AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನ್ ವೆಜ್ ತಿಂದ ವಿಷಯ ವೈರಲ್; ಡಾಲಿ ಧನಂಜಯ್ ದೂರಿದ್ದು ಯಾರನ್ನ?

ನಟ ಡಾಲಿ ಧನಂಜಯ್ ಅವರ ಮಾಂಸಾಹಾರ ಸೇವನೆ ವಿಷಯ ವೈರಲ್ ಆಗಿ ಲಿಂಗಾಯತ ಸಮುದಾಯದ ಹೆಸರಿನಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ ಧನಂಜಯ್, ಆಹಾರ ಪ್ರತಿಯೊಬ್ಬರ ವೈಯಕ್ತಿಕ ಆಯ್ಕೆ ಎಂದು ಹೇಳಿದ್ದಾರೆ. ಸಮಾಜದಲ್ಲಿ ಆಹಾರದ ವಿಷಯದಲ್ಲಿ ರಾಜಕೀಯ ಮಾಡುವುದನ್ನು ಖಂಡಿಸಿದ ಅವರು, ನಾನ್ ವೆಜ್ ತಿನ್ನೋದು ಅಪರಾಧವಲ್ಲ ಎಂದಿದ್ದಾರೆ.

ನಾನ್ ವೆಜ್ ತಿಂದ ವಿಷಯ ವೈರಲ್; ಡಾಲಿ ಧನಂಜಯ್ ದೂರಿದ್ದು ಯಾರನ್ನ?
ಡಾಲಿ
ರಾಜೇಶ್ ದುಗ್ಗುಮನೆ
|

Updated on: Jan 31, 2026 | 7:00 AM

Share

ಡಾಲಿ ಧನಂಜಯ್ ಅವರು (Dhananjay) ಇತ್ತೀಚೆಗೆ ನಾನ್​ ವೆಜ್ ತಿಂದ ವಿಷಯ ಸಾಕಷ್ಟು ಚರ್ಚೆ ಆಯಿತು. ಅವರು ಲಿಂಗಾಯತ ಆಗಿ ನಾನ್​ ವೆಜ್ ತಿಂದಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಬಹುತೇಕರು ಡಾಲಿ ಅವರನ್ನು ಬೆಂಬಲಿಸಿದ್ದರು. ಆಹಾರ ಅವರ ಆಯ್ಕೆ ಎಂದು ನೇರ ಮಾತುಗಳಲ್ಲಿ ಹೇಳಿದ್ದರು. ಈಗ ಈ ವಿಷಯಕ್ಕೆ ಡಾಲಿ ಧನಂಜಯ್ ಅವರು ಸ್ಪಷ್ಟನೆ ನೀಡಿದ್ದಾರೆ. ಆಹಾರ ಪ್ರತಿಯೊಬ್ಬ ಮನುಷ್ಯನ ಆಯ್ಕೆ ಎಂದಿದ್ದಾರೆ.

ಜನವರಿ 30ರಂದಿ ನಡೆದ ಸುದ್ದಿಗೋಷ್ಠಿಯಲ್ಲಿ ಧನಂಜಯ್ ಮಾತನಾಡಿದ್ದಾರೆ. ‘ನಾನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಷಯ ನೋಡಿದೆ. ಯಾರು ಅದನ್ನು ಎತ್ತಿ ಚರ್ಚೆ ಮಾಡಿದರು ಎಂಬುದು ಗೊತ್ತಿಲ್ಲ. ನನ್ನ ಗೆಳೆಯ ರಾಹುಲ್ ಎಂಬುವವರು ಬಿರಿಯಾನಿ ಶಾಪ್ ಓಪನ್ ಮಾಡಿಕೊಟ್ಟೆ. ಈ ವೇಳೆ ಊಟ ಆಫರ್ ಮಾಡಿದ. ಅದನ್ನು ಮಾಡಿ ಬಂದೆ. ಸುಮಾರು 10-15 ಬಿರಿಯಾನಿ ಶಾಪ್​​​ಗಳನ್ನು ನಾನೇ ಓಪನ್ ಮಾಡಿದ್ದೇನೆ. ಹೆಡ್​ಬುಷ್ ಸಮಯದಲ್ಲಿ ಬಿರಿಯಾನಿ ತಿನ್ನುತ್ತಲೇ ಸಿನಿಮಾ ಪ್ರಚಾರ ಮಾಡಿದ್ದೆ. ಈ ವಿಷಯ ಪಿಕ್ ಆಗಬಹುದು ಎಂಬುದು ಗೊತ್ತಿರಲಿಲ್ಲ. ಈ ಬಗ್ಗೆ ಸಾಕಷ್ಟು ಚರ್ಚೆ ನಡೆಯಿತು. ಈ ರೀತಿಯ ವಿಷಯಗಳು ಚರ್ಚೆ ಆದಾಗ ಸಮಾಜ ಹೇಗೆ ಯೋಚಿಸುತ್ತಿದೆ ಎಂಬುದು ಗೊತ್ತಾಗುತ್ತದೆ’ ಎಂದಿದ್ದಾರೆ ಡಾಲಿ.

‘ಡಾಲಿ ನಾನ್ ವೆಜ್ ತಿನ್ನುತ್ತಾರಾ ಎಂದು ಕೇಳೋದು ಓಕೆ. ಲಿಂಗಾಯತರು ಹಾಗೂ ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಪ್ರಶ್ನಿಸೋದು ತಪ್ಪು. ಅದು ಅಗತ್ಯವಿಲ್ಲ. ಇದರ ಹಿಂದೆ ಒಂದಷ್ಟು ಜನರನ್ನು ಎತ್ತಿಕಟ್ಟೋ ಉದ್ದೇಶ ಇದ್ದಿರಬಹುದು’ ಎಂದು ದುಷ್ಟ ಆಲೋಚನೆ ಹೊಂದಿದ್ದವರ ವಿರುದ್ಧ ಡಾಲಿ ಕಿಡಿಕಾರಿದ್ದಾರೆ. ‘ಇದೆಲ್ಲ ಮೊದಲು ನನಗೆ ತೊಂದರೆ ಕೊಡುತ್ತಿತ್ತು. ಆದರೆ, ಈಗ ಹಾಗೆ ಆಗುತ್ತಿಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ: ತಂದೆ ಆಗುತ್ತಿದ್ದಾರೆ ಡಾಲಿ ಧನಂಜಯ್: ಸಿಹಿ ಸುದ್ದಿ ಹಂಚಿಕೊಂಡ ನಟ

‘ನಾನು ಓಪನ್ ಬುಕ್. ಊಟ, ಚಟ ಎಲ್ಲವೂ ನನ್ನ ಆಯ್ಕೆ. ಅದರಿಂದ ಯಾರಿಗೂ ತೊಂದರೆ ಆಗುತ್ತಿಲ್ಲ ಎಂದರೆ ಸಮಸ್ಯೆಯೇ ಇಲ್ಲವಲ್ಲ. ನಾನು ಸಿನಿಮಾಗಾಗಿ ಸ್ಮೋಕ್ ಮಾಡುತ್ತಿದ್ದೆ. ನಿಜ ಜೀವನದಲ್ಲೂ ಅದನ್ನು ಮುಂದುವರಿಸಿದೆ. ಈಗ ಅದನ್ನು ನಿಲ್ಲಿಸಿದ್ದೇನೆ. ನಾನು ಬಿಯರ್ ಬಾಯ್ ಎಂದೇ ಫೇಮಸ್. ಈಗ ನಾನು ಅಪರೂಪಕ್ಕೆ ಕುಡಿಯುತ್ತೇನೆ ಅಷ್ಟೇ. ನಾನು ಅದನ್ನು ಮಾಡಿ ಎಂದು ಯಾರಿಗೂ ಹೇಳಲ್ಲ. ಏನೇ ಮಾಡಿದರೂ ಇತಮಿತವಾಗಿ ಮಾಡಿ’ ಎಂದು ಧನಂಜಯ್ ಕಿವಿಮಾತು ಹೇಳಿದ್ದಾರೆ.

‘ನನಗೆ ಸಮುದ್ರ ಆಹಾರ ಎಂದರೆ ಇಷ್ಟ. ಕದ್ದು ಮುಚ್ಚಿ ಮಾಡೋಕೆ ಅದು ಕ್ರೈಮ್ ಅಲ್ಲ.ನನಗೆ ಅದು ಇಷ್ಟ. ಡಾಲಿ ಏನು ತಿಂತೀರಾ ಎಂದು ನನಗೆ ಕೇಳಿದರೆ ನಾನು ಖುಷಿಯಿಂದ ಉತ್ತರ ನೀಡುತ್ತೇನೆ’ ಎಂದು ಡಾಲಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್