AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Danish Sait: ಅನ್ಯಾ ಜತೆ ರಿಜಿಸ್ಟರ್ ಮ್ಯಾರೇಜ್ ಆದ ದಾನಿಶ್​ ಸೇಠ್​; ಫೋಟೋ ವೈರಲ್

Danish Sait Marriage: ಅನ್ಯಾ ವೃತ್ತಿಯಲ್ಲಿ ಗ್ರಾಫಿಕ್​ ಡಿಸೈನರ್​. ಮುಂಬೈನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ದಾನಿಶ್​, ಕನ್ನಡದ ಎರಡು ಚಿತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೆ, ಅವರು ಆರ್​ಸಿಬಿ ಇನ್​ಸೈಡರ್​ ಕೂಡ ಹೌದು.

Danish Sait: ಅನ್ಯಾ ಜತೆ ರಿಜಿಸ್ಟರ್ ಮ್ಯಾರೇಜ್ ಆದ ದಾನಿಶ್​ ಸೇಠ್​; ಫೋಟೋ ವೈರಲ್
ದಾನಿಶ್​-ಅನನ್ಯಾ
ರಾಜೇಶ್ ದುಗ್ಗುಮನೆ
| Edited By: |

Updated on: Jun 10, 2021 | 4:16 PM

Share

ಕಾಮಿಡಿಯನ್ ಹಾಗೂ ನಟ ದಾನಿಶ್​ ಸೇಠ್​ ಅವರು ಅನ್ಯಾ ರಂಗಸ್ವಾಮಿ ಜತೆ ಸಿಂಪಲ್​ ಆಗಿ ಮದುವೆ ಆಗಿದ್ದಾರೆ. ಜೂನ್​ 9ರಂದು ಮದುವೆ ನೋಂದಣಿ ಮಾಡಿಸಿಕೊಂಡರೆ, ಜೂನ್​ 10ರಂದು ಆಪ್ತರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡಿದ್ದಾರೆ. ಈ ಬಗ್ಗೆ ದಾನಿಶ್​ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ‘ನಾನು ಮತ್ತು ಅನ್ಯಾ ನಮ್ಮ ಕುಟುಂಬದವರು ಹಾಗೂ ಆಪ್ತರು ಎನಿಸಿಕೊಂಡ 15 ಜನರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡೆವು. ಜೂನ್​ 9ರಂದು ನಾವು ಮದುವೆ ನೋಂದಣಿ ಮಾಡಿಕೊಂಡಿದ್ದೆವು. ನಮ್ಮನ್ನು ನೀವು ಆಶೀರ್ವದಿಸಿ’ ಎಂದು ದಾನಿಶ್​ ಬರೆದುಕೊಂಡಿದ್ದಾರೆ. ಜತೆಗೆ,ಫೋಟೋಗಳನ್ನು ಕೂಡ ಅವರು ಹಂಚಿಕೊಂಡಿದ್ದಾರೆ.

ನಿರ್ದೇಶಕ ಸಾದ್​ ಖಾನ್​ ಕೂಡ ಮದುವೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ‘ಇಬ್ಬರನ್ನೂ ನೋಡಿ ಖುಷಿ ಆಗುತ್ತಿದೆ. ಅವರಿಬ್ಬರೂ ಒಬ್ಬರನ್ನೊಬ್ಬರು ತುಂಬಾನೇ ಇಷ್ಟಪಡುತ್ತಿದ್ದಾರೆ’ ಎಂದು ಸಾದ್ ಹೇಳಿಕೊಂಡಿರುವುದಾಗಿ ಆಂಗ್ಲ ಮಾಧ್ಯಮ ವರದಿ ಮಾಡಿದೆ. ಇನ್ನು, ಈ ಪೋಸ್ಟ್​ ನೋಡಿದ ಅನೇಕರು ಈ ಜೋಡಿಗೆ ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಇವರ ವೈವಾಹಿಕ ಜೀವನಕ್ಕೆ ಒಳ್ಳೆಯದಾಗಲಿ ಎಂದು ಹರಸಿದ್ದಾರೆ.

2020ರ ಡಿಸೆಂಬರ್​ 11ರಂದು ದಾನಿಶ್​ ತಮ್ಮ ರಿಲೇಶನ್​ಶಿಪ್​ ಬಗ್ಗೆ ಹೇಳಿಕೊಂಡಿದ್ದರು. ‘ಅವಳು ಯೆಸ್​ ಎಂದಳು. ನಿನ್ನ ಉಳಿದ ಜೀವನವನ್ನು ನನ್ನ ಜತೆ ಕಳೆಯೋಕೆ ನಿರ್ಧರಿಸಿದ್ದಕ್ಕೆ ಧನ್ಯವಾದಗಳು’ ಎಂದು ಅನ್ಯಾ ರಾಘವನ್​ ಫೋಟೋವನ್ನು ದಾನಿಶ್​ ಪೋಸ್ಟ್​ ಮಾಡಿದ್ದರು.

ಅನ್ಯಾ ವೃತ್ತಿಯಲ್ಲಿ ಗ್ರಾಫಿಕ್​ ಡಿಸೈನರ್​. ಮುಂಬೈನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ದಾನಿಶ್​, ಕನ್ನಡದ ಎರಡು ಚಿತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೆ, ಅವರು ಆರ್​ಸಿಬಿ ಇನ್​ಸೈಡರ್​ ಕೂಡ ಹೌದು.

ಇದನ್ನೂ ಓದಿ: ಒನ್ ಕಟ್ ಟೂ ಕಟ್​ನಲ್ಲಿ ದಾನಿಶ್ ಸೇಠ್ ‘ಗೋಪಿ’ ಅವತಾರ! ಹೊಸ ಚಿತ್ರದ ಬಗ್ಗೆ ಕುತೂಹಲ

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!