AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Head Bush Trailer: ಡಾನ್ ಜಯರಾಜ್ ಆಗಿ ಭರ್ಜರಿ ಎಂಟ್ರಿ ಕೊಟ್ಟ ಡಾಲಿ ಧನಂಜಯ್: ಭೂಗತ ಜಗತ್ತಿನ ಝಲಕ್ ತೋರಿಸಿದ ಹೆಡ್​ ಬುಷ್ ಟ್ರೇಲರ್​

Daali Dhananjaya | Head Bush: ಬೆಂಗಳೂರಿನ ಭೂಗತ ಲೋಕದಲ್ಲಿ ಡಾನ್ ಆಗಿದ್ದ ಜಯರಾಜ್ ಪಾತ್ರವನ್ನು ‘ಹೆಡ್ ಬುಷ್’ ಚಿತ್ರದಲ್ಲಿ ಡಾಲಿ ಧನಂಜಯ್​ ಮಾಡಿದ್ದಾರೆ. ರಿಲೀಸ್ ಆಗಿರುವ ಟ್ರೇಲರ್​​ನಲ್ಲಿ ಅವರ ಮ್ಯಾನರಿಸಂ ಗಮನ ಸೆಳೆಯುತ್ತಿದೆ.

Head Bush Trailer: ಡಾನ್ ಜಯರಾಜ್ ಆಗಿ ಭರ್ಜರಿ ಎಂಟ್ರಿ ಕೊಟ್ಟ ಡಾಲಿ ಧನಂಜಯ್: ಭೂಗತ ಜಗತ್ತಿನ ಝಲಕ್ ತೋರಿಸಿದ ಹೆಡ್​ ಬುಷ್ ಟ್ರೇಲರ್​
ಡಾಲಿ ಧನಂಜಯ್
TV9 Web
| Updated By: ಮದನ್​ ಕುಮಾರ್​|

Updated on:Oct 16, 2022 | 8:22 PM

Share

ಡಾಲಿ ಧನಂಜಯ್ (Daali Dhananjay) ನಟನೆಯ ಬಹುನಿರೀಕ್ಷಿತ ‘ಹೆಡ್ ಬುಷ್’ (Head Bush) ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಇಂದು (ಅ.16) ಸಂಜೆ ಚಿತ್ರತಂಡ ಟ್ರೇಲರ್ ಲಾಂಚ್ ಮಾಡಿದ್ದು ಅಕ್ಟೋಬರ್ 21ಕ್ಕೆ ಸಿನಿಮಾ ಥಿಯೇಟರ್​​ಗಳಲ್ಲಿ ರಿಲೀಸ್ ಆಗುತ್ತಿದೆ. ಬೆಂಗಳೂರಿನ ಭೂಗತ ಲೋಕದ ಡಾನ್ ಆಗಿದ್ದ ಎಂ.ಪಿ. ಜಯರಾಜ್ (MP Jayaraj) ಪಾತ್ರವನ್ನು ಹೆಡ್ ಬುಷ್ ಚಿತ್ರದಲ್ಲಿ ಡಾಲಿ ಧನಂಜಯ್​ ಮಾಡಿದ್ದಾರೆ. ರಿಲೀಸ್ ಆಗಿರುವ ಟ್ರೇಲರ್​​ನಲ್ಲಿ ಡಾಲಿ ಪಕ್ಕಾ ರೌಡಿ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಭೂಗತ ಜಗತ್ತಿನಲ್ಲಿ ಮಿಂಚಿದ ಡಾನ್ ಜಯರಾಜ್ ಅವರ ಪಾತ್ರಕ್ಕೆ ಡಾಲಿ ಧನಂಜಯ್ ಜೀವ ತುಂಬಿದ್ದಾರೆ ಎನ್ನುವುದು ಟ್ರೇಲರ್ ನೋಡಿದರೆ ಗೊತ್ತಾಗುತ್ತದೆ.

ಈ ಚಿತ್ರವನ್ನು ಡಾಲಿ ಪಿಕ್ಚರ್ಸ್ ಮತ್ತು ಸೋಮಣ್ಣ ಟಾಕೀಸ್ ಜಂಟಿಯಾಗಿ ನಿರ್ಮಾಣ ಮಾಡಿದೆ. ಅಗ್ನಿ ಶ್ರೀಧರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಹೊಸ ನಿರ್ದೇಶಕ ಶೂನ್ಯ ಅವರು ಆಕ್ಷನ್-ಕಟ್ ಹೇಳಿದ್ದಾರೆ. 1970ರ ಸಮಯದಲ್ಲಿ ಬೆಂಗಳೂರು ಭೂಗತ ಜಗತ್ತನ್ನು ಈ ಚಿತ್ರದಲ್ಲಿ ಪರಿಚಯಿಸಲಾಗುತ್ತಿದೆ. ಅಗ್ನಿ ಶ್ರೀಧರ್ ಅವರ ‘ದಾದಾಗಿರಿಯ ದಿನಗಳು’ ಪುಸ್ತಕವನ್ನ ಆಧರಿಸಿ ಈ ಸಿನಿಮಾ ಮಾಡಲಾಗಿದೆ. ಈ ಕಾರಣದಿಂದ ಚಿತ್ರದ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ.

ಹೆಡ್​ ಬುಷ್ ಚಿತ್ರದ ನಾಯಕಿಯಾಗಿ ಪಾಯಲ್‌ ರಜಪೂತ್‌ ನಟಿಸಿದ್ದಾರೆ. ದೆಹಲಿ ಮೂಲದ ಇವರು ಹಿಂದಿ ಕಿರುತೆರೆ ಮೂಲಕ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟರು. ತೆಲುಗು, ಪಂಜಾಬಿ, ಹಿಂದಿ ಹಾಗೂ ತಮಿಳು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರು ನಟಿಸಿದ ‘ಆರ್ ಎಕ್ಸ್ 100’ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಉಳಿದಂತೆ ಕ್ರೇಜಿಸ್ಟಾರ್‌ ರವಿಚಂದ್ರನ್‌, ಲೂಸ್‌ಮಾದ ಯೋಗಿ, ವಸಿಷ್ಠ ಸಿಂಹ, ದೇವರಾಜ್‌, ಶೃತಿ ಹರಿಹರನ್‌, ರಘು ಮುಖರ್ಜಿ, ಬಾಲು ನಾಗೇಂದ್ರ ಸೇರಿದಂತೆ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.

ಇದನ್ನೂ ಓದಿ
Image
ರೂಪೇಶ್ ಶೆಟ್ಟಿ-ಸಾನ್ಯಾ ಐಯ್ಯರ್ ರೊಮ್ಯಾನ್ಸ್​ಗೆ ಸುದೀಪ್ ಕ್ಲಾಸ್
Image
ಜಾತಿ ಧರ್ಮ ಮೀರಿದ ಅಪ್ಪಟ ನಟ ಝೈದ್ ಖಾನ್; ತಿಮ್ಮಪ್ಪನ ದರ್ಶನ ಪಡೆದು ಪ್ರಚಾರ ಆರಂಭ
Image
‘ಈ ಮನೆ ಅದಕ್ಕಲ್ಲ’; ಮಿತಿಮೀರಿ ರೊಮ್ಯಾನ್ಸ್ ಮಾಡಿದ ರೂಪೇಶ್ ಶೆಟ್ಟಿ​-ಸಾನ್ಯಾ ಐಯ್ಯರ್​ಗೆ ಕಿಚ್ಚ ಸುದೀಪ್ ಕ್ಲಾಸ್
Image
‘ಕಾಂತಾರ’ಕ್ಕೆ ಬಾಲಿವುಡ್​​​ನಲ್ಲಿ ಕ್ರೇಜ್ ಹೇಗಿದೆ? ತಾವು ನೋಡಿದ್ದನ್ನು ವಿವರಿಸಿದ ತೆಲುಗು ನಟ ವಿಷ್ಣು ಮಂಚು

ಈ ಸಿನಿಮಾವನ್ನು ನಿರ್ದೇಶ ಮಾಡಿರುವ ಶೂನ್ಯ ಅವರು ಈ ಮೊದಲು ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ ಅವರ ಬಳಿ ಅಸೋಸಿಯೇಟ್‌ ಆಗಿದ್ದರು. ಅಲ್ಲದೆ ಫಿಲಂ ಮೇಕಿಂಗ್‌ ಕುರಿತು ಎಂಎಸ್ಸಿ , ಸಂಶೋಧನೆ ಕೂಡ ಮಾಡಿದ್ದಾರೆ. ಹೆಡ್‌ ಬುಷ್‌ ಅವರ ಮೊದಲ ನಿರ್ದೇಶನದ ಚಿತ್ರವಾಗಿದೆ. ಚಿತ್ರದ ಹಾಡುಗಳಿಗೆ ಚರಣ್‌ ರಾಜ್‌ ಸಂಗೀತ ನಿರ್ದೇಶನವಿದೆ. ಸುನೊಜ್‌ ವೇಲಾಯಧನ್‌ ಕ್ಯಾಮೆರಾ, ಬಾದಲ್‌ ನಂಜುಂಡಸ್ವಾಮಿ ಕಲೆ ಚಿತ್ರಕ್ಕಿದೆ.

ಇಂದು ದಾವಣಗೆರೆ ನಗರದಲ್ಲಿ ಸಿನಿಮಾದ ಪ್ರಿ-ರಿಲೀಸ್ ಇವೆಂಟ್ ಆಯೋಜಿಸಲಾಗಿದೆ. ಸಂಜೆ ಆರು ಗಂಟೆಗೆ ದಾವಣಗೆರೆಯ ಬಾಪೂಜಿ ಎಂಬಿಎ ಕಾಲೇಜಿನ ಆವರಣದಲ್ಲಿ ನಡೆಯಲಿರುವ ಅದ್ಧೂರಿ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ನಟ ಧನಂಜಯ ಹಾಗೂ ಚಿತ್ರತಂಡದ ಜೊತೆಗೆ ‘ಮೋಹಕ ತಾರೆ’ ರಮ್ಯಾ, ‘ಡಿಂಪಲ್‌ ಕ್ವೀನ್’ ರಚಿತಾ ರಾಮ್, ನೀನಾಸಂ ಸತೀಶ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಅತಿಥಿಗಳಾಗಿ ಆಗಮಿಸಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:42 pm, Sun, 16 October 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!