ಬರ್ತ್​ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ ಡಾಲಿ ಧನಂಜಯ್; ಕಾರಣ ಇಲ್ಲಿದೆ

Daali Dhananjaya Birthday: ಖ್ಯಾತ ಕನ್ನಡ ನಟ ಡಾಲಿ ಧನಂಜಯ್ ಅವರು ತಮ್ಮ 39ನೇ ಹುಟ್ಟುಹಬ್ಬವನ್ನು ಈ ಬಾರಿ ಅಭಿಮಾನಿಗಳ ಜೊತೆ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವನ್ನು ಅವರು ಹಂಚಿಕೊಂಡಿದ್ದಾರೆ. ಇದು ಅಭಿಮಾನಿಗಳ ನಿರಾಶೆಗೆ ಕಾರಣವಾಗಿದೆ. ಆ ಬಗ್ಗೆ ಇಲ್ಲಿದೆ ವಿವರ

ಬರ್ತ್​ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ ಡಾಲಿ ಧನಂಜಯ್; ಕಾರಣ ಇಲ್ಲಿದೆ
ಧನಂಜಯ್

Updated on: Aug 21, 2025 | 11:03 AM

ಸೆಲೆಬ್ರಿಟಿಗಳ ಬರ್ತ್​ಡೇ ಎಂದರೆ ಫ್ಯಾನ್ಸ್ ಹಬ್ಬದ ರೀತಿ ಸಂಭ್ರಮಿಸುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​ಗಳನ್ನು ಹಾಕುತ್ತಾರೆ. ನೆಚ್ಚಿನ ನಟನ ಮನೆ ಮುಂದೆ ರಾತ್ರಿಯೇ ಹಾಜರಿ ಹಾಕಿ, ಕೇಕ್ ಕತ್ತರಿಸಿ, ನಟನಿಗೆ ಹೂವಿನ ಹಾರ ಹಾಕಿ ಸಂಭ್ರಮಿಸುತ್ತಾರೆ. ಆದರೆ, ಕೆಲವೊಮ್ಮೆ ವೈಯಕ್ತಿಕ ಕಾರಣಗಳಿಗೆ ಸೆಲೆಬ್ರಿಟಿಗಳು ಬರ್ತ್​ಡೇ ಆಚರಿಸಿಕೊಳ್ಳೋದಿಲ್ಲ. ನಟ ಡಾಲಿ ಧನಂಜಯ್ (Daali Dhananjay) ಕೂಡ ಈಗ ಇದೇ ರೀತಿಯ ನಿರ್ಧಾರಕ್ಕೆ ಬಂದಿದ್ದಾರೆ. ಅವರು ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ.

ಕನ್ನಡದಲ್ಲಿ ಹಲವು ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಧನಂಜಯ್​ಗೆ ಇದೆ. ಅವರು ‘ಟಗರು’ ಸಿನಿಮಾದಲ್ಲಿ ‘ಡಾಲಿ’ ಪಾತ್ರ ಮಾಡಿ ಅದೇ ಹೆಸರಲ್ಲಿ ಫೇಮಸ್ ಆದರು. ಆಗಸ್ಟ್ 23ರಂದು ಅವರು 39ನೇ ವಯಸ್ಸಿಗೆ ಕಾಲಿಡುತ್ತಿದ್ದಾರೆ. ಆದರೆ, ಈ ಬಾರಿ ಅವರು ಅಭಿಮಾನಿಗಳಿಗೆ ಸಿಗುತ್ತಿಲ್ಲ. ಈ ವಿಚಾರದ ಬಗ್ಗೆ ಅವರು ಕೆಲವೇ ದಿನ ಮೊದಲ ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ
ಬಾಲಿವುಡ್​ ಮೇಲೆ ಮುನಿಸಿಕೊಂಡ ರಾಜಮೌಳಿ? ಕಾರಣ ಏನು?
ಸ್ವರಾ​ಗೆ ಸಂಸದೆ ಮೇಲೆ ಕ್ರಶ್; ಲೈಂಗಿಕ ಆಸಕ್ತಿ ರಿವೀಲ್ ಮಾಡಿ ಟ್ರೋಲ್
ಒಂದೇ ವಾರಕ್ಕೆ ಸುಸ್ತಾದ ‘ಕೂಲಿ’; ಹೀನಾಯ ಕಲೆಕ್ಷನ್​​​ ಆರಂಭಿಸಿದ ಸಿನಿಮಾ
‘ಕ್ವಾಟ್ಲೆ ಕಿಚನ್’ ಶೋ​ನಿಂದ ದಿಢೀರ್​ ಹೊರ ನಡೆದ ಕೆಂಪಮ್ಮ; ಇಲ್ಲಿದೆ ವಿವರ

ಇದನ್ನೂ ಓದಿ: ನಾನು ಡಾಲಿ ಧನಂಜಯ್ ಅಭಿಮಾನಿ ಎಂದ ಸಿದ್ಧಾರ್ಥ್, ಕೊಟ್ಟರು ಕಾರಣ

‘ನನ್ನ ಪ್ರೀತಿಯ ಅಭಿಮಾನಿಗಳೇ, ಆಗಸ್ಟ್ 23ರಂದು ನನ್ನ ಬರ್ತ್​ಡೇ. ಪ್ರತಿ ವರ್ಷ ನನ್ನ ಜನ್ಮದಿನ ಅಂದರೆ ಅದು ನನ್ನ ಹಬ್ಬಕ್ಕಿಂತ ಹೆಚ್ಚು ನಿಮ್ಮ ಹಬ್ಬ. ನಿಮ್ಮ ಪ್ರೀತಿ, ನಿಮ್ಮ ಎನರ್ಜಿ, ನಿಮ್ಮ ಸಂಭ್ರಮ ಅದೇ ನನ್ನ ಶಕ್ತಿ. ಆದರೆ ಈ ಬಾರಿ ನಾನು ಕೆಲಸದ ನಿಮಿತ್ತ ಹೊರಗಡೆ ಹೋಗುತ್ತಿದ್ದೇನೆ. ಈ ಸಂಭ್ರಮಾಚರಣೆಗೆ ನಿಮ್ಮ ಜೊತೆ ಇರಲಾಗದಿದ್ದರೂ, ನಿಮ್ಮ ಪ್ರೀತಿ, ಹಾರೈಕೆ, ಆಶೀರ್ವಾದ ನನ್ನೊಡನೆ ಇರುತ್ತದೆ ಎನ್ನುವ ದೃಢ ನಂಬಿಕೆಯಿದೆ. ಮುಂದಿನ ಸಲ ಇನ್ನೂ ಡಬ್ಬಲ್ ಎನರ್ಜಿ, ಡಬ್ಬಲ್ ಸಂಭ್ರಮ, ಜೊತೆಗೆ ಆಚರಿಸೋಣ. ಲವ್​ ಯೂ ಆಲ್, ಡಾಲಿ’ ಎಂದು ಬರೆದುಕೊಂಡಿದ್ದಾರೆ.

ಡಾಲಿ ಧನಂಜಯ್​ಗೆ ವಿವಾಹ ಆದ ಬಳಿಕ ಇದು ಮೊದಲ ಜನ್ಮದಿನ. ಹೀಗಾಗಿ, ಪತ್ನಿ ಧನ್ಯಾತ ಜೊತೆ ಅವರು ಎಲ್ಲಾದರೂ ಸುತ್ತಾಡಲು ಹೋಗಲು ಪ್ಲ್ಯಾನ್ ಮಾಡಿರಬಹುದು ಎನ್ನಲಾಗುತ್ತಿದೆ. ಅಲ್ಲದೆ, ಈ ಬಾರಿ ಆರ್​ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣ ಎಲ್ಲರಿಗೂ ಭಯ ತರಿಸಿದೆ. ಈ ಕಾರಣದಿಂದಲೇ ಅನೇಕರು ಅಭಿಮಾನಿಗಳನ್ನು ಸೇರಿಸಲು ಹೆದರುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:01 am, Thu, 21 August 25

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us