Johnny Master: ಡ್ಯಾನ್ಸ್​ ಮಾಸ್ಟರ್​ ಜಾನಿ ಈಗ ಹೀರೋ; ಹೊಸ ಅಧ್ಯಾಯ ಶುರು ಮಾಡಿದ ಖ್ಯಾತ ಕೊರಿಯೋಗ್ರಾಫರ್​

Yatha Raja Tatha Praja: ಹೊಸ ಸಿನಿಮಾದಲ್ಲಿ ಜಾನಿ ಮಾಸ್ಟರ್‌ ಜೊತೆಗೆ ‘ಸಿನಿಮಾ ಬಂಡಿ’ ಖ್ಯಾತಿಯ ನಟ ವಿಕಾಸ್‌ ಕೂಡ ಮುಖ್ಯಭೂಮಿಕೆ ನಿಭಾಯಿಸಲಿದ್ದಾರೆ. ಶ್ರೀನಿವಾಸ ವಿಟ್ಟಲ ನಿರ್ದೇಶನ ಮಾಡುತ್ತಿದ್ದಾರೆ.

Johnny Master: ಡ್ಯಾನ್ಸ್​ ಮಾಸ್ಟರ್​ ಜಾನಿ ಈಗ ಹೀರೋ; ಹೊಸ ಅಧ್ಯಾಯ ಶುರು ಮಾಡಿದ ಖ್ಯಾತ ಕೊರಿಯೋಗ್ರಾಫರ್​
ಜಾನಿ ಮಾಸ್ಟರ್‌, ಶ್ರಷ್ಟಿ ವರ್ಮಾ
Follow us
| Updated By: ಮದನ್​ ಕುಮಾರ್​

Updated on: Aug 23, 2022 | 2:25 PM

ಸಿನಿಮಾದಲ್ಲಿ ಹೀರೋ ಆಗಬೇಕು ಎಂಬ ಸೆಳೆತ ಎಂಥವರನ್ನೂ ಬಿಟ್ಟಿಲ್ಲ. ಈಗ ದಕ್ಷಿಣ ಭಾರತದ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ (Johnny Master) ಕೂಡ ಆ ಸೆಳೆತಕ್ಕೆ ಸಿಕ್ಕಿದ್ದಾರೆ. ಅನೇಕ​ ಸ್ಟಾರ್​ ನಟ-ನಟಿಯರಿಗೆ ಡ್ಯಾನ್ಸ್​ ಮಾಡಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಇತ್ತೀಚೆಗೆ ಭರ್ಜರಿ ಫೇಮಸ್​ ಆದ ‘ರಾ ರಾ ರಕ್ಕಮ್ಮ’ (Ra Ra Rakkamma) ಹಾಡಿಗೆ ಕೊರಿಯೋಗ್ರಫಿ ಮಾಡಿದ್ದು ಇದೇ ಜಾನಿ ಮಾಸ್ಟರ್​. ಈಗ ಅವರು ತೆರೆಮೇಲೆ ಹೀರೋ ಆಗಿ ಮಿಂಚಲು ಸಿದ್ಧತೆ ಮಾಡಿಕೊಂಡಿರುವುದು ವಿಶೇಷ. ಸಿದ್ಧತೆ ಮಾತ್ರವಲ್ಲ, ಅವರ ಹೊಸ ಸಿನಿಮಾ ಸೆಟ್ಟೇರಿದೆ ಕೂಡ. ಈ ಚಿತ್ರಕ್ಕೆ ‘ಯಥಾ ರಾಜ ತಥಾ ಪ್ರಜಾ’ (Yatha Raja Tatha Praja) ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾ ಮೂಲಕ ಅವರ ವೃತ್ತಿಜೀವನದಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ.

ಹೀರೋ ಆಗಿ ಬಡ್ತಿ ಪಡೆಯುತ್ತಿರುವ ಜಾನಿ ಮಾಸ್ಟರ್​ಗೆ ಅನೇಕರು ಶುಭ ಹಾರೈಸಿದ್ದಾರೆ. ಇತ್ತೀಚೆಗಷ್ಟೇ ‘ಯಥಾ ರಾಜ ತಥಾ ಪ್ರಜಾ’ ಚಿತ್ರದ ಮುಹೂರ್ತ ನೆರವೇರಿತು. ತೆಲುಗು ನಟ ಶರ್ವಾನಂದ ಮೊದಲ ದೃಶ್ಯಕ್ಕೆ ಕ್ಲ್ಯಾಪ್‌ ಮಾಡಿದ್ದಾರೆ. ಸಲ್ಮಾನ್‌ ಖಾನ್‌ ಬಾಮೈದ ಆಯುಷ್‌ ಶರ್ಮಾ ಅವರು ಕ್ಯಾಮೆರಾಗೆ ಚಾಲನೆ ನೀಡಿದ್ದಾರೆ. ನಿರ್ದೇಶಕ ಕರುಣಾ ಕುಮಾರ್‌ ಮೊದಲ ದೃಶ್ಯವನ್ನು ನಿರ್ದೇಶಿಸಿದ್ದಾರೆ.

ಈ ಸಿನಿಮಾದಲ್ಲಿ ಜಾನಿ ಮಾಸ್ಟರ್‌ ಜತೆಗೆ ‘ಸಿನಿಮಾ ಬಂಡಿ’ ಖ್ಯಾತಿಯ ನಟ ವಿಕಾಸ್‌ ಕೂಡ ಮುಖ್ಯಭೂಮಿಕೆ ನಿಭಾಯಿಸಲಿದ್ದಾರೆ. ಶ್ರಷ್ಟಿ ವರ್ಮಾ ನಾಯಕಿಯಾಗಿ ನಟಿಸಲಿದ್ದಾರೆ. ಶ್ರೀನಿವಾಸ ವಿಟ್ಟಲ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹರೇಶ್‌ ಪಟೇಲ್‌ ಬಂಡವಾಳ ಹೂಡುತ್ತಿದ್ದು, ಅವರಿಗೆ ನಿರ್ದೇಶಕರು ಕೂಡ ಸಾಥ್​ ನೀಡಿದ್ದಾರೆ. ಓಂ ಮೂವೀ ಕ್ರಿಯೇಶನ್ಸ್‌ ಮತ್ತು ಶ್ರೀಕೃಷ್ಣ ಮೂವೀ ಕ್ರಿಯೇಶನ್ಸ್‌ ಬ್ಯಾನರ್‌ ಮೂಲಕ ಈ ಸಿನಿಮಾ ಮೂಡಿಬರಲಿದೆ.

ಇದನ್ನೂ ಓದಿ
Image
Vikrant Rona: ಜಪಾನ್​ನಲ್ಲೂ ಸುದೀಪ್​ ಅಭಿಮಾನಿಯಿಂದ ರಕ್ಕಮ್ಮ ಹಾಡಿಗೆ ಡ್ಯಾನ್ಸ್​; ವಿಡಿಯೋ ವೈರಲ್​
Image
ಬಾಗಲಕೋಟೆಯಲ್ಲಿ ರಾ.. ರಾ.. ರಕ್ಕಮ್ಮ ಹಾಡಿಗೆ ನೂರಾರು ಜನರಿಂದ ಭರ್ಜರಿ ಸ್ಟೆಪ್
Image
Vikrant Rona: ಕನ್ನಡದಲ್ಲೇ ಮಾತನಾಡಿದ ಜಾಕ್ವೆಲಿನ್; ‘ರಕ್ಕಮ್ಮ’ಗಾಗಿ ಮೊದಲ ಬಾರಿಗೆ ರೀಲ್ಸ್ ಮಾಡಿದ ಕಿಚ್ಚ ಸುದೀಪ್
Image
Kichcha Sudeep: ‘ವಿಕ್ರಾಂತ್​ ರೋಣ’ ನೃತ್ಯ ನಿರ್ದೇಶಕನಿ​ಗೆ ಥಾರ್​ ಗಿಫ್ಟ್ ನೀಡಿದ ‘ಕಿಚ್ಚ’ ಸುದೀಪ್​

‘ಯಥಾ ರಾಜ ತಥಾ ಪ್ರಜಾ’ ಚಿತ್ರದ ಬಗ್ಗೆ ಜಾನಿ ಮಾಸ್ಟರ್‌ ಮಾತನಾಡಿದ್ದಾರೆ. ‘ಮೆಗಾಸ್ಟಾರ್‌ ಚಿರಂಜೀವಿ ಅವರ ಬರ್ತ್‌ಡೇ ದಿನದಂದೇ ನಮ್ಮ ಸಿನಿಮಾ ಮುಹೂರ್ತ ಕಂಡಿರುವುದು ಸಂತಸದ ಸಂಗತಿ. ಶ್ರೀನಿವಾಸ್‌ ಅವರು ಕಥೆ ಹೇಳಿದ ರೀತಿಯೇ ಚೆನ್ನಾಗಿತ್ತು. ವಿಕಾಸ್‌ ನಟಿಸಿರುವ ‘ಸಿನಿಮಾ ಬಂಡಿ’ ಚಿತ್ರ ನೋಡಿದ್ದೇನೆ. ಇದೀಗ ಅವರೊಂದಿಗೆ ನಟಿಸುತ್ತಿರುವುದಕ್ಕೆ ಖುಷಿ ಇದೆ’ ಎಂದು ಅವರು ಹೇಳಿದ್ದಾರೆ.

ಈ ಸಿನಿಮಾಗೆ ರಾಧನಾ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಪೊಲಿಟಿಕಲ್​ ಡ್ರಾಮಾ ಶೈಲಿಯ ಈ ಚಿತ್ರದಲ್ಲಿ ನಾಲ್ಕು ಹಾಡುಗಳು ಇರಲಿವೆ. ತೆಲುಗು, ತಮಿಳು ಮತ್ತು ಕನ್ನಡದಲ್ಲಿ ಮೂಡಿಬರಲಿರುವ ‘ಯಥಾ ರಾಜ ತಥಾ ಪ್ರಜಾ’ ಚಿತ್ರಕ್ಕೆ ಸೆಪ್ಟೆಂಬರ್‌ 15ರಂದು ಚಿತ್ರೀಕರಣ ಶುರುವಾಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು