AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Danish Sait: ಅನ್ಯಾ ಜತೆ ರಿಜಿಸ್ಟರ್ ಮ್ಯಾರೇಜ್ ಆದ ದಾನಿಶ್​ ಸೇಠ್​; ಫೋಟೋ ವೈರಲ್

Danish Sait Marriage: ಅನ್ಯಾ ವೃತ್ತಿಯಲ್ಲಿ ಗ್ರಾಫಿಕ್​ ಡಿಸೈನರ್​. ಮುಂಬೈನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ದಾನಿಶ್​, ಕನ್ನಡದ ಎರಡು ಚಿತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೆ, ಅವರು ಆರ್​ಸಿಬಿ ಇನ್​ಸೈಡರ್​ ಕೂಡ ಹೌದು.

Danish Sait: ಅನ್ಯಾ ಜತೆ ರಿಜಿಸ್ಟರ್ ಮ್ಯಾರೇಜ್ ಆದ ದಾನಿಶ್​ ಸೇಠ್​; ಫೋಟೋ ವೈರಲ್
ದಾನಿಶ್​-ಅನನ್ಯಾ
ರಾಜೇಶ್ ದುಗ್ಗುಮನೆ
| Edited By: |

Updated on: Jun 10, 2021 | 4:16 PM

Share

ಕಾಮಿಡಿಯನ್ ಹಾಗೂ ನಟ ದಾನಿಶ್​ ಸೇಠ್​ ಅವರು ಅನ್ಯಾ ರಂಗಸ್ವಾಮಿ ಜತೆ ಸಿಂಪಲ್​ ಆಗಿ ಮದುವೆ ಆಗಿದ್ದಾರೆ. ಜೂನ್​ 9ರಂದು ಮದುವೆ ನೋಂದಣಿ ಮಾಡಿಸಿಕೊಂಡರೆ, ಜೂನ್​ 10ರಂದು ಆಪ್ತರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡಿದ್ದಾರೆ. ಈ ಬಗ್ಗೆ ದಾನಿಶ್​ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ‘ನಾನು ಮತ್ತು ಅನ್ಯಾ ನಮ್ಮ ಕುಟುಂಬದವರು ಹಾಗೂ ಆಪ್ತರು ಎನಿಸಿಕೊಂಡ 15 ಜನರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡೆವು. ಜೂನ್​ 9ರಂದು ನಾವು ಮದುವೆ ನೋಂದಣಿ ಮಾಡಿಕೊಂಡಿದ್ದೆವು. ನಮ್ಮನ್ನು ನೀವು ಆಶೀರ್ವದಿಸಿ’ ಎಂದು ದಾನಿಶ್​ ಬರೆದುಕೊಂಡಿದ್ದಾರೆ. ಜತೆಗೆ,ಫೋಟೋಗಳನ್ನು ಕೂಡ ಅವರು ಹಂಚಿಕೊಂಡಿದ್ದಾರೆ.

ನಿರ್ದೇಶಕ ಸಾದ್​ ಖಾನ್​ ಕೂಡ ಮದುವೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ‘ಇಬ್ಬರನ್ನೂ ನೋಡಿ ಖುಷಿ ಆಗುತ್ತಿದೆ. ಅವರಿಬ್ಬರೂ ಒಬ್ಬರನ್ನೊಬ್ಬರು ತುಂಬಾನೇ ಇಷ್ಟಪಡುತ್ತಿದ್ದಾರೆ’ ಎಂದು ಸಾದ್ ಹೇಳಿಕೊಂಡಿರುವುದಾಗಿ ಆಂಗ್ಲ ಮಾಧ್ಯಮ ವರದಿ ಮಾಡಿದೆ. ಇನ್ನು, ಈ ಪೋಸ್ಟ್​ ನೋಡಿದ ಅನೇಕರು ಈ ಜೋಡಿಗೆ ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಇವರ ವೈವಾಹಿಕ ಜೀವನಕ್ಕೆ ಒಳ್ಳೆಯದಾಗಲಿ ಎಂದು ಹರಸಿದ್ದಾರೆ.

2020ರ ಡಿಸೆಂಬರ್​ 11ರಂದು ದಾನಿಶ್​ ತಮ್ಮ ರಿಲೇಶನ್​ಶಿಪ್​ ಬಗ್ಗೆ ಹೇಳಿಕೊಂಡಿದ್ದರು. ‘ಅವಳು ಯೆಸ್​ ಎಂದಳು. ನಿನ್ನ ಉಳಿದ ಜೀವನವನ್ನು ನನ್ನ ಜತೆ ಕಳೆಯೋಕೆ ನಿರ್ಧರಿಸಿದ್ದಕ್ಕೆ ಧನ್ಯವಾದಗಳು’ ಎಂದು ಅನ್ಯಾ ರಾಘವನ್​ ಫೋಟೋವನ್ನು ದಾನಿಶ್​ ಪೋಸ್ಟ್​ ಮಾಡಿದ್ದರು.

ಅನ್ಯಾ ವೃತ್ತಿಯಲ್ಲಿ ಗ್ರಾಫಿಕ್​ ಡಿಸೈನರ್​. ಮುಂಬೈನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ದಾನಿಶ್​, ಕನ್ನಡದ ಎರಡು ಚಿತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೆ, ಅವರು ಆರ್​ಸಿಬಿ ಇನ್​ಸೈಡರ್​ ಕೂಡ ಹೌದು.

ಇದನ್ನೂ ಓದಿ: ಒನ್ ಕಟ್ ಟೂ ಕಟ್​ನಲ್ಲಿ ದಾನಿಶ್ ಸೇಠ್ ‘ಗೋಪಿ’ ಅವತಾರ! ಹೊಸ ಚಿತ್ರದ ಬಗ್ಗೆ ಕುತೂಹಲ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್