AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Danish Sait: ಅನ್ಯಾ ಜತೆ ರಿಜಿಸ್ಟರ್ ಮ್ಯಾರೇಜ್ ಆದ ದಾನಿಶ್​ ಸೇಠ್​; ಫೋಟೋ ವೈರಲ್

Danish Sait Marriage: ಅನ್ಯಾ ವೃತ್ತಿಯಲ್ಲಿ ಗ್ರಾಫಿಕ್​ ಡಿಸೈನರ್​. ಮುಂಬೈನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ದಾನಿಶ್​, ಕನ್ನಡದ ಎರಡು ಚಿತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೆ, ಅವರು ಆರ್​ಸಿಬಿ ಇನ್​ಸೈಡರ್​ ಕೂಡ ಹೌದು.

Danish Sait: ಅನ್ಯಾ ಜತೆ ರಿಜಿಸ್ಟರ್ ಮ್ಯಾರೇಜ್ ಆದ ದಾನಿಶ್​ ಸೇಠ್​; ಫೋಟೋ ವೈರಲ್
ದಾನಿಶ್​-ಅನನ್ಯಾ
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Jun 10, 2021 | 4:16 PM

Share

ಕಾಮಿಡಿಯನ್ ಹಾಗೂ ನಟ ದಾನಿಶ್​ ಸೇಠ್​ ಅವರು ಅನ್ಯಾ ರಂಗಸ್ವಾಮಿ ಜತೆ ಸಿಂಪಲ್​ ಆಗಿ ಮದುವೆ ಆಗಿದ್ದಾರೆ. ಜೂನ್​ 9ರಂದು ಮದುವೆ ನೋಂದಣಿ ಮಾಡಿಸಿಕೊಂಡರೆ, ಜೂನ್​ 10ರಂದು ಆಪ್ತರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡಿದ್ದಾರೆ. ಈ ಬಗ್ಗೆ ದಾನಿಶ್​ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ‘ನಾನು ಮತ್ತು ಅನ್ಯಾ ನಮ್ಮ ಕುಟುಂಬದವರು ಹಾಗೂ ಆಪ್ತರು ಎನಿಸಿಕೊಂಡ 15 ಜನರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡೆವು. ಜೂನ್​ 9ರಂದು ನಾವು ಮದುವೆ ನೋಂದಣಿ ಮಾಡಿಕೊಂಡಿದ್ದೆವು. ನಮ್ಮನ್ನು ನೀವು ಆಶೀರ್ವದಿಸಿ’ ಎಂದು ದಾನಿಶ್​ ಬರೆದುಕೊಂಡಿದ್ದಾರೆ. ಜತೆಗೆ,ಫೋಟೋಗಳನ್ನು ಕೂಡ ಅವರು ಹಂಚಿಕೊಂಡಿದ್ದಾರೆ.

ನಿರ್ದೇಶಕ ಸಾದ್​ ಖಾನ್​ ಕೂಡ ಮದುವೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ‘ಇಬ್ಬರನ್ನೂ ನೋಡಿ ಖುಷಿ ಆಗುತ್ತಿದೆ. ಅವರಿಬ್ಬರೂ ಒಬ್ಬರನ್ನೊಬ್ಬರು ತುಂಬಾನೇ ಇಷ್ಟಪಡುತ್ತಿದ್ದಾರೆ’ ಎಂದು ಸಾದ್ ಹೇಳಿಕೊಂಡಿರುವುದಾಗಿ ಆಂಗ್ಲ ಮಾಧ್ಯಮ ವರದಿ ಮಾಡಿದೆ. ಇನ್ನು, ಈ ಪೋಸ್ಟ್​ ನೋಡಿದ ಅನೇಕರು ಈ ಜೋಡಿಗೆ ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಇವರ ವೈವಾಹಿಕ ಜೀವನಕ್ಕೆ ಒಳ್ಳೆಯದಾಗಲಿ ಎಂದು ಹರಸಿದ್ದಾರೆ.

2020ರ ಡಿಸೆಂಬರ್​ 11ರಂದು ದಾನಿಶ್​ ತಮ್ಮ ರಿಲೇಶನ್​ಶಿಪ್​ ಬಗ್ಗೆ ಹೇಳಿಕೊಂಡಿದ್ದರು. ‘ಅವಳು ಯೆಸ್​ ಎಂದಳು. ನಿನ್ನ ಉಳಿದ ಜೀವನವನ್ನು ನನ್ನ ಜತೆ ಕಳೆಯೋಕೆ ನಿರ್ಧರಿಸಿದ್ದಕ್ಕೆ ಧನ್ಯವಾದಗಳು’ ಎಂದು ಅನ್ಯಾ ರಾಘವನ್​ ಫೋಟೋವನ್ನು ದಾನಿಶ್​ ಪೋಸ್ಟ್​ ಮಾಡಿದ್ದರು.

ಅನ್ಯಾ ವೃತ್ತಿಯಲ್ಲಿ ಗ್ರಾಫಿಕ್​ ಡಿಸೈನರ್​. ಮುಂಬೈನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ದಾನಿಶ್​, ಕನ್ನಡದ ಎರಡು ಚಿತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೆ, ಅವರು ಆರ್​ಸಿಬಿ ಇನ್​ಸೈಡರ್​ ಕೂಡ ಹೌದು.

ಇದನ್ನೂ ಓದಿ: ಒನ್ ಕಟ್ ಟೂ ಕಟ್​ನಲ್ಲಿ ದಾನಿಶ್ ಸೇಠ್ ‘ಗೋಪಿ’ ಅವತಾರ! ಹೊಸ ಚಿತ್ರದ ಬಗ್ಗೆ ಕುತೂಹಲ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ