AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ‘ಕಾಂತಾರ’ ಚಿತ್ರದ ನಟ, ನಿರ್ದೇಶಕ ರಿಷಬ್​ ಶೆಟ್ಟಿಗೆ ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’

Dadasaheb Phalke International Film Festival Award: ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’ಗೆ ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರು ಭಾಜನರಾಗಿದ್ದಾರೆ. ಫೆಬ್ರವರಿ 20ರಂದು ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು.

Follow us
ಮದನ್​ ಕುಮಾರ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Feb 15, 2023 | 6:34 PM

ನಟ, ನಿರ್ದೇಶಕ ರಿಷಬ್​ ಶೆಟ್ಟಿ (Rishab Shetty) ಅವರು ದೇಶಾದ್ಯಂತ ಖ್ಯಾತಿ ಗಳಿಸಿದ್ದಾರೆ. ‘ಕಾಂತಾರ’ (Kantara Movie) ಸಿನಿಮಾದಿಂದ ಅವರಿಗೆ ಸಿಕ್ಕ ಯಶಸ್ಸು ತುಂಬ ದೊಡ್ಡದು. ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ 400 ಕೋಟಿ ರೂಪಾಯಿಗೂ ಅಧಿಕ ಹಣ ಗಳಿಸಿದ್ದು ಹೆಮ್ಮೆಯ ಸಂಗತಿ. ಇತರೆ ಭಾಷೆಯ ಅನೇಕ ಸೆಲೆಬ್ರಿಟಿಗಳು ರಿಷಬ್​ ಶೆಟ್ಟಿ ಅವರ ಕೆಲಸದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಅದರ ಜೊತೆಗೆ ಒಂದಷ್ಟು ಪ್ರಶಸ್ತಿಗಳು ಕೂಡ ಅವರನ್ನು ಅರಸಿ ಬರುತ್ತಿವೆ. ಈಗ ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’ (Dadasaheb Phalke International Film Festival Award) ಘೋಷಣೆ ಆಗಿದೆ. ಫೆಬ್ರವರಿ 20ರಂದು ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮುಂಬೈನ ತಾಜ್​ ಲ್ಯಾಂಡ್ಸ್​ ಎಂಡ್​ ಹೋಟೆಲ್​ನಲ್ಲಿ ಈ ಸಮಾರಂಭ ನಡೆಯಲಿದೆ.

ಹಲವು ವಿಭಾಗಗಳಲ್ಲಿ ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’ ನೀಡಲಾಗುತ್ತಿದೆ. ರಿಷಬ್​ ಶೆಟ್ಟಿ ಅವರು ‘ಅತ್ಯಂತ ಭರವಸೆಯ ನಟ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಗೌರವ ಸಿಕ್ಕಿರುವುದಕ್ಕೆ ಅಭಿಮಾನಿಗಳು, ಆಪ್ತರು ಹಾಗೂ ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾ ಮೂಲಕ ರಿಷಬ್​ ಶೆಟ್ಟಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: Rishab Shetty: ‘ಮೋದಿ ಹಲವು ಬಾರಿ ಕಾಂತಾರ ಬಗ್ಗೆ ಮಾತಾಡಿದ್ದು ಕೇಳಿ ಖುಷಿ ಆಯ್ತು’: ಪ್ರಧಾನಿ ಭೇಟಿ ಬಗ್ಗೆ ರಿಷಬ್​ ಪ್ರತಿಕ್ರಿಯೆ

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ಇದು ಭಾರತ ಸರ್ಕಾರ ನೀಡುವ ಪ್ರಶಸ್ತಿ ಅಲ್ಲ:

ದಾದಾ ಸಾಹೇಬ್​ ಫಾಲ್ಕೆ ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಅವರ ಹೆಸರಿನಲ್ಲಿ ಭಾರತ ಸರ್ಕಾರ ಪ್ರಶಸ್ತಿ ನೀಡುತ್ತದೆ. ಚಿತ್ರರಂಗದಲ್ಲಿ ಜೀವಮಾನ ಸಾಧನೆ ಮಾಡಿದವರಿಗೆ ಆ ಪ್ರಶಸ್ತಿ ನೀಡಲಾಗುತ್ತದೆ. ಆದರೆ ಈಗ ರಿಷಬ್​ ಶೆಟ್ಟಿ ಅವರಿಗೆ ಬಂದಿರುವ ಪ್ರಶಸ್ತಿಯೇ ಬೇರೆ. ಖಾಸಗಿ ಸಂಸ್ಥೆ ವತಿಯಿಂದ ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’ ಕೊಡಲಾಗುತ್ತಿದೆ.

ಇದನ್ನೂ ಓದಿ: Rishab Shetty: ರಿಷಬ್​ ಶೆಟ್ಟಿ ವಿವಾಹ ವಾರ್ಷಿಕೋತ್ಸವ; ಪತ್ನಿ ಜತೆಗಿನ ಚಂದದ ಫೋಟೋ ಹಂಚಿಕೊಂಡ ‘ಕಾಂತಾರ’ ಹೀರೋ

‘ಕಾಂತಾರ’ ಸಿನಿಮಾದ ಯಶಸ್ಸಿನ ಬಳಿಕ ರಿಷಬ್​ ಶೆಟ್ಟಿ ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸ್ಟಾರ್​ ಆಗಿದ್ದಾರೆ. ಅವರ ಮುಂದಿನ ಸಿನಿಮಾ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಸೃಷ್ಟಿ ಆಗಿದೆ. ‘ಕಾಂತಾರ 2’ ಚಿತ್ರಕ್ಕೆ ಜೂನ್​ನಲ್ಲಿ ಶೂಟಿಂಗ್​ ಆರಂಭ ಆಗುವ ಸಾಧ್ಯತೆ ಇದೆ. ಇದು ‘ಕಾಂತಾರ’ ಚಿತ್ರದ ಪ್ರೀಕ್ವೆಲ್​ ಆಗಿರಲಿದೆ. ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಲು ‘ಹೊಂಬಾಳೆ ಫಿಲ್ಮ್ಸ್​’ ಸಕಲ ತಯಾರಿ ಮಾಡಿಕೊಂಡಿದೆ.

ರಿಷಬ್​ ಶೆಟ್ಟಿ ಅವರಿಗೆ ಕನ್ನಡ ಚಿತ್ರರಂಗದಲ್ಲಿ ಇರುವ ಅನುಭವ ಅಪಾರ. ಹಲವು ವರ್ಷಗಳಿಂದ ಅವರು ಸಕ್ರಿಯರಾಗಿದ್ದಾರೆ. ನಿರ್ದೇಶಕನಾಗಿ ‘ರಿಕಿಕ್​ ಪಾರ್ಟಿ’, ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’, ‘ರಿಕ್ಕಿ’ ಮುಂತಾದ ಸಿನಿಮಾಗಳನ್ನು ಅವರು ನೀಡಿದ್ದಾರೆ. ‘ಕಾಂತಾರ’ ಚಿತ್ರಕ್ಕೆ ನಿರ್ದೇಶನ ಮಾಡಿ, ಮುಖ್ಯ ಭೂಮಿಕೆ ನಿಭಾಯಿಸಿದ ಅವರು ಇಡೀ ದೇಶದ ಗಮನ ಸೆಳೆದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:35 pm, Wed, 15 February 23

ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ