AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Johnny Master: ಡ್ಯಾನ್ಸ್​ ಮಾಸ್ಟರ್​ ಜಾನಿ ಈಗ ಹೀರೋ; ಹೊಸ ಅಧ್ಯಾಯ ಶುರು ಮಾಡಿದ ಖ್ಯಾತ ಕೊರಿಯೋಗ್ರಾಫರ್​

Yatha Raja Tatha Praja: ಹೊಸ ಸಿನಿಮಾದಲ್ಲಿ ಜಾನಿ ಮಾಸ್ಟರ್‌ ಜೊತೆಗೆ ‘ಸಿನಿಮಾ ಬಂಡಿ’ ಖ್ಯಾತಿಯ ನಟ ವಿಕಾಸ್‌ ಕೂಡ ಮುಖ್ಯಭೂಮಿಕೆ ನಿಭಾಯಿಸಲಿದ್ದಾರೆ. ಶ್ರೀನಿವಾಸ ವಿಟ್ಟಲ ನಿರ್ದೇಶನ ಮಾಡುತ್ತಿದ್ದಾರೆ.

Johnny Master: ಡ್ಯಾನ್ಸ್​ ಮಾಸ್ಟರ್​ ಜಾನಿ ಈಗ ಹೀರೋ; ಹೊಸ ಅಧ್ಯಾಯ ಶುರು ಮಾಡಿದ ಖ್ಯಾತ ಕೊರಿಯೋಗ್ರಾಫರ್​
ಜಾನಿ ಮಾಸ್ಟರ್‌, ಶ್ರಷ್ಟಿ ವರ್ಮಾ
TV9 Web
| Edited By: |

Updated on: Aug 23, 2022 | 2:25 PM

Share

ಸಿನಿಮಾದಲ್ಲಿ ಹೀರೋ ಆಗಬೇಕು ಎಂಬ ಸೆಳೆತ ಎಂಥವರನ್ನೂ ಬಿಟ್ಟಿಲ್ಲ. ಈಗ ದಕ್ಷಿಣ ಭಾರತದ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ (Johnny Master) ಕೂಡ ಆ ಸೆಳೆತಕ್ಕೆ ಸಿಕ್ಕಿದ್ದಾರೆ. ಅನೇಕ​ ಸ್ಟಾರ್​ ನಟ-ನಟಿಯರಿಗೆ ಡ್ಯಾನ್ಸ್​ ಮಾಡಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಇತ್ತೀಚೆಗೆ ಭರ್ಜರಿ ಫೇಮಸ್​ ಆದ ‘ರಾ ರಾ ರಕ್ಕಮ್ಮ’ (Ra Ra Rakkamma) ಹಾಡಿಗೆ ಕೊರಿಯೋಗ್ರಫಿ ಮಾಡಿದ್ದು ಇದೇ ಜಾನಿ ಮಾಸ್ಟರ್​. ಈಗ ಅವರು ತೆರೆಮೇಲೆ ಹೀರೋ ಆಗಿ ಮಿಂಚಲು ಸಿದ್ಧತೆ ಮಾಡಿಕೊಂಡಿರುವುದು ವಿಶೇಷ. ಸಿದ್ಧತೆ ಮಾತ್ರವಲ್ಲ, ಅವರ ಹೊಸ ಸಿನಿಮಾ ಸೆಟ್ಟೇರಿದೆ ಕೂಡ. ಈ ಚಿತ್ರಕ್ಕೆ ‘ಯಥಾ ರಾಜ ತಥಾ ಪ್ರಜಾ’ (Yatha Raja Tatha Praja) ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾ ಮೂಲಕ ಅವರ ವೃತ್ತಿಜೀವನದಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ.

ಹೀರೋ ಆಗಿ ಬಡ್ತಿ ಪಡೆಯುತ್ತಿರುವ ಜಾನಿ ಮಾಸ್ಟರ್​ಗೆ ಅನೇಕರು ಶುಭ ಹಾರೈಸಿದ್ದಾರೆ. ಇತ್ತೀಚೆಗಷ್ಟೇ ‘ಯಥಾ ರಾಜ ತಥಾ ಪ್ರಜಾ’ ಚಿತ್ರದ ಮುಹೂರ್ತ ನೆರವೇರಿತು. ತೆಲುಗು ನಟ ಶರ್ವಾನಂದ ಮೊದಲ ದೃಶ್ಯಕ್ಕೆ ಕ್ಲ್ಯಾಪ್‌ ಮಾಡಿದ್ದಾರೆ. ಸಲ್ಮಾನ್‌ ಖಾನ್‌ ಬಾಮೈದ ಆಯುಷ್‌ ಶರ್ಮಾ ಅವರು ಕ್ಯಾಮೆರಾಗೆ ಚಾಲನೆ ನೀಡಿದ್ದಾರೆ. ನಿರ್ದೇಶಕ ಕರುಣಾ ಕುಮಾರ್‌ ಮೊದಲ ದೃಶ್ಯವನ್ನು ನಿರ್ದೇಶಿಸಿದ್ದಾರೆ.

ಈ ಸಿನಿಮಾದಲ್ಲಿ ಜಾನಿ ಮಾಸ್ಟರ್‌ ಜತೆಗೆ ‘ಸಿನಿಮಾ ಬಂಡಿ’ ಖ್ಯಾತಿಯ ನಟ ವಿಕಾಸ್‌ ಕೂಡ ಮುಖ್ಯಭೂಮಿಕೆ ನಿಭಾಯಿಸಲಿದ್ದಾರೆ. ಶ್ರಷ್ಟಿ ವರ್ಮಾ ನಾಯಕಿಯಾಗಿ ನಟಿಸಲಿದ್ದಾರೆ. ಶ್ರೀನಿವಾಸ ವಿಟ್ಟಲ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹರೇಶ್‌ ಪಟೇಲ್‌ ಬಂಡವಾಳ ಹೂಡುತ್ತಿದ್ದು, ಅವರಿಗೆ ನಿರ್ದೇಶಕರು ಕೂಡ ಸಾಥ್​ ನೀಡಿದ್ದಾರೆ. ಓಂ ಮೂವೀ ಕ್ರಿಯೇಶನ್ಸ್‌ ಮತ್ತು ಶ್ರೀಕೃಷ್ಣ ಮೂವೀ ಕ್ರಿಯೇಶನ್ಸ್‌ ಬ್ಯಾನರ್‌ ಮೂಲಕ ಈ ಸಿನಿಮಾ ಮೂಡಿಬರಲಿದೆ.

ಇದನ್ನೂ ಓದಿ
Image
Vikrant Rona: ಜಪಾನ್​ನಲ್ಲೂ ಸುದೀಪ್​ ಅಭಿಮಾನಿಯಿಂದ ರಕ್ಕಮ್ಮ ಹಾಡಿಗೆ ಡ್ಯಾನ್ಸ್​; ವಿಡಿಯೋ ವೈರಲ್​
Image
ಬಾಗಲಕೋಟೆಯಲ್ಲಿ ರಾ.. ರಾ.. ರಕ್ಕಮ್ಮ ಹಾಡಿಗೆ ನೂರಾರು ಜನರಿಂದ ಭರ್ಜರಿ ಸ್ಟೆಪ್
Image
Vikrant Rona: ಕನ್ನಡದಲ್ಲೇ ಮಾತನಾಡಿದ ಜಾಕ್ವೆಲಿನ್; ‘ರಕ್ಕಮ್ಮ’ಗಾಗಿ ಮೊದಲ ಬಾರಿಗೆ ರೀಲ್ಸ್ ಮಾಡಿದ ಕಿಚ್ಚ ಸುದೀಪ್
Image
Kichcha Sudeep: ‘ವಿಕ್ರಾಂತ್​ ರೋಣ’ ನೃತ್ಯ ನಿರ್ದೇಶಕನಿ​ಗೆ ಥಾರ್​ ಗಿಫ್ಟ್ ನೀಡಿದ ‘ಕಿಚ್ಚ’ ಸುದೀಪ್​

‘ಯಥಾ ರಾಜ ತಥಾ ಪ್ರಜಾ’ ಚಿತ್ರದ ಬಗ್ಗೆ ಜಾನಿ ಮಾಸ್ಟರ್‌ ಮಾತನಾಡಿದ್ದಾರೆ. ‘ಮೆಗಾಸ್ಟಾರ್‌ ಚಿರಂಜೀವಿ ಅವರ ಬರ್ತ್‌ಡೇ ದಿನದಂದೇ ನಮ್ಮ ಸಿನಿಮಾ ಮುಹೂರ್ತ ಕಂಡಿರುವುದು ಸಂತಸದ ಸಂಗತಿ. ಶ್ರೀನಿವಾಸ್‌ ಅವರು ಕಥೆ ಹೇಳಿದ ರೀತಿಯೇ ಚೆನ್ನಾಗಿತ್ತು. ವಿಕಾಸ್‌ ನಟಿಸಿರುವ ‘ಸಿನಿಮಾ ಬಂಡಿ’ ಚಿತ್ರ ನೋಡಿದ್ದೇನೆ. ಇದೀಗ ಅವರೊಂದಿಗೆ ನಟಿಸುತ್ತಿರುವುದಕ್ಕೆ ಖುಷಿ ಇದೆ’ ಎಂದು ಅವರು ಹೇಳಿದ್ದಾರೆ.

ಈ ಸಿನಿಮಾಗೆ ರಾಧನಾ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಪೊಲಿಟಿಕಲ್​ ಡ್ರಾಮಾ ಶೈಲಿಯ ಈ ಚಿತ್ರದಲ್ಲಿ ನಾಲ್ಕು ಹಾಡುಗಳು ಇರಲಿವೆ. ತೆಲುಗು, ತಮಿಳು ಮತ್ತು ಕನ್ನಡದಲ್ಲಿ ಮೂಡಿಬರಲಿರುವ ‘ಯಥಾ ರಾಜ ತಥಾ ಪ್ರಜಾ’ ಚಿತ್ರಕ್ಕೆ ಸೆಪ್ಟೆಂಬರ್‌ 15ರಂದು ಚಿತ್ರೀಕರಣ ಶುರುವಾಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ