ: 'ಉತ್ತರಕಾಂಡ'ದ ಬಗ್ಗೆ ಡಾಲಿ ಮಾತು
ಡಾಲಿ ಧನಂಜಯ್
Follow us
ಮಂಜುನಾಥ ಸಿ.
|

Updated on: Aug 22, 2023 | 10:05 PM

ನಟ ಡಾಲಿ ಧನಂಜಯ್ (Daali Dhananjay) ಹುಟ್ಟುಹಬ್ಬದ (Birthday) ಪ್ರಯುಕ್ತ ಅವರ ನಟನೆಯ ಹೊಸ ಸಿನಿಮಾ ‘ಉತ್ತರಕಾಂಡ’ದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಲಾಗಿದೆ. ‘ಉತ್ತರಕಾಂಡ’ ಸಿನಿಮಾದಲ್ಲಿ ಗಬ್ರು ಸತ್ಯ ಹೆಸರಿನ ಪಾತ್ರದಲ್ಲಿ ಡಾಲಿ ಧನಂಜಯ್ ಕಾಣಿಸಿಕೊಂಡಿದ್ದು, ಪಾತ್ರದ ವ್ಯಕ್ತಿತ್ವ ಪರಿಚಯಿಸುವ ಟೀಸರ್ ಇಂದು (ಆಗಸ್ಟ್ 22) ಬಿಡುಗಡೆ ಮಾಡಲಾಗಿದೆ. ಗಬ್ರು ಸತ್ಯನ ಪಾತ್ರವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದು, ಸಖತ್ ಖಡಕ್ಕಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಟೀಸರ್ (Tease) ಬಿಡುಗಡೆ ಜೊತೆಗೆ ತಮ್ಮ ಹುಟ್ಟುಹಬ್ಬ ಆಚರಣೆಗೂ ಚಾಲನೆ ನೀಡಿರುವ ಡಾಲಿ ಧನಂಜಯ್, ‘ಉತ್ತರಕಾಂಡ’ ಸಿನಿಮಾದ ಬಗ್ಗೆ ಹೆಮ್ಮೆಯಿಂದ ಮಾತನಾಡಿದ್ದಾರೆ.

”ಉತ್ತರಕಾಂಡ ಸಿನಿಮಾ ನನ್ನ ಈವರೆಗಿನ ವೃತ್ತಿ ಜೀವನದಲ್ಲಿಯೇ ದೊಡ್ಡ ಬಜೆಟ್​ನ ಸಿನಿಮಾ. ಈಗ ರಿಲೀಸ್ ಆಗಿರುವುದು ನನ್ನ ಬರ್ತಡೇಗೆ ನೀಡಿರುವ ಸಣ್ಣ ಝಲಕ್ ಅಷ್ಟೇ. ‘ಉತ್ತರಕಾಂಡ’ ಸಿನಿಮಾವನ್ನು ಇನ್ನಷ್ಟು ಎಂಜಾಯ್ ಮಾಡ್ತೀರಾ, ಅಭಿಮಾನಿಗಳಿಗೆಂದೆ ‘ಉತ್ತರಕಾಂಡ’ ಸಿನಿಮಾ ಮಾಡಿರೋದು ಎಂದ ಡಾಲಿ, ‘ಬಾಕ್ಸ್ ಆಫೀಸ್ ನ ಓಡಿತಿನಿ ಸುಬ್ಬಿ’ ಎಂದು ಭರ್ಜರಿ ಡೈಲಾಗ್ ಸಹ ಹೊಡೆದಿದ್ದಾರೆ.

ಅಭಿಮಾನಿಗಳೊಟ್ಟಿಗೆ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿರುವ ಬಗ್ಗೆಯೂ ಮಾತನಾಡಿದ ಡಾಲಿ, ”ಇಂದು ರಾತ್ರಿ 11 ಗಂಟೆಯಿಂದಲೇ ನಂದಿ ಲಿಂಕ್ ಗ್ರೌಂಡ್​ನಲ್ಲಿ ಅಭಿಮಾನಿಗಳನ್ನು ಭೇಟಿ ಮಾಡ್ತೀನಿ. ನಾಳೆ (ಆಗಸ್ಟ್ 23) 11ರಿಂದ 1 ಗಂಟೆವರೆಗೆ ನಾಳೆ ಬೇರೆ ಬೇರೆ ಊರುಗಳಿಂದ ಆಗಮಿಸುವ ಫ್ಯಾನ್ಸ್ ಅನ್ನು ಭೇಟಿ ಮಾಡುತ್ತೀನಿ. ಬೇರೆ ಊರುಗಳಿಂದ ಬರುವ ಅಭಿಮಾನಿಗಳಿಗಾಗಿ ತಿಂಡಿ ಮತ್ತು ಊಟದ ವ್ಯವಸ್ಥೆ ಮಾಡಿದ್ದೇವೆ. ನನ್ನ ಹುಟ್ಟುಹಬ್ಬಕ್ಕೆ ಅಭಿಮಾನಿಗಳೇ ರಕ್ತದಾನ ಮಾಡುತ್ತಿದ್ದಾರೆ ಅದು ಬಹಳ ಖುಷಿ ನೀಡಿದೆ ನಾಳೆ ನಂದಿ ಲಿಂಕ್ಸ್ ಗ್ರೌಂಡ್​ನಲ್ಲಿ ‘ಉತ್ತರಕಾಂಡ’ ಸಿನಿಮಾದ ಬಗ್ಗೆ ಹೊಸ ಅಪ್​ಡೇಟ್ ಕೊಡ್ತೀನಿ” ಎಂದಿದ್ದಾರೆ.

ಇದನ್ನೂ ಓದಿ: ಉತ್ತರಕಾಂಡದಲ್ಲಿ ಗಬ್ರು ಸತ್ಯನಾಗಿ ಡಾಲಿ ಧನಂಜಯ್: ಹುಟ್ಟುಹಬ್ಬಕ್ಕೆ ಖಡಕ್ ಎಂಟ್ರಿ

ಚಂದ್ರಯಾನ 3 ಬಗ್ಗೆಯೂ ಈ ಸಮಯದಲ್ಲಿ ಮಾತನಾಡಿದ ನಟ ಡಾಲಿ, ”ಬಹಳ ಖುಷಿಯಾದ, ಹೆಮ್ಮೆತರುವ ವಿಷಯ. ನನ್ನ ಹುಟ್ಟುಹಬ್ಬದಂದೇ ಚಂದ್ರಯಾನ 3 ಯಶಸ್ವಿಯಾಗುತ್ತಿರುವುದು ಬಹಳ ಖುಷಿ ತಂದಿದೆ. ವಿಜ್ಞಾನಿಗಳ ಶ್ರಮಕ್ಕೆ ನಾಳೆ ಫಲಿತ ಸಿಗುತ್ತಿದೆ. ಸಹಜವಾಗಿಯೇ ಹೆಮ್ಮೆಯ ವಿಷಯ. ಇಸ್ರೋ ಮಾಡಿರುವ ಸಾಧನೆ ಎಲ್ಲರಿಗೂ ಹೆಮ್ಮೆ ತಂದಿದೆ. ಇಸ್ರೋ ಬಹಳ ಒಳ್ಳೆಯ ಕೆಲಸಗಳನ್ನು ಮಾಡುತ್ತಿದೆ. ಆ ಕಾರ್ಯಗಳು ಹೀಗೆಯೇ ಮುಂದುವರೆಯಲಿ ಎಂಬುದು ಹಾರೈಕೆ” ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್