AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Danish Sait: ಅನ್ಯಾ ಜತೆ ರಿಜಿಸ್ಟರ್ ಮ್ಯಾರೇಜ್ ಆದ ದಾನಿಶ್​ ಸೇಠ್​; ಫೋಟೋ ವೈರಲ್

Danish Sait Marriage: ಅನ್ಯಾ ವೃತ್ತಿಯಲ್ಲಿ ಗ್ರಾಫಿಕ್​ ಡಿಸೈನರ್​. ಮುಂಬೈನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ದಾನಿಶ್​, ಕನ್ನಡದ ಎರಡು ಚಿತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೆ, ಅವರು ಆರ್​ಸಿಬಿ ಇನ್​ಸೈಡರ್​ ಕೂಡ ಹೌದು.

Danish Sait: ಅನ್ಯಾ ಜತೆ ರಿಜಿಸ್ಟರ್ ಮ್ಯಾರೇಜ್ ಆದ ದಾನಿಶ್​ ಸೇಠ್​; ಫೋಟೋ ವೈರಲ್
ದಾನಿಶ್​-ಅನನ್ಯಾ
ರಾಜೇಶ್ ದುಗ್ಗುಮನೆ
| Edited By: |

Updated on: Jun 10, 2021 | 4:16 PM

Share

ಕಾಮಿಡಿಯನ್ ಹಾಗೂ ನಟ ದಾನಿಶ್​ ಸೇಠ್​ ಅವರು ಅನ್ಯಾ ರಂಗಸ್ವಾಮಿ ಜತೆ ಸಿಂಪಲ್​ ಆಗಿ ಮದುವೆ ಆಗಿದ್ದಾರೆ. ಜೂನ್​ 9ರಂದು ಮದುವೆ ನೋಂದಣಿ ಮಾಡಿಸಿಕೊಂಡರೆ, ಜೂನ್​ 10ರಂದು ಆಪ್ತರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡಿದ್ದಾರೆ. ಈ ಬಗ್ಗೆ ದಾನಿಶ್​ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ‘ನಾನು ಮತ್ತು ಅನ್ಯಾ ನಮ್ಮ ಕುಟುಂಬದವರು ಹಾಗೂ ಆಪ್ತರು ಎನಿಸಿಕೊಂಡ 15 ಜನರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡೆವು. ಜೂನ್​ 9ರಂದು ನಾವು ಮದುವೆ ನೋಂದಣಿ ಮಾಡಿಕೊಂಡಿದ್ದೆವು. ನಮ್ಮನ್ನು ನೀವು ಆಶೀರ್ವದಿಸಿ’ ಎಂದು ದಾನಿಶ್​ ಬರೆದುಕೊಂಡಿದ್ದಾರೆ. ಜತೆಗೆ,ಫೋಟೋಗಳನ್ನು ಕೂಡ ಅವರು ಹಂಚಿಕೊಂಡಿದ್ದಾರೆ.

ನಿರ್ದೇಶಕ ಸಾದ್​ ಖಾನ್​ ಕೂಡ ಮದುವೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ‘ಇಬ್ಬರನ್ನೂ ನೋಡಿ ಖುಷಿ ಆಗುತ್ತಿದೆ. ಅವರಿಬ್ಬರೂ ಒಬ್ಬರನ್ನೊಬ್ಬರು ತುಂಬಾನೇ ಇಷ್ಟಪಡುತ್ತಿದ್ದಾರೆ’ ಎಂದು ಸಾದ್ ಹೇಳಿಕೊಂಡಿರುವುದಾಗಿ ಆಂಗ್ಲ ಮಾಧ್ಯಮ ವರದಿ ಮಾಡಿದೆ. ಇನ್ನು, ಈ ಪೋಸ್ಟ್​ ನೋಡಿದ ಅನೇಕರು ಈ ಜೋಡಿಗೆ ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಇವರ ವೈವಾಹಿಕ ಜೀವನಕ್ಕೆ ಒಳ್ಳೆಯದಾಗಲಿ ಎಂದು ಹರಸಿದ್ದಾರೆ.

2020ರ ಡಿಸೆಂಬರ್​ 11ರಂದು ದಾನಿಶ್​ ತಮ್ಮ ರಿಲೇಶನ್​ಶಿಪ್​ ಬಗ್ಗೆ ಹೇಳಿಕೊಂಡಿದ್ದರು. ‘ಅವಳು ಯೆಸ್​ ಎಂದಳು. ನಿನ್ನ ಉಳಿದ ಜೀವನವನ್ನು ನನ್ನ ಜತೆ ಕಳೆಯೋಕೆ ನಿರ್ಧರಿಸಿದ್ದಕ್ಕೆ ಧನ್ಯವಾದಗಳು’ ಎಂದು ಅನ್ಯಾ ರಾಘವನ್​ ಫೋಟೋವನ್ನು ದಾನಿಶ್​ ಪೋಸ್ಟ್​ ಮಾಡಿದ್ದರು.

ಅನ್ಯಾ ವೃತ್ತಿಯಲ್ಲಿ ಗ್ರಾಫಿಕ್​ ಡಿಸೈನರ್​. ಮುಂಬೈನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ದಾನಿಶ್​, ಕನ್ನಡದ ಎರಡು ಚಿತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೆ, ಅವರು ಆರ್​ಸಿಬಿ ಇನ್​ಸೈಡರ್​ ಕೂಡ ಹೌದು.

ಇದನ್ನೂ ಓದಿ: ಒನ್ ಕಟ್ ಟೂ ಕಟ್​ನಲ್ಲಿ ದಾನಿಶ್ ಸೇಠ್ ‘ಗೋಪಿ’ ಅವತಾರ! ಹೊಸ ಚಿತ್ರದ ಬಗ್ಗೆ ಕುತೂಹಲ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?