AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ‘ಕಾಂತಾರ’ ಚಿತ್ರದ ನಟ, ನಿರ್ದೇಶಕ ರಿಷಬ್​ ಶೆಟ್ಟಿಗೆ ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’

Dadasaheb Phalke International Film Festival Award: ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’ಗೆ ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರು ಭಾಜನರಾಗಿದ್ದಾರೆ. ಫೆಬ್ರವರಿ 20ರಂದು ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮದನ್​ ಕುಮಾರ್​
| Edited By: |

Updated on:Feb 15, 2023 | 6:34 PM

Share

ನಟ, ನಿರ್ದೇಶಕ ರಿಷಬ್​ ಶೆಟ್ಟಿ (Rishab Shetty) ಅವರು ದೇಶಾದ್ಯಂತ ಖ್ಯಾತಿ ಗಳಿಸಿದ್ದಾರೆ. ‘ಕಾಂತಾರ’ (Kantara Movie) ಸಿನಿಮಾದಿಂದ ಅವರಿಗೆ ಸಿಕ್ಕ ಯಶಸ್ಸು ತುಂಬ ದೊಡ್ಡದು. ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ 400 ಕೋಟಿ ರೂಪಾಯಿಗೂ ಅಧಿಕ ಹಣ ಗಳಿಸಿದ್ದು ಹೆಮ್ಮೆಯ ಸಂಗತಿ. ಇತರೆ ಭಾಷೆಯ ಅನೇಕ ಸೆಲೆಬ್ರಿಟಿಗಳು ರಿಷಬ್​ ಶೆಟ್ಟಿ ಅವರ ಕೆಲಸದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಅದರ ಜೊತೆಗೆ ಒಂದಷ್ಟು ಪ್ರಶಸ್ತಿಗಳು ಕೂಡ ಅವರನ್ನು ಅರಸಿ ಬರುತ್ತಿವೆ. ಈಗ ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’ (Dadasaheb Phalke International Film Festival Award) ಘೋಷಣೆ ಆಗಿದೆ. ಫೆಬ್ರವರಿ 20ರಂದು ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮುಂಬೈನ ತಾಜ್​ ಲ್ಯಾಂಡ್ಸ್​ ಎಂಡ್​ ಹೋಟೆಲ್​ನಲ್ಲಿ ಈ ಸಮಾರಂಭ ನಡೆಯಲಿದೆ.

ಹಲವು ವಿಭಾಗಗಳಲ್ಲಿ ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’ ನೀಡಲಾಗುತ್ತಿದೆ. ರಿಷಬ್​ ಶೆಟ್ಟಿ ಅವರು ‘ಅತ್ಯಂತ ಭರವಸೆಯ ನಟ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಗೌರವ ಸಿಕ್ಕಿರುವುದಕ್ಕೆ ಅಭಿಮಾನಿಗಳು, ಆಪ್ತರು ಹಾಗೂ ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾ ಮೂಲಕ ರಿಷಬ್​ ಶೆಟ್ಟಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: Rishab Shetty: ‘ಮೋದಿ ಹಲವು ಬಾರಿ ಕಾಂತಾರ ಬಗ್ಗೆ ಮಾತಾಡಿದ್ದು ಕೇಳಿ ಖುಷಿ ಆಯ್ತು’: ಪ್ರಧಾನಿ ಭೇಟಿ ಬಗ್ಗೆ ರಿಷಬ್​ ಪ್ರತಿಕ್ರಿಯೆ

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ಇದು ಭಾರತ ಸರ್ಕಾರ ನೀಡುವ ಪ್ರಶಸ್ತಿ ಅಲ್ಲ:

ದಾದಾ ಸಾಹೇಬ್​ ಫಾಲ್ಕೆ ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಅವರ ಹೆಸರಿನಲ್ಲಿ ಭಾರತ ಸರ್ಕಾರ ಪ್ರಶಸ್ತಿ ನೀಡುತ್ತದೆ. ಚಿತ್ರರಂಗದಲ್ಲಿ ಜೀವಮಾನ ಸಾಧನೆ ಮಾಡಿದವರಿಗೆ ಆ ಪ್ರಶಸ್ತಿ ನೀಡಲಾಗುತ್ತದೆ. ಆದರೆ ಈಗ ರಿಷಬ್​ ಶೆಟ್ಟಿ ಅವರಿಗೆ ಬಂದಿರುವ ಪ್ರಶಸ್ತಿಯೇ ಬೇರೆ. ಖಾಸಗಿ ಸಂಸ್ಥೆ ವತಿಯಿಂದ ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’ ಕೊಡಲಾಗುತ್ತಿದೆ.

ಇದನ್ನೂ ಓದಿ: Rishab Shetty: ರಿಷಬ್​ ಶೆಟ್ಟಿ ವಿವಾಹ ವಾರ್ಷಿಕೋತ್ಸವ; ಪತ್ನಿ ಜತೆಗಿನ ಚಂದದ ಫೋಟೋ ಹಂಚಿಕೊಂಡ ‘ಕಾಂತಾರ’ ಹೀರೋ

‘ಕಾಂತಾರ’ ಸಿನಿಮಾದ ಯಶಸ್ಸಿನ ಬಳಿಕ ರಿಷಬ್​ ಶೆಟ್ಟಿ ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸ್ಟಾರ್​ ಆಗಿದ್ದಾರೆ. ಅವರ ಮುಂದಿನ ಸಿನಿಮಾ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಸೃಷ್ಟಿ ಆಗಿದೆ. ‘ಕಾಂತಾರ 2’ ಚಿತ್ರಕ್ಕೆ ಜೂನ್​ನಲ್ಲಿ ಶೂಟಿಂಗ್​ ಆರಂಭ ಆಗುವ ಸಾಧ್ಯತೆ ಇದೆ. ಇದು ‘ಕಾಂತಾರ’ ಚಿತ್ರದ ಪ್ರೀಕ್ವೆಲ್​ ಆಗಿರಲಿದೆ. ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಲು ‘ಹೊಂಬಾಳೆ ಫಿಲ್ಮ್ಸ್​’ ಸಕಲ ತಯಾರಿ ಮಾಡಿಕೊಂಡಿದೆ.

ರಿಷಬ್​ ಶೆಟ್ಟಿ ಅವರಿಗೆ ಕನ್ನಡ ಚಿತ್ರರಂಗದಲ್ಲಿ ಇರುವ ಅನುಭವ ಅಪಾರ. ಹಲವು ವರ್ಷಗಳಿಂದ ಅವರು ಸಕ್ರಿಯರಾಗಿದ್ದಾರೆ. ನಿರ್ದೇಶಕನಾಗಿ ‘ರಿಕಿಕ್​ ಪಾರ್ಟಿ’, ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’, ‘ರಿಕ್ಕಿ’ ಮುಂತಾದ ಸಿನಿಮಾಗಳನ್ನು ಅವರು ನೀಡಿದ್ದಾರೆ. ‘ಕಾಂತಾರ’ ಚಿತ್ರಕ್ಕೆ ನಿರ್ದೇಶನ ಮಾಡಿ, ಮುಖ್ಯ ಭೂಮಿಕೆ ನಿಭಾಯಿಸಿದ ಅವರು ಇಡೀ ದೇಶದ ಗಮನ ಸೆಳೆದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:35 pm, Wed, 15 February 23

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು