AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಸಂಪ್ರದಾಯದ ಬಗ್ಗೆ ಟೀಕೆ ಮಾಡಿದವರಿಗೆ ಡಾಲಿ ಧನಂಜಯ ಖಡಕ್ ಉತ್ತರ

ನಟ ಡಾಲಿ ಧನಂಜಯ ಮತ್ತು ಡಾಕ್ಟರ್ ಧನ್ಯತಾ ಅವರ ಮದುವೆಯಲ್ಲಿ ಆಚರಿಸಿದ ಸಂಪ್ರದಾಯಗಳನ್ನು ಕೆಲವರು ಪ್ರಶ್ನಿಸಿದ್ದಾರೆ. ಅಂಥವರ ಪ್ರಶ್ನೆಗೆ ಡಾಲಿ ಉತ್ತರ ನೀಡಿದ್ದಾರೆ. ಆಸ್ತಿಕತೆ ಮತ್ತು ನಾಸ್ತಿಕತೆಯಲ್ಲಿ ತಮ್ಮ ನಿಲುವು ಏನು ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ. ಆ ಕುರಿತು ಇಲ್ಲಿದೆ ಪೂರ್ತಿ ವಿವರ..

ಮದುವೆ ಸಂಪ್ರದಾಯದ ಬಗ್ಗೆ ಟೀಕೆ ಮಾಡಿದವರಿಗೆ ಡಾಲಿ ಧನಂಜಯ ಖಡಕ್ ಉತ್ತರ
Daali Dhananjaya, Dhanyatha
ಮದನ್​ ಕುಮಾರ್​
|

Updated on: Feb 17, 2025 | 12:10 PM

Share

ನಟ ಡಾಲಿ ಧನಂಜಯ ಅವರು ತಮ್ಮದೇ ನಿಲುವು ಮತ್ತು ಸಿದ್ಧಾಂತಗಳನ್ನು ಹೊಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವು ಮೌಢ್ಯಗಳ ವಿರುದ್ಧ ಅವರು ಧ್ವನಿ ಎತ್ತಿದ್ದರು. ಈಗ ಅವರ ಮದುವೆ ಬಗ್ಗೆ ಕೆಲವರು ಟೀಕೆ ಮಾಡಿದ್ದಾರೆ. ಫೆಬ್ರವರಿ 15 ಮತ್ತು 16ರಂದು ನಡೆದ ವಿವಾಹ ಸಮಾರಂಭದಲ್ಲಿ ಅನೇಕ ಆಚರಣೆಗಳನ್ನು ಡಾಲಿ ಧನಂಜಯ ಪಾಲಿಸಿದ್ದಾರೆ. ಇದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಪ್ರಶ್ನೆ ಮಾಡಿದ್ದಾರೆ. ಅಂಥ ಟೀಕೆಗಳಿಗೆ ಡಾಲಿ ಪ್ರತಿಕ್ರಿಯೆ ನೀಡಿದ್ದಾರೆ.

‘ಈ ಆಚರಣೆಗಳು ನಮ್ಮ ಹಿರಿಯರಿಗೆ ಖುಷಿ ಕೊಡುವಂತಹ ನಂಬಿಕೆಗಳು ಎಂದಾಗ ಪಾಲಿಸುವುದರಲ್ಲಿ ಏನೋ ತಪ್ಪು ಇದೆ ಎಂದು ನನಗೆ ಅನಿಸುತ್ತಿಲ್ಲ. ಎಲ್ಲದಕ್ಕೂ ಉತ್ತರ ಕೊಡಲು ನನಗೆ ಬರಲ್ಲ. ಆದರೆ ಒಂದು ಘಟನೆ ಬಗ್ಗೆ ಹೇಳುತ್ತೇನೆ. ಆಸ್ತಿಕತೆ ಮತ್ತು ನಾಸ್ತಿಕತೆ ಬಗ್ಗೆ ಬಂದಾಗ ಕಾಯುವಂತಹ ನಂಬಿಕೆಗಳು ಬೇರೆ, ಮೂಢ ನಂಬಿಕೆಗಳು ಬೇರೆ. ಮೌಢ್ಯವನ್ನು ನಾವು ಖಂಡಿತ ವಿರೋಧಿಸಬೇಕು’ ಎಂದು ಡಾಲಿ ಧನಂಜಯ ಹೇಳಿದ್ದಾರೆ.

‘ಆಚರಣೆಯಲ್ಲಿ ತುಂಬ ರೀತಿಯ ಆಚರಣೆಗಳು ಇವೆ. ಉದಾಹರಣೆಗೆ, ಕೆಂಡ ಹಾಯುವಾಗ ನಮ್ಮ ಚಿಕ್ಕಪ್ಪ ಒಂದು ಪೂಜೆ ಮಾಡಿದರು. ನನಗೆ ಅದರ ಬಗ್ಗೆ ಗೊತ್ತಿಲ್ಲ. ಅದು ಮಡಿವಾಳ ಪದ್ಧತಿಯಲ್ಲಿ ಮಾಡುವುದು ಅಂತ ಕೆಲವರು ಹೇಳಿದರು. ಅದನ್ನು ತಮ್ಮ ಚಿಕ್ಕಪ್ಪ ತುಂಬ ಚೆನ್ನಾಗಿ ಮಾಡಿದರು. ಆ ರೀತಿ ತಮ್ಮ ಆಚರಣೆಗಳು ಮಿಕ್ಸ್ ಆಗಿವೆ. ಕೆಂಡ ಹಾಯುವುದನ್ನು ನಾನು ಚಿಕ್ಕ ವಯಸ್ಸಿನಿಂದ ಜಾತ್ರೆಯಲ್ಲಿ ನೋಡಿಕೊಂಡು ಬಂದಿದ್ದೇನೆ. ಅದು ನನಗೆ ಜನಪದ. ಆ ಪ್ರಕ್ರಿಯೆಯನ್ನು ಒಂದು ಮಗು ರೀತಿ ನಾನು ಎಂಜಾಯ್ ಮಾಡಿದ್ದೇನೆ. ಅವುಗಳಲ್ಲಿ ನನಗೆ ತಪ್ಪು ಕಂಡಿಲ್ಲ’ ಎಂದಿದ್ದಾರೆ ಡಾಲಿ ಧನಂಜಯ.

‘ಆಸ್ತಿಕತೆ ಮತ್ತು ನಾಸ್ತಿಕತೆ ಬಗ್ಗೆ ನನ್ನ ಜೀವನದ ಉದಾಹರಣೆಯನ್ನೇ ಕೊಡುತ್ತೇನೆ. ನನ್ನ ತಾಯಿ ಆಸ್ಪತ್ರೆಯಲ್ಲಿ ಅಡ್ಮಿಟ್ ಆದಾಗ ಒಂದು ಸಣ್ಣ ಸರ್ಜರಿ ಇತ್ತು. ನನಗೆ ಮತ್ತು ವೈದ್ಯರಿಗೆ ವಿಜ್ಞಾನ ಗೊತ್ತು. ಆದರೆ ಆಪರೇಷನ್​ ಥಿಯೇಟರ್​ಗೆ ಹೋಗುವಾಗ ನನ್ನ ತಾಯಿ ಜೇಲುಕಲ್ಲು ಸಿದ್ದಪ್ಪ ಅಂತ ಕೈ ಮುಗಿಯುತ್ತಾರೆ. ಅವರಿಗೆ ಜೇನುಕಲ್ಲು ಸಿದ್ಧಪ್ಪ ಒಂದು ಶಕ್ತಿ. ಅವರ ನಂಬಿಕೆ ಮತ್ತು ಶಕ್ತಿಯನ್ನು ನಾನು ಗೌರವಿಸಬೇಕು’ ಎಂದು ಡಾಲಿ ಹೇಳಿದ್ದಾರೆ.

ಇದನ್ನೂ ಓದಿ: ಡಾಲಿ ಧನಂಜಯ ಮದುವೆ: ಬಂಗಾರದ ಸರ ಗಿಫ್ಟ್ ನೀಡಿದ ವಸಿಷ್ಠ ಸಿಂಹ

‘ಎಲ್ಲದರಲ್ಲೂ ತಪ್ಪು ಹುಡುಕಿದರೆ ನಾವು ಒಟ್ಟಿಗೆ ಸೇರೋಕೆ ಆಗಲ್ಲ. ಸಾಕಷ್ಟು ವಿಷಯ ಇದೆ. ಅದನ್ನೆಲ್ಲ ನಾನು ಈ ಮಾತನಾಡಲು ಹೋದರೆ ಮದುವೆ ಬಿಟ್ಟು ಬೇರೆ ಬೇರೆ ಚರ್ಚೆ ಶುರುವಾಗುತ್ತದೆ. ನನ್ನನ್ನು ಪ್ರಶ್ನೆ ಮಾಡುತ್ತಿರುವವರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ಮತ್ತು ಆಶೀರ್ವಾದ ಕೂಡ ಇರಲಿ. ನಾನು ಕೂಡ ಇನ್ನೂ ಕಲಿಯುತ್ತಾ ಇರುತ್ತೇನೆ, ಬೆಳೆಯುತ್ತಾ ಇರುತ್ತೇನೆ. ಅನುಭವಗಳಿಂದ ಹೊರಗೆ ಉಳಿಯೋಕೆ ನನಗೆ ಆಗಲ್ಲ. ನಾನೊಬ್ಬ ಕಲಾವಿದ. ನನಗೆ ಎಲ್ಲ ಅನುಭವಗಳು ತುಂಬ ಮುಖ್ಯ’ ಎಂದಿದ್ದಾರೆ ಧನಂಜಯ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್