AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daredevil Musthafa: ​ಈಗ ‘ಡೇರ್​ಡೆವಿಲ್​ ಮುಸ್ತಫಾ’ ಸಿನಿಮಾ ಟಿಕೆಟ್​ ಬೆಲೆ ಕೇವಲ 50 ರೂಪಾಯಿ; ಮಲ್ಟಿಪ್ಲೆಕ್ಸ್​ನಲ್ಲಿ 99 ರೂಪಾಯಿ

Daredevil Musthafa Ticket Price: ಚಿತ್ರಮಂದಿರದಲ್ಲಿ ‘ಡೇರ್​ ಡೆವಿಲ್​ ಮುಸ್ತಫಾ’ ಸಿನಿಮಾ ನೋಡಿ ಪ್ರೇಕ್ಷಕರು ಖುಷಿಪಟ್ಟಿದ್ದಾರೆ. ಈಗ ಟಿಕೆಟ್​ ಬೆಲೆ ತಗ್ಗಿಸಿರುವುದರಿಂದ ಇನ್ನಷ್ಟು ಜನರನ್ನು ತಲುಪಲು ಸಾಧ್ಯವಾಗಲಿದೆ.

Daredevil Musthafa: ​ಈಗ ‘ಡೇರ್​ಡೆವಿಲ್​ ಮುಸ್ತಫಾ’ ಸಿನಿಮಾ ಟಿಕೆಟ್​ ಬೆಲೆ ಕೇವಲ 50 ರೂಪಾಯಿ; ಮಲ್ಟಿಪ್ಲೆಕ್ಸ್​ನಲ್ಲಿ 99 ರೂಪಾಯಿ
ಡೇರ್​ಡೆವಿಲ್​ ಮುಸ್ತಫಾ
ಮದನ್​ ಕುಮಾರ್​
|

Updated on: Jun 06, 2023 | 12:14 PM

Share

ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರು ಬರೆದ ಕಥೆ ಆಧರಿಸಿದ ‘ಡೇರ್​ಡೆವಿಲ್​ ಮುಸ್ತಫಾ’ (Daredevil Musthafa) ಸಿನಿಮಾಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ವಿಮರ್ಶಕರ ವಲಯದಿಂದಲೂ ಪಾಸಿಟಿವ್​ ಮಾತುಗಳು ಕೇಳಿಬಂದಿವೆ. ಅನೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ಬಳಿಕ ಚಿತ್ರಮಂದಿರಗಳ ಸಂಖ್ಯೆಯನ್ನೂ ಹೆಚ್ಚಿಸಲಾಯಿತು. ಈಗ ಪ್ರೇಕ್ಷಕರಿಗೆ ಈ ಸಿನಿಮಾ ತಂಡದ ಕಡೆಯಿಂದ ಒಂದು ಬಂಪರ್​ ಆಫರ್​ ನೀಡಲಾಗಿದೆ. ‘ಡೇರ್​ ಡೆವಿಲ್​ ಮುಸ್ತಫಾ’ ಚಿತ್ರದ ಟಿಕೆಟ್​ ಬೆಲೆಯನ್ನು (Daredevil Musthafa Ticket Price) ತಗ್ಗಿಸಲಾಗಿದೆ. ಏಕಪರದೆ ಚಿತ್ರಮಂದಿರಗಳು ಮಾತ್ರವಲ್ಲದೇ ಮಲ್ಟಿಪ್ಲೆಕ್ಸ್​ಗಳಲ್ಲೂ ಟಿಕೆಟ್ ದರ ಕಡಿತ ಮಾಡಲಾಗಿದೆ. ಚಿತ್ರಮಂದಿರಗಳಲ್ಲಿ ಸೆಕೆಂಡ್​ ಕ್ಲಾಸ್​ಗೆ 50 ರೂಪಾಯಿ ಹಾಗೂ ಬಾಲ್ಕನಿಗೆ 75 ರೂಪಾಯಿ ನಿಗದಿ ಮಾಡಲಾಗಿದೆ. ಕೆಲವು ಮಲ್ಟಿಪ್ಲೆಕ್ಸ್​ಗಳಲ್ಲಿ (Multiplex) 99 ರೂಪಾಯಿಗೆ ಟಿಕೆಟ್​ ಲಭ್ಯವಾಗುತ್ತಿವೆ.

ಒಳ್ಳೆಯ ಸಿನಿಮಾಗಳು ಬಂದಾಗ ಜನರು ಖಂಡಿತವಾಗಿಯೂ ಬೆಂಬಲ ನೀಡುತ್ತಾರೆ ಎಂಬ ನಂಬಿಕೆ ಗಾಂಧಿನಗರದಲ್ಲಿದೆ. ಅದು ‘ಡೇರ್​ಡೆವಿಲ್​ ಮುಸ್ತಫಾ’ ವಿಚಾರದಲ್ಲಿ ನಿಜವಾಗಿದೆ. ಇದು ಪೂರ್ಣಚಂದ್ರ ತೇಜಸ್ವಿ ಅಭಿಮಾನಿಗಳೇ ನಿರ್ಮಾಣ ಮಾಡಿರುವ ಸಿನಿಮಾ. ಶಶಾಂಕ್​ ಸೋಗಾಲ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಚಿತ್ರಮಂದಿರದಲ್ಲಿ ಈ ಸಿನಿಮಾ ನೋಡಿ ಪ್ರೇಕ್ಷಕರು ಖುಷಿಪಟ್ಟಿದ್ದಾರೆ. ಈಗ ಟಿಕೆಟ್​ ಬೆಲೆ ತಗ್ಗಿಸಿರುವುದರಿಂದ ಇನ್ನಷ್ಟು ಜನರನ್ನು ತಲುಪಲು ಸಾಧ್ಯವಾಗಲಿದೆ. ಚಿತ್ರತಂಡದ ಈ ನಿರ್ಧಾರಕ್ಕೆ ಸೋಶಿಯಲ್​ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: Daredevil Musthafa: ವಿದೇಶಕ್ಕೆ ಹೊರಟ ‘ಡೇರ್​ಡೆವಿಲ್​ ಮುಸ್ತಫಾ’; ಜೋರಾಯ್ತು ಕನ್ನಡ ಸಿನಿಮಾದ ಹವಾ

ಸಿನಿಮಾಗಳ ಟಿಕೆಟ್​ ದರ ಜಾಸ್ತಿ ಇರುವುದರಿಂದಲೇ ಪ್ರೇಕ್ಷಕರು ಸಿನಿಮಾ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್​ಗಳಿಗೆ ಬರುತ್ತಿಲ್ಲ ಎಂಬ ಮಾತಿದೆ. ಹಾಗಾಗಿ ಟಿಕೆಟ್​ ಬೆಲೆ ತಗ್ಗಿಸುವ ಮೂಲಕ ಪ್ರೇಕ್ಷಕರು ಸೆಳೆಯುವ ಪ್ರಯತ್ನ ಬೇರೆ ಸಿನಿಮಾಗಳಿಂದ ಈ ಮೊದಲು ಕೂಡ ಆಗಿದ್ದುಂಟು. ಆಗೆಲ್ಲ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಈಗ ‘ಡೇರ್​ಡೆವಿಲ್​ ಮುಸ್ತಫಾ’ ಸಿನಿಮಾಗೆ ಕಲೆಕ್ಷನ್​ ಹೆಚ್ಚುವ ನಿರೀಕ್ಷೆ ಇದೆ.

ಇದನ್ನೂ ಓದಿ: Daredevil Musthafa Review: ಭರಪೂರ ನಗಿಸುತ್ತಾ ಮತಗಳ ಜಗಳ ಬಿಡಿಸುವ ‘ಡೇರ್​ಡೆವಿಲ್​ ಮುಸ್ತಫಾ’

ಶಿಶಿರ್​ ಬೈಕಾಡಿ, ಆದಿತ್ಯ ಆಶ್ರೀ, ಸುಪ್ರೀತ್​ ಭಾರದ್ವಾಜ್​, ಆಶಿತ್​ ಶ್ರೀವತ್ಸಾ, ಅಭಯ್​, ಮಂಡ್ಯ ರಮೇಶ್​, ಉಮೇಶ್​, ಪ್ರೇರಣಾ ಮುಂತಾದ ಕಲಾವಿದರು ‘ಡೇರ್​ಡೆವಿಲ್​ ಮುಸ್ತಫಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಮೈಸೂರು ಸಂಸದ ಪ್ರತಾಪ್​ ಸಿಂಹ ಅವರು ಈ ಸಿನಿಮಾ ನೋಡಿ ಮೆಚ್ಚುಗೆ ಸೂಚಿಸಿದ್ದರು. ‘ನಾವೆಲ್ಲರೂ ಸೌಹಾರ್ದಯುತವಾಗಿ ಬದುಕಬೇಕು ಎಂಬುದನ್ನು ಈ ಸಿನಿಮಾ ನೋಡಿ ಕಲಿಯಬೇಕು. ಎಲ್ಲರೂ ಅನುಸರಿಸಬಹುದಾದ ಸಂದೇಶ ಇದರಲ್ಲಿ ಇದೆ. ಬೋಧನೆ ಮಾಡುವಂತಹ ಸ್ಟೋರಿ ಇದಲ್ಲ. ಇದು ಖುಷಿ ನೀಡುತ್ತದೆ. ಸಾಕಷ್ಟು ಮನರಂಜನೆ ಇದೆ. ಸಣ್ಣ ಪಾತ್ರಗಳಿಗೂ ಪ್ರತಿ ಕಲಾವಿದರು ಜೀವ ತುಂಬಿದ್ದಾರೆ’ ಎಂದು ಅವರು ಹೇಳಿದ್ದರು.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು