ದಾನಿಶ್​ ಸೇಠ್​ಗೆ ಕರೆ ಮಾಡಿ ಹೊಗಳಿದ ರಣಬೀರ್​ ಕಪೂರ್​; ಈ ವಿಡಿಯೋ ಅಪ್​ಲೋಡ್​ ಮಾಡಿದ್ದಕ್ಕೆ ಬೈದ ಬಾಲಿವುಡ್​ ನಟ

ಬಾಲಿವುಡ್​ ಖ್ಯಾತ ನಟ ರಣಬೀರ್​ ಕಪೂರ್​ ಅವರು ದಾನಿಶ್​ಗೆ ಕರೆ ಮಾಡಿ ಹೊಗಳಿದ್ದಾರೆ. ಈ ವಿಡಿಯೋವನ್ನು ದಾನಿಶ್​ ಸೋಶೀಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ದಾನಿಶ್​ ಸೇಠ್​ಗೆ ಕರೆ ಮಾಡಿ ಹೊಗಳಿದ ರಣಬೀರ್​ ಕಪೂರ್​; ಈ ವಿಡಿಯೋ ಅಪ್​ಲೋಡ್​ ಮಾಡಿದ್ದಕ್ಕೆ ಬೈದ ಬಾಲಿವುಡ್​ ನಟ
ದಾನಿಶ್​ ಸೇಠ್​ಗೆ ಕರೆ ಮಾಡಿ ಹೊಗಳಿದ ರಣಬೀರ್​ ಕಪೂರ್​; ಈ ವಿಡಿಯೋ ಅಪ್​ಲೋಡ್​ ಮಾಡಿದ್ದಕ್ಕೆ ಬೈದ ಬಾಲಿವುಡ್​ ನಟ
Follow us
| Updated By: ರಾಜೇಶ್ ದುಗ್ಗುಮನೆ

Updated on: Sep 06, 2021 | 1:58 PM

ನಟ ದಾನಿಶ್​ ಸೇಠ್​ ಸೋಶಿಯಲ್​ ಮೀಡಿಯಾದಲ್ಲಿ ವಿವಿಧ ರೀತಿಯ ವಿಡಿಯೋ ಅಪ್​ಲೋಡ್​ ಮಾಡುವ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಅವರು ಸಿದ್ಧಪಡಿಸುವ ಕಂಟೆಂಟ್​ಗಳು ಸಾಕಷ್ಟು ಜನರಿಗೆ ಇಷ್ಟವಾಗುತ್ತದೆ. ಈ ಕಾರಣಕ್ಕೆ ಅವರ ಅಭಿಮಾನಿ ಬಳಗ ದೊಡ್ಡದಿದೆ. ಈಗ ಅವರಿಗೆ ಅಚ್ಚರಿ ಒಂದು ಸಿಕ್ಕಿದೆ. ಅದೇನೆಂದರೆ ಬಾಲಿವುಡ್​ ಖ್ಯಾತ ನಟ ರಣಬೀರ್​ ಕಪೂರ್​ ಅವರು ದಾನಿಶ್​ಗೆ ಕರೆ ಮಾಡಿ ಹೊಗಳಿದ್ದಾರೆ. ಈ ವಿಡಿಯೋವನ್ನು ದಾನಿಶ್​ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ದಾನಿಶ್​ ಅವರಿಗೆ ರಣಬೀರ್​ ಮ್ಯಾನೇಜರ್​ನಿಂದ ಕರೆ ಬಂದಿದೆ. ನಂತರ ಕಾಲ್​ ರಣಬೀರ್​ಗೆ ವರ್ಗಾವಣೆ ಆಗಿದೆ. ‘ನಿಮ್ಮ ವಿಡಿಯೋವನ್ನು ನನ್ನ ಟೀಮ್​ನವರು ತೋರಿಸಿದರು. ಅವುಗಳು ನಿಜಕ್ಕೂ ತುಂಬಾನೇ ಫನ್ನಿ ಆಗಿದೆ’ ಎಂದರು ರಣಬೀರ್​. ಈ ಮಾತನ್ನು ಕೇಳಿ ದಾನಿಶ್​ ಸಾಕಷ್ಟು ಖುಷಿ ಆದರು. ಅವರಿಗೆ ದಾನಿಶ್ ಧನ್ಯವಾದ ಹೇಳಿದರು. ‘ನಿತ್ಯವೂ ನೀವು ಈ ವಿಡಿಯೋ ಹೇಗೆ ಮಾಡ್ತೀರಾ’ ಎಂದು ಅಚ್ಚರಿಯಿಂದ ಪ್ರಶ್ನೆ ಮಾಡಿದರು ರಣಬೀರ್​. ಇದಕ್ಕೆ ದಾನಿಶ್​ ವಿವರಣೆ ನೀಡಿದ್ದಾರೆ. ಹೀಗೆ, ಮಾತುಕತೆ ಮುಂದುವರಿದಿದೆ.

ಈ ವಿಡಿಯೋವನ್ನು ದಾನಿಶ್​ ಸೋಶಿಯಲ್​ ಮೀಡಿಯಾದಲ್ಲಿ ಅಪ್​ಲೋಡ್​ ಮಾಡಿದ್ದಾರೆ. ಈ ವಿಡಿಯೋ ನಿಜವೋ ಅಥವಾ ಸುಳ್ಳೋ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ದಾನಿಶ್​ ಎಲ್ಲರನ್ನೂ ಪ್ರ್ಯಾಂಕ್​ ಮಾಡುವುದರಲ್ಲಿ ಎತ್ತಿದ ಕೈ. ಅವರು ಚೆನ್ನಾಗಿ ಮಿಮಿಕ್ರಿ ಕೂಡ ಮಾಡುತ್ತಾರೆ. ಹೀಗಾಗಿ, ದೂರವಾಣಿ ಕರೆಯಲ್ಲಿ ಮಾತನಾಡಿದ್ದು ಯಾರು ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ. ಕೆಲವರು ಇದು ರಣಬೀರ್​ ಎಂದರೆ, ಇನ್ನೂ ಕೆಲವರು ಇದು ಪ್ರ್ಯಾಂಕ್​ ಎಂದು ಬರೆದುಕೊಂಡಿದ್ದಾರೆ.

View this post on Instagram

A post shared by Danish sait (@danishsait)

ಇದಾದ ಬೆನ್ನಲ್ಲೇ ದಾನಿಶ್​ ಮತ್ತೊಂದು ವಿಡಿಯೋ ಅಪ್​ಲೋಡ್​ ಮಾಡಿದ್ದಾರೆ. ಈ ವಿಡಿಯೋದಲ್ಲಿ ‘ನಾನು ವಿಡಿಯೋ ಅಪ್​ಲೋಡ್​ ಮಾಡಿದ್ದಕ್ಕೆ ರಣಬೀರ್​ ಬೈದಿದ್ದಾರೆ’ ಎಂಬುದಾಗಿ ದಾನಿಶ್​ ಹೇಳಿಕೊಂಡಿದ್ದಾರೆ.

View this post on Instagram

A post shared by Danish sait (@danishsait)

ಇದನ್ನು ನೋಡಿದ ಅಭಿಮಾನಿಗಳು ಸಾಕಷ್ಟು ಕನ್​ಫ್ಯೂಸ್​ ಆಗಿದ್ದಾರೆ. ಇದರಲ್ಲಿ ಯಾವುದು ನಿಜ, ಯಾವುದು ಸುಳ್ಳು ಎಂದು ಫ್ಯಾನ್ಸ್​​ ಪ್ರಶ್ನೆ ಮಾಡಿಕೊಳ್ಳುತ್ತಿದ್ದಾರೆ. ಅಂದಹಾಗೆ, ದಾನಿಶ್​ ಈ ಮೊದಲು ವಿದ್ಯಾ ಬಾಲನ್​, ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್​ ವಾರ್ನರ್​ ಸೇರಿ ಸಾಕಷ್ಟು ಸೆಲೆಬ್ರಿಟಿಗಳ ಜತೆ ಮಾತನಾಡಿದ್ದಾರೆ.

ಇದನ್ನೂ ಓದಿ: ಒನ್ ಕಟ್ ಟೂ ಕಟ್​ನಲ್ಲಿ ದಾನಿಶ್ ಸೇಠ್ ‘ಗೋಪಿ’ ಅವತಾರ! ಹೊಸ ಚಿತ್ರದ ಬಗ್ಗೆ ಕುತೂಹಲ

Danish Sait: ಅನ್ಯಾ ಜತೆ ರಿಜಿಸ್ಟರ್ ಮ್ಯಾರೇಜ್ ಆದ ದಾನಿಶ್​ ಸೇಠ್​; ಫೋಟೋ ವೈರಲ್

ತಾಜಾ ಸುದ್ದಿ
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು