AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪವಾದ, ಅವಘಡ: ರಿಷಬ್​ಗೆ ಮೊದಲೇ ಎಚ್ಚರಿಸಿದ್ದ ದೈವ

Rishab Shetty: ಒಂದೆಡೆ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿದ್ದರೆ, ಮತ್ತೊಂದೆಡೆ ಕೆಲ ಅಪವಾದಗಳು ಸಹ ಸಿನಿಮಾಕ್ಕೆ ಸುತ್ತಿಕೊಳ್ಳುತ್ತಿವೆ. ಸಿನಿಮಾದ ಬಗ್ಗೆ ಕೆಲ ದೈವಾರಾಧಕರು, ದೈವನರ್ತಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೈವದ ಅನುಗ್ರಹ ಇಲ್ಲದ ಕಾರಣಕ್ಕೆ ಚಿತ್ರೀಕರಣದ ಸಮಯದಲ್ಲಿಯೂ ಅವಘಡಗಳು ಸಂಭವಿಸಿವೆ ಎನ್ನಲಾಗುತ್ತಿದೆ. ಆದರೆ ಇದೆಲ್ಲದರ ಬಗ್ಗೆ ರಿಷಬ್ ಶೆಟ್ಟಿಯವರಿಗೆ ದೈವ ಮೂರು ವರ್ಷಗಳ ಮೊದಲೇ ಎಚ್ಚರಿಕೆ ನೀಡಿತ್ತು.

ಅಪವಾದ, ಅವಘಡ: ರಿಷಬ್​ಗೆ ಮೊದಲೇ ಎಚ್ಚರಿಸಿದ್ದ ದೈವ
Rishab Shetty
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Oct 10, 2025 | 12:44 PM

Share

ರಿಷಬ್ ಶೆಟ್ಟಿಯ (Rishab Shetty) ಅಪಾರ ಪರಿಶ್ರಮ, ಪ್ರತಿಭೆಯಿಂದಾಗಿ ಮೂಡಿಬಂದಿರುವ ‘ಕಾಂತಾರ: ಚಾಪ್ಟರ್ 1’ ಚಿತ್ರಮಂದಿರಗಳಲ್ಲಿ ಅದ್ಭುತ ಪ್ರದರ್ಶನ ತೋರುತ್ತಿದೆ. ಸಿನಿಮಾಕ್ಕಾಗಿ ಸುಮಾರು ಮೂರು ವರ್ಷಗಳ ಕಾಲ ರಿಷಬ್ ಶೆಟ್ಟಿ ಮತ್ತು ಅವರ ತಂಡ ಹಗಲು-ರಾತ್ರಿಗಳನ್ನು ಒಂದುಮಾಡಿ ಕೆಲಸ ಮಾಡಿದೆ. ಅದಕ್ಕೆ ತಕ್ಕ ಪ್ರತಿಫಲವನ್ನು ಪ್ರೇಕ್ಷಕರು ನೀಡುತ್ತಿದ್ದಾರೆ. ಒಂದೆಡೆ ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿದ್ದರೆ, ಮತ್ತೊಂದೆಡೆ ಕೆಲ ಅಪವಾದಗಳು ಸಹ ಸಿನಿಮಾಕ್ಕೆ ಸುತ್ತಿಕೊಳ್ಳುತ್ತಿವೆ. ಸಿನಿಮಾದ ಬಗ್ಗೆ ಕೆಲ ದೈವಾರಾಧಕರು, ದೈವನರ್ತಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೈವದ ಅನುಗ್ರಹ ಇಲ್ಲದ ಕಾರಣಕ್ಕೆ ಚಿತ್ರೀಕರಣದ ಸಮಯದಲ್ಲಿಯೂ ಅವಘಡಗಳು ಸಂಭವಿಸಿವೆ ಎನ್ನಲಾಗುತ್ತಿದೆ. ಆದರೆ ಇದೆಲ್ಲದರ ಬಗ್ಗೆ ರಿಷಬ್ ಶೆಟ್ಟಿಯವರಿಗೆ ದೈವ ಮೂರು ವರ್ಷಗಳ ಮೊದಲೇ ಎಚ್ಚರಿಕೆ ನೀಡಿತ್ತು.

‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆದ ಬಳಿಕ 2022 ರಲ್ಲೇ ರಿಷಬ್ ಶೆಟ್ಟಿ ಮತ್ತೊಂದು ‘ಕಾಂತಾರ’ ಅಥವಾ ಈಗಿನ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮಾಡಲು ದೈವದ ಅನುಮತಿ ಕೇಳಿದ್ದರು. ಆಗಲೇ ದೈವ ರಿಷಬ್ ಶೆಟ್ಟಿ ಅವರಿಗೆ ಎಚ್ಚರಿಕೆ ನೀಡಿತ್ತು. ಮಂಗಳೂರಿನ ಬಂದಲೆಯ ಮಡಿವಾಳಬೆಟ್ಟು ದೈವದ ನರ್ತನ ಸೇವೆ ವೇಳೆ ಅಣ್ಣಪ್ಪ ಪಂಜುರ್ಲಿ ದೈವದ ಬಳಿ ರಿಷಬ್ ಶೆಟ್ಟಿ ಅನುಮತಿ ಕೇಳಿದ್ದರು. ಆಗ ಸೂಚ್ಯವಾಗಿ ನುಡಿ ನುಡಿದಿದ್ದ ದೈವ, ‘ಈಗ ಹತ್ತು ಹೆಜ್ಜೆ ಇಟ್ಟು ಆ ಸಿನಿಮಾ ‌ಮಾಡಿದ್ದೀರಿ, ಇದಕ್ಕೆ ನೂರು ಹೆಜ್ಜೆ ಇಡಿ’ ಎಂದಿತ್ತು.

ಇದನ್ನೂ ಓದಿ:ಹೈದರಾಬಾದ್​​ನಲ್ಲಿ ಕನ್ನಡ ಮಾತನಾಡಿದ್ದೇಕೆ, ಕಾರಣ ಕೊಟ್ಟ ರಿಷಬ್ ಶೆಟ್ಟಿ

ಕಾಂತಾರ ಮೊದಲ ಭಾಗದ ಹರಕೆ ನೇಮ ಸಲ್ಲಿಸಲು ಬಂದಿದ್ದ ರಿಷಬ್ ಶೆಟ್ಟಿ, ಎರಡನೇ ಭಾಗದ ಬಗ್ಗೆ ಕೇಳಿದ್ದರು. ಆಗ ಎರಡನೇ ಭಾಗ ಮಾಡುವ ಮುಂಚೆ ಧರ್ಮಸ್ಥಳ ಮಂಜುನಾಥೇಶ್ವರನ ಒಪ್ಪಿಗೆ ಕೇಳುವಂತೆ ದೈವ ಸೂಚಿಸಿತ್ತು. ಬಹಳ ಆಲೋಚನೆಯಲ್ಲಿ ಮುಂದಿನ ಸಿನಿಮಾ ಮಾಡಿ, ಮೊದಲ ಚಿತ್ರದಲ್ಲಿ ಒಳ್ಳೆಯದು ಆಗಿದೆ, ಅಪವಾದವೂ ಬಂದಿದೆ. ಹತ್ತು ಹೆಜ್ಜೆ ಇಟ್ಟು ಆ ಸಿನಿಮಾ ‌ಮಾಡಿದ್ದೀರಿ, ಇದಕ್ಕೆ ನೂರು ಹೆಜ್ಜೆ ಇಡಿ ಅಂತ ದೈವ ನುಡಿ.ಧರ್ಮ ಪ್ರಕಾರ, ಆಚಾರ ವಿಚಾರದಲ್ಲಿ ಹೋಗಿ’ ಎಂದು ದೈವ ಹೇಳಿತ್ತು. ಬಳಿಕ ರಿಷಬ್ ಶೆಟ್ಟಿ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥಸ್ವಾಮಿಯ ದರ್ಶನ ಪಡೆದು, ವೀರೇಂದ್ರ ಹೆಗ್ಗಡೆಯವರನ್ನು ಸಹ ಭೇಟಿ ಮಾಡಿದ್ದರು.

‘ಕಾಂತಾರ: ಚಾಪ್ಟರ್ 1’ ಸಿನಿಮಾ ಚಿತ್ರೀಕರಣದ ಸಮಯದಲ್ಲಿ ಸಾಕಷ್ಟು ನೇಮ-ನಿಷ್ಠೆಗಳನ್ನು ರಿಷಬ್ ಮತ್ತು ತಂಡ ಪಾಲಿಸಿತ್ತು. ಅದಾಗಿಯೂ ಕೆಲವಾರು ಅವಘಡಗಳು ಚಿತ್ರೀಕರಣದ ಸಮಯದಲ್ಲಿ ನಡೆಯಿತು. ಸಿನಿಮಾಕ್ಕಾಗಿ ಕೆಲಸ ಮಾಡುತ್ತಿದ್ದ, ಮಾಡಿದ್ದ ಕೆಲವರು ಅಚಾನಕ್ಕಾಗಿ ನಿಧನ ಹೊಂದಿದರು. ಸೆಟ್​​ನಲ್ಲಿಯೂ ಸಹ ಕೆಲ ಅವಘಡಗಳು ಸಂಭವಿಸಿದವು. ಒಮ್ಮೆ ಬೋಟ್ ಅನಾಹುತವಾಯ್ತು. ಈಗ ಕೆಲ ದೈವಾರಾಧಕರು, ದೈವನರ್ತಕರು ಸಿನಿಮಾ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ನಮ್ಮ ನಂಬಿಕೆಯಾದ ದೈವಾರಾಧನೆಯನ್ನು ಹಣಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!
ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಅಂಬೇಡ್ಕರ್ ಪ್ರತಿಮೆ ಎದುರು ಅಂತರ್ಜಾತಿ ವಿವಾಹವಾದ ಯುವ ಜೋಡಿ!
ಅಂಬೇಡ್ಕರ್ ಪ್ರತಿಮೆ ಎದುರು ಅಂತರ್ಜಾತಿ ವಿವಾಹವಾದ ಯುವ ಜೋಡಿ!
ಹಾಸನ: ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್, ತಪ್ಪಿದ ಭಾರೀ ಅನಾಹುತ
ಹಾಸನ: ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್, ತಪ್ಪಿದ ಭಾರೀ ಅನಾಹುತ
ಇದನ್ನು ಮಾಡಿ, ನಿಮ್ಮ ಶನಿ ದೋಷ ಬೇಗ ನಿವಾರಣೆಯಾಗುತ್ತದೆ!
ಇದನ್ನು ಮಾಡಿ, ನಿಮ್ಮ ಶನಿ ದೋಷ ಬೇಗ ನಿವಾರಣೆಯಾಗುತ್ತದೆ!