AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Johnny Master: ಡ್ಯಾನ್ಸ್​ ಮಾಸ್ಟರ್​ ಜಾನಿ ಈಗ ಹೀರೋ; ಹೊಸ ಅಧ್ಯಾಯ ಶುರು ಮಾಡಿದ ಖ್ಯಾತ ಕೊರಿಯೋಗ್ರಾಫರ್​

Yatha Raja Tatha Praja: ಹೊಸ ಸಿನಿಮಾದಲ್ಲಿ ಜಾನಿ ಮಾಸ್ಟರ್‌ ಜೊತೆಗೆ ‘ಸಿನಿಮಾ ಬಂಡಿ’ ಖ್ಯಾತಿಯ ನಟ ವಿಕಾಸ್‌ ಕೂಡ ಮುಖ್ಯಭೂಮಿಕೆ ನಿಭಾಯಿಸಲಿದ್ದಾರೆ. ಶ್ರೀನಿವಾಸ ವಿಟ್ಟಲ ನಿರ್ದೇಶನ ಮಾಡುತ್ತಿದ್ದಾರೆ.

Johnny Master: ಡ್ಯಾನ್ಸ್​ ಮಾಸ್ಟರ್​ ಜಾನಿ ಈಗ ಹೀರೋ; ಹೊಸ ಅಧ್ಯಾಯ ಶುರು ಮಾಡಿದ ಖ್ಯಾತ ಕೊರಿಯೋಗ್ರಾಫರ್​
ಜಾನಿ ಮಾಸ್ಟರ್‌, ಶ್ರಷ್ಟಿ ವರ್ಮಾ
Follow us
TV9 Web
| Updated By: ಮದನ್​ ಕುಮಾರ್​

Updated on: Aug 23, 2022 | 2:25 PM

ಸಿನಿಮಾದಲ್ಲಿ ಹೀರೋ ಆಗಬೇಕು ಎಂಬ ಸೆಳೆತ ಎಂಥವರನ್ನೂ ಬಿಟ್ಟಿಲ್ಲ. ಈಗ ದಕ್ಷಿಣ ಭಾರತದ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ (Johnny Master) ಕೂಡ ಆ ಸೆಳೆತಕ್ಕೆ ಸಿಕ್ಕಿದ್ದಾರೆ. ಅನೇಕ​ ಸ್ಟಾರ್​ ನಟ-ನಟಿಯರಿಗೆ ಡ್ಯಾನ್ಸ್​ ಮಾಡಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಇತ್ತೀಚೆಗೆ ಭರ್ಜರಿ ಫೇಮಸ್​ ಆದ ‘ರಾ ರಾ ರಕ್ಕಮ್ಮ’ (Ra Ra Rakkamma) ಹಾಡಿಗೆ ಕೊರಿಯೋಗ್ರಫಿ ಮಾಡಿದ್ದು ಇದೇ ಜಾನಿ ಮಾಸ್ಟರ್​. ಈಗ ಅವರು ತೆರೆಮೇಲೆ ಹೀರೋ ಆಗಿ ಮಿಂಚಲು ಸಿದ್ಧತೆ ಮಾಡಿಕೊಂಡಿರುವುದು ವಿಶೇಷ. ಸಿದ್ಧತೆ ಮಾತ್ರವಲ್ಲ, ಅವರ ಹೊಸ ಸಿನಿಮಾ ಸೆಟ್ಟೇರಿದೆ ಕೂಡ. ಈ ಚಿತ್ರಕ್ಕೆ ‘ಯಥಾ ರಾಜ ತಥಾ ಪ್ರಜಾ’ (Yatha Raja Tatha Praja) ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾ ಮೂಲಕ ಅವರ ವೃತ್ತಿಜೀವನದಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ.

ಹೀರೋ ಆಗಿ ಬಡ್ತಿ ಪಡೆಯುತ್ತಿರುವ ಜಾನಿ ಮಾಸ್ಟರ್​ಗೆ ಅನೇಕರು ಶುಭ ಹಾರೈಸಿದ್ದಾರೆ. ಇತ್ತೀಚೆಗಷ್ಟೇ ‘ಯಥಾ ರಾಜ ತಥಾ ಪ್ರಜಾ’ ಚಿತ್ರದ ಮುಹೂರ್ತ ನೆರವೇರಿತು. ತೆಲುಗು ನಟ ಶರ್ವಾನಂದ ಮೊದಲ ದೃಶ್ಯಕ್ಕೆ ಕ್ಲ್ಯಾಪ್‌ ಮಾಡಿದ್ದಾರೆ. ಸಲ್ಮಾನ್‌ ಖಾನ್‌ ಬಾಮೈದ ಆಯುಷ್‌ ಶರ್ಮಾ ಅವರು ಕ್ಯಾಮೆರಾಗೆ ಚಾಲನೆ ನೀಡಿದ್ದಾರೆ. ನಿರ್ದೇಶಕ ಕರುಣಾ ಕುಮಾರ್‌ ಮೊದಲ ದೃಶ್ಯವನ್ನು ನಿರ್ದೇಶಿಸಿದ್ದಾರೆ.

ಈ ಸಿನಿಮಾದಲ್ಲಿ ಜಾನಿ ಮಾಸ್ಟರ್‌ ಜತೆಗೆ ‘ಸಿನಿಮಾ ಬಂಡಿ’ ಖ್ಯಾತಿಯ ನಟ ವಿಕಾಸ್‌ ಕೂಡ ಮುಖ್ಯಭೂಮಿಕೆ ನಿಭಾಯಿಸಲಿದ್ದಾರೆ. ಶ್ರಷ್ಟಿ ವರ್ಮಾ ನಾಯಕಿಯಾಗಿ ನಟಿಸಲಿದ್ದಾರೆ. ಶ್ರೀನಿವಾಸ ವಿಟ್ಟಲ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹರೇಶ್‌ ಪಟೇಲ್‌ ಬಂಡವಾಳ ಹೂಡುತ್ತಿದ್ದು, ಅವರಿಗೆ ನಿರ್ದೇಶಕರು ಕೂಡ ಸಾಥ್​ ನೀಡಿದ್ದಾರೆ. ಓಂ ಮೂವೀ ಕ್ರಿಯೇಶನ್ಸ್‌ ಮತ್ತು ಶ್ರೀಕೃಷ್ಣ ಮೂವೀ ಕ್ರಿಯೇಶನ್ಸ್‌ ಬ್ಯಾನರ್‌ ಮೂಲಕ ಈ ಸಿನಿಮಾ ಮೂಡಿಬರಲಿದೆ.

ಇದನ್ನೂ ಓದಿ
Image
Vikrant Rona: ಜಪಾನ್​ನಲ್ಲೂ ಸುದೀಪ್​ ಅಭಿಮಾನಿಯಿಂದ ರಕ್ಕಮ್ಮ ಹಾಡಿಗೆ ಡ್ಯಾನ್ಸ್​; ವಿಡಿಯೋ ವೈರಲ್​
Image
ಬಾಗಲಕೋಟೆಯಲ್ಲಿ ರಾ.. ರಾ.. ರಕ್ಕಮ್ಮ ಹಾಡಿಗೆ ನೂರಾರು ಜನರಿಂದ ಭರ್ಜರಿ ಸ್ಟೆಪ್
Image
Vikrant Rona: ಕನ್ನಡದಲ್ಲೇ ಮಾತನಾಡಿದ ಜಾಕ್ವೆಲಿನ್; ‘ರಕ್ಕಮ್ಮ’ಗಾಗಿ ಮೊದಲ ಬಾರಿಗೆ ರೀಲ್ಸ್ ಮಾಡಿದ ಕಿಚ್ಚ ಸುದೀಪ್
Image
Kichcha Sudeep: ‘ವಿಕ್ರಾಂತ್​ ರೋಣ’ ನೃತ್ಯ ನಿರ್ದೇಶಕನಿ​ಗೆ ಥಾರ್​ ಗಿಫ್ಟ್ ನೀಡಿದ ‘ಕಿಚ್ಚ’ ಸುದೀಪ್​

‘ಯಥಾ ರಾಜ ತಥಾ ಪ್ರಜಾ’ ಚಿತ್ರದ ಬಗ್ಗೆ ಜಾನಿ ಮಾಸ್ಟರ್‌ ಮಾತನಾಡಿದ್ದಾರೆ. ‘ಮೆಗಾಸ್ಟಾರ್‌ ಚಿರಂಜೀವಿ ಅವರ ಬರ್ತ್‌ಡೇ ದಿನದಂದೇ ನಮ್ಮ ಸಿನಿಮಾ ಮುಹೂರ್ತ ಕಂಡಿರುವುದು ಸಂತಸದ ಸಂಗತಿ. ಶ್ರೀನಿವಾಸ್‌ ಅವರು ಕಥೆ ಹೇಳಿದ ರೀತಿಯೇ ಚೆನ್ನಾಗಿತ್ತು. ವಿಕಾಸ್‌ ನಟಿಸಿರುವ ‘ಸಿನಿಮಾ ಬಂಡಿ’ ಚಿತ್ರ ನೋಡಿದ್ದೇನೆ. ಇದೀಗ ಅವರೊಂದಿಗೆ ನಟಿಸುತ್ತಿರುವುದಕ್ಕೆ ಖುಷಿ ಇದೆ’ ಎಂದು ಅವರು ಹೇಳಿದ್ದಾರೆ.

ಈ ಸಿನಿಮಾಗೆ ರಾಧನಾ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಪೊಲಿಟಿಕಲ್​ ಡ್ರಾಮಾ ಶೈಲಿಯ ಈ ಚಿತ್ರದಲ್ಲಿ ನಾಲ್ಕು ಹಾಡುಗಳು ಇರಲಿವೆ. ತೆಲುಗು, ತಮಿಳು ಮತ್ತು ಕನ್ನಡದಲ್ಲಿ ಮೂಡಿಬರಲಿರುವ ‘ಯಥಾ ರಾಜ ತಥಾ ಪ್ರಜಾ’ ಚಿತ್ರಕ್ಕೆ ಸೆಪ್ಟೆಂಬರ್‌ 15ರಂದು ಚಿತ್ರೀಕರಣ ಶುರುವಾಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ